ಭಾವ ಭೈರಾಗಿ
ಕವಿತೆ | ಯುಗಾದಿ ಪುರುಷ
- ಡಾ.ಕೆ.ಎ.ಓಬಳೇಶ್
ಯುಗ ಯುಗದಾಚೆಗಿನ
ಬಂಧನದ ಬದುಕಿಗೆ
ಬಿಡುಗಡೆಯ ಹಾದಿ ತೋರಿ
ಹೊಸ ಯುಗದತ್ತ ಕೊಂಡೊಯ್ದ
ಯುಗಪುರುಷ ನೀನಾದೆ.
ಯುಗ ಯುಗದಾದಿಯಾಗಿ
ಸಾಗುತ್ತಲೆ ಇತ್ತು
ಸ್ವಾಭಿಮಾನವಿರದ ಯುಗಾದಿ
ನಿಮ್ಮ ಜ್ಞಾನವೇ ನಮಗಾಯ್ತು
ಹೊಸ ಸಂವತ್ಸರಕೆ ನಾಂದಿ.
ಸ್ವಾಭಿಮಾನಿ ಹೋರಾಟದಲಿ
ಕಹಿಯ ತಾನುಂಡು
ಸಿಹಿಯ ನಮಗಂಚಿ
ನಮಗೊಂದು ಹೊಸ ಯುಗವ
ಕರುಣಿಸಿದ ಕರುಣಾಳು ನೀನಾದೆ.
ನಿಮ್ಮ ಹೊರತು ಸ್ವಾಭಿಮಾನದ ಯುಗವೇ ಇಲ್ಲ
ನೀವೆ ಈ ಜಗದ ಹಾದಿ
ನೀವೆ ಯುಗದ ಆದಿ
ನೀವೆ ನಮ್ಮ ಯುಗಾದಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243