Connect with us

ದಿನದ ಸುದ್ದಿ

ತುಮಕೂರು :’ಸಮೂಹ ಮಾಧ್ಯಮ ಮತ್ತು ಬಂಡಾಯ ಪ್ರಜ್ಞೆ ಕಾರ್ಯಾಗಾರ’ ದಲ್ಲಿ ಪತ್ರಕರ್ತ ಪಿ. ಸಾಯಿನಾಥ್

Published

on

ಸುದ್ದಿದಿನ,ತುಮಕೂರು: ಬಂಡಾಯ ಸಾಹಿತ್ಯ ಸಂಘಟನೆಯು ನಿರ್ದಿಷ್ಟ ವಿಷಯಾಧಾರಿತ ಕಾರ್ಯಗಾರ ಮತ್ತು ಸಂವಾದಗಳ ಮೂಲಕ ಯುವ ಸಾಂಸ್ಕೃತಿಕ ನಾಯಕತ್ವವನ್ನು ಬೆಳೆಸುವ ಉದ್ದೇಶ ಹೊಂದಿದ್ದು ಇದರ ಭಾಗವಾಗಿ ಇಂದು ತುಮಕೂರಿನಲ್ಲಿ ಸಮೂಹ ಮಾಧ್ಯಮ ಮತ್ತು ಬಂಡಾಯ ಪ್ರಜ್ಞೆ ಎಂಬ ರಾಜ್ಯ ಮಟ್ಟದ ಕಾರ್ಯಗಾರವನ್ನು ಏರ್ಪಡಿಸಿಲಾಗಿತ್ತು.

ರಾಜ್ಯಾದ್ಯಂತ ಸಾಕಷ್ಟು ಯುವ ಪ್ರತಿನಿಧಿಗಳನ್ನು ಒಳಗೊಂಡ ಈ ಕಾರ್ಯಗಾರವನ್ನು ಬಂಡಾಯದ ಬರಹಗಾರಾದ ಪ್ರೊ. ಬರಗೂರು ರಾಮ ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ
ದೇಶದ ಹೆಸರಾಂತ ಪತ್ರಕರ್ತರೂ ಮತ್ತು ಚಿಂತಕರೂ ಆದ ಪಿ ಸಾಯಿನಾಥ್ ಉದ್ಘಾಟಿಸಿ, ಪತ್ರಿಕೆ, ಚಲನ ಚಿತ್ರ, ರಂಗಭೂಮಿ, ಜನಪದ ಕಲೆ, ಮತ್ತು ವಿದ್ಯುನ್ಮಾನ ಮಾಧ್ಯಮಗಳ ಸಾಮಾಜಿಕ ಹೊಣೆ ಮತ್ತು ಸ್ಥಿತ್ಯಂತರದ ಸ್ಥಿತಿಗಳನ್ನ ಕುರಿತು ವಿಷಯ ಮಂಡನೆ ಮತ್ತು ಸಂವಾದಗಳ ಜೊತೆಗೆ “ಸಮೂಹ ಮಾಧ್ಯಮ ಮತ್ತು ಮಹಿಳೆ” ಹಾಗೂ ಸಮೂಹ ಮಾಧ್ಯಮ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಕುರಿತು ವಿಶೇಷ ಉಪನ್ಯಾಸ ಮಾಡಲಾಯಿತು.

ಎಲ್ಲಾ ವಿಷಯಗಳ ಬಗ್ಗೆಯೂ ವ್ಯಾಪಕ ಚರ್ಚೆಗೆ ಅವಕಾಶ ಕಲ್ಪಿಸಲಾಗಿತ್ತು. ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾದ ಸಿ. ಬಸವಲಿಂಗಯ್ಯ (ರಂಗಭೂಮಿ). ಜಿ. ಎನ್. ಮೋಹನ್ (ವಿದ್ಯುನ್ಮಾನ). ಅರುಣ ಜೋಳದ ಕೂಡ್ಲಿಗಿ (ಜನಪದ ಕಲೆ). ಚಂದ್ರಕಾಂತ ವಡ್ಡು (ಪತ್ರಕೆ). ಗಂಗಾಧರ ಮೊದಲಿಯಾರ್ (ಚಲನಚಿತ್ರ). ಗೀತಾ ವಸಂತ್ (ಮಾಧ್ಯಮ ಮತ್ತು ಮಹಿಳೆ).
ಚ. ಹ. ರಘುನಾಥ್ (ಅಭಿವ್ಯಕ್ತಿ ಸ್ವಾತಂತ್ರ್ಯ). ದಿನೇಶ್ ಆಮಿನ್ ಮಟ್ಟು ಸಮಾರೋಪ ನುಡಿಗಳನ್ನಾಡಿದರು.

ರಾಜ್ಯದ ವಿವಿಧ ಕಡೆಯಿಂದ ವೈ. ಬಿ. ಹಿಮ್ಮಡಿ. ಆರ್ ಜಿ ಹಳ್ಳಿ ನಾಗರಾಜ್. ಗಡಿ ಹಳ್ಳಿ ನಾಗರಾಜ್. ರಂಗಾರೆಡ್ಡಿ ರಾಜಶೇಖರ ಮೂರ್ತಿ ಜ್ಯೋತಿ. ಪ್ರದೀಪ್ ಮಾಲ್ಗುಡಿ. ಮಲ್ಲಿಕಾರ್ಜುನ ಮಾನ್ಪಡೆ. ಸ್ಥಳಿಯ ಕವಿ ಕೆ ಬಿ ಸಿದ್ದಲಿಂಗ. ದೊರೆ ರಾಜ್. ಪ್ರೊ ಶ್ರೀನಿವಾಸಯ್ಯ. ಸೋಮಣ್ಣ. ಬೂವನ ಹಳ್ಳಿನಾಗರಾಜ್. ಬಾ ಹ ರಮಾಕೂಮಾರಿ. ಎಸ್ ರಮೇಶ್. ಲಕ್ಷ್ಮಣ್ ದಾಸ್. ಶೈಲ ನಾಗರಾಜ್. ಅಂತಮೂರ್ತಿ. ಹೊನ್ನಾಗಾನಹಳ್ಳಿ ಕರಿಯಣ್ಣ. ಸೈಯ್ಯದ್ ಮುಜೀಬ್. ರಘು ಎಸ್ ಎಲ್. ಹಫಿಜ್. ನಾಗರಾಜ ಎಂ. ಷಕೀಬ್ ಎಸ್ ಕಣದ್ಮನೆ. ಸತೀಶ್ ಶಿವಪ್ಪಯ್ಯನಮಠ. ಶಂಭನಗೌಡ. ಸಕ್ರಿಯವಾಗಿಭಾಗವಹಿಸಿದ್ದರು.

ಡಾ. ರಾಜಪ್ಪ ದಳವಾಯಿ ಮತ್ತು ಡಾ. ಸುಕನ್ಯ ಮಾರುತಿಯವರು ಕಾರ್ಯಗಾರದ ನಿರ್ದೇಶಕರಾಗಿ ಮತ್ತು ಜಿಲ್ಲಾ ಸಂಚಾಲಕರಾದ ನಾಗಭೂಷಣ ಬಗ್ಗನಡು. ಓ ನಾಗರಾಜ್ ಇವರ ನೇತೃತ್ವದಲ್ಲಿ ಕಾರ್ಯಗಾರವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending