ದಿನದ ಸುದ್ದಿ
ಉದಯಪುರ ಹತ್ಯೆ ಭಯೋತ್ಪಾದಕ ಕೃತ್ಯ ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡನೆ
ಸುದ್ದಿದಿನ,ನವದೆಹಲಿ : ಉದಯಪುರದಲ್ಲಿ ನಡೆದ ಘೋರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಕ್ರೌರ್ಯವನ್ನು ಸಹಿಸಲು ಸಾಧ್ಯವಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕ್ರೌರ್ಯದಿಂದಾಗಿ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಕಠಿಣವಾದ ಶಿಕ್ಷೆಯಾಗಬೇಕು. ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ದೇಶದಲ್ಲಿ ಶಾಂತಿ ಮತ್ತು ಸಹೋದರತ್ವ ಕಾಪಾಡಿಕೊಳ್ಳಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ಟೈಲರ್ನ ಭೀಕರ ಹತ್ಯೆಯ ಬಳಿಕ ಅಲ್ಲಿನ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ಜನರು ಶಾಂತಿ ಪಾಲಿಸಲು ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
उदयपुर में हुई जघन्य हत्या से मैं बेहद स्तब्ध हूं।
धर्म के नाम पर बर्बरता बर्दाश्त नहीं की जा सकती। इस हैवानियत से आतंक फैलाने वालों को तुरंत सख़्त सज़ा मिले।
हम सभी को साथ मिलकर नफ़रत को हराना है। मेरी सभी से अपील है, कृपया शांति और भाईचारा बनाए रखें।
— Rahul Gandhi (@RahulGandhi) June 28, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243