ದಿನದ ಸುದ್ದಿ

ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.

ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.

ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version