ದಿನದ ಸುದ್ದಿ
ಆಧಾರ್ ಸವಾಲ್: ಟ್ರಾಯ್ ಅಧ್ಯಕ್ಷರ ಖಾತೆಗೆ ಕನ್ನ ಹಾಕಿದ ಹ್ಯಾಕರ್
ಸುದ್ದಿದಿನ ಡೆಸ್ಕ್: ಆಧಾರ್ ಕಾರ್ಡ್ ನಂಬರ್ ಕೊಟ್ಟು ತಾಕತ್ತಿದ್ದರೆ ನನ್ನ ಮಾಹಿತಿಗಳನ್ನು ಕದಿಯಿರಿ ಎಂದು ಸವಾಲು ಹಾಕಿದ ಭಾರತೀಯ ದೂರ ಸಂಪರ್ಕ ನಿಯಂತ್ರಣ ಮಂಡಳಿ (ಟ್ರಾಯ್) ಮುಖ್ಯಸ್ಥರ ಸೊಕ್ಕು ಮುರಿದಿರುವ ಹ್ಯಾಕರ್ಗಳು, ಅವರ ಖಾತೆಗೆ ಒಂದು ರೂ. ಜಮೆಮಾಡಿದ್ದಾರೆ.
ಆಧಾರ್ ಕಾರ್ಡ್ ಮಾಹಿತಿಗಳು ಸುರಕ್ಷಿತ. ಅದನ್ನು ಎಂದಿಗೂ ಕದಿಯಲು ಸಾಧ್ಯವಿಲ್ಲಎಂದು ಟ್ವಿಟರ್ನಲ್ಲಿ ಹೇಳಿದ್ದ ಆರ್ಎಸ್ ಶರ್ಮಾ ಅವರು ತಮ್ಮ ಆಧಾರ್ ಸಂಖ್ಯೆಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದರು. ತಾಕತ್ತಿದ್ದರೆ ಆಧಾರ್ ಮಾಹಿತಿಗಳನ್ನು ಬಹಿರಂಗಪಡಿಸಿ ಎಂದು ಸವಾಲುಹಾಕಿದರು.
ಇದಾದ ಕೆಲವೇ ಗಂಟೆಗಳಲ್ಲಿ ಬ್ರಿಟನ್ ಮೂಲದ ಹ್ಯಾಕರ್ವೊಬ್ಬ ಶರ್ಮಾ ಅವರ ಮೊಬೈಲ್ ಸಂಖ್ಯೆಗಳು, ಅವರು ಬಳಸುತ್ತಿರುವ ಮೊಬೈಲ್, ಅವರ ಬ್ಯಾಂಕ್ ಖಾತೆಗಳು ಮೊದಲಾದ ಮಾಹಿತಿಗಳನ್ನು ಟ್ವಿಟರ್ನಲ್ಲೇ ಲೀಕ್ ಮಾಡಿದ್ದಾನೆ.
ಆಧಾರ್ ಕಾರ್ಡ್ ಕೆಟ್ಟದ್ದು ಎಂದು ನಾನು ಹೇಳುವುದಿಲ್ಲ ಆದರೆ, ಆಧಾರ್ ಸಂಖ್ಯೆಯನ್ನು ಹಂಚಿಕೊಳ್ಳುವುದು ಸುರಕ್ಷಿತವಲ್ಲ ಎಂದು ಹ್ಯಾಕರ್ ಪ್ರತಿಕ್ರಿಯೆ ನೀಡಿದ್ದ. ಈ ಎಲ್ಲ ಮಾಹಿತಿಗಳು ವೆಬ್ಸೈಟ್ನಲ್ಲಿ ಲಭ್ಯವಿವೆ ಎಂದು ಶರ್ಮಾ ಅವರು ಸಮರ್ಥನೆ ಮಾಡಿಕೊಂಡಿದ್ದರು.
ಇದರ ಬೆನ್ನಿಗೇ ಬೆಂಗಳೂರಿನ ಹ್ಯಾಕರ್ಗಳು ಶರ್ಮಾ ಅವರ ಖಾತೆಗೆ ಒಂದು ರೂ. ಜಮೆ ಮಾಡಿ ಆ ಸ್ಕ್ರೀನ್ ಶಾಟ್ಅನ್ನು ಹಂಚಿಕೊಂಡಿದ್ದಾರೆ.
ಶರ್ಮಾ ಅವರ ಆಧಾರ್ ಕಾರ್ಡ್ ಮಾಹಿತಿ ಹ್ಯಾಕ್ ಆಗಿರುವ ಬೆನ್ನಿಗೇ ಟ್ವಿಟರ್ನಲ್ಲಿ ಆಧಾರ್ ಪರವಾದ ಮತ್ತು ವಿರೋಧಿಗಳ ನಡುವೆ ಪರ ವಿರೋಧದ ಚರ್ಚೆ ಆರಂಭವಾಗಿದೆ.
ಆಧರ್ ಕಾರ್ಡ್ ಮಾಡಿಸಲು ದೇಶದ ಜನರು ಈಗಾಗಲೇ ನೀಡಿರುವ ಮಾಹಿತಿಗಳು ಸರಕಾರದ ಬಳಿ ಭದ್ರವಾಗಿದೆ ಎಂದು ನೀವು ಅಂದುಕೊಂಡಿದ್ದರೆ ಅದು ಶುದ್ಧ ಸುಳ್ಳು. ಆಧಾರ್ ಮಾಹಿತಿಗಳು ಹ್ಯಾಕರ್ಗಳ ಕೈಗೆ ಸುಲಭವಾಗಿ ಸಿಕ್ಕಿವೆ. ಅವರು ಯಾವಾಗ ಬೇಕಾದರೂ ನಮ್ಮ ಖಾತೆಗೆ ಕೈ ಹಾಕಬಹದು, ನಮ್ಮ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ಹಾಗೂ ಮಿಕ್ಕ ವಿವರಗಳನ್ನೆಲ್ಲ ಕದಿಯಬಹುದು ಎಂದು ಟ್ವಿಟ್ಟಿಗರು ವಾದಿಸಿದ್ದಾರೆ.
trai chairman account hacked

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ16 hours ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ16 hours ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ16 hours ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ16 hours ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ16 hours ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ