Connect with us

ರಾಜಕೀಯ

ವೈವಿಧ್ಯತೆಯ ದಾರ್ಶನಿಕ ಶ್ರೇಷ್ಠತೆ

Published

on

ಪ್ರಾಥಮಿಕ ಪ್ರೌಢಶಾಲಾ ದಿನಗಳು ನೆನಪಾಗುತ್ತಿವೆ. ಸ್ವಾತಂತ್ರ್ಯೋತ್ಸವ, ಗಣ ರಾಜ್ಯೋತ್ಸವ, ರಾಜ್ಯೋತ್ಸವ ಸೇರಿದಂತೆ ರಾಷ್ಟ್ರೀಯ, ಪ್ರಾದೇಶಿಕ ಮಹತ್ವದ ದಿನಗಳಂದು ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಹೆಮ್ಮೆಯ ಸಂಗತಿಯಾಗಿತ್ತು. ಪ್ರಥಮ ಬಹುಮಾನ ಗೆಲ್ಲುವುದರ ಕಡೆಗೆ ಸ್ಪರ್ಧಿಗಳ ಉತ್ಸಾಹ ಕೇಂದ್ರೀಕೃತವಾಗಿರುತ್ತಿತ್ತು. ಹಿರಿಯರು ನಮಗಾಗಿ ಬರೆದುಕೊಡುತ್ತಿದ್ದ ಭಾಷಣದ ಪ್ರತಿಗಳನ್ನು ಓದಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೆವು. ವಾಕ್ಪಟುತ್ವ, ಭಾಷಿಕ ಸಮಗ್ರತೆಯ ಗುಣಲಕ್ಷಣಗಳು ಅವುಗಳಲ್ಲಿ ಅಡಕವಾಗಿರುತ್ತಿದ್ದವು.  ಪದಗಳ ವಿಶೇಷ ಅರ್ಥಗಳು ಗೊತ್ತಿರದಿದ್ದರೂ ಉರು ಹೊಡೆದು ಭಾಷಣವನ್ನು ಒಪ್ಪಿಸುವುದರ ಕಡೆಗೇ ನಮ್ಮ ಗಮನವಿರುತ್ತಿತ್ತು. ಬೆಳೆಯುತ್ತಿದ್ದ ಹಾಗೆ ಧ್ವನಿಯ ಏರಿಳಿತ ಮತ್ತು ಅರ್ಥವತ್ತಾದ ಪ್ರಸ್ತುತಪಡಿಸುವಿಕೆಯ ಮಹತ್ವವನ್ನು ತಿಳಿಸಿಕೊಟ್ಡ ನಂತರ ಆ ರೀತಿ ಯೋಚಿಸಲಾರಂಭಿಸಿದೆವು.

ಸ್ವಾತಂತ್ರ್ಯ ಹೋರಾಟ, ಭಾರತದ ವೈವಿಧ್ಯಮಯ ಸಂಸ್ಕೃತಿ, ಭಾವೈಕ್ಯತೆಯ ಶ್ರೇಷ್ಠತೆಯ ಮೌಲ್ಯಗಳು ನಮ್ಮನ್ನು ಹೆಚ್ಚಾಗಿ ಪ್ರಭಾವಿಸಿದ್ದವು. ಆಮೇಲಾಮೇಲೆ ಭಾಷಣವೆಂದರೆ ಭಾವನಾತ್ಮಕವಾಗಿ ಮಾತನಾಡಿ ಭಾಷಾ ಪ್ರೌಢಿಮೆ ಮೆರೆಯುವುದಲ್ಲ ಎಂಬುದು ಮನದಟ್ಟಾಗತೊಡಗಿತು. ಈಗಾಗಲೇ ಆಗಿಹೋದ ದಾರ್ಶನಿಕ ನಾಯಕರ ಬಗ್ಗೆ ಮಾತನಾಡುವಾಗಲೆಲ್ಲಾ ಅಭಿಮಾನಕ್ಕಿಂತ ಅವರ ಕೊಡುಗೆಗಳ ಸಾರ್ವಕಾಲಿಕ ಶಕ್ತಿಯನ್ನೇ ಗಣನೆಗೆ ತೆಗೆದುಕೊಂಡಾಗಲಷ್ಟೇ ಭಾಷಣಕ್ಕೆ ಸಮಗ್ರತೆ ದಕ್ಕುತ್ತಿತ್ತು. ಯಾರಾದರೂ ಭಾವುಕ ಆವೇಶ, ಭಾಷೆಯ ಅತಿರಂಜಕತೆಯನ್ನು ನೆಚ್ಚಿಕೊಂಡು ಮಾತನಾಡಿದರೆ ಅವರಿಗೆ ಅಂಕಗಳು ಸಿಗುತ್ತಿರಲಿಲ್ಲ. ಬಹುಮಾನವೂ ಲಭಿಸುತ್ತಿರಲಿಲ್ಲ. ಬದಲಾಗಿ ತೀರ್ಪುಗಾರರು ಅಂಥವರನ್ನು ಕರೆದು ಪೂರಕ ಮಾಹಿತಿ, ನಿದರ್ಶನಗಳಿಲ್ಲದೇ ಭಾಷಣ ಸೊರಗುತ್ತದೆ ಎಂದು ತಿಳಿಸುತ್ತಿದ್ದರು. ಭಾವುಕ ಭಾಷಿಕ ಅಬ್ಬರವು ಹುಸಿ ಅಭಿಮಾನವನ್ನು ಉಂಟುಮಾಡುತ್ತದೆಯೇ ಹೊರತು ಅದು ಚಿಂತನೆ ಬಿತ್ತುವುದಿಲ್ಲ ಎಂಬ ಕಿವಿಮಾತು ಹೇಳುತ್ತಿದ್ದರು. ನಂತರ ಭಾಷಣ ಸ್ಪರ್ಧೆ ಏರ್ಪಡುವ ಹೊತ್ತಿಗೆ ಅಂಥವರು ಬದಲಾಗುತ್ತಿದ್ದರು. ಈಗ ಇಂಥ ಮಾರ್ಗದರ್ಶನ ಲಭ್ಯವಾಗುತ್ತಿದ್ದರೂ ಬದಲಾದ ಕಾಲಘಟ್ಟದ ರಾಜಕಾರಣ ದೇಶದಾದ್ಯಂತ  ರೂಪಿಸುತ್ತಿರುವ ಹುಸಿ ಅಭಿಮಾನದ ಅಲೆಯ ಹೊಡೆತದ ಪರಿಣಾಮಗಳು ಅಂಥ ಸಕಾರಾತ್ಮಕತೆಯ ಪ್ರಭಾವವನ್ನು ಮೊಟಕುಗೊಳಿಸುತ್ತಿವೆ. ನಾಯಕತ್ವದ ಧಾಟಿ, ಭಾಷಣ ವೈಖರಿ, ಭಾಷೆಯ ಬಳಕೆ, ಅತಿಭಾವುಕತೆಯ ಪ್ರದರ್ಶನ ತಂತ್ರಗಾರಿಕೆ, ಪಕ್ಷಪಾತಿ ಧೋರಣೆ, ಸ್ವಹಿತಾಸಕ್ತಿ ರಕ್ಷಿಸಿಕೊಳ್ಳುವ ರಹಸ್ಯ ಕಾರ್ಯಸೂಚಿಗಳೇ ನಾಯಕರೆನ್ನಿಸಿಕೊಳ್ಳುವವರ ಪ್ರಭಾವವನ್ನು ವಿಸ್ತರಿಸುತ್ತಿವೆ. ಅಂಥವರ ಮಾತುಗಳನ್ನು ಕೇಳಿ ಪ್ರಭಾವಕ್ಕೊಳಗಾಗುವವರು ಅವರ ಭಾಷಣ ಶೈಲಿಯನ್ನೇ ವಾಕ್ಪಟುತ್ವದ ಶ್ರೇಷ್ಠ ಉದಾಹರಣೆ ಎಂದುಕೊಳ್ಳುತ್ತಿದ್ದಾರೆ. ಆ ಭಾಷಿಕ ವೈಭವೀಕರಣವನ್ಮೇ ನೆಚ್ಚಿಕೊಂಡು ಮಾತುಗಳೆಂದರೆ ಹೀಗೆಯೇ ಇರಬೇಕು ಎಂದು ತಲೆದೂಗುತ್ತಿದ್ದಾರೆ. ಹೀಗೆ ಕೇಳುವವರಿದ್ದಾರೆ ಎಂದುಕೊಳ್ಳುವ ಅಂಥವರು ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನಗಳಲ್ಲಿ ಯಶಸ್ಸು ಕಾಣುತ್ತಲೇ ಇದ್ದಾರೆ. ಅಧಿಕಾರದಲ್ಲಿ ಉಳಿದುಕೊಳ್ಳುವ ತಮ್ಮ ಮನೋಭಿಲಾಷೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಅತ್ಯಂತ ಎಚ್ಚರದಲ್ಲಿ ಈಡೇರಿಸಿಕೊಳ್ಳುತ್ತಿದ್ದಾರೆ.

ಆಡಳಿತ ಯಂತ್ರವನ್ನು ಬಳಸಿಕೊಂಡು ಸಕಾರಾತ್ಮಕ ಇತಿಹಾಸಕ್ಕೆ ತದ್ವಿರುದ್ಧವಾದ ಸುಳ್ಳುಗಳನ್ನು ಹರಿಬಿಡುವ ಹುನ್ನಾರಗಳೊಂದಿಗೆ ನಾಯಕರೆನ್ನಿಸಿಕೊಂಡವರು ಗುರುತಿಸಿಕೊಂಡಿದ್ದಾರೆ. ಈಗಾಗಲೇ ಆಗಿಹೋದ ನಾಯಕರನ್ನು ನೆನಪಿಸಿಕೊಳ್ಳುವ  ಕೃತಕ ನಿಷ್ಠೆಯ ಭಾವುಕತೆಯ ಆವರಣದಲ್ಲಿ ಈ ಸುಳ್ಳುಗಳನ್ನು ಚಾಣಾಕ್ಷಯುತವಾಗಿ ಪ್ರತಿಷ್ಠಾಪಿಸುತ್ತಿದ್ದಾರೆ. ಇದಕ್ಕಾಗಿ ಅವರು ಭಾಷೆಯ ನಮ್ಯಗುಣವನ್ನೇ ಉಪಯೋಗಿಸಿಕೊಂಡು ಅಪಭ್ರಂಶಗೊಳಿಸುತ್ತಿದ್ದಾರೆ. ಅಷ್ಟೇ ಅಲ್ಲ, ಪ್ರಜಾಸತ್ತಾತ್ಮಕ ತಾರ್ಕಿಕ ಪ್ರತಿರೋಧದ ವಿರುದ್ಧ ಆಕ್ರಾಮಕವಾದ ಭಾಷೆಯ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ನಾವೆಲ್ಲಾ ಭಾರತವನ್ನು ವಿವಿಧತೆಯಲ್ಲಿ ಏಕತೆ ಸಾಧಿಸಿಕೊಂಡ ದೇಶ ಎಂದು ಗ್ರಹಿಸಿದ್ದೆವು. ಹಿರಿಯರು ಇಂಥದ್ದೊಂದು ವೈವಿಧ್ಯಮಯ ಅಸ್ಮಿತೆಯನ್ನು ಪರಿಚಯಿಸಿ ನಮ್ಮ ತಿಳುವಳಿಕೆಗೆ ಭಿನ್ನ ಸಂಸ್ಕಾರವನ್ಮು ಒದಗಿಸಿದ್ದರು. ಆಗಿನ ಗ್ರಹಿಕೆಯು ದೇಶಾಭಿಮಾನದ ಹುಸಿ ವೇಷವನ್ನು ತೊಟ್ಟಿರಲಿಲ್ಲ. ಸೋಗಲಾಡಿತನದ ಹೆಮ್ಮೆಯ ಭಾವಾವೇಷವನ್ನು ಹೊದ್ದುಕೊಂಡಿರಲಿಲ್ಲ. ಬದಲಾಗಿ ಆ ಗ್ರಹಿಕೆಯು ಅಪ್ಪಟ ವಾಸ್ತವವಾದಿ ನೆಲೆಗಟ್ಟಿನಲ್ಲಿ ನಮ್ಮೊಳಗೆ ಅಂತರ್ಗತವಾಗಿತ್ತು. ಈಗ ಅಂಥ ಗ್ರಹಿಕೆಯ ಮೌಲಿಕ ವ್ಯಕ್ತಿಗತ ಸ್ವಯಂಸಂವಿಧಾನವನ್ನು ಧ್ವಂಸಗೊಳಿಸುವ ಭಾಷಿಕ ಅತಿರೇಕದ ಪ್ರಯತ್ನಗಳೇ ಶ್ರೇಷ್ಡ ಎಂದೆನ್ನಿಸುವ ಹಾಗೆ ಬಿಂಬಿತವಾಗುತ್ತಿವೆ. ಭಾಷಣ ಮತ್ತು ಬರಹದ ವಿವಿಧ ರೂಪಗಳು  ಈ ಅಂಶವನ್ನು ಸಾಬೀತುಪಡಿಸುತ್ತಿವೆ. ವಿವಿಧತೆಯ ಒಟ್ಟಂದವನ್ಮು ಕಲುಷಿತಗೊಳಿಸುವುದರೊಂದಿಗೆ ಅಂಥ ಪ್ರಯತ್ನದ ಹಾದಿಯಲ್ಲಿ ಯುವಸಮೂಹ ಸಾಗುವಂತೆ ಭಾಷಿಕ ಹುನ್ನಾರದ ನೆರವಿನೊಂದಿಗೇ ಪ್ರಚೋದಿಸಲಾಗುತ್ತಿದೆ.

ವಿವಿಧತೆಯ ಜಾಗದಲ್ಲಿ ಏಕಭಾರತದ ಪರಿಕಲ್ಪನೆಯ ನಿಧಾನ ವಿಷವನ್ನು ಉಣಬಡಿಸಲಾಗುತ್ತಿದೆ. ಅತ್ಯಾಕರ್ಷಕ ಪುಟವಿನ್ಯಾಸ, ವರ್ಣರಂಜಿತ ಅಕ್ಷರಗಳು, ಜನಪ್ರಿಯ ಸೆಲೆಬ್ರಿಟಿಗಳ ವಯ್ಯಾರದ ನುಡಿಗಳು, ಇಂಥವುಗಳೊಂದಿಗಿನ ಜಾಹಿರಾತು, ಸುದ್ದಿ ಬಿಂಬಗಳು ಆ ವಿಷವನ್ನು ರವಾನಿಸುತ್ತಿವೆ. ಜನರು ಇರಿಸಿಕೊಂಡ ವಿಶ್ವಾಸವನ್ನು ಭಗ್ನಗೊಳಿಸುತ್ತಿವೆ. ವಿವಿಧತೆಯನ್ನು ಉಳಿಸಿಕೊಂಡು ಏಕತೆಯನ್ನು ಸಾಧಿಸುವುದೇ ಆಡಳಿತದ ಪರಮ ಗುರಿಯಾಗಬೇಕು. ವಿವಿಧತೆಗಳ ಸೌಂದರ್ಯದ ಪ್ರಾಬಲ್ಯವಿಲ್ಲದ ಏಕತೆ ಅರ್ಥವಂತಿಕೆ ಕಳೆದುಕೊಳ್ಳುತ್ತದೆ. ವೈವಿಧ್ಯತೆ ಇದ್ದಾಗಲೇ ಭಾರತ ಸರ್ವಜನಾಂಗದ ಶಾಂತಿಯ ತೋಟವಾಗುತ್ತದೆ. ಏಕಭಾರತ ಕಟ್ಟುವ ಗುಂಗಿನಲ್ಲಿ ಈ ತೋಟಕ್ಕೆ ನುಗ್ಗಿ ಸಾಂಸ್ಕೃತಿಕ ವೈವಿಧ್ಯ ಫಸಲನ್ನು ಧ್ವಂಸಗೊಳಿಸದರೆ ದೇಶ ಸಶಕ್ತವಾಗುವುದಿಲ್ಲ.ಈ ನೆಲದ ಮಣ್ಣು ವೈವಿಧ್ಯಮಯ ಫಲವತ್ತತೆಯನ್ನು ಕಳೆದುಕೊಳ್ಳುತ್ತದೆ. ಶಾಲೆ- ಕಾಲೇಜುಗಳಲ್ಲಿ ಅನುರಣನಗೊಳ್ಳುವ ನಾಡಗೀತೆಯನ್ನು ಮತ್ತೆ ಓದಿಕೊಳ್ಳಬೇಕಿದೆ. ಹಾಡಿನ ರಾಗಮಾಧುರ್ಯದಂತೆಯೇ ನಾಡಗೀತೆಯ ಪ್ರತಿಯೊಂದು ಸಾಲು ರಚಿತವಾಗಿದೆ. ‘ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಸಾಲುಗಳ ವೈಚಾರಿಕ ಸೌಂದರ್ಯವನ್ನು ಅರ್ಥೈಸಿಕೊಳ್ಳಬೇಕಿದೆ. ಈ ದೇಶದ ವೈವಿಧ್ಯದ ಸೌಂದರ್ಯವನ್ನು ವಿಶಿಷ್ಠವಾಗಿ ಹಿಡಿದಿಟ್ಡ ಕುವೆಂಪು ಅವರ ವೈಚಾರಿಕ ಪ್ರಜ್ಞೆಯನ್ನು ಆಪ್ತವಾಗಿಸಿಕೊಳ್ಳಬೇಕಿದೆ.

ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪರೀಕ್ಷೆಯಲ್ಲಿ ಕೃಪಾಂಕ ನೀಡಿಕೆ ನಿಲ್ಲಬೇಕು : ಸಿಎಂ ಸಿದ್ದರಾಮಯ್ಯ ಒತ್ತಾಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಕೃಪಾಂಕಗಳನ್ನು ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ನೀಡಿಕೆ ಪದ್ಧತಿಯನ್ನು ನಿಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು. ರಾಜ್ಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಕಡಿಮೆಗೊಳಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವೇದಿಕೆ ಸಜ್ಜಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಸಲಾಗುವುದೆಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್...

ದಿನದ ಸುದ್ದಿ2 hours ago

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ....

ದಿನದ ಸುದ್ದಿ17 hours ago

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and...

ದಿನದ ಸುದ್ದಿ18 hours ago

ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ

ಸುದ್ದಿದಿನ,ಬೆಂಗಳೂರು:ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್...

ದಿನದ ಸುದ್ದಿ18 hours ago

ರೇಣುಕಸ್ವಾಮಿ ಕೊಲೆಗೈದ ಆರೋಪಿಗಳಿಗೆ ಶಿಕ್ಷೆಯಾಗಲಿ : ಜಂಗಮ ಸಮಾಜ ಪ್ರತಿಭಟನೆ

ಸುದ್ದಿದಿನ,ಮಸ್ಕಿ:ಪಟ್ಟಣದ ಗಚ್ಚಿನ ಹಿರೇಮಠದಲ್ಲಿ ಮಸ್ಕಿ ಜಂಗಮ ಸಮಾಜ ವತಿಯಿಂದ ನಮ್ಮ ಸಮುದಾಯದ ಚಿತ್ರದುರ್ಗದ ರೇಣುಕ ಸ್ವಾಮಿಯನ್ನು ಕೊಲೆಗೈದ ಕೊಲೆಗಡಕರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಗಚ್ಚಿನ...

ದಿನದ ಸುದ್ದಿ1 day ago

ಜಗಳೂರು | ವ್ಯಕ್ತಿ ಮೇಲೆ ನಾಲ್ಕು ಕರಡಿದಾಳಿ

ಸುದ್ದಿದಿನ,ಜಗಳೂರು : ಜಮೀನಿಗೆ ಹೋಗಿದ್ದ ವ್ಯಕ್ತಿ ಮೇಲೆ ನಾಲ್ಕು ಕರಡಿಗಳ ದಾಳಿ‌ ಮಾಡಿ ಹಿಗ್ಗಾಮುಗ್ಗಾ ಕಡಿದು ಗಂಭೀರ ಗಾಯಗೊಳಿಸಿರುವ ಘಟನೆ ಜಗಳೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ...

ದಿನದ ಸುದ್ದಿ1 day ago

ಶ್ರೀ ಉಚ್ಚಂಗೆಮ್ಮದೇವಿ ಸದ್ಭಕ್ತರಿಗೊಂದು ವಿಸ್ಮಯಕಾರಿ ಸುದ್ದಿ : ಉಚ್ಚಂಗಿದುರ್ಗ ಬೆಟ್ಟದ ಕುರಿತು ಹೊಸ ಹೊಳಹು ನೀಡಿದ ದಾವಣಗೆರೆ ಅರ್ಜುನ್

ಗಂಗಾಧರ ಬಿ ಎಲ್ ನಿಟ್ಟೂರ್ ಭಾರತ ದೇಶ ಹಲವು ಅಚ್ಚರಿ, ವಿಚಿತ್ರ, ವಿಸ್ಮಯಗಳ ತಾಣ. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಬದಲಾವಣೆಯಿಂದ ಹಿಡಿದು, ಸೃಷ್ಟಿಕರ್ತನ ಕೈಚಳಕದ ಕುಲುಮೆಯಲ್ಲಿ ಅರಳಿರುವ ಹಲವು...

ಅಂತರಂಗ1 day ago

ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು

ರುದ್ರಪ್ಪ ಹನಗವಾಡಿ  ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ...

ದಿನದ ಸುದ್ದಿ1 day ago

ಪಿಎಂ ಕಿಸಾನ್ ನಿಧಿ ಯೋಜನೆ | ರೈತರ ಖಾತೆಗಳಿಗೆ ಬರುವ ಮಂಗಳವಾರ ಹಣ ವರ್ಗಾವಣೆ

ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುವ ಮಂಗಳವಾರ 18 ರಂದು ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20...

ದಿನದ ಸುದ್ದಿ2 days ago

ಭಾರತೀಯ ಸೇನೆ | ವಿವಿಧ ಹುದ್ದೆಗಳಿಗೆ ಸೇರಬಸುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,...

Trending