ರಾಜಕೀಯ
ಅನರ್ಹತೆಯ “Extrapolation”
- ರಾಜಾರಾಮ್ ತಲ್ಲೂರ್
15ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆ ಫಲಿತಾಂಶ ಎಷ್ಟರ ಮಟ್ಟಿಗೆ ಆಳುವ ಸರ್ಕಾರದ ಪರವಾಗಿ “ಟೇಲರ್ ಮೇಡ್” ಇದೆಯೆಂದರೆ, ಬಿಜೆಪಿ ನಿರ್ಧಾರಕ ಗೆಲುವು ಸಾಧಿಸಿದೆ. ಗೋಕಾಕ , ಕೆ ಆರ್ ಪೇಟೆ, ಚಿಕ್ಕಬಳ್ಳಾಪುರಗಳಲ್ಲಿ ಮಾತ್ರ ಗೆದ್ದ ಅಭ್ಯರ್ಥಿಗೆ 50%ಗಿಂತ ಕಡಿಮೆ ಮತ ಬಂದಿದೆ ಅರ್ಥಾತ್ ಎದುರು ಪಕ್ಷಗಳ ಮತ ಚದುರಿಹೋಗಿ ಬಿಜೆಪಿ ಗೆದ್ದಿದೆ.
ಉಳಿದ ಕ್ಷೇತ್ರಗಳಲ್ಲಿ ಎಲ್ಲೆಡೆ ಬಿಜೆಪಿಯದು ನಿರ್ಧಾರಕ ಜಯ. ಅಥಣಿ (59.83), ಕಾಗವಾಡ್ (54.18), ಯೆಲ್ಲಾಪುರ (60.22), ಹಿರೇಕೆರೂರು (58.99), ರಾಣೆಬೆನ್ನೂರು (55.52), ವಿಜಯನಗರ(55.42), ಕೆ ಆರ್ ಪುರ (62.99), ಯಶವಂತಪುರ (50.86), ಮಹಾಲಕ್ಷ್ಮಿ ಲೇಔಟ್ (58.65).
ಗೋಕಾಕ (48.97), ಕೆ ಆರ್ ಪೇಟೆ (39.41), ಚಿಕ್ಕಬಳ್ಳಾಪುರ (48.53) ಗಳಲ್ಲಿ ಮಾತ್ರ ಬಿಜೆಪಿಗೆ 50%ಗಿಂತ ಕಡಿಮೆ ಮತ ಬಿದ್ದಿದ್ದೆಯಾದರೂ ಸೋತ ಅಭ್ಯರ್ಥಿಗಿಂತ ಕ್ರಮವಾಗಿ 29,006; 9731ಮತ್ತು 34801 ಮತಗಳ ಅಂತರದ ಜಯ ಸಿಕ್ಕಿದೆ. ಬಿಜೆಪಿ ಬಂಡಾಯ ಅಭ್ಯರ್ಥಿ ಗೆದ್ದಿರುವ ಹೊಸಕೋಟೆ (41.43)ಯಲ್ಲಿ, ಒಮ್ಮತದ ಅಭ್ಯರ್ಥಿ ಆಗಿರುತ್ತಿದ್ದರೆ ದೊಡ್ಡ ಜಯ ಬಿಜೆಪಿಗೆ ಸಿಗುತ್ತಿತ್ತು.
ಕಾಂಗ್ರೆಸ್ ಗೆದ್ದಿರುವ ಹುಣಸೂರು (50.45), ಶಿವಾಜಿನಗರ (53) ಕ್ಷೇತ್ರಗಳಲ್ಲಿ ಆ ಪಕ್ಷಕ್ಕೆ ಬಹುತೇಕ ನಿರ್ಣಾಯಕ ಜಯವೇ ಸಿಕ್ಕಿದೆ. ಆದರೆ ಇವೆರಡೂ ಸ್ಥಳೀಯ ರಾಜಕಾರಣದ ಒಳಸುಳಿಯ ಜಯಗಳೇ.
ಒಟ್ಟಿನಲ್ಲಿ ಫಲಿತಾಂಶ ಬಿಜೆಪಿಗೆ ಒಂದು ಕಂತಿನ ಸವಾಲು ಗೆದ್ದು ಎರಡನೇ ಕಂತಿನ (ಅಂದರೆ ಗೆದ್ದವರೊಂದಿಗೆ ಅಧಿಕಾರ ಹಂಚಿಕೊಳ್ಳುವ) ಸವಾಲಿನ ಬಾಗಿಲು ತೆರೆದಿದೆ. ಇತ್ತ ಕಾಂಗ್ರೆಸ್ ಗೆ ನೀವು ಸುಧಾರಿಸದಿದ್ದರೆ ನಿಮ್ಮನ್ನು ಮೂಸುವವರಿಲ್ಲ ಎಂಬ ಸ್ಪಷ್ಟ ಸಂದೇಶ ಕೊಟ್ಟಿದೆ. ಬಣರಾಜಕಾರಣ, ಲಾಭರಾಜಕಾರಣಗಳನ್ನು ಬಿಟ್ಟು ಸಿದ್ಧಾಂತ -ಸೇವೆಯ ರಾಜಕಾರಣಕ್ಕೆ ಹಿಂದಿರುಗದಿದ್ದರೆ ಕಾಂಗ್ರೆಸ್ ಪ್ರಸ್ತುತತೆ ಉಳಿಸಿಕೊಳ್ಳುವುದು ಸದ್ಯದ ಸ್ಥಿತಿಯಲ್ಲಿ ಕಷ್ಟ ಇದೆ.
ಕುದುರೆ ವ್ಯಾಪಾರದಂತಹ ಅಪ್ರಜಾತಾಂತ್ರಿಕ ಸಂಗತಿಯೊಂದನ್ನು “ಚುನಾವಣಾ ಇಷ್ಯೂ” ಆಗಿ ಹೊಂದಿದ್ದೂ ಮತದಾರರನ್ನು ಒಲಿಸಿಕೊಳ್ಳಲಾಗದಿರುವ ಕಾಂಗ್ರೆಸ್ಸಿಗೆ ಅದು ತಲುಪಿರುವ ದುರ್ಬಲ ಸ್ಥಿತಿ ಎಷ್ಟು ಆಳವಾಗಿದೆ ಎಂದು ಈ ಚುನಾವಣೆ ಮನದಟ್ಟು ಮಾಡಿಕೊಟ್ಟಿದೆ.
ದುಡ್ಡನ್ನು ದುಡ್ಡಿನಿಂದಲೇ ಎದುರಿಸುವ ಕಾಂಗ್ರೆಸ್ ತಂತ್ರವೇ ಈವತ್ತು ಕಾಂಗ್ರೆಸ್ ಪಕ್ಷವನ್ನು ಈ ಸ್ಥಿತಿಗೆ ದೂಡಿದೆ. ಹಳೆಯ ಕಾಂಗ್ರೆಸ್ಸಿನ ತಳಮಟ್ಟದ ಸೇವೆ ರಾಜಕಾರಣ ಈವತ್ತು ದುರ್ಬೀನು ಹಾಕಿ ಹುಡುಕಿದರೂ ಸಿಗುತ್ತಿಲ್ಲ. ಹೊಸ ದುಡ್ಡಿನ ರಾಜಕಾರಣಿಗಳು ಇಂದು ಕಾಂಗ್ರೆಸ್ ಜೊತೆಗಿಲ್ಲ. ಹಾಗಾಗಿ ಇಂದು ಕಾಂಗ್ರೆಸ್, ಅವರು ದುಡ್ಡು ಚೆಲ್ಲಿ ಗೆದ್ದರು ಎಂದು ಅಲವತ್ತುಕೊಂಡರೆ ಅದಕ್ಕೆ ಕೇಳುಗರು ಉಳಿದಿಲ್ಲ.
JDS ತನ್ನ ಕ್ಷಣಿಕ ಲಾಭಗಳಿಗಾಗಿ ರಾಜ್ಯದ ಒಟ್ಟು ಹಿತಾಸಕ್ತಿಗಳನ್ನು ಕಡೆಗಣಿಸದಿದ್ದರೆ ನಿರ್ಣಾಯಕ ಶಕ್ತಿಯಾಗಿ ನಿಲ್ಲುತ್ತಿತ್ತು. ಅದು ಅವಕಾಶ ಸಿಕ್ಕಾಗಲೆಲ್ಲ ಅದನ್ನು ಕೈಚೆಲ್ಲಿ ಈವತ್ತಿನ ಸ್ಥಿತಿ ತಲುಪಿದೆ.
ಇಷ್ಟಾಗಿ ಬಿಜೆಪಿ, ತನ್ನ ಪೂರ್ಣಾವಧಿಯನ್ನು ಬೇರೇನೂ ಗದ್ದಲ ಇಲ್ಲದೆ ಯಶಸ್ವಿಯಾಗಿ ಪೂರೈಸೀತೇ ಎಂಬುದೊಂದೇ ಈಗ ಉಳಿದಿರುವ ಕುತೂಹಲ.
ಇದಿಷ್ಟು ಈವತ್ತಿನ ಚುನಾವಣಾ ಫಲಿತಾಂಶಕ್ಕೆ ನನ್ನ ಆಬ್ಸರ್ವೇಷನ್ ಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ4 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ4 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ2 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ1 day agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ1 day ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

