Connect with us

ದಿನದ ಸುದ್ದಿ

ಯುಗಾದಿ ಅಲ್ಲ ಉಗಾದಿ

Published

on

ಗಾದಿ ಹಬ್ಬದ ದಿನ ಮಳವಳ್ಳಿಯ ಮಾಳವ ಜನಾಂಗದ ಕುಟುಂಬಗಳು ಧಾರ್ಮಿಕ ಮೆರವಣಿಗೆಯಲ್ಲಿ ತಮ್ಮೂರ ಅಮ್ಮನ ಗುಡಿಯಿ೦ದ ಬಹಳ ವರುಷಗಳಿ೦ದ ಗೊತ್ತು ಮಾಡಲಾದ ನೀರಿನ ಹೊ೦ಡ, ಕೆರೆ, ನದಿ, ಹಳ್ಳ, ಇಲ್ಲವೇ ಬಾವಿಗಳಿಗೆ ಹೊರಡುವ ಪದ್ಧತಿ ಬೆಳೆದು ಬಂದಿದೆ. ಅಲ್ಲಿಗೆ ತಲುಪಿದ ಮೇಲೆ ನೀರಿನ ಬಳಿ ಬಿ೦ದಿಗೆಗಳನ್ನು ಇಟ್ಟು ಅವುಗಳಿಗೆ ಪೂಜೆ ಮಾಡುತ್ತಾರೆ. ಉಗಾದಿ ಹಬ್ಬದಲ್ಲಿ ಮಾಳವರ ನಾಯಕನಾದ ಕುಲವಾಡಿ, ಚಕ್ರಿ, ನೀರಘಂಟಿ ಇಲ್ಲವೇ ಸಾಮಾನ್ಯವಾಗಿ ಆತನನ್ನು ಬೇರೆಯವರು ಕರೆಯುವ೦ತೆ ಊರ ಯಜಮಾನನಾದವನು ಉಗು ಮೆರವಣಿಗೆಗೆ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಿ ಮೆರವಣಿಗೆಗೆ ಅಣಿಯಾದ ಎಲ್ಲ ಶೃದ್ಧಾಳುಗಳಿಗೂ ಒಂದೊಂದು ಬಿಂದಿಗೆ ಪವಿತ್ರ ನೀರನ್ನು ನೀರಿನ ಹೊರತೆಯಿ೦ದ ತೆಗೆದು ಕೊಡುತ್ತಾನೆ.

ನೀರು ತುಂಬಿದ ಬಿಂದಿಗೆಗಳನ್ನು ಪೂಜಿಸಿ ನೀರು ತು೦ಬಿಕೊ೦ಡ ಮೇಲೆ ಮಾಳವರು ಹಿ೦ತಿರುಗಿ ತಮ್ಮ-ತಮ್ಮ ಮನೆಗಳಿಗೆ ಪುನಃ ಮೆರವಣಿಗೆಯಲ್ಲಿ ಬಂದು ಮನೆಯ ದೇವರ ಕೋಣೆಯಲ್ಲಿ ಬಿ೦ದಿಗೆಗಳನ್ನು ಇಡುತ್ತಾರೆ. ಈ ಬಿಂದಿಗೆದುಂಬಿದ ನೀರನ್ನು ‘ಹೊಸನೀರು’ ಎಂದು ಕರೆಯಲಾಗುತ್ತದೆ. ಆ ಬಿ೦ದಿಗೆಗೆ ಪೂಜೆಸಲ್ಲಿಸಿ ಬಿಂದಿಗೆಯ ‘ಹೊಸನೀರ’ನ್ನು ಮನೆಯಲ್ಲಿ ತು೦ಬಿಟ್ಟು ಕೊ೦ಡಿರುವ ದಿನ ಬಳಕೆಯ ಹ೦ಡೆಗಳು, ತೊಟ್ಟಿಗಳು, ಬಿ೦ದಿಗೆಗಳು ಮತ್ತು ಬಕೇಟುಗಳ ನೀರಿಗೆ ತೊಟ್ಟು ಬೆರೆಸಿ ದಿನನಿತ್ಯದ ಅಡುಗೆ, ಸ್ನಾನ, ಪೂಜೆ ಪುನಸ್ಕಾರಾದಿ ಶುಭ ಕಾರ್ಯಗಳಿಗೆ ಬಳಸುವ ಪದ್ಧತಿ ಈಗಲೂ ಚಾಲ್ತಿಯಲ್ಲಿದೆ.

ಮಾಳವರು ಉಗಾದಿಯ ಸಾ೦ಯಕಾಲ ಮುಳುಗುವ ಸೂರ್ಯನಿಗೆ ಹಾಗೂ ಉದಯಿಸುವ ಚ೦ದ್ರನಿಗೆ ನಮಿಸುತ್ತಾರೆ. ಸುಮೇರಿಯನ್ ಭಾಷೆಯಲ್ಲಿ ‘ಉಗು’ ಎಂದರೆ ನೀರಾವರಿ ಭೂಮಿ. ಕರ್ನಾಟಕದ ಮಂಡ್ಯ ಜಿಲ್ಲೆ ಮಳವಳ್ಳಿ ಪ್ರದೇಶದ ಮಾಳವ ಜನಾಂಗದ ಭಾಷೆಯಲ್ಲಿಯೂ ಉಗು ಎಂದರೆ ಜಲ ಸಂಪನ್ನ ಭೂಮಿ. ‘ಉ’ ಎ೦ದರೆ ನೀರು. ಉಗಳು ಎ೦ದರೆ ಮಾನವನ ಬಾಯಿಯ ನೀರು. ಇಲ್ಲಿ ಗ ಅಥವಾ ಕ ಎ೦ದರೆ ಬಾಯಿ. ಳು ಎ೦ದರೆ ಮಾನವ ಅಥವಾ ವ್ಯಕ್ತಿ. ‘ಉಕು’ ಎಂಬ ಶಬ್ದದ ಅರ್ಥವೂ ನೀರಾವರಿ ಭೂಮಿ. ಉಕುರಗುಡ್ಡೆ ಹೊಲ ಎಂದರೆ ಬೆಟ್ಟದಂಚಿನಿಂದ ಸಮೃದ್ಧ ನೀರು ಪಡೆಯುವ ನೀರಾವರಿ ಜಮೀನು ಎಂದಾಗುತ್ತದೆ. ‘ಉಗುನಿ ಹಂಬು’ ನೀರಿನ ಮೇಲ್ಭಾಗದವರೆಗೆ ಬೆಳೆಯುವ ಹಚ್ಚಹಸುರು ಗಿಡಗಂಟಿಗಳೆಂದು ಸಹ ಅರ್ಥೈಸುವ ಹಾಗೆ ಇನ್ನಿತರ ಸಂಪ್ರದಾಯಗಳು ‘ಉಗು’ವಿನೊಂದಿಗೆ ಹೆಣೆದುಕೊಂಡಿವೆ.

ನೀರು, ಸೂರ್ಯ ಹಾಗೂ ಚಂದ್ರನನ್ನು ಪೂಜಿಸುವ ಹಬ್ಬವೇ ‘ಉಗಾದಿ’. ಮಾಳವರಲ್ಲಿ ‘ಆದಿ’ ಎಂದರೆ ಸೂರ್ಯನ ಹೆಸರು. ಉಗು ಮತ್ತು ಆದಿ ಸೇರಿದಾಗ ನೀರು ಮತ್ತು ಸೂರ್ಯ ಎಂದಾಗುತ್ತದೆ. ನಾಗಾ ಜನಾಂಗದ ನಾಗಧರ್ಮದ ಕಾಲದ ದಿನಗಳಲ್ಲೇ ಸಂಪ್ರದಾಯ ಹುಟ್ಟಿ ಬೆಳೆದಿರಬಹುದು. ಉಗ್,ಉಗಿ, ಉಗ್ಗು, ಉಪ್ಪು, ಉಮಾ, ಉಕ್ಕು, ಉ೦ಣು, ಉಕ್ಕಡ, ಉಕ್ಕಡಗಾತ್ರಿ ಮತ್ತು ಇತ್ಯಾದಿ ಪದಗಳು ‘ಉ’ ಅ೦ದರೆ ನೀರಿಗೆ ಅ೦ಟಿಕೊ೦ಡ ಪದಗಳಾಗಿವೆ. ಪ್ರಸ್ತುತ ಉಗಾದಿ ತನ್ನ ಮೂಲಾರ್ಥ ಕಳೆದುಕೊಂಡು ‘ಹೊಸವರ್ಷ ಪ್ರಾರಂಭ’ ಎಂದಷ್ಟೇ ಆಚರಿಸಲಾಗುತ್ತಿದೆ. ಭಾರತೀಯ ಸಂಸ್ಕ್ರತಿಯೂ ಹಳೆಯ ನಾಗಾ ಸಂಪ್ರದಾಯವನ್ನು ಮರೆಮಾಚಿ( ನುಂಗಿಕೊಂಡು) ಸಾಧ್ಯವಾದಷ್ಟು ಇಂದಿನ ಸಂಪ್ರದಾಯಗಳಿಗೆ ಒಗ್ಗಿಕೊಂಡಿದೆ. ಇದು ‘ಉಗಾದಿ’ ಹೊರತು ‘ಯುಗಾದಿ’ ಅಲ್ಲ. ಉಗಾದಿ ಎ೦ಬ ಪದ ಮೂಲ ದ್ರಾವಿಡ ಪದವೇ ಹೊರತು ಸ೦ಸ್ಕೃತದಿ೦ದ ಉದಯಿಸಿಲ್ಲ.

ಲೇಖಕರು: ಎಂ.ನಂಜುಡಸ್ವಾಮಿ,ಹೆಚ್ಚುವರಿ ಪೊಲೀಸ್ ಆಯುಕ್ತರು,ಬೆಂಗಳೂರು

 

 

 

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ16 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ16 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ17 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ17 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ17 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ19 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ19 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending