Connect with us

ದಿನದ ಸುದ್ದಿ

ಉಡುಪಿಯ ಪದ್ಮಪ್ರಿಯಾ ಆತ್ಮಕ್ಕೆ ಶಾಂತಿ ಸಿಕ್ತು..! ಶಾಸಕರ ಪತ್ನಿ ಸಾವಿಗೆ ಕಾರಣವಾದ ಟಿವಿ ಅ್ಯಂಕರ್ ಗೂ ಅದೇ ಗತಿಯಾಯ್ತು..!

Published

on

  • ಪ್ರದೀಪ್ ಕುಮಾರ್, ಪತ್ರಕರ್ತ

ನಿಮಗೆ ಉಡುಪಿ ಪದ್ಮಪ್ರಿಯ ಪ್ರಕರಣ ಮರೆತು ಹೋಗಿರಬಹುದು. ನಾಲ್ಕೈದು ದಿನ ಟಿವಿಯಲ್ಲಿ ಪದ್ಮಪ್ರಿಯಾ ಸಾವಿನ ತರಾವರಿ ಕತೆ ಕೇಳಿ ಖುಷಿಯಲ್ಲೇ ಆಕ್ರೋಶ ವ್ಯಕ್ತಪಡಿಸಿ ಮರೆತಿರಬಹುದು. ಆದ್ರೆ ಪದ್ಮಪ್ರಿಯ ಆತ್ಮ ಮಾತ್ರ ಅದನ್ನು ಮರೆತಿಲ್ಲ. ಪದ್ಮಪ್ರೀಯ ಮತ್ತು ಆಕೆಯ ಗೆಳೆಯನ ಸಂಬಂಧದ ಬಗ್ಗೆ ಕತೆ ಕಟ್ಟಿ ಪದ್ಮಪ್ರೀಯ ಸಾವಿಗೆ ನೇರ ಕಾರಣನಾಗಿದ್ದ ಟಿವಿ ಅ್ಯಂಕರ್ ಗೆ ಇವತ್ತು ಅಂತದ್ದೇ ಅನೈತಿಕ ಸಂಬಂಧದ ಕಾರಣಕ್ಕಾಗಿ ಒದೆ ಬಿದ್ದಿದೆ.

ಅವತ್ತು ಶಾಸಕರ ಜೊತೆಗಿನ ಬದುಕಿನ ನಿರಾಸಕ್ತಿ ತಳೆದು ತನ್ನಷ್ಟಕ್ಕೆ ತಾನಿರ್ತೀನಿ ಅಂತ ಉಡುಪಿಯ ಪದ್ಮಪ್ರೀಯ ದೆಹಲಿಗೆ ಹೋಗಿದ್ದಳು. ಹೇರ್ ಕಟ್ ಮಾಡಿ, ತನ್ನ ಬಟ್ಟೆ, ನಡೆ ನುಡಿಗಳನ್ನು ಬದಲಿಸಿ ಹೊಸ ಬದುಕು ಕಟ್ಟಲು ಆಕೆ ದೆಹಲಿಗೆ ತೆರಳಿ ಐಟಿ ಕಂಪನಿಯಲ್ಲಿ ಕೆಲಸವನ್ನೂ ಹುಡುಕಿದ್ದಳು.

ದೆಹಲಿಯಲ್ಲಿ ಉಳಿದುಕೊಳ್ಳಲು ಮನೆಯೊಂದು ಬೇಕಾಗಿತ್ತು. ಆಗ ಆಕೆಯ ನೆನಪಿಗೆ ಬಂದಿದ್ದು ಬಾಲ್ಯದ ಗೆಳೆಯ ಅತುಲ್ ರಾವ್ ! ಗೆಳೆಯನಿಗೆ ಕರೆ ಮಾಡಿ ದೆಹಲಿಯಲ್ಲಿ ಫ್ಲ್ಯಾಟ್ ಒಂದನ್ನು ಬುಕ್ ಮಾಡಿಸಿಕೊಂಡಿದ್ದಷ್ಟೇ ಆಕೆ ಮಾಡಿದ ತಪ್ಪು. ಫ್ಲ್ಯಾಟ್ ಲೆಡ್ಜರ್ ನಲ್ಲಿ ಅತುಲ್ ರಾವ್ ಸಹಿ ಇತ್ತು. ಆಗ ಎಂಟ್ರಿಯಾಗಿದ್ದೇ ದೆಹಲಿ ಟಿವಿ9 ರಿಪೋರ್ಟರ್ ಶಿವಪ್ರಸಾದ್.

ಬದುಕು ಕಟ್ಟಿಕೊಳ್ಳಲು ದೆಹಲಿಗೆ ಬಂದ ಪದ್ಮಪ್ರಿಯಗೂ ಅತುಲ್ ರಾವ್ ಅನೈತಿಕ ಸಂಬಂಧವಿದೆ ಎಂದು ಟಿವಿ9 ನಲ್ಲಿ ಶಿವಪ್ರಸಾದ್ ಸುದ್ದಿ ಮಾಡಿದ. ಇಬ್ಬರ ಸಂಬಂಧದ ಬಗ್ಗೆ ಕಪೋಲಕಲ್ಪಿತ ಸುದ್ದಿಯನ್ನು ರೋಚಕವಾಗಿ 24 ಗಂಟೆಯೂ ನಿರಂತರ ಪ್ರಸಾರ ಮಾಡಲಾಯ್ತು. ಬದುಕಲು ಬಂದ ಪದ್ಮಪ್ರಿಯ ಟಿವಿ 9 ವರದಿ ನೋಡಿ ನೇಣಿಗೆ ಶರಣಾಗುವ ನಿರ್ಧಾರ ಮಾಡಿದಳು.

ಪದ್ಮಪ್ರಿಯ

ಫ್ಲ್ಯಾಟ್ ನ ಬಾಗಿಲು ಒಡೆದು ಒಳ ಹೋದಾಗ ಪದ್ಮಪ್ರಿಯ ನೇಣಿನಲ್ಲಿದ್ದಳು ಮತ್ತು ಟಿವಿ9 ಆನ್ ಆಗಿತ್ತು. ಇಷ್ಟಕ್ಕೆ ಬಿಡದ ಶಿವಪ್ರಸಾದ್ ಆ ರೂಮಿನಲ್ಲಿದ್ದ ಮಂಚದ ಕೆಳಗೆ ನುಸುಳಿ ಪದ್ಮಪ್ರಿಯಾ ಸಂಬಂಧದ ಬಗ್ಗೆ ಲೈವ್ ಕೊಡಲಾರಂಬಿಸಿದ. ಪದ್ಮಪ್ರಿಯಾ ಸಾವಿಗೆ ಟಿವಿ9 ಶಿವಪ್ರಸಾದನೇ ಕಾರಣ ಎಂದು ಇಡೀ ರಾಜ್ಯ ಮಾತನಾಡಿಕೊಂಡಿತು. ಆದರೆ ಶಿವಪ್ರಸಾದ್ ಮಾತ್ರ ಅದು ತನ್ನ ಜೀವಮಾನದ ಸಾಧನೆ ಅಂದುಕೊಂಡ.

ಅದೇ ಶಿವಪ್ರಸಾದ್ ಇದೀಗ ಟಿವಿ ಚಾನೆಲ್ ಅ್ಯಂಕರ್. ಇವತ್ತು ಮತ್ತೊಬ್ಬರ ಪತ್ನಿ ಜೊತೆ ರೆಡ್​​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾನೆ. ಮಹಿಳಾ ಅ್ಯಂಕರ್ ಜೊತೆ ಶಿವಪ್ರಸಾದ್ ಕಾರಿನಲ್ಲಿ ಹೋಗುತ್ತಿದ್ದಾಗ ಸಿನೀಮಿಯ ರೀತಿಯಲ್ಲಿ ಫಾಲೋ ಮಾಡಿಕೊಂಡು ಬಂದ ಗಂಡ ಶ್ರೀಧರ್, ಶಿವಪ್ರಸಾದ್ ಮೇಲೆ ಹಲ್ಲೆ ಮಾಡಿದ್ದಾನೆ. ಇವತ್ತು ಆ ಮಹಿಳಾ ಅ್ಯಂಕರ್ ಬರ್ತ್ ಡೇ ಇತ್ತು. ಹಾಗಾಗಿ ಇಬ್ಬರೂ ಸುತ್ತಾಡುತ್ತಿದ್ದರು.

ಕೊಡಿಗೆಹಳ್ಳಿ ಮೋರ್ ಎದುರು ಶಿವಪ್ರಸಾದ್ ಮತ್ತು ಮಹಿಳಾ ಅ್ಯಂಕರ್ ಜಾಲಿ ರೈಡ್ ನಲ್ಲಿ ಇದ್ದಾಗ ಸಾಫ್ಟ್ ವೇರ್ ಇಂಜಿನಿಯರ್ ಗಂಡ ಕಾರನ್ನು ಅಡ್ಡಗಟ್ಟಿ ಶಿವಪ್ರಸಾದ್ ಗೆ ಹಲ್ಲೆ ಮಾಡಿದ್ದಾನೆ. ಕಾರಿನ ಗಾಜುಪುಡಿ ಗೂಸಾ ನೀಡಿದ್ದಾನೆ. ಶ್ರೀಧರ್ ಹೇಳುವ ಪ್ರಕಾರ, ಅ್ಯಂಕರ್ ಸದಿವಪ್ರಸಾದ್ ನನ್ನ ಜೀವನ ನರಕ ಮಾಡಿದ್ದಾನೆ.

ನನ್ನ ಪತ್ನಿಯನ್ನು ನನ್ನಿಂದ ದೂರ ಮಾಡಿದ್ದಾನೆ. ಹಾಗಾಗಿ, ಇಂದು ರೆಡ್​ಹ್ಯಾಂಡ್ ಆಕೆ ಮತ್ತು ಆತನನ್ನು ನಾನು ಹಿಡಿದು ಪೊಲೀಸರಿಗೆ ಕೊಟ್ಟಿದ್ದೇನೆ. ಪೊಲೀಸರ ಬಳಿಯೂ ಹೇಳಿಕೆ ನೀಡಿದ್ದೇನೆ ಎಂದು ಹಲ್ಲೆ ಮಾಡಿರೋ ಆರೋಪ ಹೊತ್ತಿರೋ ಮಹಿಳಾ ಅ್ಯಂಕರ್ ಗಂಡ ಶ್ರೀಧರ್ ಹೇಳುತ್ತಿದ್ದಾನೆ. ಅವತ್ತು ಶಾಸಕರ ಪತ್ನಿ ಪದ್ಮಪ್ರಿಯಾ ತಲೆಗೆ ಅನೈತಿಕ ಸಂಬಂಧ ಕಟ್ಟಿ ಆಕೆಯ ಸಾವಿಗೆ ಕಾರಣವಾದ ಅ್ಯಂಕರ್ ಶಿವಪ್ರಸಾದ್ ಈಗ ಏನನ್ನುತ್ತಾನೆ ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending