ದಿನದ ಸುದ್ದಿ
ಉದಯಪುರ ಶಿರಚ್ಛೇದ ಪ್ರಕರಣ : ಆರೋಪಿಗಳನ್ನು ಬಂಧಿಸಿದ 5 ಪೊಲೀಸರಿಗೆ ಅವಧಿ ಮೀರಿದ ಬಡ್ತಿ ನೀಡಿದ ರಾಜಸ್ಥಾನ ಮುಖ್ಯಮಂತ್ರಿ
ಸುದ್ದಿದಿನ,ರಾಜಸ್ಥಾನ: ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದಕ್ಕೆ ಉದಯಪುರ ದಲ್ಲಿ ಟೈಲರ್ ಶಿರಚ್ಛೇಧ ಮಾಡಿರುವ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರಾದ ತೇಜ್ಪಾಲ್, ನರೇಂದ್ರ, ಶೌಕತ್, ವಿಕಾಸ್ ಮತ್ತು ಗೌತಮ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು ತಮ್ಮ ಅವಧಿ ಮೀರಿದ ಬಡ್ತಿ ಘೋಷಣೆ ಮಾಡಿದ್ದಾರೆ.
ಕಡಿಮೆ ಅವಧಿಯಲ್ಲಿ ಈ ಐವರು ದಿಟ್ಟ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಟೈಲರ್ ಕನ್ಹಯ್ಯ ಕುಮಾರ್ ಎಂಬಾತನನ್ನು ದುಷ್ಕರ್ಮಿಗಳು ಕತ್ತು ಸೀಳಿ ಅತ್ಯಂತ ಬರ್ಬರವಾಗಿ ಕೊಲೆ ಮಾಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243