ದಿನದ ಸುದ್ದಿ
ಯುಗಾದಿ ಅಲ್ಲ ಉಗಾದಿ
ಉಗಾದಿ ಹಬ್ಬದ ದಿನ ಮಳವಳ್ಳಿಯ ಮಾಳವ ಜನಾಂಗದ ಕುಟುಂಬಗಳು ಧಾರ್ಮಿಕ ಮೆರವಣಿಗೆಯಲ್ಲಿ ತಮ್ಮೂರ ಅಮ್ಮನ ಗುಡಿಯಿ೦ದ ಬಹಳ ವರುಷಗಳಿ೦ದ ಗೊತ್ತು ಮಾಡಲಾದ ನೀರಿನ ಹೊ೦ಡ, ಕೆರೆ, ನದಿ, ಹಳ್ಳ, ಇಲ್ಲವೇ ಬಾವಿಗಳಿಗೆ ಹೊರಡುವ ಪದ್ಧತಿ ಬೆಳೆದು ಬಂದಿದೆ. ಅಲ್ಲಿಗೆ ತಲುಪಿದ ಮೇಲೆ ನೀರಿನ ಬಳಿ ಬಿ೦ದಿಗೆಗಳನ್ನು ಇಟ್ಟು ಅವುಗಳಿಗೆ ಪೂಜೆ ಮಾಡುತ್ತಾರೆ. ಉಗಾದಿ ಹಬ್ಬದಲ್ಲಿ ಮಾಳವರ ನಾಯಕನಾದ ಕುಲವಾಡಿ, ಚಕ್ರಿ, ನೀರಘಂಟಿ ಇಲ್ಲವೇ ಸಾಮಾನ್ಯವಾಗಿ ಆತನನ್ನು ಬೇರೆಯವರು ಕರೆಯುವ೦ತೆ ಊರ ಯಜಮಾನನಾದವನು ಉಗು ಮೆರವಣಿಗೆಗೆ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಿ ಮೆರವಣಿಗೆಗೆ ಅಣಿಯಾದ ಎಲ್ಲ ಶೃದ್ಧಾಳುಗಳಿಗೂ ಒಂದೊಂದು ಬಿಂದಿಗೆ ಪವಿತ್ರ ನೀರನ್ನು ನೀರಿನ ಹೊರತೆಯಿ೦ದ ತೆಗೆದು ಕೊಡುತ್ತಾನೆ.
ನೀರು ತುಂಬಿದ ಬಿಂದಿಗೆಗಳನ್ನು ಪೂಜಿಸಿ ನೀರು ತು೦ಬಿಕೊ೦ಡ ಮೇಲೆ ಮಾಳವರು ಹಿ೦ತಿರುಗಿ ತಮ್ಮ-ತಮ್ಮ ಮನೆಗಳಿಗೆ ಪುನಃ ಮೆರವಣಿಗೆಯಲ್ಲಿ ಬಂದು ಮನೆಯ ದೇವರ ಕೋಣೆಯಲ್ಲಿ ಬಿ೦ದಿಗೆಗಳನ್ನು ಇಡುತ್ತಾರೆ. ಈ ಬಿಂದಿಗೆದುಂಬಿದ ನೀರನ್ನು ‘ಹೊಸನೀರು’ ಎಂದು ಕರೆಯಲಾಗುತ್ತದೆ. ಆ ಬಿ೦ದಿಗೆಗೆ ಪೂಜೆಸಲ್ಲಿಸಿ ಬಿಂದಿಗೆಯ ‘ಹೊಸನೀರ’ನ್ನು ಮನೆಯಲ್ಲಿ ತು೦ಬಿಟ್ಟು ಕೊ೦ಡಿರುವ ದಿನ ಬಳಕೆಯ ಹ೦ಡೆಗಳು, ತೊಟ್ಟಿಗಳು, ಬಿ೦ದಿಗೆಗಳು ಮತ್ತು ಬಕೇಟುಗಳ ನೀರಿಗೆ ತೊಟ್ಟು ಬೆರೆಸಿ ದಿನನಿತ್ಯದ ಅಡುಗೆ, ಸ್ನಾನ, ಪೂಜೆ ಪುನಸ್ಕಾರಾದಿ ಶುಭ ಕಾರ್ಯಗಳಿಗೆ ಬಳಸುವ ಪದ್ಧತಿ ಈಗಲೂ ಚಾಲ್ತಿಯಲ್ಲಿದೆ.
ಮಾಳವರು ಉಗಾದಿಯ ಸಾ೦ಯಕಾಲ ಮುಳುಗುವ ಸೂರ್ಯನಿಗೆ ಹಾಗೂ ಉದಯಿಸುವ ಚ೦ದ್ರನಿಗೆ ನಮಿಸುತ್ತಾರೆ. ಸುಮೇರಿಯನ್ ಭಾಷೆಯಲ್ಲಿ ‘ಉಗು’ ಎಂದರೆ ನೀರಾವರಿ ಭೂಮಿ. ಕರ್ನಾಟಕದ ಮಂಡ್ಯ ಜಿಲ್ಲೆ ಮಳವಳ್ಳಿ ಪ್ರದೇಶದ ಮಾಳವ ಜನಾಂಗದ ಭಾಷೆಯಲ್ಲಿಯೂ ಉಗು ಎಂದರೆ ಜಲ ಸಂಪನ್ನ ಭೂಮಿ. ‘ಉ’ ಎ೦ದರೆ ನೀರು. ಉಗಳು ಎ೦ದರೆ ಮಾನವನ ಬಾಯಿಯ ನೀರು. ಇಲ್ಲಿ ಗ ಅಥವಾ ಕ ಎ೦ದರೆ ಬಾಯಿ. ಳು ಎ೦ದರೆ ಮಾನವ ಅಥವಾ ವ್ಯಕ್ತಿ. ‘ಉಕು’ ಎಂಬ ಶಬ್ದದ ಅರ್ಥವೂ ನೀರಾವರಿ ಭೂಮಿ. ಉಕುರಗುಡ್ಡೆ ಹೊಲ ಎಂದರೆ ಬೆಟ್ಟದಂಚಿನಿಂದ ಸಮೃದ್ಧ ನೀರು ಪಡೆಯುವ ನೀರಾವರಿ ಜಮೀನು ಎಂದಾಗುತ್ತದೆ. ‘ಉಗುನಿ ಹಂಬು’ ನೀರಿನ ಮೇಲ್ಭಾಗದವರೆಗೆ ಬೆಳೆಯುವ ಹಚ್ಚಹಸುರು ಗಿಡಗಂಟಿಗಳೆಂದು ಸಹ ಅರ್ಥೈಸುವ ಹಾಗೆ ಇನ್ನಿತರ ಸಂಪ್ರದಾಯಗಳು ‘ಉಗು’ವಿನೊಂದಿಗೆ ಹೆಣೆದುಕೊಂಡಿವೆ.
ನೀರು, ಸೂರ್ಯ ಹಾಗೂ ಚಂದ್ರನನ್ನು ಪೂಜಿಸುವ ಹಬ್ಬವೇ ‘ಉಗಾದಿ’. ಮಾಳವರಲ್ಲಿ ‘ಆದಿ’ ಎಂದರೆ ಸೂರ್ಯನ ಹೆಸರು. ಉಗು ಮತ್ತು ಆದಿ ಸೇರಿದಾಗ ನೀರು ಮತ್ತು ಸೂರ್ಯ ಎಂದಾಗುತ್ತದೆ. ನಾಗಾ ಜನಾಂಗದ ನಾಗಧರ್ಮದ ಕಾಲದ ದಿನಗಳಲ್ಲೇ ಸಂಪ್ರದಾಯ ಹುಟ್ಟಿ ಬೆಳೆದಿರಬಹುದು. ಉಗ್,ಉಗಿ, ಉಗ್ಗು, ಉಪ್ಪು, ಉಮಾ, ಉಕ್ಕು, ಉ೦ಣು, ಉಕ್ಕಡ, ಉಕ್ಕಡಗಾತ್ರಿ ಮತ್ತು ಇತ್ಯಾದಿ ಪದಗಳು ‘ಉ’ ಅ೦ದರೆ ನೀರಿಗೆ ಅ೦ಟಿಕೊ೦ಡ ಪದಗಳಾಗಿವೆ. ಪ್ರಸ್ತುತ ಉಗಾದಿ ತನ್ನ ಮೂಲಾರ್ಥ ಕಳೆದುಕೊಂಡು ‘ಹೊಸವರ್ಷ ಪ್ರಾರಂಭ’ ಎಂದಷ್ಟೇ ಆಚರಿಸಲಾಗುತ್ತಿದೆ. ಭಾರತೀಯ ಸಂಸ್ಕ್ರತಿಯೂ ಹಳೆಯ ನಾಗಾ ಸಂಪ್ರದಾಯವನ್ನು ಮರೆಮಾಚಿ( ನುಂಗಿಕೊಂಡು) ಸಾಧ್ಯವಾದಷ್ಟು ಇಂದಿನ ಸಂಪ್ರದಾಯಗಳಿಗೆ ಒಗ್ಗಿಕೊಂಡಿದೆ. ಇದು ‘ಉಗಾದಿ’ ಹೊರತು ‘ಯುಗಾದಿ’ ಅಲ್ಲ. ಉಗಾದಿ ಎ೦ಬ ಪದ ಮೂಲ ದ್ರಾವಿಡ ಪದವೇ ಹೊರತು ಸ೦ಸ್ಕೃತದಿ೦ದ ಉದಯಿಸಿಲ್ಲ.


ದಿನದ ಸುದ್ದಿ
ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿರುತ್ತದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್5 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ7 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ7 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ5 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ದಾವಣಗೆರೆ | ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಡಿಸಿ ಶಿವಾನಂದ ಕಾಪಶಿ ಭೇಟಿ ; ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್ಗೆ ಸೂಚನೆ
-
ದಿನದ ಸುದ್ದಿ5 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ5 days ago
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ