ದಿನದ ಸುದ್ದಿ
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ : ಅಮಿತ್ ಶಾ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡ ಸರ್ಕಾರ
ಸುದ್ದಿದಿನ,ಬಾಗಲಕೋಟೆ: ಹಿಂದಿನ ಸರ್ಕಾರಗಳು ಕೇವಲ 21 ಸಾವಿರ ಕೋಟಿ ರೂ. ನೀಡಲಾಗುತ್ತಿದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರಲ್ಲಿ 1.34 ಲಕ್ಷ ಕೋಟಿ ರೂ. ಗಳಿಗೆ ಹೆಚ್ಚಿಸಿದ್ದಲ್ಲದೆ, ಕಿಸಾನ್ ಸಮ್ಮಾನ್ ಯೋಜನೆ ಮೂಲಕ 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 1.13 ಲಕ್ಷ ಕೋಟಿ ರೂ. ಗಳನ್ನು ಜಮಾ ಮಾಡುವ ಮೂಲಕ ರೈತರಿಗೆ ಪ್ರಥಮ ಆದ್ಯತೆ ನೀಡುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡಿರುವ ಸರ್ಕಾರವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರು ಹೇಳಿದರು.
ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮ ಬಳಿಯ ಸಾಯಿಪ್ರಿಯ ಶುಗರ್ಸ್ ಲಿ. ಯೂನಿಟ್ ಆವರಣದಲ್ಲಿ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆ ವತಿಯಿಂದ ಭಾನುವಾರದಂದು ಏರ್ಪಡಿಸಿದ ಸಮಾರಂಭದಲ್ಲಿ ನೂತನ ಕಾರ್ಖಾನೆ ಗಳ ಉದ್ಘಾಟನೆ, ನಿರಾಣಿ ಸಮೂಹ ದಿಂದ 75 ಸಾವಿರ ಟಿಸಿಡಿ ಕಬ್ಬು ನುರಿಸುವ, 260 ಮೆ.ವ್ಯಾ. ಸಹ ವಿದ್ಯುತ್, 26 ಲಕ್ಷ ಲೀ. ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ. & ಸಿಒ2 ಉತ್ಪಾದನೆ ಗಳ ವಿಸ್ತರಣೆ ಯೋಜನೆಗಳಿಗೆ ಭೂಮಿಪೂಜೆ ಹಾಗೂ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವುದು ಮಾತ್ರವಲ್ಲ, ಇಡೀ ವಿಶ್ವದ ನೇತೃತ್ವ ವಹಿಸುವ ದಿಸೆಯತ್ತ ಸಾಗುತ್ತಿದ್ದಾರೆ. ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆ ಮಹತ್ವದ್ದಾಗಿದೆ. ದೇಶದಲ್ಲಿ ಜರುಗುತ್ತಿರುವ ಎಲ್ಲ ಹಂತಗಳ ಚುನಾವಣೆಗಳಲ್ಲಿ ದೇಶದ ಜನತೆ ನಮಗೆ ಬೆಂಬಲ ವ್ಯಕ್ತಪಡಿಸುತ್ತ ನಮ್ಮ ಸರ್ಕಾರವನ್ನು ಬಲಪಡಿಸುತ್ತಿದ್ದಾರೆ.
ದೇಶವನ್ನು ನಮ್ಮ ಸರ್ಕಾರ ಆತ್ಮನಿರ್ಭರಗೊಳಿಸುವತ್ತ ಸಾಗಿದೆ. ದೇಶದಲ್ಲಿ ಪೆಟ್ರೋಲ್ ಆಮದಿಗಾಗಿ ಸರ್ಕಾರದ ಬಹಳಷ್ಟು ಆದಾಯ ವಿದೇಶಿ ವಿನಿಮಯಕ್ಕೆ ಖರ್ಚಾಗುತ್ತಿದೆ. ಕಬ್ಬು ಬೆಳೆಯ ಸಹ ಉತ್ಪನ್ನವಾಗಿರುವ ಇಥೆನಾಲ್ ಇದೀಗ ದೇಶದ ಇಂಧನ ಕ್ಷೇತ್ರದಲ್ಲಿ ಪೆಟ್ರೋಲ್ಗೆ ಪರ್ಯಾಯ ಇಂಧನವಾಗಿ ಬಳಸಲಾಗುತ್ತಿದ್ದು, ದೇಶದ ಅಗತ್ಯತೆಯನ್ನು ಪೂರೈಸಲು ಸಹಕಾರಿಯಾಗಿದೆ ಎಂದರು.
ಇಥೆನಾಲ್ ಉತ್ಪಾದನೆ ಹಾಗೂ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳು ಉತ್ತೇಜನ ನೀಡುತ್ತಿದ್ದಾರೆ. ಸಕ್ಕರೆ ಉತ್ಪಾದನೆಯ ಜೊತೆ ಜೊತೆಗೆ ಇಥೆನಾಲ್ ಉತ್ಪಾದನೆಗೆ ಅವಕಾಶವಿದ್ದು, ಇದರಿಂದ ರೈತರಿಗೂ ಅನುಕೂಲವಾಗಲಿದೆ ಅಲ್ಲದೆ ಸಕ್ಕರೆ ಕಾರ್ಖಾನೆಗಳಿಗೂ ಲಾಭದಾಯಕವಾಗಲಿದೆ. ಇಥೆನಾಲ್ ಹೆಚ್ಚಿನ ಉತ್ಪಾದನೆ ಹಾಗೂ ಬಳಕೆಯಿಂದ ಇಂಧನ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಆರ್ಥಿಕವಾಗಿಯೂ ದೇಶಕ್ಕೆ ವಿದೇಶಿ ವಿನಿಮಯದಲ್ಲಿ ಉಳಿಕೆಯಾಗಲಿದೆ.
ನಿರಾಣಿ ಸಮೂಹದ ಉದ್ಯಮವು ಇದೀಗ ತನ್ನ ಕಾರ್ಖಾನೆ ಘಟಕವನ್ನು ವಿಸ್ತರಿಸುತ್ತಿರುವುದರಿಂದ ಸುಮಾರು 10 ಸಾವಿರ ಉದ್ಯೋಗ ಸೃಷ್ಟಿಸಿದಂತಾಗಿದೆ. 2015 ರಲ್ಲಿ ಇಥೆನಾಲ್ ಉತ್ಪಾದನೆಗೆ ಸುಂಕ ಕಡಿತಗೊಳಿಸಲಾಗಿದೆ. ಇಥೆನಾಲ್ಗೆ ಶೇ. 18 ರಷ್ಟು ಇದ್ದ ಜಿಎಸ್ಟಿ ಯನ್ನು ಇದೀಗ ಶೇ. 5 ಕ್ಕೆ ಇಳಿಸಲಾಗಿದೆ ಎಂದು ತಿಳಿಸಿದರು.
ಪೆಟ್ರೋಲ್ ಹಾಗೂ ಡೀಸೆಲ್ ಬಳಕೆಯನ್ನು 2022 ರೊಳಗೆ ಶೇ. 10 ರಷ್ಟು ಹಾಗೂ 2025 ರ ವೇಳೆಗೆ ಶೇ. 25 ರಷ್ಟು ಕಡಿತಗೊಳಿಸಲಾಗುವುದು. ಇಂಧನಕ್ಕಾಗಿ ಗಲ್ಫ್ ರಾಷ್ಟ್ರಗಳಿಗೆ ನಮ್ಮ ದೇಶದಿಂದ ಹೆಚ್ಚಿನ ಹಣ ಬಳಕೆಯಾಗುತ್ತಿದ್ದು, ಇದೀಗ ಪ್ರಮಾಣ ಕಡಿತದಿಂದ ಉಳಿಯುವ ಹಣವನ್ನು ನಾವು ರೈತರ ಅಭಿವೃದ್ಧಿಗಾಗಿ ಬಳಸಿಕೊಳ್ಳಲು ಸಹಾಯಕವಾಗಿದೆ.
ಭಾರತೀಯ ಆಹಾರ ನಿಗಮದದಲ್ಲಿ ಲಭ್ಯವಾಗುವ ಮೆಕ್ಕೆಜೋಳ, ಅಕ್ಕಿ ಧಾನ್ಯವನ್ನು ಇಥೆನಾಲ್ ಉತ್ಪಾದನೆಗೆ ಬಳಸಿಕೊಳ್ಳಲು ನೀತಿಯೊಳಗೆ ಸೇರಿಸಿಕೊಳ್ಳಲಾಗಿದೆ. ಈ ನೂತನ ನೀತಿಯಿಂದಾಗಿ ರೈತರಿಗೂ ಅನುಕೂಲವಾಗಲಿದೆ. ರೈತರಿಗೆ ಆರ್ಥಿಕ ಲಾಭದ ಜೊತೆಗೆ ಉದ್ಯೋಗ ಸೃಷ್ಟಿಗೂ ಅನುಕೂಲವಾಗಲಿದೆ. ಇಥೆನಾಲ್ ಪರಿಸರ ಸ್ನೇಹಿಯಾಗಿದೆ.
ನಮ್ಮ ಸರ್ಕಾರ ಪ್ರಾಥಮಿಕ ಆದ್ಯತೆಯನ್ನು ರೈತರಿಗೆ ನೀಡುತ್ತಿದ್ದು, ಆದಾಯ ದ್ವಿಗುಣಗೊಳಿಸುವತ್ತ ಕ್ರಮ ಕೈಗೊಂಡಿದೆ. 2013-14 ರಲ್ಲಿ 21 ಸಾವಿರ ಕೋಟಿ ರೂ. ಇದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರ ಬಜೆಟ್ನಲ್ಲಿ 1.34 ಲಕ್ಷ ಕೋಟಿ ರೂ. ಗಳನ್ನು ಕೃಷಿ ಕ್ಷೇತ್ರಕ್ಕಾಗಿ ಮೀಸಲಿಡುವ ಮೂಲಕ ರೈತ ಪರ ಸರ್ಕಾರ ಎಂಬುದನ್ನು ನಿರೂಪಿಸಿದೆ ಎಂದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನಮ್ಮ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಜಮಾ ಮಾಡುತ್ತಿದೆ. ಡಿಸೆಂಬರ್ ವರೆಗೆ ಸುಮಾರು 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗೆ 1.13 ಲಕ್ಷ ಕೋಟಿ ರೂ.ಗಳನ್ನು ಜಮಾ ಮಾಡಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 50 ಲಕ್ಷ ಹೆ. ಭೂಮಿಗೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಿದೆ.
ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ 5 ವರ್ಷ ಪೂರ್ಣಗೊಳಿಸಿದ್ದು, 90 ಸಾವಿರ ಕೋಟಿ ರೂ. ಈ ವಿಮೆ ಯೋಜನೆಯಡಿ ರೈತರಿಗೆ ಪಾವತಿಯಾಗಿದೆ. ಎಪಿಎಂಸಿ ಗಳಲ್ಲಿ ಆನ್ಲೈನ್ ವ್ಯವಹಾರ ಒದಗಿಸುವ ಮೂಲಕ ರೈತರಿಗೆ ಲಾಭದಾಯಕವಾಗುವಂತೆ ಮಾಡಲಾಗಿದೆ. ಹಿಂದಿನ ಸರ್ಕಾರ 6 ಲಕ್ಷ ಕೋಟಿ ರೂ. ರೈತರಿಗೆ ಸಾಲ ನೀಡುತ್ತಿತ್ತು. ನಮ್ಮ ಸರ್ಕಾರ 13.22 ಲಕ್ಷ ಕೋಟಿ ರೂ. ಗಳನ್ನು ರೈತರಿಗೆ ಸಾಲ ನೀಡುವ ಮೂಲಕ ನೆರವಾಗಿದೆ. 10 ಸಾವಿರಕ್ಕೂ ಹೆಚ್ಚು ರೈತ ಉತ್ಪಾದಕ ಸಂಘಗಳನ್ನು ಸ್ಥಾಪಿಸಲಾಗಿದ್ದು, 7 ಸಾವಿರ ಕೋಟಿ ರೂ. ಗಳನ್ನು ಸರ್ಕಾರ ಇದಕ್ಕಾಗಿ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ 1.6 ಕೋಟಿ ರೈತರಿಗೆ ನೀಡಲಾಗಿದೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರ ರೈತರ ಪರವಾಗಿದ್ದು, ರೈತ ಪರವಾದ ಕೇಂದ್ರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತವಾಗಿರುವ ಸರ್ಕಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಕರ್ನಾಟಕ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ರೈತರು ಇದೀಗ ತಮ್ಮ ಬೆಳೆಯನ್ನು ಹೆಚ್ಚು ಲಾಭದಾಯಕವಾಗುವ ರೀತಿಯಲ್ಲಿ ಯಾವುದೇ ಅಡ್ಡಿಯಿಲ್ಲದೆ ಮಾರಾಟ ಮಾಡುವಂತಾಗಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಆತ್ಮನಿರ್ಭರ ಭಾರತ ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರು ಹೇಳಿದರು.
ನೂತನ ಸಚಿವರು ಹಾಗೂ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಮುರುಗೇಶ್ ನಿರಾಣಿಯವರು ಸ್ವಾಗತಿಸಿ, ನಮ್ಮದು ಕೃಷಿ ಪ್ರಧಾನ ದೇಶವಾಗಿದ್ದು, ನಮ್ಮ ಸಮೂಹ ಸಂಸ್ಥೆಗಳು ಕೃಷಿ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸುಮಾರು 75 ಸಾವಿರ ಕುಟುಂಬಗಳಿಗೆ ಉದ್ಯೋಗ ನೀಡಿದೆ. ಇಥೆನಾಲ್ ಉತ್ಪಾದಿಸುವ ಮೂಲಕ ನಮ್ಮ ಸಂಸ್ಥೆ ಪ್ರಧಾನಮಂತ್ರಿಗಳು ಜಾರಿಗೊಳಿಸಿದ ಆತ್ಮನಿರ್ಭರ್ ಯೋಜನೆಯನ್ನು ಸಾಕಾರಗೊಳಿಸುವತ್ತ ಹೆಜ್ಜೆಯಿರಿಸಿದೆ ಎಂದರು.
ಉಪಮುಖ್ಯಮಂತ್ರಿಗಳು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ ಕಾರಜೋಳ, ನೂತನ ಸಚಿವರಾದ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ,ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವರಾದ ಆರ್. ಶಂಕರ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್, ವಿಜಯಪುರ ಸಂಸದ ಪರಮೇಶ ಜಿಗಜಿಣಗಿ.
ಕೊಪ್ಪಳ ಸಂಸದ ಸಂಗಣ್ಣ ಕರಡಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ್, ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಸಂಸದ ಸಂಜಯ್ ಪಾಟೀಲ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ7 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ6 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ3 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ3 days agoಕವಿತೆ | ದೇವರ ಹೂವು
-
ದಿನದ ಸುದ್ದಿ7 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

