ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243