Connect with us

ದಿನದ ಸುದ್ದಿ

ಟ್ರೂ ಕಾಲರ್ ಎಡವಟ್ಟು, ನಿರ್ದೇಶಕನಿಗೆ ಬಿತ್ತು ಧರ್ಮದೇಟು

Published

on

ಸೌಜನ್ಯ: ಟಿಎನ್ಎನ್

ಸುದ್ದಿದಿನ ಡೆಸ್ಕ್: ಬೆಂಗಳೂರಿನ ಕಸ್ತುರ ಬಾ ರಸ್ತೆಯಲ್ಲಿರುವ ಕನ್ನಡ ಚಿತ್ರ ನಿರ್ದೇಶಕ ಎನ್ ಶಿವಕುಮಾರ್ ಅವರಿಗೆ ಬೆಳ್ಳಂಬೆಳಗ್ಗೆ ಒಂದು ಶಾಕ್ ಕಾದಿತ್ತು. ಮನೆ ಕಾಲಿಂಗ್ ಬೆಲ್ ಸದ್ದಾಗಿ ಯಾರು ನೋಡುವ ಎಂದು ಬಾಗಿಲು ತೆರೆದಾಗ ಇಬ್ಬರು ಯುವಕರು ಯರ್ರಾಬಿರ್ರಿ ಹಲ್ಲೆ ಮಾಡಿದರು. ಪರಿಣಾಮವಾಗಿ ಅವರ ಕಣ್ಣಿಗೆ ಗಾಯವಾಯಿತು. ಮುಖ ಊದಿಕೊಂಡಿತು.
ಒಂದು ಕ್ಷಣ ಇವರು ಯಾಕೆ ನನ್ನನ್ನು ಹೊಡೆಯುತ್ತಿದ್ದಾರೆ ಎಂದು ಶಿವಕುಮಾರ್ ಅವರಿಗೆ ಅರ್ಥವೇ ಆಗಲಿಲ್ಲ. ಹಲ್ಲೆ ಮಾಡಿದ ಹುಡುಗರು “ಮರ್ಯಾದೆಯಿಂದ ನಮ್ಮ ಬಾಸ್ ಹತ್ರ ತೆಗೆದುಕೊಂಡಿರುವ ಎರಡು ಲಕ್ಷ ರೂ. ವಾಪಸ್ ಕೊಡು ಎಂದು ಅವಾಚ್ಯ ಶಬ್ದಗಳಲ್ಲಿ ನಿಂದಿಸಿದರು. ಯಾವ ಹಣ, ಯಾವ ಬಾಸ್ ಎಂಬ ಸ್ಪಷ್ಟತೆ ಶಿವಕುಮಾರ್‍ಗೆ ಇರಲಿಲ್ಲ. ಯಾಕಂದ್ರೆ ಅವರು ಯಾವ ಸಾಲವನ್ನೂ ಮಾಡಿರಲಿಲ್ಲ.
ಹಲ್ಲೆ ಮುಂದುವರಿಸುತ್ತಾ ಆ ಹುಡುಗರು ಶಿವಕುಮಾರ್ ಕುತ್ತಿಗೆ ಪಟ್ಟಿ ಹಿಡಿದು ಹೊರಗೆ ಎಳೆದೊಯ್ಯುವಾಗ ಅದನ್ನು ಕಂಡ ನೆರೆಹೊರೆಯವರು ಪೊಲೀಸ್‍ಗೆ ಕರೆ ಮಾಡಿ ವಿಷಯ ಮುಟ್ಟಿಸಿದರು.
ತಾವು ಯಾರಿಂದಲೂ ಸಾಲ ಪಡೆದಿಲ್ಲ ಎಂದು ಶಿವಕುಮಾರ್ ಪರಿಪರಿಯಾಗಿ ಬೇಡಿಕೊಂಡರೂ, ಪೊಲೀಸರು ನಂಬಲಿಲ್ಲ. ಕೊನೆಗೆ ರಂಗನಾಥ್ ಎಂಬ ವ್ಯಕ್ತಿಯನ್ನು ಠಾಣೆಗೆ ಕರೆಸಲಾಯಿತು. ಆತ, ಫಿನಾನ್ಶಿಯರ್ ಹತ್ತಿರ ಎರಡು ಲಕ್ಷ ರೂ. ಸಾ ಪಡೆದಿದ್ದ ಎಂದು ಗೊತ್ತಾಯಿತು. ಶಿವಕುಮಾರ್ ಅವರು ನಿನಗೆ ಗೊತ್ತಾ ಎಂದು ಕೇಳಿದರೆ ಅವನು ಇಲ್ಲ ಎಂದ.
ಈ ಹಲ್ಲೆಗೆ ಕಾರಣವಾಗಿದ್ದು ಟ್ರೂಕಾಲರ್ ಹಾಗೂ ಫೇಸ್ ಬುಕ್ ಖಾತೆ ಎಂಬುದು ತನಿಖೆಯಿಂದ ಗೊತ್ತಾಯಿತು. ಅಸಲಿಗೆ ರಂಗನಾಥ್ ಎಂಬಾತನಿಗೆ ಶಿವಕುಮಾರ್ ಎನ್ ಎಸ್ ಎಂಬ ವ್ಯಕ್ತಿ ಜಾಮೀನಾಗಿ ಸಾಲ ಕೊಡಿಸಿದ್ದ. ಆದರೆ, ರಂಗನಾಥ್ ಹೇಳಿದ ಸಮಯಕ್ಕೆ ಹಣ ಹಿಂದುರುಗಿಸಲಿಲ್ಲ. ಸಾಲ ವಸೂಲಿಗೆ ಮುಂದಾದ ಈ ಹುಡುಗರು ಶಿವಕುಮಾರ್ ಎನ್ ಎಸ್ ಎಂದು ಟ್ರೂಕಾಲರ್ ನಲ್ಲಿ ಹುಡುಕಿದಾಗ ಸಿಕ್ಕಿದ್ದು, ನಿರ್ದೇಶಕ ಶಿವಕುಮಾರ್ ಎನ್. ಇದಾದ ನಂತರ ಫೇಸ್ ಬುಕ್‍ನಲ್ಲಿ ಹುಡುಕಿದಾಗ ಇದೇ ನಿರ್ದೇಶಕರು ಕಾಣಿಸಿಕೊಂಡರು. ನಂತರ ಪ್ರೊಫೈಲ್ ಫೋಟೊ ಡೌನ್ ಲೋಡ್ ಮಾಡಿಕೊಂಡ ಹುಡುಗರು ಕುಡಿದ ಅಮಲಿನಲ್ಲಿ ನಿರ್ದೇಶಕ ಶಿವಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ.

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending