Connect with us

ಸಿನಿ ಸುದ್ದಿ

‘ಉರಿ – ಸರ್ಜಿಕಲ್ ಸ್ಟೈಕ್’ ಎಂಬ ಸೈನಿಕರ ಅದ್ಬುತ ಕಾರ್ಯಾಚರಣೆ..!

Published

on

ಭಾರತೀಯ ಸೇನಾ ಕಾರ್ಯಾಚರಣೆ ಸಂಬಂಧಿತ ಭಾರತೀಯ ಸಿನಿಮಾರಂಗದಲ್ಲಿ ಈವರೆಗೂ ಅನೇಕ ಚಿತ್ರಗಳು ಬಂದಿದೆ. ಹಿಂದಿ ಜತೆಗೆ ಪ್ರಾದೇಶಿಕ ಭಾಷೆಗಳಲ್ಲಿಯೂ ಸೈನಿಕರ ವೀರತೆ ಪ್ರದರ್ಶಿಸುವ ಕಥಾ ಚಿತ್ರಗಳು ವೀಕ್ಷಕರ ಗಮನ ಸೆಳೆದಿದೆ. ಕಾರ್ಗಿಲ್ ವಿಷಾಯಾಧರಿಸಿ ಹತ್ತಕ್ಕೂ ಅಧಿಕ ಸಿನಿಮಾಗಳು ತೆರೆಕಂಡಿದೆ. ಕಾರ್ಗಿಲ್ ಸಮರವನ್ನೇ ಮುಖ್ಯಕಥೆಯಾಗಿರಿಸಿಕೊಂಡ ಚಿತ್ರಗಳು ಹಣ ಗಳಿಸುವಲ್ಲಿ ಯಶಸ್ಸು ಕಂಡಿದೆ. ಈ ಮೂಲಕ ಸೈನಿಕರು, ಸೈನ್ಯದ ಕಥೆಯನ್ನು ಹೊಂದಿದ ಚಿತ್ರಗಳು ಪ್ರೇಕ್ಷಕರ ಮನಸ್ಸು ಗೆಲ್ಲುತ್ತದೆ ಎಂಬುದು ಸಾಬೀತಾಗಿದೆ.

ಆದರೆ, ಇದೀಗ ಮತ್ತೊಂದು ಇತಿಹಾಸ ಸೖಷ್ಟಿಯಾಗಿದೆ. 2016 ರ ಸರ್ಜಿಕಲ್ ಸ್ಟೈಕ್ ಆಧರಿಸಿ ಉರಿ ಎಂಬ ಹೆಸರಿನ ಚಿತ್ರ ತೆರೆಕಂಡು ದೇಶ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಸದ್ದು ಮಾಡುತ್ತಿದೆ.

ಕಾಶ್ಮೀರ ಗಡಿಯಲ್ಲಿನ ಉರಿ ಎಂಬ ಗ್ರಾಮದ ಸೇನಾ ಶಿಬಿರದ ಮೇಲೆ ಬೆಳ್ಳಂಬೆಳಗ್ಗೆ ಪಾಕ್ ಭಯೋತ್ಪಾದಕರು ನುಸುಳಿ ಭಾರತದ ಹೆಮ್ಮೆಯ 19 ಯೋಧರನ್ನು ಬಲಿ ಪಡೆದಿದ್ದರು. ಈ ಭಯೋತ್ಪಾದಕರ ಕಾರ್ಯಾಚರಣೆ ಭಾರತೀಯರನ್ನು ರೊಚ್ಚಿಗೆಬ್ಬಿಸಿತ್ತು. ಅದರಲ್ಲಿಯೂ ಸೈನ್ಯದ ಅತ್ಯಂತ ಪರಾಕ್ರಮಿ ಯೋಧರೇ ಭಯೋತ್ಪಾದಕರಿಗೆ ಸುಲಭವಾಗಿ ಬಲಿಯಾಗಿದ್ದರು. ಭಾರತದ ಸೈನ್ಯದ ಪ್ರತಿಷ್ಟೆಗೂ ಈ ಘಟನೆ ಮಸಿ ಬಳಿದಿತ್ತು. ಸೈನ್ಯದ ಮರ್ಯಾದೆಯೂ ಪ್ರಶ್ನೆಯಾಗಿತ್ತು.

ಪ್ರಧಾನಿ, ರಕ್ಷಣಾ ಸಚಿವರೂ ಸೇರಿದಂತೆ ಎಲ್ಲರೂ ಹುತಾತ್ಮರ ಬಲಿದಾನಕ್ಕೆ ಮಮ್ಮಲ ಮರುಗಿದರು. ತಮ್ಮವರನ್ನು ವಂಚಿಸಿ ಬಲಿತೆಗೆದುಕೊಂಡದ್ದು ಭಾರತೀಯ ಸೈನಿಕರ ರಕ್ತ ಕುದಿಯುವಂತೆ ಮಾಡಿತ್ತು. ಪ್ರತಿಕಾರ ತೀರಿಸಿಯೇ ಸಿದ್ದ ಎಂದು ಸೈನಿಕರು ಯೋಜನೆ ರೂಪಿಸುತ್ತಿದ್ದರು.

ಇಂಥ ಸೈನಿಕರ ಚಿಂತನೆಗೆ ಬೆಂಬಲವಾಗಿ ನಿಂತದ್ದೇ ಕೇಂದ್ರ ರಕ್ಷಣಾ ಸಚಿವಾಲಯ. ಸೇನಾ ಪಡೆಗೆ ಎಲ್ಲಾ ರೀತಿಯ ನೆರವು ನೀಡಿ ಮುನ್ನುಗ್ಗಿ, ಪಾಕ್ ನೆಲೆಗೆ ನುಗ್ಗಿ ಅಲ್ಲಿ ಅವಿತಿಟ್ಟುಕೊಂಡಿರುವ ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಎಂದು ಆದೇಶ ನೀಡಿಯೇ ಬಿಟ್ಟಿತ್ತು. ಈ ಆದೇಶವನ್ನೇ ಕಾಯುತ್ತಿದ್ದ ಭಾರತೀಯ ಸೈನಿಕರಿಗೆ ಅಷ್ಟೇ ಸಾಕಿತ್ತು. ಯಾವ ರೀತಿ ರಾತ್ರೋರಾತ್ರಿ ಪಾಕ್ ನೆಲೆಗೆ ನುಗ್ಗಿ ಭಯೋತ್ಪಾದಕರ ಹುಟ್ಟಡಗಿಸಿದ್ದಲ್ಲದೇ ತಾವೂ ಸುರಕ್ಷಿತವಾಗಿ ಮರಳಿ ಭಾರತಕ್ಕೆ ಮರಳುತ್ತಾರೆ.

ಉರಿ ಸರ್ಜಿಕಲ್ ಸ್ಟೈಕ್ ಗೆ ಕೇವಲ 11 ದಿನಗಳಲ್ಲಿ ನಮ್ಮ ಸೇನಾ ಪಡೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗುವುದೇ ಅತ್ಯಂತ ರೋಮಾಂಚಕ. ಸೈನಿಕರ ಮನೋಸ್ಥೆರ್ಯ, ಜತೆಗೆ ಗರುಡ ಎಂಬ ಅತ್ಯಾಧುನಿಕ ಹದ್ದಿನ ದ್ರೋಣ್ ಕ್ಯಾಮರ ಕಾರ್ಯಾಚರಣೆಯೂ ಕುತೂಹಲಕಾರಿ.

ಭಾರತೀಯ ಸೇನಾ ಪಡೆ ಯಾವೆಲ್ಲಾ ರೀತಿಯಲ್ಲಿ ತಯಾರಿ ನಡೆಸಿ ಭಯೋತ್ಪಾದಕರ ಹುಟ್ಟಡಗಿಸಿಸುತ್ತಾರೆ ಎಂಬ ಅದ್ಬುತ ಕಥೆಯನ್ನು ಯುವ ನಿರ್ದೇಶಕರ ಆದಿತ್ಯ ಧರ್ ತನ್ನ ಮೊದಲ ಚಿತ್ರದಲ್ಲಿ ಮನಮುಟ್ಟುವಂತೆ ನಿರ್ದೇಶಿಸಿದ್ದಾರೆ. ಕಾಶ್ಮೀರ – ಪಾಕ್ ಗಡಿಯ ನೈಜತೆಯನ್ನು ಸೈಬ್ರಿಯಾ ದೇಶದ ಕಾಡಿನಲ್ಲಿ ಚಿತ್ರಿಸಲಾಗಿದೆ. ವಿಕ್ಕಿ ಕೌಷಲ್ ಎಂಬ ನಟ ಸೇನಾಧಿಕಾರಿ ವಿಹಾನ್ ಸಿಂಗ್ ಪಾತ್ರದಲ್ಲಿ ನಟಿಸಿದ ರೀತಿಯೂ ಮೆಚ್ಚುಗೆಯಾಗುತ್ತದೆ. ಪ್ರಧಾನಿ ಮೋದಿ, ರಕ್ಷಣಾ ಸಚಿವ ಪರಿಕ್ಕರ್ ಸೇರಿದಂತೆ ಎಲ್ಲರ ಪಾತ್ರಗಳಲ್ಲಿಯೂ ನೈಜತೆಯಿದೆ. ನಿಜ ಘಟನೆಯೊಂದನ್ನು ಹೀಗೂ ಚಿತ್ರವಾಗಿಸಬಹುದು ಎಂಬುದಕ್ಕೆ ಉರಿ ಸಿನಿಮಾ ಸಾಕ್ಷಿಯಾಗುತ್ತದೆ.

ಸಾಮಾನ್ಯವಾಗಿ ಉರಿ ಸರ್ಜಿಕಲ್ ಸ್ಟೈಕ್ ನಂಥ ವಿಷಯವನ್ನು ಹೇಳುವಾಗ ಬಹಳಷ್ಟು ಸಂಗತಿಗಳಿಗೆ ಸೇನಾಡಳಿತ ಅನುಮತಿ ನೀಡುವುದಿಲ್ಲ. ಆದರೆ, ಈ ಚಿತ್ರದ ಮಟ್ಟಿಗೆ ಹಲವು ಸಂಗತಿಗಳನ್ನು ಪ್ರಸ್ತಾಪಿಸಲು ಅವಕಾಶ ನೀಡುವ ಮೂಲಕ ಬಾರತೀಯರಿಗೆ ಸೇನಾಕಾರ್ಯಾಚರಣೆಯ ವಿಷಯಗಳ ಮಾಹಿತಿ ನೀಡುವಲ್ಲಿ ಸಫಲವಾಗಿದೆ. ದೇಶಪ್ರೇಮವನ್ನು ಬಡಿದೆಬ್ಬಿಸುವ ಪ್ರಯತ್ನಕ್ಕೂ ಉರಿ ಚಿತ್ರ ನೆರವಾಗಿದೆ. ಈ ಮೂಲಕ ಸೈನ್ಯದ ಉದ್ದೇಶವೂ ಸಫಲವಾಗಿದೆ.

ಎಲ್ಲಿಯೂ ವಿಷಾಯಾಂತರಗೊಳ್ಳದೇ, ಉತ್ಪೇಕ್ಷೆಗೆಗೊಳಗಾಗದೇ ಸೀದಾಸಾದಾ ರೀತಿಯಲ್ಲಿಯೇ ಕಥೆ ಹೇಳುತ್ತಾ ಸಾಗುವ ಚಿತ್ರ ಅಂತಿಮವಾಗಿಯೂ ಬಹುಪರಾಕ್ ಎನಿಸಿಕೊಳ್ಳದೇ ದಿಡೀರ್ ಅಂತ್ಯಗೊಳ್ಳುತ್ತದೆ. ಇನ್ನೂ ಬೇಕಿತ್ತು ಎನಿಸುವಾಗಲೇ ಚಿತ್ರ ಮುಗಿಯುತ್ತದೆ. ಈ ಮೂಲಕ ಚಿತ್ರ ಮನಸ್ಸಿನಲ್ಲಿ ಹಲವು ದಿನಗಳ ಕನವರಿಕೆಗೆ ಕಾರಣವಾಗುತ್ತದೆ.

ರಾಜಕೀಯಕ್ಕಾಗಿನ ಚಿತ್ರವೇ?

ಇದು ಮೋದಿಗೆ ವೋಟ್ ತಂದುಕೊಡಲು ನೆರವಾಗುತ್ತದೆ. ಚಿತ್ರ ಹಣ ಮಾಡಲೆಂದೇ ನಿರ್ಮಿತವಾಗಿವೆ. ಇದೇನ್ ಮಹಾ ಎಂದೆಲ್ಲಾ ಕೆಲವರು ಬಾಲಿಶವಾದ ಹೇಳಿಕೆ ನೀಡುತ್ತಿದ್ದಾರೆ. ಇಂಥ ಹೇಳಿಕೆಗಳು ಬದಿಗಿರಲಿ.

ಪ್ರದಾನಿಯಾಗಿದ್ದ ವ್ಯಕ್ತಿ ಸೈನಿಕರಿಗೆ ಮುನ್ನುಗ್ಗಿ, ಸೋಲು ನನಗಿರಲಿ, ಗೆಲವು ನಿಮ್ಮದಾಗಿರಲಿ ಎಂದು ಹುರಿದುಂಬಿಸಿ ರಾತ್ರಿಯಿಡಿ ಜಾಗರಣೆ ಕುಳಿತು ಭಾರತೀಯ ಸೈನಿಕರ ಸ್ಥಿತಿ ಕಾರ್ಯಾಚರಣೆ ಸಂದರ್ಭ ಹೇಗಿದೆಯೋ ಎಂದು ತಲೆಕೆಡಿಸಿಕೊಳ್ಳುತ್ತಾರೆ ಎಂದರೆ ಅಂಥ ಪ್ರಧಾನಿ ಬಗ್ಗೆಯೂ ಗೌರವ ಬಾರದಿದ್ದರೆ ಹೇಗೆ? ಚುನಾವಣೆಯಲ್ಲಿ ಮತಗಳನ್ನು ಯಾರಿಗೆ ಹಾಕುತ್ತೇವೆಯೋ ಅದು ಅವರವರಿಗೆ ಬಿಟ್ಟದ್ದು. ಆದರೆ, ಸೈನಿಕರೇ ಭಯೋತ್ಪಾದಕರ ಹುಟ್ಟಡಗಿಸಿ ಬನ್ನಿ ಎಂದು ಧೈರ್ಯ, ಸ್ಥೆರ್ಯ, ಆಧುನಿಕ ಶಸ್ತ್ರಾಸ್ತಗಳನ್ನು ನೀಡಿದ ಆ ಪ್ರಧಾನಿಗೆ ಮೆಚ್ಚುಗೆ ಸೂಚಿಸದಿದ್ದರೆ ಹೇಗೆ?

ಇದೇ ಅನುಮತಿ ಮೊದಲೇ ಸಿಕ್ಕಿದ್ದರೇ?

ಕೆಲವು ದಶಕಗಳ ಹಿಂದೆ, ನನಗೆ 24 ಗಂಟೆಗಳ ಕಾಲಾವಕಾಶ ನೀಡಿ ಪಾಕಿಸ್ತಾನಿಗಳ ಹುಟ್ಟಡಗಿಸಿ ಬರುತ್ತೇನೆ ಎಂದಿದ್ದ ಕೊಡಗಿನ ಹೆಮ್ಮೆಯ ಜನರಲ್ ತಿಮ್ಮಯ್ಯ ಅವರಿಗೂ ಆ ಸಂದರ್ಭ ಸರ್ಜಿಕಲ್ ಸ್ಟೈಕ್ ಗೆ ಅನುಮತಿ ನೀಡಿದ್ದರೆ, ಕಾಶ್ಮೀರಕ್ಕೆ ಇಂದಿನ ದುರ್ಗತಿ ಬರುತ್ತಿರಲಿಲ್ಲವೇನೋ.

ಅದೇನೇ ಇರಲಿ.. ಉರಿ ಎಂಬ ಅಪರೂಪದ ಸಿನಿಮಾ ವೀಕ್ಷಿಸುವ ಮೂಲಕ ಸೈನಿಕ ಕಾರ್ಯಾಚರಣೆ ಹೇಗಿರುತ್ತೆ.. ಸೈನಿಕರ ಜೀವನ ಎಷ್ಟೊಂದು ಸಾಹಸಮಯ, ಯಾತನಾಮಯವಾಗಿರುತ್ತೆ ಎಂದು ತಿಳಿದುಕೊಳ್ಳುವ ಅಪೂರ್ವ ಅವಕಾಶವನ್ನು ಉರಿ ಎಂಬ ಚಿತ್ರ ನೀಡಿದೆ. ನಾನು ಸಿನಿಮಾಗಳನ್ನು ನೋಡೇದೇ ಇಲ್ಲ ಎಂಬ ಧೋರಣೆ ಬದಿಗಿಟ್ಟು ಭಾರತದ ಗಡಿಯನ್ನು ತಮ್ಮ ಪ್ರಾಣ ಒತ್ತೆಯಿಟ್ಟು ಕಾಯುತ್ತಿರುವ ಸೈನಿಕರಿಗಾಗಿಯಾದರೂ ಒಮ್ಮೆ ನೋಡಿ.

ಅಂದ ಹಾಗೆ, ಈವರೆಗೂ ನಾವು ನೀವೆಲ್ಲಾ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಬಾಹುಬಲಿ -2 ಎಂಬ ಚಿತ್ರದ ಎಲ್ಲಾ ದಾಖಲೆಗಳನ್ನು ಉರಿ ಚಿತ್ರ ಪುಡಿಗಟ್ಟಿದೆ. ಕೇವಲ 23 ದಿನಗಳಲ್ಲಿ ಉರಿ ಚಿತ್ರ 200 ಕೋಟಿ ರು ಸಂಗ್ರಹಿಸಿ 500 ಕೋಟಿ ಸಂಗ್ರಹದತ್ತ ಮುನ್ನುಗ್ಗಿ ದೇಶದ ಇತಿಹಾಸದಲ್ಲಿಯೇ ಮಹೋನ್ನತ ದಾಖಲೆಗೆ ದಾಪುಗಾಲಿಡುತ್ತಿದೆ.

ಉರಿ ಎಂಬ ಚಿತ್ರವನ್ನು ನೋಡುತ್ತಿದ್ದಾಗ ಕೇಳಿಬರುತ್ತಿದ್ದ ಸೈನಿಕರ ಪರ ಘೋಷಣೆಗಳು, ವಂದೇ ಮಾತರಂ ಎಂಬ ಉದ್ಗೋಷ. ಚಪ್ಪಾಳೆಯ ಮಾರ್ಧನಿ. ಭಾರತದ ಸೇನಾ ಪಡೆಯ ಬಗ್ಗೆ ಭಾರತೀಯರಿಗೆ ಇರುವ ಹೆಮ್ಮೆಯ ದ್ಯೋತಕ ಎನ್ನಿಸಿತು. ಸೈನಿಕರ ವೀರಸಾಹಸವನ್ನು ಚಿತ್ರ ರೂಪದಲ್ಲಿ ವೀಕ್ಷಿಸಿದರರ ಸಂತೋಷದ ಕಂಬನಿ ನಮ್ಮ ಸೈನಿಕರಿಗೆ ತುಡಿಯುವ ಮನಸ್ಸುಗಳು ಇನ್ನೂ ಜೀವಂತವಿದೆ ಎಂಬ ಭಾವನೆಗೆ ಕಾರಣವಾಯಿತು. ಅವರವರ ಅಭಿಮಾನಿ ನಾಯಕರಿಗೆ ಪ್ರೇಕ್ಷಕರು ಥಿಯೇಟರ್ ಸೂರು ಹಾರಿಹೋಗುವಂತೆ ಚಪ್ಪಾಳೆ ತಟ್ಟಿ , ಶಿಳ್ಳೆ ಹೊಡೆದು ಸಂಭ್ರಮಿಸಿದ್ದನ್ನು ನೋಡಿದ್ದೇನೆ.

ಆದರೆ, ಚಿತ್ರವೊಂದನ್ನು ವೀಕ್ಷಿಸುತ್ತಲೇ ಕಣ್ಣೀರುಗರೆಯುತ್ತಾ, ಆ ವೀರ ಸೈನಿಕರಿಗೆ ಭಾಷ್ಪಾಂಜಲಿ ಹಾಕುತ್ತಿದ್ದ ಬಹಳ ಅಪರೂಪದ ಸನ್ನಿವೇಶವನ್ನೂ ನಾನು ನೋಡಿದೆ. ಅದೇ ಉರಿ ಎಂಬ ಸರ್ಜಿಕಲ್ ಸ್ಟ್ಕೈಕ್ ನ ಸಾರ್ಥಕತೆ.

(ಗಮನಿಸಿ – ಮಡಿಕೇರಿಯ ಕಾವೇರಿ ಚಿತ್ರಮಂದಿರ ಶ್ರ10, 2, 6 ಮತ್ತು 9 ಗಂಟೆ ಪ್ರದಶ೯ನ ಹಾಗೂ ಕುಶಾಲನಗರದ ಕೂರ್ಗ್ ಸಿನಿಫ್ಲೆಕ್ಸ್ ( 11, 2,5 ಮತ್ತು 8 ಗಂಟೆ ಪ್ರದಶ೯ನ) ಗಳಲ್ಲಿ ಗುರುವಾರದವರೆಗೆ ಉರಿ ಚಿತ್ರ ವೀಕ್ಷಿಸಬಹುದು.)

ಸೈನಿಕರಾಗಲಿಲ್ಲ, ಪರವಾಗಿಲ್ಲ. ಸೈನಿಕರ ಧೀರ ಕಾರ್ಯಾಚರಣೆಯನ್ನು 2.10 ಗಂಟೆ ಸಿನಿಮಾದಲ್ಲಿ ವೀಕ್ಷಿಸಿ ಅಭಿನಂದಿಸುವ ಅವಕಾಶ ಮಿಸ್ ಮಾಡಿಕೊಳ್ಳಬೇಡಿ.

– ಅನಿಲ್ ಎಚ್.ಟಿ
ಪತ್ರಕರ್ತ
ಮಡಿಕೇರಿ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ12 hours ago

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗಾಗಿ ಜನರಲ್ ಕೆ.ಎಸ್.ತಿಮ್ಮಯ್ಯ ನಗದು...

ಅಂಕಣ3 days ago

ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)

~ ರುದ್ರಪ್ಪ ಹನಗವಾಡಿ ಭದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್‌ಎಸ್ ಹಲವು ಗುಂಪುಗಳಾಗಿ...

ದಿನದ ಸುದ್ದಿ4 days ago

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ...

ದಿನದ ಸುದ್ದಿ4 days ago

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು,...

ದಿನದ ಸುದ್ದಿ5 days ago

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ...

ದಿನದ ಸುದ್ದಿ5 days ago

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ...

ದಿನದ ಸುದ್ದಿ5 days ago

ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ...

ದಿನದ ಸುದ್ದಿ5 days ago

ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯ ಅರ್ಜಿಯನ್ನು...

ದಿನದ ಸುದ್ದಿ5 days ago

ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ವಾಕ್-ಇನ್-ಇಂಟರ್‍ವೀವ್ ಆಯೋಜಿಸಲಾಗಿದೆ. ವಾಕ್-ಇನ್-ಇಂಟರ್‍ವೀವ್...

ದಿನದ ಸುದ್ದಿ6 days ago

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ...

Trending