ದಿನದ ಸುದ್ದಿ
ಉಡುಪಿಯ ಪದ್ಮಪ್ರಿಯಾ ಆತ್ಮಕ್ಕೆ ಶಾಂತಿ ಸಿಕ್ತು..! ಶಾಸಕರ ಪತ್ನಿ ಸಾವಿಗೆ ಕಾರಣವಾದ ಟಿವಿ ಅ್ಯಂಕರ್ ಗೂ ಅದೇ ಗತಿಯಾಯ್ತು..!
- ಪ್ರದೀಪ್ ಕುಮಾರ್, ಪತ್ರಕರ್ತ
ನಿಮಗೆ ಉಡುಪಿ ಪದ್ಮಪ್ರಿಯ ಪ್ರಕರಣ ಮರೆತು ಹೋಗಿರಬಹುದು. ನಾಲ್ಕೈದು ದಿನ ಟಿವಿಯಲ್ಲಿ ಪದ್ಮಪ್ರಿಯಾ ಸಾವಿನ ತರಾವರಿ ಕತೆ ಕೇಳಿ ಖುಷಿಯಲ್ಲೇ ಆಕ್ರೋಶ ವ್ಯಕ್ತಪಡಿಸಿ ಮರೆತಿರಬಹುದು. ಆದ್ರೆ ಪದ್ಮಪ್ರಿಯ ಆತ್ಮ ಮಾತ್ರ ಅದನ್ನು ಮರೆತಿಲ್ಲ. ಪದ್ಮಪ್ರೀಯ ಮತ್ತು ಆಕೆಯ ಗೆಳೆಯನ ಸಂಬಂಧದ ಬಗ್ಗೆ ಕತೆ ಕಟ್ಟಿ ಪದ್ಮಪ್ರೀಯ ಸಾವಿಗೆ ನೇರ ಕಾರಣನಾಗಿದ್ದ ಟಿವಿ ಅ್ಯಂಕರ್ ಗೆ ಇವತ್ತು ಅಂತದ್ದೇ ಅನೈತಿಕ ಸಂಬಂಧದ ಕಾರಣಕ್ಕಾಗಿ ಒದೆ ಬಿದ್ದಿದೆ.
ಅವತ್ತು ಶಾಸಕರ ಜೊತೆಗಿನ ಬದುಕಿನ ನಿರಾಸಕ್ತಿ ತಳೆದು ತನ್ನಷ್ಟಕ್ಕೆ ತಾನಿರ್ತೀನಿ ಅಂತ ಉಡುಪಿಯ ಪದ್ಮಪ್ರೀಯ ದೆಹಲಿಗೆ ಹೋಗಿದ್ದಳು. ಹೇರ್ ಕಟ್ ಮಾಡಿ, ತನ್ನ ಬಟ್ಟೆ, ನಡೆ ನುಡಿಗಳನ್ನು ಬದಲಿಸಿ ಹೊಸ ಬದುಕು ಕಟ್ಟಲು ಆಕೆ ದೆಹಲಿಗೆ ತೆರಳಿ ಐಟಿ ಕಂಪನಿಯಲ್ಲಿ ಕೆಲಸವನ್ನೂ ಹುಡುಕಿದ್ದಳು.
ದೆಹಲಿಯಲ್ಲಿ ಉಳಿದುಕೊಳ್ಳಲು ಮನೆಯೊಂದು ಬೇಕಾಗಿತ್ತು. ಆಗ ಆಕೆಯ ನೆನಪಿಗೆ ಬಂದಿದ್ದು ಬಾಲ್ಯದ ಗೆಳೆಯ ಅತುಲ್ ರಾವ್ ! ಗೆಳೆಯನಿಗೆ ಕರೆ ಮಾಡಿ ದೆಹಲಿಯಲ್ಲಿ ಫ್ಲ್ಯಾಟ್ ಒಂದನ್ನು ಬುಕ್ ಮಾಡಿಸಿಕೊಂಡಿದ್ದಷ್ಟೇ ಆಕೆ ಮಾಡಿದ ತಪ್ಪು. ಫ್ಲ್ಯಾಟ್ ಲೆಡ್ಜರ್ ನಲ್ಲಿ ಅತುಲ್ ರಾವ್ ಸಹಿ ಇತ್ತು. ಆಗ ಎಂಟ್ರಿಯಾಗಿದ್ದೇ ದೆಹಲಿ ಟಿವಿ9 ರಿಪೋರ್ಟರ್ ಶಿವಪ್ರಸಾದ್.
ಬದುಕು ಕಟ್ಟಿಕೊಳ್ಳಲು ದೆಹಲಿಗೆ ಬಂದ ಪದ್ಮಪ್ರಿಯಗೂ ಅತುಲ್ ರಾವ್ ಅನೈತಿಕ ಸಂಬಂಧವಿದೆ ಎಂದು ಟಿವಿ9 ನಲ್ಲಿ ಶಿವಪ್ರಸಾದ್ ಸುದ್ದಿ ಮಾಡಿದ. ಇಬ್ಬರ ಸಂಬಂಧದ ಬಗ್ಗೆ ಕಪೋಲಕಲ್ಪಿತ ಸುದ್ದಿಯನ್ನು ರೋಚಕವಾಗಿ 24 ಗಂಟೆಯೂ ನಿರಂತರ ಪ್ರಸಾರ ಮಾಡಲಾಯ್ತು. ಬದುಕಲು ಬಂದ ಪದ್ಮಪ್ರಿಯ ಟಿವಿ 9 ವರದಿ ನೋಡಿ ನೇಣಿಗೆ ಶರಣಾಗುವ ನಿರ್ಧಾರ ಮಾಡಿದಳು.
ಫ್ಲ್ಯಾಟ್ ನ ಬಾಗಿಲು ಒಡೆದು ಒಳ ಹೋದಾಗ ಪದ್ಮಪ್ರಿಯ ನೇಣಿನಲ್ಲಿದ್ದಳು ಮತ್ತು ಟಿವಿ9 ಆನ್ ಆಗಿತ್ತು. ಇಷ್ಟಕ್ಕೆ ಬಿಡದ ಶಿವಪ್ರಸಾದ್ ಆ ರೂಮಿನಲ್ಲಿದ್ದ ಮಂಚದ ಕೆಳಗೆ ನುಸುಳಿ ಪದ್ಮಪ್ರಿಯಾ ಸಂಬಂಧದ ಬಗ್ಗೆ ಲೈವ್ ಕೊಡಲಾರಂಬಿಸಿದ. ಪದ್ಮಪ್ರಿಯಾ ಸಾವಿಗೆ ಟಿವಿ9 ಶಿವಪ್ರಸಾದನೇ ಕಾರಣ ಎಂದು ಇಡೀ ರಾಜ್ಯ ಮಾತನಾಡಿಕೊಂಡಿತು. ಆದರೆ ಶಿವಪ್ರಸಾದ್ ಮಾತ್ರ ಅದು ತನ್ನ ಜೀವಮಾನದ ಸಾಧನೆ ಅಂದುಕೊಂಡ.
ಅದೇ ಶಿವಪ್ರಸಾದ್ ಇದೀಗ ಟಿವಿ ಚಾನೆಲ್ ಅ್ಯಂಕರ್. ಇವತ್ತು ಮತ್ತೊಬ್ಬರ ಪತ್ನಿ ಜೊತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಮಹಿಳಾ ಅ್ಯಂಕರ್ ಜೊತೆ ಶಿವಪ್ರಸಾದ್ ಕಾರಿನಲ್ಲಿ ಹೋಗುತ್ತಿದ್ದಾಗ ಸಿನೀಮಿಯ ರೀತಿಯಲ್ಲಿ ಫಾಲೋ ಮಾಡಿಕೊಂಡು ಬಂದ ಗಂಡ ಶ್ರೀಧರ್, ಶಿವಪ್ರಸಾದ್ ಮೇಲೆ ಹಲ್ಲೆ ಮಾಡಿದ್ದಾನೆ. ಇವತ್ತು ಆ ಮಹಿಳಾ ಅ್ಯಂಕರ್ ಬರ್ತ್ ಡೇ ಇತ್ತು. ಹಾಗಾಗಿ ಇಬ್ಬರೂ ಸುತ್ತಾಡುತ್ತಿದ್ದರು.
ಕೊಡಿಗೆಹಳ್ಳಿ ಮೋರ್ ಎದುರು ಶಿವಪ್ರಸಾದ್ ಮತ್ತು ಮಹಿಳಾ ಅ್ಯಂಕರ್ ಜಾಲಿ ರೈಡ್ ನಲ್ಲಿ ಇದ್ದಾಗ ಸಾಫ್ಟ್ ವೇರ್ ಇಂಜಿನಿಯರ್ ಗಂಡ ಕಾರನ್ನು ಅಡ್ಡಗಟ್ಟಿ ಶಿವಪ್ರಸಾದ್ ಗೆ ಹಲ್ಲೆ ಮಾಡಿದ್ದಾನೆ. ಕಾರಿನ ಗಾಜುಪುಡಿ ಗೂಸಾ ನೀಡಿದ್ದಾನೆ. ಶ್ರೀಧರ್ ಹೇಳುವ ಪ್ರಕಾರ, ಅ್ಯಂಕರ್ ಸದಿವಪ್ರಸಾದ್ ನನ್ನ ಜೀವನ ನರಕ ಮಾಡಿದ್ದಾನೆ.
ನನ್ನ ಪತ್ನಿಯನ್ನು ನನ್ನಿಂದ ದೂರ ಮಾಡಿದ್ದಾನೆ. ಹಾಗಾಗಿ, ಇಂದು ರೆಡ್ಹ್ಯಾಂಡ್ ಆಕೆ ಮತ್ತು ಆತನನ್ನು ನಾನು ಹಿಡಿದು ಪೊಲೀಸರಿಗೆ ಕೊಟ್ಟಿದ್ದೇನೆ. ಪೊಲೀಸರ ಬಳಿಯೂ ಹೇಳಿಕೆ ನೀಡಿದ್ದೇನೆ ಎಂದು ಹಲ್ಲೆ ಮಾಡಿರೋ ಆರೋಪ ಹೊತ್ತಿರೋ ಮಹಿಳಾ ಅ್ಯಂಕರ್ ಗಂಡ ಶ್ರೀಧರ್ ಹೇಳುತ್ತಿದ್ದಾನೆ. ಅವತ್ತು ಶಾಸಕರ ಪತ್ನಿ ಪದ್ಮಪ್ರಿಯಾ ತಲೆಗೆ ಅನೈತಿಕ ಸಂಬಂಧ ಕಟ್ಟಿ ಆಕೆಯ ಸಾವಿಗೆ ಕಾರಣವಾದ ಅ್ಯಂಕರ್ ಶಿವಪ್ರಸಾದ್ ಈಗ ಏನನ್ನುತ್ತಾನೆ ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ7 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ


