Connect with us

ರಾಜಕೀಯ

ವೈವಿಧ್ಯತೆಯ ದಾರ್ಶನಿಕ ಶ್ರೇಷ್ಠತೆ

Published

on

ಪ್ರಾಥಮಿಕ ಪ್ರೌಢಶಾಲಾ ದಿನಗಳು ನೆನಪಾಗುತ್ತಿವೆ. ಸ್ವಾತಂತ್ರ್ಯೋತ್ಸವ, ಗಣ ರಾಜ್ಯೋತ್ಸವ, ರಾಜ್ಯೋತ್ಸವ ಸೇರಿದಂತೆ ರಾಷ್ಟ್ರೀಯ, ಪ್ರಾದೇಶಿಕ ಮಹತ್ವದ ದಿನಗಳಂದು ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಹೆಮ್ಮೆಯ ಸಂಗತಿಯಾಗಿತ್ತು. ಪ್ರಥಮ ಬಹುಮಾನ ಗೆಲ್ಲುವುದರ ಕಡೆಗೆ ಸ್ಪರ್ಧಿಗಳ ಉತ್ಸಾಹ ಕೇಂದ್ರೀಕೃತವಾಗಿರುತ್ತಿತ್ತು. ಹಿರಿಯರು ನಮಗಾಗಿ ಬರೆದುಕೊಡುತ್ತಿದ್ದ ಭಾಷಣದ ಪ್ರತಿಗಳನ್ನು ಓದಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೆವು. ವಾಕ್ಪಟುತ್ವ, ಭಾಷಿಕ ಸಮಗ್ರತೆಯ ಗುಣಲಕ್ಷಣಗಳು ಅವುಗಳಲ್ಲಿ ಅಡಕವಾಗಿರುತ್ತಿದ್ದವು.  ಪದಗಳ ವಿಶೇಷ ಅರ್ಥಗಳು ಗೊತ್ತಿರದಿದ್ದರೂ ಉರು ಹೊಡೆದು ಭಾಷಣವನ್ನು ಒಪ್ಪಿಸುವುದರ ಕಡೆಗೇ ನಮ್ಮ ಗಮನವಿರುತ್ತಿತ್ತು. ಬೆಳೆಯುತ್ತಿದ್ದ ಹಾಗೆ ಧ್ವನಿಯ ಏರಿಳಿತ ಮತ್ತು ಅರ್ಥವತ್ತಾದ ಪ್ರಸ್ತುತಪಡಿಸುವಿಕೆಯ ಮಹತ್ವವನ್ನು ತಿಳಿಸಿಕೊಟ್ಡ ನಂತರ ಆ ರೀತಿ ಯೋಚಿಸಲಾರಂಭಿಸಿದೆವು.

ಸ್ವಾತಂತ್ರ್ಯ ಹೋರಾಟ, ಭಾರತದ ವೈವಿಧ್ಯಮಯ ಸಂಸ್ಕೃತಿ, ಭಾವೈಕ್ಯತೆಯ ಶ್ರೇಷ್ಠತೆಯ ಮೌಲ್ಯಗಳು ನಮ್ಮನ್ನು ಹೆಚ್ಚಾಗಿ ಪ್ರಭಾವಿಸಿದ್ದವು. ಆಮೇಲಾಮೇಲೆ ಭಾಷಣವೆಂದರೆ ಭಾವನಾತ್ಮಕವಾಗಿ ಮಾತನಾಡಿ ಭಾಷಾ ಪ್ರೌಢಿಮೆ ಮೆರೆಯುವುದಲ್ಲ ಎಂಬುದು ಮನದಟ್ಟಾಗತೊಡಗಿತು. ಈಗಾಗಲೇ ಆಗಿಹೋದ ದಾರ್ಶನಿಕ ನಾಯಕರ ಬಗ್ಗೆ ಮಾತನಾಡುವಾಗಲೆಲ್ಲಾ ಅಭಿಮಾನಕ್ಕಿಂತ ಅವರ ಕೊಡುಗೆಗಳ ಸಾರ್ವಕಾಲಿಕ ಶಕ್ತಿಯನ್ನೇ ಗಣನೆಗೆ ತೆಗೆದುಕೊಂಡಾಗಲಷ್ಟೇ ಭಾಷಣಕ್ಕೆ ಸಮಗ್ರತೆ ದಕ್ಕುತ್ತಿತ್ತು. ಯಾರಾದರೂ ಭಾವುಕ ಆವೇಶ, ಭಾಷೆಯ ಅತಿರಂಜಕತೆಯನ್ನು ನೆಚ್ಚಿಕೊಂಡು ಮಾತನಾಡಿದರೆ ಅವರಿಗೆ ಅಂಕಗಳು ಸಿಗುತ್ತಿರಲಿಲ್ಲ. ಬಹುಮಾನವೂ ಲಭಿಸುತ್ತಿರಲಿಲ್ಲ. ಬದಲಾಗಿ ತೀರ್ಪುಗಾರರು ಅಂಥವರನ್ನು ಕರೆದು ಪೂರಕ ಮಾಹಿತಿ, ನಿದರ್ಶನಗಳಿಲ್ಲದೇ ಭಾಷಣ ಸೊರಗುತ್ತದೆ ಎಂದು ತಿಳಿಸುತ್ತಿದ್ದರು. ಭಾವುಕ ಭಾಷಿಕ ಅಬ್ಬರವು ಹುಸಿ ಅಭಿಮಾನವನ್ನು ಉಂಟುಮಾಡುತ್ತದೆಯೇ ಹೊರತು ಅದು ಚಿಂತನೆ ಬಿತ್ತುವುದಿಲ್ಲ ಎಂಬ ಕಿವಿಮಾತು ಹೇಳುತ್ತಿದ್ದರು. ನಂತರ ಭಾಷಣ ಸ್ಪರ್ಧೆ ಏರ್ಪಡುವ ಹೊತ್ತಿಗೆ ಅಂಥವರು ಬದಲಾಗುತ್ತಿದ್ದರು. ಈಗ ಇಂಥ ಮಾರ್ಗದರ್ಶನ ಲಭ್ಯವಾಗುತ್ತಿದ್ದರೂ ಬದಲಾದ ಕಾಲಘಟ್ಟದ ರಾಜಕಾರಣ ದೇಶದಾದ್ಯಂತ  ರೂಪಿಸುತ್ತಿರುವ ಹುಸಿ ಅಭಿಮಾನದ ಅಲೆಯ ಹೊಡೆತದ ಪರಿಣಾಮಗಳು ಅಂಥ ಸಕಾರಾತ್ಮಕತೆಯ ಪ್ರಭಾವವನ್ನು ಮೊಟಕುಗೊಳಿಸುತ್ತಿವೆ. ನಾಯಕತ್ವದ ಧಾಟಿ, ಭಾಷಣ ವೈಖರಿ, ಭಾಷೆಯ ಬಳಕೆ, ಅತಿಭಾವುಕತೆಯ ಪ್ರದರ್ಶನ ತಂತ್ರಗಾರಿಕೆ, ಪಕ್ಷಪಾತಿ ಧೋರಣೆ, ಸ್ವಹಿತಾಸಕ್ತಿ ರಕ್ಷಿಸಿಕೊಳ್ಳುವ ರಹಸ್ಯ ಕಾರ್ಯಸೂಚಿಗಳೇ ನಾಯಕರೆನ್ನಿಸಿಕೊಳ್ಳುವವರ ಪ್ರಭಾವವನ್ನು ವಿಸ್ತರಿಸುತ್ತಿವೆ. ಅಂಥವರ ಮಾತುಗಳನ್ನು ಕೇಳಿ ಪ್ರಭಾವಕ್ಕೊಳಗಾಗುವವರು ಅವರ ಭಾಷಣ ಶೈಲಿಯನ್ನೇ ವಾಕ್ಪಟುತ್ವದ ಶ್ರೇಷ್ಠ ಉದಾಹರಣೆ ಎಂದುಕೊಳ್ಳುತ್ತಿದ್ದಾರೆ. ಆ ಭಾಷಿಕ ವೈಭವೀಕರಣವನ್ಮೇ ನೆಚ್ಚಿಕೊಂಡು ಮಾತುಗಳೆಂದರೆ ಹೀಗೆಯೇ ಇರಬೇಕು ಎಂದು ತಲೆದೂಗುತ್ತಿದ್ದಾರೆ. ಹೀಗೆ ಕೇಳುವವರಿದ್ದಾರೆ ಎಂದುಕೊಳ್ಳುವ ಅಂಥವರು ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನಗಳಲ್ಲಿ ಯಶಸ್ಸು ಕಾಣುತ್ತಲೇ ಇದ್ದಾರೆ. ಅಧಿಕಾರದಲ್ಲಿ ಉಳಿದುಕೊಳ್ಳುವ ತಮ್ಮ ಮನೋಭಿಲಾಷೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಅತ್ಯಂತ ಎಚ್ಚರದಲ್ಲಿ ಈಡೇರಿಸಿಕೊಳ್ಳುತ್ತಿದ್ದಾರೆ.

ಆಡಳಿತ ಯಂತ್ರವನ್ನು ಬಳಸಿಕೊಂಡು ಸಕಾರಾತ್ಮಕ ಇತಿಹಾಸಕ್ಕೆ ತದ್ವಿರುದ್ಧವಾದ ಸುಳ್ಳುಗಳನ್ನು ಹರಿಬಿಡುವ ಹುನ್ನಾರಗಳೊಂದಿಗೆ ನಾಯಕರೆನ್ನಿಸಿಕೊಂಡವರು ಗುರುತಿಸಿಕೊಂಡಿದ್ದಾರೆ. ಈಗಾಗಲೇ ಆಗಿಹೋದ ನಾಯಕರನ್ನು ನೆನಪಿಸಿಕೊಳ್ಳುವ  ಕೃತಕ ನಿಷ್ಠೆಯ ಭಾವುಕತೆಯ ಆವರಣದಲ್ಲಿ ಈ ಸುಳ್ಳುಗಳನ್ನು ಚಾಣಾಕ್ಷಯುತವಾಗಿ ಪ್ರತಿಷ್ಠಾಪಿಸುತ್ತಿದ್ದಾರೆ. ಇದಕ್ಕಾಗಿ ಅವರು ಭಾಷೆಯ ನಮ್ಯಗುಣವನ್ನೇ ಉಪಯೋಗಿಸಿಕೊಂಡು ಅಪಭ್ರಂಶಗೊಳಿಸುತ್ತಿದ್ದಾರೆ. ಅಷ್ಟೇ ಅಲ್ಲ, ಪ್ರಜಾಸತ್ತಾತ್ಮಕ ತಾರ್ಕಿಕ ಪ್ರತಿರೋಧದ ವಿರುದ್ಧ ಆಕ್ರಾಮಕವಾದ ಭಾಷೆಯ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ನಾವೆಲ್ಲಾ ಭಾರತವನ್ನು ವಿವಿಧತೆಯಲ್ಲಿ ಏಕತೆ ಸಾಧಿಸಿಕೊಂಡ ದೇಶ ಎಂದು ಗ್ರಹಿಸಿದ್ದೆವು. ಹಿರಿಯರು ಇಂಥದ್ದೊಂದು ವೈವಿಧ್ಯಮಯ ಅಸ್ಮಿತೆಯನ್ನು ಪರಿಚಯಿಸಿ ನಮ್ಮ ತಿಳುವಳಿಕೆಗೆ ಭಿನ್ನ ಸಂಸ್ಕಾರವನ್ಮು ಒದಗಿಸಿದ್ದರು. ಆಗಿನ ಗ್ರಹಿಕೆಯು ದೇಶಾಭಿಮಾನದ ಹುಸಿ ವೇಷವನ್ನು ತೊಟ್ಟಿರಲಿಲ್ಲ. ಸೋಗಲಾಡಿತನದ ಹೆಮ್ಮೆಯ ಭಾವಾವೇಷವನ್ನು ಹೊದ್ದುಕೊಂಡಿರಲಿಲ್ಲ. ಬದಲಾಗಿ ಆ ಗ್ರಹಿಕೆಯು ಅಪ್ಪಟ ವಾಸ್ತವವಾದಿ ನೆಲೆಗಟ್ಟಿನಲ್ಲಿ ನಮ್ಮೊಳಗೆ ಅಂತರ್ಗತವಾಗಿತ್ತು. ಈಗ ಅಂಥ ಗ್ರಹಿಕೆಯ ಮೌಲಿಕ ವ್ಯಕ್ತಿಗತ ಸ್ವಯಂಸಂವಿಧಾನವನ್ನು ಧ್ವಂಸಗೊಳಿಸುವ ಭಾಷಿಕ ಅತಿರೇಕದ ಪ್ರಯತ್ನಗಳೇ ಶ್ರೇಷ್ಡ ಎಂದೆನ್ನಿಸುವ ಹಾಗೆ ಬಿಂಬಿತವಾಗುತ್ತಿವೆ. ಭಾಷಣ ಮತ್ತು ಬರಹದ ವಿವಿಧ ರೂಪಗಳು  ಈ ಅಂಶವನ್ನು ಸಾಬೀತುಪಡಿಸುತ್ತಿವೆ. ವಿವಿಧತೆಯ ಒಟ್ಟಂದವನ್ಮು ಕಲುಷಿತಗೊಳಿಸುವುದರೊಂದಿಗೆ ಅಂಥ ಪ್ರಯತ್ನದ ಹಾದಿಯಲ್ಲಿ ಯುವಸಮೂಹ ಸಾಗುವಂತೆ ಭಾಷಿಕ ಹುನ್ನಾರದ ನೆರವಿನೊಂದಿಗೇ ಪ್ರಚೋದಿಸಲಾಗುತ್ತಿದೆ.

ವಿವಿಧತೆಯ ಜಾಗದಲ್ಲಿ ಏಕಭಾರತದ ಪರಿಕಲ್ಪನೆಯ ನಿಧಾನ ವಿಷವನ್ನು ಉಣಬಡಿಸಲಾಗುತ್ತಿದೆ. ಅತ್ಯಾಕರ್ಷಕ ಪುಟವಿನ್ಯಾಸ, ವರ್ಣರಂಜಿತ ಅಕ್ಷರಗಳು, ಜನಪ್ರಿಯ ಸೆಲೆಬ್ರಿಟಿಗಳ ವಯ್ಯಾರದ ನುಡಿಗಳು, ಇಂಥವುಗಳೊಂದಿಗಿನ ಜಾಹಿರಾತು, ಸುದ್ದಿ ಬಿಂಬಗಳು ಆ ವಿಷವನ್ನು ರವಾನಿಸುತ್ತಿವೆ. ಜನರು ಇರಿಸಿಕೊಂಡ ವಿಶ್ವಾಸವನ್ನು ಭಗ್ನಗೊಳಿಸುತ್ತಿವೆ. ವಿವಿಧತೆಯನ್ನು ಉಳಿಸಿಕೊಂಡು ಏಕತೆಯನ್ನು ಸಾಧಿಸುವುದೇ ಆಡಳಿತದ ಪರಮ ಗುರಿಯಾಗಬೇಕು. ವಿವಿಧತೆಗಳ ಸೌಂದರ್ಯದ ಪ್ರಾಬಲ್ಯವಿಲ್ಲದ ಏಕತೆ ಅರ್ಥವಂತಿಕೆ ಕಳೆದುಕೊಳ್ಳುತ್ತದೆ. ವೈವಿಧ್ಯತೆ ಇದ್ದಾಗಲೇ ಭಾರತ ಸರ್ವಜನಾಂಗದ ಶಾಂತಿಯ ತೋಟವಾಗುತ್ತದೆ. ಏಕಭಾರತ ಕಟ್ಟುವ ಗುಂಗಿನಲ್ಲಿ ಈ ತೋಟಕ್ಕೆ ನುಗ್ಗಿ ಸಾಂಸ್ಕೃತಿಕ ವೈವಿಧ್ಯ ಫಸಲನ್ನು ಧ್ವಂಸಗೊಳಿಸದರೆ ದೇಶ ಸಶಕ್ತವಾಗುವುದಿಲ್ಲ.ಈ ನೆಲದ ಮಣ್ಣು ವೈವಿಧ್ಯಮಯ ಫಲವತ್ತತೆಯನ್ನು ಕಳೆದುಕೊಳ್ಳುತ್ತದೆ. ಶಾಲೆ- ಕಾಲೇಜುಗಳಲ್ಲಿ ಅನುರಣನಗೊಳ್ಳುವ ನಾಡಗೀತೆಯನ್ನು ಮತ್ತೆ ಓದಿಕೊಳ್ಳಬೇಕಿದೆ. ಹಾಡಿನ ರಾಗಮಾಧುರ್ಯದಂತೆಯೇ ನಾಡಗೀತೆಯ ಪ್ರತಿಯೊಂದು ಸಾಲು ರಚಿತವಾಗಿದೆ. ‘ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಸಾಲುಗಳ ವೈಚಾರಿಕ ಸೌಂದರ್ಯವನ್ನು ಅರ್ಥೈಸಿಕೊಳ್ಳಬೇಕಿದೆ. ಈ ದೇಶದ ವೈವಿಧ್ಯದ ಸೌಂದರ್ಯವನ್ನು ವಿಶಿಷ್ಠವಾಗಿ ಹಿಡಿದಿಟ್ಡ ಕುವೆಂಪು ಅವರ ವೈಚಾರಿಕ ಪ್ರಜ್ಞೆಯನ್ನು ಆಪ್ತವಾಗಿಸಿಕೊಳ್ಳಬೇಕಿದೆ.

ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

Published

on

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ17 hours ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ1 day ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ2 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ2 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ2 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ3 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ3 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ4 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ5 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ6 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

Trending