ದಿನದ ಸುದ್ದಿ
ಪರಿಶಿಷ್ಟ ಪಂಗಡದ ಜನ ಪ್ರತಿನಿಧಿಗಳು ಮತ್ತು ಕಂದಾಯ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ
ಸುದ್ದಿದಿನ,ಉಡುಪಿ : ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇದರ ವತಿಯಿಂದ ‘ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರವನ್ನು ನೀಡುವಾಗ ಮತ್ತು ಪಡೆಯುವಾಗ ಅನುಸರಿಸಬೇಕಾದ ಕಾನೂನು ಕ್ರಮಗಳು’ ಎಂಬ ವಿಷಯ ಕುರಿತು ಪರಿಶಿಷ್ಟ ಪಂಗಡದ ಜನ ಪ್ರತಿನಿಧಿಗಳಿಗೆ ಹಾಗೂ ಕಂದಾಯ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವು ಫೆ.23ರಂದು ಉಡುಪಿ ಜಿಲ್ಲಾಧಿಕಾರಿಯ ಕಛೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜರಗಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದುರವರು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸುಮಾರು 70ಕುಟುಂಬಗಳ ಮಲೆಕುಡಿಯ ಬಾಂಧವರ ಜಾತಿ ಪ್ರಮಾಣ ಪತ್ರಗಳು ಹಾಗೂ ಕೇರಳ ರಾಜ್ಯದಿಂದ ಕರ್ನಾಟಕ ರಾಜ್ಯದಲ್ಲಿ ಬಂದು ನೆಲೆಸಿದವರ ಜಾತಿ ಪ್ರಮಾಣ ಪತ್ರಗಳ ಸಮಸ್ಯೆಗಳ ಕುರಿತಾಗಿ ಗಮನಸೆಳೆದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಗಂಗಾಧರ ಗೌಡ ಈದುರವರು ಅರಣ್ಯ ಹಕ್ಕಿಲ್ಲದ ಆದಿವಾಸಿಗಳನ್ನು ಅರಣ್ಯದಿಂದ ತೆರವುಗೊಳಿಸುವ ಆದೇಶವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಬಗ್ಗೆ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯ್ದೆ ಸಮರ್ಪಕವಾಗಿ ಜಾರಿಯಾಗದ ಕುರಿತು ಹಾಗೂ ತಿರಸ್ಕೃತ ಅರ್ಜಿಗಳ ಬಗ್ಗೆ ಪ್ರಸ್ತಾಪಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ ನೂರಾಳ್ ಬೆಟ್ಟು,ಕಾರ್ಕಳ ತಾಲೂಕು ಸಮಿತಿಯ ಉಪಾಧ್ಯಕ್ಷ ಡೀಕಯ್ಯ ಗೌಡ, ಸಹ ಕಾರ್ಯದರ್ಶಿ ಸುಂದರಿ ಪೇರಡ್ಕ, ನಾನಾ ತಾಲೂಕು, ಗ್ರಾಮ ಸಮಿತಿಯ ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ಉಪಸ್ಥಿತಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401