Connect with us

ದಿನದ ಸುದ್ದಿ

ಬಳ್ಳಾರಿ | ಬಗೆಹರಿಯದ ಟ್ರಾಫಿಕ್ ಸಮಸ್ಯೆ ; ಸಿಪಿಐ ಮೌನ

Published

on

~ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಬೈಕ್, ಕಾರು ಅಪಘಾತಗಳಲ್ಲಿ 7 ಕ್ಕಿಂತ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ‌. ಆದರೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಟ್ರಾಫಿಕ್ ನಲ್ಲಿನ ಸಮಸ್ಯೆಯಿಂದಾಗಿ ಈ ಅಪಘಾತಗಳು ನಡೆಯುತ್ತಿವೆ. ಆದರೆ ದಂಡ ಹಾಕಲು ಮುಂದಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸ್ಥಳೀಯ ರಾಜಕೀಯ ನಾಯಕರ ಒತ್ತಡ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎಸ್ಪಿಯಿಂದ ಪತ್ರಿಕಾ ಪ್ರಕಟಣೆ

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳಲ್ಲಿ ತಲೆಗೆ ತೀವ್ರಗಾಯಗಳಾಗಿ ಸಾವಿಗೀಡಾಗುರುತ್ತಿರುವುದು ಕಂಡುಬರುತ್ತಿದ್ದು, ಪ್ರತಿಯೊಬ್ಬ ಸಾರ್ವಜನಿಕರು ವಾಹನ ಚಲಾಯಿಸುವಾಗ ಸವಾರ ಮತ್ತು ಹಿಂಬದಿ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.ವಾಹನ ಚಲಾಯಿಸುವ ತಮ್ಮ ಕುಟುಂಬದ ಎಲ್ಲಾ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಡ್ಡಾಯವಾಗಿ ಐ.ಎಸ್.ಐ ಮಾರ್ಕ್ ಹೊಂದಿದ ಹೆಲ್ಮೆಟ್ ‌ಅನ್ನು ಧರಿಸಬೇಕು.

ಮುಖ್ಯವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಬೇಕು.ಪ್ರಸ್ತುತ ಜಿಲ್ಲೆಯ ಸಾರ್ವಜನಿಕ ರಸ್ತೆಯಲ್ಲಿ ಪೊಲೀಸ್ ಇಲಾಖೆಯಿಂದ ಈ ಬಗ್ಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಒಂದು ವೇಳೆ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ಪ್ರಕರಣ ದಾಖಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಕೆಲ ದಿನಗಳು ಮಾತ್ರ ಹೆಲ್ಮೆಟ್

ಬಳ್ಳಾರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಮಾತ್ರ ಹೆಲ್ಮೆಟ್ ಹಾಕೋದು ಮತ್ತು ಬೇಸಿಗೆಯಲ್ಲಿ ಹೆಲ್ಮೆಟ್ ಜಾರಿ ಇಲ್ಲ, ಒಟ್ಟಾರೆಯಾಗಿ ಜನರು ತಮ್ಮ ಜೀವದ ಉಳಿವಿಗಾಗಿ ಹೆಲ್ಮೆಟ್ ಕಡ್ಡಾಯವಾಗಿ ಹಾಕಬೇಕು ಎನ್ನುವುದು ಸಾಮಾನ್ಯ ಅಂಶವಾಗಿದೆ. ಆದರೆ ಇಲ್ಲಿಯ ಹಿರಿಯ ರಾಜಕೀಯ ವ್ಯಕ್ತಿಗಳು ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ಹೆಲ್ಮೆಟ್ ಬೇಡ ಎನ್ನುವ ಕಾರಣ ಬರೆದು ಅದನ್ನು ತಡೆಹಿಡಿದಿರುತ್ತಾರೆ. ಇನ್ನೊಂದು ಕಡೆ ಪೊಲೀಸ್ ಇಲಾಖೆ ಇಂದಿನಿಂದ ಹೆಲ್ಮೆಟ್ ಕಡ್ಡಾಯ ಅಂತಾರೆ.

ಜಿಲ್ಲಾಧಿಕಾರಿ ಕಚೇರಿಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೂ ಹೆಲ್ಮೆಟ್ ಹಾಕಲ್ಲ, ಯಾರಾದರೂ ಪೊಲೀಸರು ಅವರನ್ನ ನಿಲ್ಲಿಸಿದರೆ ನಾವು ಡಿಸಿ ಮತ್ತು ಎಸ್ಪಿ ಕಚೇರಿ ಸಿಬ್ಬಂದಿಗಳು ಎನ್ನುವ ಉತ್ತರ ನೀಡುತ್ತಾರೆ.
ರಾಜಕೀಯ ವ್ಯಕ್ತಿಗಳ ಹಿಂಬಾಲಕರು, ಆ ಸಂಘಟನೆ, ಈ ಸಂಘಟನೆ, ಗೃಹರಕ್ಷಕದಳ, ವಾರ್ತಾ ಇಲಾಖೆ, ಮಾಧ್ಯಮದವರು, ಶಿಕ್ಷಣ ಇಲಾಖೆ, ಎಸಿ ಕಚೇರಿ, ತಹಶಿಲ್ದಾರರ ಕಚೇರಿ, ಆರ್.ಟಿ.ಓ ಇಲಾಖೆ ಇನ್ನಿತರ ಇಲಾಖೆಗಳ ಹೆಸರು ಹೇಳಿಕೊಂಡು ಹೆಲ್ಮೆಟ್ ಹಾಕದೇ ದಂಡ ಕಟ್ಟದೇ ತಪ್ಪಿಸಿಕೊಳ್ಳುತ್ತಿರುವುದು ದುರಂತ.

ಇನ್ನು ಪೊಲೀಸ್ ಇಲಾಖೆಯಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಹಾಕಿಕೊಂಡು ಬೈಕ್ ಗಳನ್ನು ಚಾಲನೆ ಮಾಡುತ್ತಾರೆ. ಜನರಿಗೆ ಮಾತ್ರ ಐ.ಎಸ್.ಐ ಹೆಲ್ಮೆಟ್ ಎಂದು ಹೇಳ್ತಾರೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪತ್ರಿಕಾಪ್ರಕಟಣೆ ನೀಡಿದರು, ಸುದ್ದಿ ಪ್ರಸಾರ ಆದ್ರೂ ಜನರು ಮಾತ್ರ ಹೆಲ್ಮೆಟ್ ಹಾಕಲಿಲ್ಲ. ಇನ್ನು ದಂಡ ಹಾಕಿದ ಪೊಲೀಸ್ ಸಿಬ್ಬಂದಿಗಳಿಗೆ ಶಾಸಕ ಹಾಗೂ ಸಿಪಿಐ ಒತ್ತಾಯ ಹಾಕೋದ್ ಸಹ ದುರಂತವಾಗಿದೆ.

ಸ್ಥಳೀಯ ಶಾಸಕ ಎಲ್ಲಿಯವರೆಗೆ ಇರುತ್ತಾರೋ ಅಲ್ಲಿಯ ವರೆಗೆ ಸಂಚಾರಿ ಠಾಣೆಯ ಸಿಪಿಐಯಾಗಿ ಇರುತ್ತಾರೆ ಎನ್ನುವ ಅಂಶ ಸಹ ಬೆಳಕಿಗೆ ಬಂದಿದೆ. ಮರಳು, ಜಲ್ಲಿ, ಮರಂ ಇನ್ನಿತರ ಸರಬರಾಜಿನ ಶಾಸಕ ಹಿಂಬಾಲಕರಿಗೆ ತೊಂದರೆ ಕೊಡಬಾರದು ಎನ್ನುವ ರಾಜಿಯೊಂದಿಗೆ ಈ ಕೆಲಸ ನಡೆಯುತ್ತಿದೆ. ಇನ್ನು ಪಾಲಿಟ್ನಿನಿಕ್ ಕಾಲೇಜ್ ಹತ್ತಿರ ಆದ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತ ಪಟ್ಟರು, ಆ ಟ್ರ್ಯಾಕ್ಟರ್ ಯಾರದು ? ಎನ್ನುವ ಮಾಹಿತಿ ಬೆಳಕಿಗೆ ಬರಲಿಲ್ಲವೇ ಇದು ಸಹ ದುರಂತ ವಾಗಿದೆ.

ನಗರದ ರಸ್ತೆಯ ತುಂಬೆಲ್ಲಾ ಬಂಡಿಗಳು, ಪುಟ್ ಪಾತ್ ಮೇಲೆ ವ್ಯಾಪಾರ

ಇನ್ನು ಬಳ್ಳಾರ ನಗರದಲ್ಲಿ ಪ್ರತಿಯೊಂದು ಸ್ಥಳದಲ್ಲಿ ವ್ಯಾಪಾರ ಮಾಡುವ ಬಂಡಿಗಳು, ಎಲ್ಲೆಂದರಲ್ಲಿ ಆಟೋಗಳ ನಿಲ್ದಾಣಗಳು, ಪುಟ್ ಪಾತ್ ಮೇಲೆ ವ್ಯಾಪಾರ ಮಾಡುವ ಜನರು, ಇದರಿಂದಾಗಿ ಪಾದಚಾರಿಗಳು ರಸ್ತೆಯಲ್ಲಿ ನಡೆದು ಹೋಗುವ ಪರಿಸ್ಥಿತಿ ಉಂಟಾಗಿದೆ ಇದಕ್ಕೆ ಕಾರಣ ಸಂಚಾರ ಪೊಲೀಸ್ ಅಧಿಕಾರಿದ ನಿಲಕ್ಷ್ಯವಾಗಿದೆ.

ಹೊರರಾಜ್ಯದ ವಾಹನಗಳಿಗೆ ಮಾತ್ರ ದಂಡ

ಹೊರರಾಜ್ಯಗಳ ಬೈಕ್, ಕಾರು, ಲಾರಿಗಳು ಇನ್ನಿತರ ವಾಹನಗಳಿಗೆ ಕೇಸ್ ಹಾಕ್ತಾರೆ ಆದರೆ ಬಳ್ಳಾರಿ ಜಿಲ್ಲೆಯ ವಾಹನ ಸವಾರರಿಗೆ ಕೇಸ್ ಗಳನ್ನು ಹಾಕದೆ ಇರೋದು ದುರಂತ. ಇನ್ನು ಮಹಿಳೆಯರಿಗೆ ನಿಯಮಗಳನ್ನು ಉಲ್ಲಂಘನೆ ಮಾಡಿದ್ರೇ ದಂಡನೆ ಇಲ್ಲ.

ಠಾಣೆಯ ಎಸ್.ಬಿ ಆಯೂಬ್ ದರ್ಪ

ಇನ್ನು ಸಂಚಾರಿ ಪೊಲೀಸ್ ಠಾಣೆಯಲ್ಲಿನ ಎಸ್.ಬಿ ಆಯೂಬ್, ಠಾಣೆಯ ಸಿಪಿಐ,ಪಿಎಸ್ಐ ಗಿಂತ ಇವರ ದರ್ಪ ಹೆಚ್ಚಾಗಿದೆ. ಠಾಣೆಗೆ ಬರುವ ಸಾರ್ವಜನಿಕರಿಗೆ ಏಕವಚನ ಮಾತನಾಡೋದ್, ಅವಾಚ್ಯ ಶದ್ಭಗಳಿಂದ ಆಟೋಚಾಲಕರಿಗೆ ನಿಂದನೆ ಮಾಡೋದು ಇತನ ಕರ್ತವ್ಯ, ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಲು ಈ ಠಾಣೆಯ ಸಿಪಿಐ ಮತ್ತು ಎಸ್.ಬಿ ಆಯೂಬ್ ಕಲ್ಲಿನ ಬಂಡಿ, ಇನ್ನಿತರ ಬಂಡಿಗಳಿಗೆ ತಿಂಗಳಿಗೆ 1000 ರೂಪಾಯಿ ಸಹ ವಸೂಲಿ ಮಾಡುತ್ತಿದ್ದಾರೆ. ಆದರೆ ಟ್ರಾಫಿಕ್ ಮಾತ್ರ ಸರಿಪಡಿಸುತ್ತಿಲ್ಲದೆ ಇರೋದ್ ದುರಂತವಾಗಿದೆ.

ಬಳ್ಳಾರಿ ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಒಬ್ಬರು, ಬೈಕ್ ಸವಾರನಿಗೆ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 500 ರೂಪಾಯಿ ದಂಡ ಹಾಕಿದ್ದಾರೆ, ಈ ಬೈಕ್ ಸವಾರ ಸ್ಥಳೀಯ ಶಾಸಕರಿಗೆ ಫೋನ್ ಮಾಡಿಕೊಟ್ಟು, ಎ.ಎಸ್.ಐ.ಗೇ ನಿನಗೆ ಸರ್ಕಾರದಿಂದ ಸಂಬಳ ಬರುತ್ತದೆ ತಾನೇ ನೀನೇ 500 ಕಟ್ಟು ಎಂದು ಹೇಳಿದ ಉದಾಹರಣೆ ಇದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ. ಇನ್ನು ಈ ಸಿಪಿಐ ಶಾಸಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಯಮಗಳು ಅನ್ವಯವಾಗುವುದಿಲ್ಲವೇ ?

~ನೊಂದ ಪೊಲೀಸ್ ಸಿಬ್ಬಂದಿಗಳು

ಬಾಡಿ ಕ್ಯಾಮರ ಹಾಕಲ್ಲ

ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯ ದಂಡ ಹಾಕುವ ಸಿಬ್ಬಂದಿಗಳು, ವಿವಿಧ ಠಾಣೆಯ ಎ.ಎಸ್.ಐ, ಪಿ.ಎಸ್.ಐ, ಸಿ.ಪಿ.ಐ, ಡಿವೈಎಸ್ಪಿ, ಎಸ್ಪಿ ಯಾರೂ ಸಹ ಕರ್ತವ್ಯದಲ್ಲಿ‌ ಇದ್ದಾಗ ಬಾಡಿ ಕ್ಯಾಮರ ಹಾಕದೇ ಇರೋದು ದುರಂತ.

ಬಾಡಿ ಕ್ಯಾಮರ ಹಾಕ್ತಾರೆ, ನೀವು ನೋಡಿಲ್ಲ ಎನ್ನುವ ಮಾಹಿತಿ ಎಸ್ಪಿ ಅವರು ತಿಳಿಸಿದರು. ಎಷ್ಟು ಕ್ಯಾಮರ ಇದೆ ಎಂದು ಪ್ರಶ್ನೆ ಮಾಡಿದ್ದಕ್ಕೆ ಇಲ್ಲ ನೋಡಿ ಹೇಳುವೆ ಎಂದರು.

~ಡಾ.ಶೋಭಾರಾಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಬಳ್ಳಾರಿ ಜಿಲ್ಲೆ

ಒಟ್ಟಾರೆಯಾಗಿ ಬಳ್ಳಾರಿ ನಗರ ಮತ್ತು ಜಿಲ್ಲೆಯಲ್ಲಿ ಟ್ರಾಫಿಕ್ ಮುಕ್ತ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎನ್ನುವುದ ಸಾರ್ವಜನಿಕ ಒತ್ತಾಯವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending