ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243