ದಿನದ ಸುದ್ದಿ
ಮುಂದಿನ ವರ್ಷ ರಾಜ್ಯದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರದ ಚಿಂತನೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ, ಬೀದರ್ : ಮುಂದಿನ ವರ್ಷ ರಾಜ್ಯದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಹಿನ್ನೆಲೆಯಲ್ಲಿ ಅವರಿಗೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಗುರುವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಮಸ್ತ ಕನ್ನಡಿಗರು ಹಾಗೂ ಭಾರತೀಯರ ಅಭಿಮಾನದ ಸಂಖೇತವಾಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಲಾಗಿದೆ. ಜಾತಿ, ವರ್ಗ, ಅಸಮಾನತೆ ಇಲ್ಲದ ಮನುಷ್ಯತ್ವದ ಸಮಾಜ ನಿರ್ಮಾಣ ಬಸವಣ್ಣನವರ ಗುರಿಯಾಗಿತ್ತು. ಅವರ ವಿಚಾರಗಳು ಇಂದಿಗೂ ಮತ್ತು ಮುಂದಿನ ದಿನಗಳಿಗೂ ಪ್ರಸ್ತುತವಾಗಲಿವೆ ಎಂದರು.
ಬಸವಾದಿಶರಣರು ನುಡಿದಂತೆ ನಡೆದಿದ್ದಾರೆ ಅವರೇ, ನಮ್ಮ ಸರ್ಕಾರಕ್ಕೆ ಮಾದರಿಯಾಗಿದ್ದು, ವಿಧಾನಸಭಾ ಚುನಾವಣಾ ವೇಳೆಯಲ್ಲಿ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವಾರು ಸಚಿವರು, ಶಾಸಕರು, ಮಠಾಧೀಶರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ3 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

