ದಿನದ ಸುದ್ದಿ
ಕೊಡಗು ಸಂತ್ರಸ್ತರ ನಿರ್ಲಕ್ಷ್ಯ: ಜಗ್ಗಿ ಸ್ವಾಮೀಜಿ ಜಗ್ಗಿದ ಟ್ವಿಟ್ಟಿಗರು
![](https://suddidina.com/wp-content/uploads/2018/08/jaggi.jpg)
ಸುದ್ದಿದಿನ ಡೆಸ್ಕ್: ರಾಲಿ ಫಾರ್ ರಿವರ್ ಎಂಬ ಅಭಿಯಾನದ ಮೂಲಕ ಕಾವೇರಿ ನದಿ ತೀರದ ಪ್ರದೇಶಗಳ ಜನರ ಸಮಸ್ಯೆ ಬಗೆ ಹರಿಸುವುದಾಗಿ ಹೇಳಿದ್ದ ಇಶಾ ಫೌಂಡೇಶನ್ನ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಟ್ವಿಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
ಸದ್ಗುರು ಅವರು ನೇಪಾಳದ ತುದಿಯಲ್ಲಿರುವ ಹಿಮವದ್ಪರ್ವತಕ್ಕೆ ತಮ್ಮ ಶಿಷ್ಯಪಡೆಯೊಂದಿಗೆ ಪ್ರವಾಸ ಕೈಗೊಂಡಿರುವ ಫೋಟೊವೊಂದನ್ನು ಟ್ವಿಟರ್ನಲ್ಲಿ ಅಪ್ಲೋಡ್ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಟ್ವಿಟ್ಟಿಗರು ಕಾವೇರಿ ನದಿ ತೀರದ ಜನರ ಸಮಸ್ಯೆ ಪರಿಹರಿಸುವುದಾಗಿ ಹೇಳಿದ್ದ ಸದ್ಗುರು, ಕೊಡಗು ನೆರೆ ನಿರಾಶ್ರಿತರಿಗೆ ಸಹಾಯ ಹಸ್ತ ಚಾಚುವ ಬದಲು ವಿದೇಶ ಪ್ರವಾಸ ಕೈಗೊಂಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರ್ಯಾಲಿ ಫಾರ್ ರಿವರ್, ಮಿಸ್ಟ್ ಕಾಲ್ ಅಭಿಯಾನದಂತ ಮಹತ್ವದ ಕಾರ್ಯ ಕೈಗೊಳ್ಳುವುದಾಗಿ ಪ್ರಚಾರ ಪಡೆದಿದ್ದ ಸದ್ಗುರು ಅವರು ಅದೇ ಪ್ರದೇಶದ ಜನರ ನೋವಿಗೆ ಯಾಕೆ ಸ್ಪಂದಿಸುತ್ತಿಲ್ಲ. ಅದರಲ್ಲೂ ಕಾವೇರಿ ಹಿನ್ನೀರಿನ ಮೀನಾಕ್ಷಿ ಪುರದಲ್ಲಿ ಹುಟ್ಟಿ, ಕಾವೇರಿ ನೀರನ್ನು ಕುಡಿದು ಈ ಮಟ್ಟಕ್ಕೆ ಬೆಳೆದಿರುವ ಸದ್ಗುರು ಅವರಿಗೆ ಈಗ ಕೊಡಗು ಸಂತ್ರಸ್ತರ ಬಗ್ಗೆ ಕಾಳಜಿ ಏಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ನಿಮಗೆ ಕೊಡವರ ನೋವಿಗಿಂತ ಈ ಪ್ರವಾಸವೇ ಹೆಚ್ಚಾಯಿತೇ? ಜ್ಞಾನಿಗಳು ಹಾಗೂ ಒಳ್ಳೆ ವಾಗ್ಮಿಯೂ ಆಗಿರುವ ನೀವು ಖುದ್ದಾಗಿ ಬಂದು ನೊಂದವರಿಗೆ ಸಾಂತ್ವನ ಹೇಳಬಹುದಿತ್ತು. ಅವರಲ್ಲಿ ಧೈರ್ಯ ತುಂಬಬಹುದಿತ್ತು ಎಂದು ಇನ್ನಷ್ಟು ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನೀವು ಕೈಗೊಂಡಿದ್ದ ರ್ಯಾಲಿ ಫಾರ್ ರಿವರ್ ಅಭಿಯಾನ ಪೊಳ್ಳಾ? ಅಥವಾ ಪ್ರಚಾರದ ಗಿಮಿಕ್ಕಾ?
ಸ್ವಾಮೀಜಿಗಳಿಗೂ ರಾಜಕಾರಣಿಗಳಿಗೂ ಏನೂ ವ್ಯತ್ಯಾಸ ಇಲ್ಲ ಎಂಬುದನ್ನು ನೀವು ನಿಜ ಮಾಡಿದಿರಿ ಎಂದು ಟ್ವಿಟ್ಟಿಗರು ಅಕ್ಷರ ಬಾಣ ಬಿಟ್ಟಿದ್ದಾರೆ.
.ಇದಕ್ಕೆ ಇಶಾ ಫೌಂಡೇಶನ್ನವರು ಪ್ರತಿಕ್ರಿಯಿಸಿದ್ದು, ಈಗಾಗಲೇ ಇಶಾ ಫೌಂಡೇಶನ್ ಕಾರ್ಯಕರ್ತರು ಕೊಡಗಿನಲ್ಲಿ ಕಾರ್ಯನಿರತರಾಗಿದ್ದಾರೆ. ನೀವೂ ಕೈ ಜೋಡಿಸಿ. ಸದ್ಗುರುಗಳ ಪ್ರವಾಸ ಮೊದಲೇ ಬುಕ್ ಆಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಇನ್ನೂ ಹಲವರು ಸ್ವಾಮೀಜಿ ಅವರು ಒಳ್ಳೆಯ ನಾಯಕತ್ವದ ಗುಣ ಹೊಂದಿರುವವರು. ಅವರೇ ಖುದ್ದಾಗಿ ಕೊಡಗು ಸಂತ್ರಸ್ತರಿಗೆ ಸಾಂತ್ವನ ಹೇಳಬೇಕು. ಈ ಸಮಯದಲ್ಲಿ ಕೊಡವರ ನೋವಿಗಿಂತ ಪ್ರವಾಸಕ್ಕೇ ಆದ್ಯತೆ ಕೊಟ್ಟಿದ್ದು ಸರಿಯಲ್ಲ. ರ್ಯಾಲಿ ಫಾರ್ ರಿವರ್ ಅಭಿಯಾನದಲ್ಲಿ ತಮ್ಮ ಬದಲು ಬೆಂಬಲಿಗರನ್ನೇ ಏಕೆ ಮುಂದೆ ಬಿಡಲಿಲ್ಲ. ಏಕೆಂದರೆ ಆಗ ಅವರಿಗೆ ಪ್ರಚಾರ ಬೇಕಿತ್ತು ಎಂದು ಟ್ವಿಟ್ಟಿಗರು ತಿವಿದಿದ್ದಾರೆ.
ಕಳೆದ ವರ್ಷ ರ್ಯಾಲಿ ಫಾರ್ ರಿವರ್ ಅಭಿಯಾನ ಕೈಗೊಂಡಿದ್ದ ಸದ್ಗುರು ಅವರು ನಾಲ್ಕು ಕೋಟಿ ರೂ. ಹಮ್ಮರ್ ಕಾರು ಹಾಗೂ ಜೀಪ್ ಕಂಪಾಸ್ ಎಸ್ಯುವಿ ಮೂಲಕ ಕಾವೇರಿ ಜಲಾನಯನ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನವರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು.
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!