Connect with us

ರಾಜಕೀಯ

ವೈವಿಧ್ಯತೆಯ ದಾರ್ಶನಿಕ ಶ್ರೇಷ್ಠತೆ

Published

on

ಪ್ರಾಥಮಿಕ ಪ್ರೌಢಶಾಲಾ ದಿನಗಳು ನೆನಪಾಗುತ್ತಿವೆ. ಸ್ವಾತಂತ್ರ್ಯೋತ್ಸವ, ಗಣ ರಾಜ್ಯೋತ್ಸವ, ರಾಜ್ಯೋತ್ಸವ ಸೇರಿದಂತೆ ರಾಷ್ಟ್ರೀಯ, ಪ್ರಾದೇಶಿಕ ಮಹತ್ವದ ದಿನಗಳಂದು ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಹೆಮ್ಮೆಯ ಸಂಗತಿಯಾಗಿತ್ತು. ಪ್ರಥಮ ಬಹುಮಾನ ಗೆಲ್ಲುವುದರ ಕಡೆಗೆ ಸ್ಪರ್ಧಿಗಳ ಉತ್ಸಾಹ ಕೇಂದ್ರೀಕೃತವಾಗಿರುತ್ತಿತ್ತು. ಹಿರಿಯರು ನಮಗಾಗಿ ಬರೆದುಕೊಡುತ್ತಿದ್ದ ಭಾಷಣದ ಪ್ರತಿಗಳನ್ನು ಓದಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೆವು. ವಾಕ್ಪಟುತ್ವ, ಭಾಷಿಕ ಸಮಗ್ರತೆಯ ಗುಣಲಕ್ಷಣಗಳು ಅವುಗಳಲ್ಲಿ ಅಡಕವಾಗಿರುತ್ತಿದ್ದವು.  ಪದಗಳ ವಿಶೇಷ ಅರ್ಥಗಳು ಗೊತ್ತಿರದಿದ್ದರೂ ಉರು ಹೊಡೆದು ಭಾಷಣವನ್ನು ಒಪ್ಪಿಸುವುದರ ಕಡೆಗೇ ನಮ್ಮ ಗಮನವಿರುತ್ತಿತ್ತು. ಬೆಳೆಯುತ್ತಿದ್ದ ಹಾಗೆ ಧ್ವನಿಯ ಏರಿಳಿತ ಮತ್ತು ಅರ್ಥವತ್ತಾದ ಪ್ರಸ್ತುತಪಡಿಸುವಿಕೆಯ ಮಹತ್ವವನ್ನು ತಿಳಿಸಿಕೊಟ್ಡ ನಂತರ ಆ ರೀತಿ ಯೋಚಿಸಲಾರಂಭಿಸಿದೆವು.

ಸ್ವಾತಂತ್ರ್ಯ ಹೋರಾಟ, ಭಾರತದ ವೈವಿಧ್ಯಮಯ ಸಂಸ್ಕೃತಿ, ಭಾವೈಕ್ಯತೆಯ ಶ್ರೇಷ್ಠತೆಯ ಮೌಲ್ಯಗಳು ನಮ್ಮನ್ನು ಹೆಚ್ಚಾಗಿ ಪ್ರಭಾವಿಸಿದ್ದವು. ಆಮೇಲಾಮೇಲೆ ಭಾಷಣವೆಂದರೆ ಭಾವನಾತ್ಮಕವಾಗಿ ಮಾತನಾಡಿ ಭಾಷಾ ಪ್ರೌಢಿಮೆ ಮೆರೆಯುವುದಲ್ಲ ಎಂಬುದು ಮನದಟ್ಟಾಗತೊಡಗಿತು. ಈಗಾಗಲೇ ಆಗಿಹೋದ ದಾರ್ಶನಿಕ ನಾಯಕರ ಬಗ್ಗೆ ಮಾತನಾಡುವಾಗಲೆಲ್ಲಾ ಅಭಿಮಾನಕ್ಕಿಂತ ಅವರ ಕೊಡುಗೆಗಳ ಸಾರ್ವಕಾಲಿಕ ಶಕ್ತಿಯನ್ನೇ ಗಣನೆಗೆ ತೆಗೆದುಕೊಂಡಾಗಲಷ್ಟೇ ಭಾಷಣಕ್ಕೆ ಸಮಗ್ರತೆ ದಕ್ಕುತ್ತಿತ್ತು. ಯಾರಾದರೂ ಭಾವುಕ ಆವೇಶ, ಭಾಷೆಯ ಅತಿರಂಜಕತೆಯನ್ನು ನೆಚ್ಚಿಕೊಂಡು ಮಾತನಾಡಿದರೆ ಅವರಿಗೆ ಅಂಕಗಳು ಸಿಗುತ್ತಿರಲಿಲ್ಲ. ಬಹುಮಾನವೂ ಲಭಿಸುತ್ತಿರಲಿಲ್ಲ. ಬದಲಾಗಿ ತೀರ್ಪುಗಾರರು ಅಂಥವರನ್ನು ಕರೆದು ಪೂರಕ ಮಾಹಿತಿ, ನಿದರ್ಶನಗಳಿಲ್ಲದೇ ಭಾಷಣ ಸೊರಗುತ್ತದೆ ಎಂದು ತಿಳಿಸುತ್ತಿದ್ದರು. ಭಾವುಕ ಭಾಷಿಕ ಅಬ್ಬರವು ಹುಸಿ ಅಭಿಮಾನವನ್ನು ಉಂಟುಮಾಡುತ್ತದೆಯೇ ಹೊರತು ಅದು ಚಿಂತನೆ ಬಿತ್ತುವುದಿಲ್ಲ ಎಂಬ ಕಿವಿಮಾತು ಹೇಳುತ್ತಿದ್ದರು. ನಂತರ ಭಾಷಣ ಸ್ಪರ್ಧೆ ಏರ್ಪಡುವ ಹೊತ್ತಿಗೆ ಅಂಥವರು ಬದಲಾಗುತ್ತಿದ್ದರು. ಈಗ ಇಂಥ ಮಾರ್ಗದರ್ಶನ ಲಭ್ಯವಾಗುತ್ತಿದ್ದರೂ ಬದಲಾದ ಕಾಲಘಟ್ಟದ ರಾಜಕಾರಣ ದೇಶದಾದ್ಯಂತ  ರೂಪಿಸುತ್ತಿರುವ ಹುಸಿ ಅಭಿಮಾನದ ಅಲೆಯ ಹೊಡೆತದ ಪರಿಣಾಮಗಳು ಅಂಥ ಸಕಾರಾತ್ಮಕತೆಯ ಪ್ರಭಾವವನ್ನು ಮೊಟಕುಗೊಳಿಸುತ್ತಿವೆ. ನಾಯಕತ್ವದ ಧಾಟಿ, ಭಾಷಣ ವೈಖರಿ, ಭಾಷೆಯ ಬಳಕೆ, ಅತಿಭಾವುಕತೆಯ ಪ್ರದರ್ಶನ ತಂತ್ರಗಾರಿಕೆ, ಪಕ್ಷಪಾತಿ ಧೋರಣೆ, ಸ್ವಹಿತಾಸಕ್ತಿ ರಕ್ಷಿಸಿಕೊಳ್ಳುವ ರಹಸ್ಯ ಕಾರ್ಯಸೂಚಿಗಳೇ ನಾಯಕರೆನ್ನಿಸಿಕೊಳ್ಳುವವರ ಪ್ರಭಾವವನ್ನು ವಿಸ್ತರಿಸುತ್ತಿವೆ. ಅಂಥವರ ಮಾತುಗಳನ್ನು ಕೇಳಿ ಪ್ರಭಾವಕ್ಕೊಳಗಾಗುವವರು ಅವರ ಭಾಷಣ ಶೈಲಿಯನ್ನೇ ವಾಕ್ಪಟುತ್ವದ ಶ್ರೇಷ್ಠ ಉದಾಹರಣೆ ಎಂದುಕೊಳ್ಳುತ್ತಿದ್ದಾರೆ. ಆ ಭಾಷಿಕ ವೈಭವೀಕರಣವನ್ಮೇ ನೆಚ್ಚಿಕೊಂಡು ಮಾತುಗಳೆಂದರೆ ಹೀಗೆಯೇ ಇರಬೇಕು ಎಂದು ತಲೆದೂಗುತ್ತಿದ್ದಾರೆ. ಹೀಗೆ ಕೇಳುವವರಿದ್ದಾರೆ ಎಂದುಕೊಳ್ಳುವ ಅಂಥವರು ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನಗಳಲ್ಲಿ ಯಶಸ್ಸು ಕಾಣುತ್ತಲೇ ಇದ್ದಾರೆ. ಅಧಿಕಾರದಲ್ಲಿ ಉಳಿದುಕೊಳ್ಳುವ ತಮ್ಮ ಮನೋಭಿಲಾಷೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಅತ್ಯಂತ ಎಚ್ಚರದಲ್ಲಿ ಈಡೇರಿಸಿಕೊಳ್ಳುತ್ತಿದ್ದಾರೆ.

ಆಡಳಿತ ಯಂತ್ರವನ್ನು ಬಳಸಿಕೊಂಡು ಸಕಾರಾತ್ಮಕ ಇತಿಹಾಸಕ್ಕೆ ತದ್ವಿರುದ್ಧವಾದ ಸುಳ್ಳುಗಳನ್ನು ಹರಿಬಿಡುವ ಹುನ್ನಾರಗಳೊಂದಿಗೆ ನಾಯಕರೆನ್ನಿಸಿಕೊಂಡವರು ಗುರುತಿಸಿಕೊಂಡಿದ್ದಾರೆ. ಈಗಾಗಲೇ ಆಗಿಹೋದ ನಾಯಕರನ್ನು ನೆನಪಿಸಿಕೊಳ್ಳುವ  ಕೃತಕ ನಿಷ್ಠೆಯ ಭಾವುಕತೆಯ ಆವರಣದಲ್ಲಿ ಈ ಸುಳ್ಳುಗಳನ್ನು ಚಾಣಾಕ್ಷಯುತವಾಗಿ ಪ್ರತಿಷ್ಠಾಪಿಸುತ್ತಿದ್ದಾರೆ. ಇದಕ್ಕಾಗಿ ಅವರು ಭಾಷೆಯ ನಮ್ಯಗುಣವನ್ನೇ ಉಪಯೋಗಿಸಿಕೊಂಡು ಅಪಭ್ರಂಶಗೊಳಿಸುತ್ತಿದ್ದಾರೆ. ಅಷ್ಟೇ ಅಲ್ಲ, ಪ್ರಜಾಸತ್ತಾತ್ಮಕ ತಾರ್ಕಿಕ ಪ್ರತಿರೋಧದ ವಿರುದ್ಧ ಆಕ್ರಾಮಕವಾದ ಭಾಷೆಯ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ನಾವೆಲ್ಲಾ ಭಾರತವನ್ನು ವಿವಿಧತೆಯಲ್ಲಿ ಏಕತೆ ಸಾಧಿಸಿಕೊಂಡ ದೇಶ ಎಂದು ಗ್ರಹಿಸಿದ್ದೆವು. ಹಿರಿಯರು ಇಂಥದ್ದೊಂದು ವೈವಿಧ್ಯಮಯ ಅಸ್ಮಿತೆಯನ್ನು ಪರಿಚಯಿಸಿ ನಮ್ಮ ತಿಳುವಳಿಕೆಗೆ ಭಿನ್ನ ಸಂಸ್ಕಾರವನ್ಮು ಒದಗಿಸಿದ್ದರು. ಆಗಿನ ಗ್ರಹಿಕೆಯು ದೇಶಾಭಿಮಾನದ ಹುಸಿ ವೇಷವನ್ನು ತೊಟ್ಟಿರಲಿಲ್ಲ. ಸೋಗಲಾಡಿತನದ ಹೆಮ್ಮೆಯ ಭಾವಾವೇಷವನ್ನು ಹೊದ್ದುಕೊಂಡಿರಲಿಲ್ಲ. ಬದಲಾಗಿ ಆ ಗ್ರಹಿಕೆಯು ಅಪ್ಪಟ ವಾಸ್ತವವಾದಿ ನೆಲೆಗಟ್ಟಿನಲ್ಲಿ ನಮ್ಮೊಳಗೆ ಅಂತರ್ಗತವಾಗಿತ್ತು. ಈಗ ಅಂಥ ಗ್ರಹಿಕೆಯ ಮೌಲಿಕ ವ್ಯಕ್ತಿಗತ ಸ್ವಯಂಸಂವಿಧಾನವನ್ನು ಧ್ವಂಸಗೊಳಿಸುವ ಭಾಷಿಕ ಅತಿರೇಕದ ಪ್ರಯತ್ನಗಳೇ ಶ್ರೇಷ್ಡ ಎಂದೆನ್ನಿಸುವ ಹಾಗೆ ಬಿಂಬಿತವಾಗುತ್ತಿವೆ. ಭಾಷಣ ಮತ್ತು ಬರಹದ ವಿವಿಧ ರೂಪಗಳು  ಈ ಅಂಶವನ್ನು ಸಾಬೀತುಪಡಿಸುತ್ತಿವೆ. ವಿವಿಧತೆಯ ಒಟ್ಟಂದವನ್ಮು ಕಲುಷಿತಗೊಳಿಸುವುದರೊಂದಿಗೆ ಅಂಥ ಪ್ರಯತ್ನದ ಹಾದಿಯಲ್ಲಿ ಯುವಸಮೂಹ ಸಾಗುವಂತೆ ಭಾಷಿಕ ಹುನ್ನಾರದ ನೆರವಿನೊಂದಿಗೇ ಪ್ರಚೋದಿಸಲಾಗುತ್ತಿದೆ.

ವಿವಿಧತೆಯ ಜಾಗದಲ್ಲಿ ಏಕಭಾರತದ ಪರಿಕಲ್ಪನೆಯ ನಿಧಾನ ವಿಷವನ್ನು ಉಣಬಡಿಸಲಾಗುತ್ತಿದೆ. ಅತ್ಯಾಕರ್ಷಕ ಪುಟವಿನ್ಯಾಸ, ವರ್ಣರಂಜಿತ ಅಕ್ಷರಗಳು, ಜನಪ್ರಿಯ ಸೆಲೆಬ್ರಿಟಿಗಳ ವಯ್ಯಾರದ ನುಡಿಗಳು, ಇಂಥವುಗಳೊಂದಿಗಿನ ಜಾಹಿರಾತು, ಸುದ್ದಿ ಬಿಂಬಗಳು ಆ ವಿಷವನ್ನು ರವಾನಿಸುತ್ತಿವೆ. ಜನರು ಇರಿಸಿಕೊಂಡ ವಿಶ್ವಾಸವನ್ನು ಭಗ್ನಗೊಳಿಸುತ್ತಿವೆ. ವಿವಿಧತೆಯನ್ನು ಉಳಿಸಿಕೊಂಡು ಏಕತೆಯನ್ನು ಸಾಧಿಸುವುದೇ ಆಡಳಿತದ ಪರಮ ಗುರಿಯಾಗಬೇಕು. ವಿವಿಧತೆಗಳ ಸೌಂದರ್ಯದ ಪ್ರಾಬಲ್ಯವಿಲ್ಲದ ಏಕತೆ ಅರ್ಥವಂತಿಕೆ ಕಳೆದುಕೊಳ್ಳುತ್ತದೆ. ವೈವಿಧ್ಯತೆ ಇದ್ದಾಗಲೇ ಭಾರತ ಸರ್ವಜನಾಂಗದ ಶಾಂತಿಯ ತೋಟವಾಗುತ್ತದೆ. ಏಕಭಾರತ ಕಟ್ಟುವ ಗುಂಗಿನಲ್ಲಿ ಈ ತೋಟಕ್ಕೆ ನುಗ್ಗಿ ಸಾಂಸ್ಕೃತಿಕ ವೈವಿಧ್ಯ ಫಸಲನ್ನು ಧ್ವಂಸಗೊಳಿಸದರೆ ದೇಶ ಸಶಕ್ತವಾಗುವುದಿಲ್ಲ.ಈ ನೆಲದ ಮಣ್ಣು ವೈವಿಧ್ಯಮಯ ಫಲವತ್ತತೆಯನ್ನು ಕಳೆದುಕೊಳ್ಳುತ್ತದೆ. ಶಾಲೆ- ಕಾಲೇಜುಗಳಲ್ಲಿ ಅನುರಣನಗೊಳ್ಳುವ ನಾಡಗೀತೆಯನ್ನು ಮತ್ತೆ ಓದಿಕೊಳ್ಳಬೇಕಿದೆ. ಹಾಡಿನ ರಾಗಮಾಧುರ್ಯದಂತೆಯೇ ನಾಡಗೀತೆಯ ಪ್ರತಿಯೊಂದು ಸಾಲು ರಚಿತವಾಗಿದೆ. ‘ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಸಾಲುಗಳ ವೈಚಾರಿಕ ಸೌಂದರ್ಯವನ್ನು ಅರ್ಥೈಸಿಕೊಳ್ಳಬೇಕಿದೆ. ಈ ದೇಶದ ವೈವಿಧ್ಯದ ಸೌಂದರ್ಯವನ್ನು ವಿಶಿಷ್ಠವಾಗಿ ಹಿಡಿದಿಟ್ಡ ಕುವೆಂಪು ಅವರ ವೈಚಾರಿಕ ಪ್ರಜ್ಞೆಯನ್ನು ಆಪ್ತವಾಗಿಸಿಕೊಳ್ಳಬೇಕಿದೆ.

ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್‌ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್‌ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ...

ದಿನದ ಸುದ್ದಿ1 day ago

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ...

ದಿನದ ಸುದ್ದಿ2 days ago

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ...

ದಿನದ ಸುದ್ದಿ2 days ago

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್...

ದಿನದ ಸುದ್ದಿ4 days ago

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ...

ದಿನದ ಸುದ್ದಿ4 days ago

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ5 days ago

ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ

~ಅನಿರೀಕ್ಷಿತ್ ನಾರಾಯಣ ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು. 1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್...

ದಿನದ ಸುದ್ದಿ1 week ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ1 week ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ1 week ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

Trending