ದಿನದ ಸುದ್ದಿ
ನಂಜನಗೂಡಲ್ಲೊಂದು ‘ಟ್ರೈನ್ ಶಾಲೆ’..!

ಸುದ್ದಿದಿನ ವಿಶೇಷ : ಒಂದೆಡೆ ಸರ್ಕಾರಿ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ.ಇನ್ನೊಂದೆಡೆ ತುಂಬಿ ತುಳುಕುವ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದುಪ್ಪಟ್ಟು ಫೀಸ್ ಕಟ್ಟಿ ಸೇರಿಸುತ್ತಿರುವ ಪೋಷಕರು. ಇಂಥ ವಿಪರ್ಯಾಸಗಳ ನಡುವೆ ಸರ್ಕಾರ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುತ್ತೇವೆ ಎನ್ನುವ ಸೋಗಲಾಡಿ ಹೇಳಿಕೆಗಳಿಂದ ಬೇಸತ್ತ ಪ್ರಜ್ಞಾವಂತ ಶಿಕ್ಷರರು ತಮ್ಮ ಶಾಲೆಗಳನ್ನು ಉಳಿಸಿಕೊಳ್ಳಲು ಸರ್ಕಾರದಿಂದ ಯಾವ ಸಹಾಯ ಪಡೆಯದೆ ಅಕ್ಷರಶಃ ಕನ್ನಡ ಪ್ರೇಮವನ್ನು ಮೆರೆಯುತ್ತಿರುವ ಅಪರೂಪದ ಸಂಗತಿಗಳು ಹಾಗೊಂದು ಹೀಗೊಂದು ಕಾಣಿಸಿಕೊಳ್ಳುತ್ತಿವೆ. ಅದರಲ್ಲಿ ನಂಜನಗೂಡು ತಾಲೂಕಿನ ಕನ್ನಡ ಶಾಲೆಯನ್ನು ಉಳಿಸಿ ಕೊಳ್ಳಲು ಶಿಕ್ಷಕರು ಒಂದೊಳ್ಳೇ ಉಪಾಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುದ್ದಿದಿನ ಅವರನ್ನು ಸಂಪರ್ಕಿಸಿ ಅವರ ಕಾಳಜಿಗೆ ಬೆಂಬಲಿಸಿ ಈ ವರದಿ ಮಾಡಿದೆ.
ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯ, ನಂಜನಗೂಡು ತಾಲೂಕಿನ ಹಾರೋಪುರ ಎಂಬ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೆಲ್ಲಾ ಸೇರಿ ತಮ್ಮ ಶಾಲೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳ ಬೇಕು ಎಂಬ ಹಟದಿಂದ ಇಡೀ ಶಾಲೆಗೆ ಟ್ರೈನಿನಾಕಾರಾದ ಚಿತ್ತಾರದ ರಂಗು ಮೂಡಿಸಿ ‘ಟ್ರೈನ್ ಶಾಲೆ’ಯಾಗಿ ಪರಿವರ್ತಿಸಿ ಬಿಟ್ಟಿದೆ. ಒಂದರಿಂದ
ಏಳನೇ ತರಗತಿಯವರೆ ಕೇವಲ 55 ಮಕ್ಕಳು ಇರುವ ಈ ಶಾಲೆಗೆ ಇನ್ನೂ ಹೆಚ್ಚು ಮಕ್ಕಳು ಸೇರಲಿ, ಕನ್ನಡದ ಈ ಶಾಲೆಯು ಉಳಿಯಲಿ ಎಂಬ ಮಹದಾಸೆಯೊಂದಿಗೆ ಇಲ್ಲಿರು ನಾಲ್ಕು ಶಿಕ್ಷಕರು ಈ ಉಪಾಯ ಮಾಡಿದ್ದಾರೆ.
ಮೈಸೂರಿನ ನಾಗೇಶ್ ಎಂಬ ಕಲಾವಿದ ಈ ಟ್ರೈನ್ ನ ಚಿತ್ತಾರ ಬಿಡಿಸಿದ್ದು, ಗ್ರಾಮದ ಜನತೆ ಇವರ ಈ ಕೆಲಸಕ್ಕೆ ಭೇಷ್ ಎಂದಿದ್ದಾರೆ.ಶಾಲೆಯನ್ನು ನೋಡಲು ಈಗಾಗಲೇ ಬೇರೆ ಊರುಗಳಿಂದ ಜನರು ಬಂದು ನೋಡಿ ಪ್ರಸಂಶೆ ವ್ಯಕ್ತ ಪಡಿಸಿದ್ದಾರೆ. ಮಕ್ಕಳಂತೂ ಮೊದಲಿಗಿಂತಲೂ ಉತ್ಸುಕರಾಗಿ ಅಭ್ಯಾಸದಲ್ಲಿ ತೊಡಗಿದ್ದು ಮುಂದಿನ ದಿನಗಳಲ್ಲಿ ನಮ್ಮ ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಪೋಷಕರು ಸೇರಿಸುವುದಾಗಿ ಹೇಳಿದ್ದಾರೆ. ಕೇವಲ ಹದಿನೈದು ದಿನದ ಹಿಂದೆಯಷ್ಟೇ ನಾವು ಈ ಶಾಲೆಗೆ ಟ್ರೈನಿನಾಕಾರ ಕೊಡಿಸಿದ್ದು, ಮಕ್ಕಳು ಈಗಾಗಲೇ ಖಾಸಗಿ ಶಾಲೆಗೆ ಸೇರಿದ್ದಾರೆ. ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ನಮ್ಮ ಶಾಲೆಯ ಮಕ್ಕಳ ಸಂಖ್ಯೆ ಹೆಚ್ಚಲಿದೆ ಎಂಬ ವಿಶ್ವಾಸವನ್ನ ಶಾಲೆಯ ಮುಖ್ಯೋಪಾಧ್ಯಾಯ ಬಸವ ನಾಯಕ ವ್ಯಕ್ತ ಪಡಿಸಿದ್ದಾರೆ.
“ಈ ಕೆಲಸಕ್ಕೆ ಸರ್ಕಾರದಿಂದ ಯಾವ ಸಹಾಯವನ್ನೂ ನಾವು ಪಡೆದಿಲ್ಲ, ಆದರೆ ಯಾವುದಾರೂ NGOಗಳು ಶಾಲೆಯ ಅಭಿವೃದ್ಧಿಗೆ ಬಂದರೆ ಶಾಲೆ ಉಳಿಯುತ್ತದೆ, ಬೆಳೆಯುತ್ತದೆ”
|ಬಸವ ನಾಯಕ, ಮುಖ್ಯೋಪಾಧ್ಯಾಯ, ಹಾರೋಪುರ
“ಸರ್ಕಾರದ ಯಾವುದೇ ಸಹಾಯ ಪಡೆಯದೆ ತಮ್ಮ ಸ್ವಂತ ಖರ್ಚಿನಲ್ಲಿ ಮಕ್ಕಳನ್ನು ಕಲಿಕೆಗೆ ಪ್ರೇರೇಪಿಸಿರುವ ಶಿಕ್ಷಕರ ಈ ಕೆಲಸ ಖುಷಿತಂದಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಕೊಳ್ಳಬೇಕಾದಲ್ಲಿ ಈ ತರಹದ ಅನಿವಾರ್ಯ. ಮುಂದಿನ ಮುಖ್ಯಶಿಕ್ಷಕರ ಸಭೆಯಲ್ಲಿ ಹಾರೋಪುರ ಶಾಲೆಯ ಮುಖ್ಯೋಪಾಧ್ಯಾಯರ ಈ ಕೆಲಸಕ್ಕೆ ಅಭಿನಂದಿಸಲಾಗುವುದು.”
| ನಾರಾಯಣ, ಬಿಇಓ, ನಂಜನಗೂಡು
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಪಿ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು

ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಬಂದ ಕಾರಣ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ

ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಇದೇ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದೆ.
ಈ ಯೋಜನೆಗೆ ರಾಜ್ಯಾದ್ಯಂತ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಯೋಜನೆಗೆ ಏಕಕಾಲಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲಾ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ಗಳನ್ನು ಹೊರತುಪಡಿಸಿ ಇತರ ಎಲ್ಲಾ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಇದರಿಂದ ಶೇಕಡ 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬಸ್ಗಳಲ್ಲಿ ಶೇ. 50 ರಷ್ಟು ಆಸನಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್6 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ7 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ6 days ago
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ
-
ದಿನದ ಸುದ್ದಿ5 days ago
ಗೋ ಹತ್ಯೆ ನಿಷೇಧ ಕಾಯ್ದೆ ; ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ
-
ದಿನದ ಸುದ್ದಿ7 days ago
ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ