ಲೈಫ್ ಸ್ಟೈಲ್
‘ಸೀಬೆಹಣ್ಣಿ’ನ ಮಹತ್ವ..!

ಸೀಬೆಹಣ್ಣು(ಪೇರಳೆ) ಬಾಯಿಗೆ ಮಾತ್ರ ರುಚಿ ಅಲ್ಲ ಅದರಿಂದ ಆರೋಗ್ಯ ಕೂಡ ವೃದ್ಧಿಸಲು ಸಾಧ್ಯ. ಈ ಸೀಬೆಹಣ್ಣು ಎಲ್ಲಾ ಕಾಲದಲ್ಲೂ ದೊರೆಯುತ್ತದೆ. ಸೀಬೆ ಮಾತ್ರವಲ್ಲ ಅದರ ಬೇರೆ ಭಾಗಗಳು ಕೂಡ ತುಂಬಾ ಉಪಯೋಗವಿದೆ. ಈಗ ಅದರ ಭಾಗ ಹಾಗೂ ಹಣ್ಣಿನಿಂದ ಆಗುವ ಉಪಯೋಗವನ್ನು ಮುಂದೆ ತಿಳಿಯೋಣ.
- ಸೀಬೆಯ ಎಲೆಗಳನ್ನು ನುಣ್ಣಗೆ ಅರೆದು ಮುಖಕ್ಕೆ ಲೇಪಿಸಿಕೊಂಡರೆ ಒಂದು ವಾರದೊಳಗೆ ಮೊಡವೆಗಳ ನಿವಾರಣೆಯಾಗುವುದು.
- ಸೀಬೆಯ ಕಾಯಿಗಳನ್ನು ಹಲ್ಲುಗಳಿಂದ ಕಚ್ಚಿ ಚಪ್ಪರಿಸಿ ತಿಂದರೆ ದಂತಕ್ಷಯದ ಭಾದೆ ಇರುವುದಿಲ್ಲ.
- ಸೀಬೆಯ ಎಲೆಗಳನ್ನು ನುಣ್ಣಗೆ ಅರೆದು ಅದರಲ್ಲಿ ಮೈಕೈ ತಿಕ್ಕಿಕೊಂಡು ಬಿಸಿನೀರಿನಲ್ಲಿ ಸ್ನಾನ ಮಾಡುತ್ತಾ ಬಂದರೆ ಬೆವರಿನ ದುರ್ನಾತ ಮಾಯವಾಗುವುದು.
- ಬೀಜ ತೆಗೆದ ಸೀಬೆಹಣ್ಣಿನ ತಿರುಳಿಗೆ ಜೇನುತುಪ್ಪವನ್ನು ಬೆರೆಸಿ ಗರ್ಭಿಣಿಯರು ಸೇವಿಸಿದರೆ ಹೃದ್ರೋಗ, ಅರಿಶಿನ ಕಾಮಾಲೆ, ಉಬ್ಬಸ ಮತ್ತು ಕ್ಷಯದಂತಹ ಖಾಯಿಲೆಗಳಿಗೆ ನಿರೋಧಕವಾಗಿರುವುದು.
- ಶ್ರೀಗಂಧದೊಂದಗೆ ಸೀಬೆ ಎಲೆಗಳನ್ನು ತೇದು ಹಚ್ಚಿದರೆ ಕಜ್ಜಿ, ತುರಿ, ಹುಳಕಡ್ಡಿಗಳು ಮಾಯವಾಗಿ ಹೋಗುವುದು. ಇದೇ ಲೇಪನವನ್ನು ತಲೆಗೆ ಹಚ್ಚಿಕೊಂಡು ಒಂದೆರಡು ಗಂಟೆಗಳ ನಂತರ ಸ್ನಾನ ಮಾಡಿದರೆ ಹೇನುಗಳು ಸಾಯುವುವು.
- ಚಿಗುರು ಸೀಬೆ ಎಲೆಗಳ ಕಷಾಯವನ್ನು ತಯಾರಿಸಿ ಅದಕ್ಕೆ ಸ್ವಲ್ಪ ಉಪ್ಪು ಸೇರಿಸಿ ದಿನಕ್ಕೆ ಮೂರು ಬಾರಿ ಬಾಯಿ ಮುಕ್ಕಳಿಸಿ ಉಗುಳುವುದರಿಂದ ಬಾಯಿಯ ದುರ್ನಾತ ಮಾಯವಾಗುವುದು. ಬಾಯಿಹುಣ್ಣು ನಿವಾರಣೆಯಾಗುವುದು. ಜೊತೆಗೆ ವಸಡಿನಿಂದ ರಕ್ತಸ್ರಾವವಾಗುತ್ತಿದ್ದರೆ ಅದು ಸಹ ನಿಂತು ಹೋಗುವುದು.
- ಚಿಗುರು ಸೀಬೆಯ ಎಲೆಗಳನ್ನು ನುಣ್ಣಗೆ ಅರೆದು ಕಷಾಯ ತಯಾರಿಸಿ ಅದಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ದಿನಕ್ಕೆ ಮೂರು ಬಾರಿ ಬಾಯಿ ಮುಕ್ಕುಳಿಸುವುದರಿಂದ ವಸಡಿನ ರಕ್ತಸ್ರಾವ ಸ್ಥಗಿತಗೊಳ್ಳವುದು ಹಾಗೂ ಬಾಯಿ ಹುಣ್ಣು ನಿವಾರಣೆಯಾಗುವುದು.
- ಮೈನವೆ ಮತ್ತು ಪಿತ್ತದ ಗಂಧೆಗಳನ್ನು ಹೋಗಲಾಡಿಸಲು ಸೀಬೆಯ ಮತ್ತು ದೊಡ್ಡ ಪತ್ರೆಯ ಸೊಪ್ಪನ್ನು ಮೊಸರಿನಲ್ಲಿ ನುಣ್ಣಗೆ ಅರೆದು ಮೈಗೆ ಹಚ್ಚಿಕೊಂಡು ಚನ್ನಾಗಿ ತಿಕ್ಕಿದ ನಂತರ ಬಿಸಿ ಬಿಸಿ ನೀರಿನ ಸಾನ್ನ ಮಾಡಿ.
- ಬೀಜ ಬಲಿಯದ ಸೀಬೆಕಾಯಿಗಳ ಕಷಾಯ ಸಿದ್ಧಪಡಿಸಿ ಮಜ್ಜಿಗೆಯೊಂದಿಗೆ ಕುಡಿದರೆ ಆಮಶಂಕೆ ಮತ್ತು ಎದೆನೋವು ನಿವಾರಣೆಯಾಗುವುದು.
- ಅತಿಯಾದ ಹೊಟ್ಟೆ ನೋವು ಉಂಟಾಗಿದ್ದರೆ ಸೀಬೆಯ ಹಣ್ಣನ್ನು ಉಪ್ಪು ಮತ್ತು ಕುಟ್ಟಿದ ಕಾಳು ಮೆಣಸಿನ ಪುಡಿಯೊಂದಿಗೆ ತಿಂದರೆ ನೋವು ಮಾಯವಾಗಿ ಹೊಟ್ಟೆ ಹಗುರವಾಗುತ್ತದೆ.
- ಸೀಬೆಯ ತಿರುಳನ್ನು ಬೀಜ ತೆಗೆದು ಹಾಲು ಮತ್ತು ಜೇನಿನೊಂದಿಗೆ ಬೆರೆಸಿ ಟಾನಿಕ್ ತಯಾರಿಸಿಕೊಂಡು ಸೇವಿಸಿದರೆ ಅಕಾಲ ಮುಪ್ಪು, ಹೊಟ್ಟೆ ಹುಣ್ಣು, ಮುಟ್ಟಿನ ಸಂಬಂಧ ಶೂಲೆ, ಅರಿಶಿನ ಕಾಮಾಲೆಯವರು ವೈದ್ಯಕೀಯ ಚಿಕಿತ್ಸೆ ಪಡೆಯುವಾಗ ಹೆಚ್ಚು ಶಕ್ತಿಯ ಉತ್ಪನ್ನವಾಗುತ್ತದೆ.
- ಸಾಮಾನ್ಯವಾಗಿ ಶೀತ ಉಂಟಾದರೆ ಸೀಬೆಕಾಯಿ ತಿನ್ನಬಾರದು ಅನ್ನುವುದನ್ನು ನೀವು ಕೇಳಿರಬಹುದು. ಆದರೆ ಶೀತ ಉಂಟಾದರೆ ಸೀಬೆಕಾಯಿ ತಿನ್ನುವುದು ಒಳ್ಳೆಯದು. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹಾಗೂ ಕಬ್ಬಿಣದಂಶವಿದ್ದು ಶೀತವನ್ನು ಕಡಿಮೆ ಮಾಡುತ್ತದೆ.
- ಇದರಲ್ಲಿ ಮ್ಯಾಗ್ನಿಷಿಯಂ ಇರುವುದರಿಂದ ಸ್ನಾಯುಗಳಲ್ಲಿರುವ ಒತ್ತಡವನ್ನು ಕಡಿಮೆ ಮಾಡಿ ಅದಕ್ಕೆ ವಿಶ್ರಾಂತಿಯನ್ನು ನೀಡುತ್ತದೆ. ಇದರಿಂದ ಮೈಕೈ ಸೆಳೆತ ಕಡಿಮೆಯಾಗುವುದು.
- ಬಿ ಗುಂಪಿನ ವಿಟಮಿನ್ಗಳು ಮೆದುಳಿಗೆ ಅವಶ್ಯಕ. ಸೀಬೆಕಾಯಿಯಲ್ಲಿ ಬಿ3 ಹಾಗೂ ಬಿ6 ವಿಟಮಿನ್ ಇದ್ದು ಮೆದುಳಿನ ನರಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.
- ಸೀಬೆಕಾಯಿಯಲ್ಲಿ ವಿಟಮಿನ್ ಇ ಇದೆ. ತ್ವಚೆ ರಕ್ಷಣೆಯಲ್ಲಿ ವಿಟಮಿನ್ ಇ ಪ್ರಮುಖ ಪಾತ್ರವನ್ನು ವಹಿಸುತ್ತದೆ.
- ಇದರಲ್ಲಿ ಫಾಲಿಕ್ ಆಸಿಡ್ ಹಾಗೂ ಇತರ ಖನಿಜಾಂಶಗಳು ಇರುವುದರಿಂದ ಗರ್ಭಿಣಿಯರಿಗೆ ಸೂಕ್ತವಾದ ಆಹಾರವಾಗಿದೆ.
- ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳಾದ ಮರೆವು, ಮಂದ ದೃಷ್ಟಿ ಮತ್ತು ಸಂಧಿವಾತವನ್ನೂ ನಿವಾರಿಸುವಲ್ಲಿ ಸೀಬೆ ಹಣ್ಣು ಸಹಕಾರಿ.
- ತೂಕ ಕಡಿಮೆಮಾಡಿಕೊಳ್ಳಬೇಕೆಂದಿದ್ದರೆ ಸೀಬೆ ಒಳ್ಳೆ ಆಯ್ಕೆ. ಸೀಬೆಯಲ್ಲಿ ಅವಶ್ಯಕ ಕಾರ್ಬೊ ಹೈಡ್ರೇಡ್ ಮತ್ತು ಫೈಬರ್ ಇರುವುದರಿಂದ ಬೊಜ್ಜನ್ನೂ ನಿಯಂತ್ರಿಸುತ್ತದೆ.
- ವೀರ್ಯೋತ್ಪತ್ತಿ ಕಡಿಮೆಯಿದ್ದ ಪುರುಷರು ಸೀಬೆಹಣ್ಣನ್ನು ಸೇವಿಸುವುದರಿಂದ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎನ್ನಲಾಗಿದೆ.
- ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಮಲಬದ್ಧತೆ ಸಮಸ್ಯೆ ಇರುವವರು ಹಣ್ಣಾದ ಸೀಬೆಕಾಯಿಯನ್ನು ಪ್ರತೀದಿನ ತಿನ್ನಿ, ಉತ್ತಮ ಫಲಿತಾಂಶ ಕಾಣುವಿರಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ1 day ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ3 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ2 days ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ3 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್
-
ದಿನದ ಸುದ್ದಿ2 days ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ