ದಿನದ ಸುದ್ದಿ
ಅನಧಿಕೃತ ಪ್ರಚಾರ ; 673 ಎಫ್ಐಆರ್ ದಾಖಲು
ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಸಭೆಗಳು, ಅನಧಿಕೃತ ಪ್ರಚಾರ ಸೇರಿದಂತೆ ಇಲ್ಲಿಯವರೆಗೆ ಒಟ್ಟು 673 ಎಫ್ಐಆರ್ ದಾಖಲಿಸಲಾಗಿದೆ.
ವಿವಿಧೆಡೆ ವಿತರಿಸುತ್ತಿದ್ದ ನಗದು, ಮದ್ಯ, ಮಾದಕ ದ್ರವ್ಯ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿರುವ ವಿಚಕ್ಷಣ ದಳ ಮತ್ತು ಪೊಲೀಸರು 2 ಸಾವಿರದ 36 ಪ್ರಥಮ ತನಿಖಾ ವರದಿ ದಾಖಲಿಸಿದ್ದಾರೆ. ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ ಒಟ್ಟಾರೇ 69 ಸಾವಿರದ 778ಶಸ್ತ್ರಾಸ್ತ್ರಗಳನ್ನು ಜಮೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಇಲ್ಲಿಯವರೆಗೂ ಸಿಆರ್ ಪಿಸಿ ಕಾಯ್ದೆಯಡಿ 5 ಸಾವಿರದ 80 ಪ್ರಕರಣಗಳನ್ನು ದಾಖಲಿಸಲಾಗಿದ್ದು, 13 ಸಾವಿರದ 640 ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ. ಅಬಕಾರಿ ಇಲಾಖೆ ಒಟ್ಟು 19 ಸಾವಿರದ 122 ಪ್ರಕರಣ ದಾಖಲಿಸಿದ್ದು, 1 ಸಾವಿರದ 776 ವಿವಿಧ ಮಾದರಿಯ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.
ಮತದಾರರ ಸಹಾಯವಾಣಿ ಮೂಲಕ ಸ್ವೀಕರಿಸಲಾದ 18 ಸಾವಿರದ 315 ಕರೆಗಳನ್ನು ಇತ್ಯರ್ಥಪಡಿಸಲಾಗಿದೆ. ವಿವಿಧ ಮಾಧ್ಯಮಗಳ ಮೂಲಕ ಒಟ್ಟು 1 ಸಾವಿರದ 29 ದೂರುಗಳು ಬಂದಿದ್ದು, 767 ದೂರುಗಳನ್ನು ಬಗೆಹರಿಸಲಾಗಿದೆ ಎಂದರು.
ಸಿ-ವಿಜಿಲ್ ಆಪ್ ಮೂಲಕ 6 ಸಾವಿರದ 447 ದೂರು ಸ್ವೀಕರಿಸಲಾಗಿದ್ದು, ಈ ಪೈಕಿ 5 ಸಾವಿರದ 483 ದೂರುಗಳು ನಿಜವೆಂದು ಕಂಡುಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
ಸುವಿಧಾ ಅಡಿಯಲ್ಲಿ ವಿವಿಧ ಅನುಮತಿ ಕೋರಿ ಸ್ವೀಕರಿಸಲಾದ ಒಟ್ಟು 12 ಸಾವಿರದ 518ಅರ್ಜಿಗಳಲ್ಲಿ 10 ಸಾವಿರದ 71 ಅರ್ಜಿಗಳಿಗೆ ಅನುಮತಿ ನೀಡಲಾಗಿದೆ. 500 ಬಾಕಿ ಉಳಿದಿದ್ದು, 277 ಅರ್ಜಿಗಳು ರದ್ದಾಗಿವೆ ಎಂದು ಅವರು ಮಾಹಿತಿ ನೀಡಿದರು.
ಐವರು ಅಭ್ಯರ್ಥಿ
ಚುನಾವಣೆಯಲ್ಲಿ 2 ಸಾವಿರದ 427 ಪುರುಷರು, 185 ಮಹಿಳೆಯರು ಸೇರಿದಂತೆ ಒಟ್ಟು 2 ಸಾವಿರದ 613 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಳ್ಳಾರಿ ನಗರ ಕ್ಷೇತ್ರದಲ್ಲಿ ಅತಿ ಹೆಚ್ಚು 24 ಅಭ್ಯರ್ಥಿಗಳು ಕಣದಲ್ಲಿದ್ದರೆ, ಯಮಕನ ಮರಡಿ, ದೇವದುರ್ಗ, ತೀರ್ಥಹಳ್ಳಿ, ಕುಂದಾಪುರ, ಕಾಪು, ಮಂಗಳೂರು, ಬಂಟ್ವಾಳ ಕ್ಷೇತ್ರದಲ್ಲಿ ಅತಿ ಕಡಿಮೆ ಐವರು ಅಭ್ಯರ್ಥಿಗಳಿರುವುದಾಗಿ ಮನೋಜ್ ಕುಮಾರ್ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243,

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


