Connect with us

ದಿನದ ಸುದ್ದಿ

ರಾಜನಹಳ್ಳಿಯಲ್ಲಿ ಫೆಬ್ರವರಿ 8 ಮತ್ತು 9ರಂದು ವಾಲ್ಮೀಕಿ ಜಾತ್ರೆ, ಎಲ್ಲಾ ಸಿದ್ದತೆಯನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರುವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ ನಡೆಯಲಿರುವುದರಿಂದ ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಬಂದು ಹೋಗುತ್ತಾರೆ. ಆಗಮಿಸುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು ಮಂಗಳವಾರ ಶ್ರೀಮಠದಲ್ಲಿ ನಡೆದ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚು ಜನರು ಬರುವುದರಿಂದ ಜನರ ಆರೋಗ್ಯ ಮತ್ತು ನೈರ್ಮಲ್ಯತೆಯನ್ನು ಕಾಪಾಡುವುದು ಬಹಳ ಮುಖ್ಯವಾಗಿದೆ. ಆರೋಗ್ಯ ಇಲಾಖೆಯಿಂದ ಇಲ್ಲಿಗೆ ಮೊಬೈಲ್ ತಂಡವನ್ನು ನಿಯೋಜಿಸಲು ಮತ್ತು ಅಂಬುಲೆನ್ಸ್‍ನ್ನು ಇಲ್ಲಿಯೇ ಕಾಯ್ದಿರಿಸಲು ಸೂಚನೆ ನೀಡಿ ಅಗತ್ಯ ಔಷಧ ದಾಸ್ತಾನಿಡಲು ಸೂಚನೆ ನೀಡಿದರು.

ಕುಡಿಯುವ ನೀರು: ಹೆಚ್ಚು ಜನರು ಆಗಮಿಸುವುದರಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಹಾಗೂ ತಿಳಿಸಿ ನೈರ್ಮಲ್ಯತೆ ಕಾಪಾಡಲು ಮೊಬೈಲ್ ಶೌಚಾಲಯದ ಜೊತೆಗೆ ಇಲ್ಲಿಗೆ ಬೇಕಾದ ನೀರು ಪೂರೈಕೆ ಮಾಡಿಕೊಡಲು ಇಂಜಿನಿಯರಿಂಗ್ ವಿಭಾಗದವರಿಗೆ ತಿಳಿಸಿದರು.

ನಿರಂತರ ವಿದ್ಯುತ್ ಪೂರೈಕೆ: ಜಾತ್ರಾ ಸಂದರ್ಭದಲ್ಲಿ ಅನಿಯಮಿತ ವಿದ್ಯುತ್ ಪೂರೈಕೆಗಾಗಿ ಹೆಚ್ಚುವರಿಯಾಗಿ ಮೊಬೈಲ್ ಟಿಸಿಗಳ ದಾಸ್ತಾನಿಟ್ಟುಕೊಳ್ಳಬೇಕು. ವಿದ್ಯುತ್ ಪೂರೈಕೆಗೆ ಅಡಚಣೆಯಾಗಿರುವ ಗಿಡ, ಮರಗಳ ಕೊಂಬೆಗಳನ್ನು ಈಗಲೇ ತಂತಿ ಮೇಲೆ ಬೀಳದಂತೆ ನೋಡಿಕೊಳ್ಳಲು ನಿರಂತರ ವಿದ್ಯುತ್ ಪೂರೈಕೆಗಾಗಿ ಎಷ್ಟು ಕೆವಿ ವಿದ್ಯುತ್ ಪೂರೈಕೆಯ ಅವಶ್ಯಕತೆ ಇದೆ ಎಂದು ಅಂದಾಜಿಸಿಕೊಳ್ಳಲು ಮತ್ತು ಯಾವುದೇ ಅವಘಡಗಳು ಸಂಭವಿಸದಂತೆ ಎಲೆಕ್ಟ್ರಿಕಲ್ ಇನ್ಸ್‍ಪೆಕ್ಟರ್‍ಗಳಿಂದ ಜಾತ್ರಾ ಪೂರ್ವದಲ್ಲಿ ಪರೀಕ್ಷೆ ನಡೆಸಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಹಗಳ ನಿಲುಗಡೆ: ಜಾತ್ರೆಯ ವೇಳೆ ಬರುವ ವಾಹನಗಳನ್ನು ಎರಡು ಕಿ.ಮೀ ದೂರದಲ್ಲಿಯೇ ನಿಲುಗಡೆ ಮಾಡಲು ಸೂಚನೆ ನೀಡಲಾಗುತ್ತಿತ್ತು. ಮಠದ ಆವರಣಕ್ಕೆ ಬರಲು ಸಾಕಷ್ಟು ದೂರವಾಗುವುದರಿಂದ ಹತ್ತಿರದವರೆಗೆ ವಾಹನಗಳು ಬಂದು, ನಂತರ ಮುಂದೆ ಹೋಗಿ ನಿಲುಗಡೆ ಮಾಡಲು ಪರಿಶೀಲನೆ ನಡೆಸಲಾಗುತ್ತದೆ ಎಂದರು.

ಶಾಸಕರು ಹಾಗೂ ಜಾತ್ರಾ ಸಮಿತಿಯ ಅಧ್ಯಕ್ಷರಾದ ಬಿ.ದೇವೇಂದ್ರಪ್ಪ ಚಿಕ್ಕಮ್ಮನಹಟ್ಟಿ ರವರು ಮಾತನಾಡಿ ವಾಲ್ಮೀಕಿ ಜಾತ್ರೆಯ ಸಂಪೂರ್ಣ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿಕೊಡಲಿದೆ. ಜಾತ್ರೆ ಎಂಬುದು ಧಾರ್ಮಿಕ ಪ್ರಕ್ರಿಯೆಯಾಗಿದ್ದರೂ ಸಮುದಾಯದ ಜನರನ್ನು ಒಂದೆಡೆ ಸೇರಿಸಿ ಸಮಾಲೋಚನೆ, ಜಾಗೃತಿ ಮೂಡಿಸುವ, ಸಂಘಟನೆ ಮಾಡುವ ಉದ್ದೇಶವಿದೆ. ಭಕ್ತಾಧಿಗಳಿಗೆ ಎಲ್ಲಾ ರೀತಿ ಮೂಲಭೂತ ಸೌಕರ್ಯ ಕಲ್ಪಿಸಲು ಹಾಗೂ ಜಾತ್ರೆ ಸುಗಮವಾಗಿ ನಡೆಯಲು ಎಲ್ಲರ ಸಹಕಾರ ಪ್ರಮುಖವಾಗಿದೆ ಎಂದರು.

ನಾಡಿನಾದ್ಯಂತ ಇರುವ ಸಮುದಾಯದ ಜನರ ಸಂಘಟನೆಯೇ ಮಹರ್ಷಿ ವಾಲ್ಮೀಕಿ ಜಾತ್ರೆಯ ಮೂಲ ಉದ್ದೇಶ ಎಂದು ಸಾನಿಧ್ಯ ವಹಿಸಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ; ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಧರ್ಮದರ್ಶಿ ಶಾಂತಲಾ ರಾಜಣ್ಣ, ಮುಖಂಡರಾದ ಹೊದಿಗೆರೆ ರಮೇಶ್, ಸಂಚಾಲಕರಾದ ಶ್ರೀನಿವಾಸ ದಾಸಕರಿಯಪ್ಪ ಹಾಗೂ ಇನ್ನಿತರೆ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

Published

on

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ ಚಿಕಿತ್ಸೆಗಳು ನೋವು ಕಡಿಮೆ ಮಾಡುವುದರ ಜೊತೆಗೆ, ರೋಗಿಗಳು ಮತ್ತೆ ಸ್ವತಂತ್ರವಾಗಿ ನಡೆಯಲು, ದಿನನಿತ್ಯದ ಚಟುವಟಿಕೆಗಳಿಗೆ ಮರಳಲು ಮತ್ತು ಆತ್ಮವಿಶ್ವಾಸದಿಂದ ಬದುಕಲು ನೆರವಾಗುತ್ತಿವೆ ಎಂದು ಮಣಿಪಾಲ್ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಲೋಕೇಶ್ ಎ. ವೀರಪ್ಪ ತಿಳಿಸಿದರು.

ಬುಧವಾರ ಸುದ್ದಿಗೋಷ್ಟಿ ಉದ್ದೇಶಿಸಿ‌ ಮಾತನಾಡಿದ ಅವರು
‘ಆರೋಗ್ಯಕರ ವಯೋವೃದ್ಧತೆ: ಅಸ್ತಿ ಸಮಸ್ಯೆಗಳ ನಿರ್ವಹಣೆ ಮತ್ತು ಪರಿಣಾಮಕಾರಿ ಚಿಕಿತ್ಸಾ ವಿಧಾನಗಳು ಕುರಿತು ಮೂಳೆ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು.

ಇಂದಿನ ದಿನಗಳಲ್ಲಿ ಮೊಣಕಾಲು, ಸೊಂಟ ಮತ್ತು ಭುಜ ಸಂಧಿ ಸಮಸ್ಯೆಗಳು, ವಿಶೇಷವಾಗಿ ವಯೋವೃದ್ಧರಲ್ಲಿ ಹೆಚ್ಚುತ್ತಿವೆ. ‘ಇಂದು ಜನರು ಕೇವಲ ನೋವು ನಿವಾರಣೆಯನ್ನು ಮಾತ್ರ ಬಯಸುವುದಿಲ್ಲ. ಅವರು ಸುಲಭವಾಗಿ ನಡೆಯಲು, ಮೆಟ್ಟಿಲೇರಲು, ಮತ್ತೆ ಕೆಲಸಕ್ಕೆ ಹೋಗಲು, ಪ್ರವಾಸ ಮಾಡಲು ಮತ್ತು ಚುರುಕಿನ ಜೀವನವನ್ನು ಮುಂದುವರಿಸಲು ಬಯಸುತ್ತಾರೆ,” ಎಂದು ಹೇಳಿದರು.

“ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರಚಿಕಿತ್ಸೆ ಅಸ್ತಿ ಚಿಕಿತ್ಸೆಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರೋಗಿಯ ದೇಹರಚನೆಗೆ ಅನುಗುಣವಾಗಿ ಶಸ್ತ್ರಚಿಕಿತ್ಸೆಯನ್ನು ಹೆಚ್ಚು ನಿಖರವಾಗಿ ಯೋಜಿಸಲು ಈ ತಂತ್ರಜ್ಞಾನ ಸಹಕಾರಿಯಾಗಿದೆ. ಇದರಿಂದ ಇಂಪ್ಲಾಂಟ್‌ಗಳ ಸರಿಯಾದ ಅಳವಡಿಕೆ, ಉತ್ತಮ ಜಾಯಿಂಟ್ ಅಲೈನ್‌ಮೆಂಟ್ ಮತ್ತು ಸಹಜ ಚಲನೆಯ ಸಾಧ್ಯತೆ ಹೆಚ್ಚುತ್ತದೆ. ರೋಗಿಗಳಿಗೆ ಕಡಿಮೆ ರಕ್ತಸ್ರಾವ, ಕಡಿಮೆ ಶಸ್ತ್ರಚಿಕಿತ್ಸೆತರ ನೋವು, ವೇಗವಾದ ಚೇತರಿಕೆ ಹಾಗೂ ಬೇಗನೆ ಸಾಮಾನ್ಯ ಜೀವನಕ್ಕೆ ಮರಳುವ ಅವಕಾಶ ದೊರೆಯುತ್ತದೆ. ಮೊಣಕಾಲು ಮತ್ತು ಸೊಂಟದ ಸಂಪೂರ್ಣ ಅಥವಾ ಭಾಗಶಃ ಜಾಯಿಂಟ್ ಬದಲಾವಣೆ (TKR/PKR) ಶಸ್ತ್ರ ಚಿಕಿತ್ಸೆಗಳಲ್ಲಿ ಈ ತಂತ್ರಜ್ಞಾನ ಉತ್ತಮ ಫಲಿತಾಂಶ ನೀಡುತ್ತಿದೆ,” ಎಂದರು.

“ಇದರ ಜೊತೆಗೆ ಭುಜದ ಆರ್ಥೋಸ್ಕೋಪಿ ಅಥವಾ ‘ಕೀಹೋಲ್ ಸರ್ಜರಿ’ಯಂತಹ ಅತ್ಯಾಧುನಿಕ ಚಿಕಿತ್ಸೆಗಳಲ್ಲಿಯೂ ಉತ್ತಮ ಫಲಿತಾಂಶಗಳನ್ನು ಕಾಣುತ್ತಿದ್ದೇವೆ. ಭುಜದ ಡಿಪ್ಲೊಕೇಶನ್ (ಭುಜದ ಕೀಲಿನ ಸರಿತ) ರೋಟೇಟರ್ ಕಫ್ (ಹರಿದ ಭುಜದ ಮಾಂಸ ಖಂಡ) ಗಾಯಗಳು, ಫೋಜನ್ ಶೋಲ್ಡರ್ (ಭುಜದ ಬಿಗಿತ) ಮೊದಲಾದ ಸಮಸ್ಯೆಗಳು ಬಹಳ ಸಾಮಾನ್ಯವಾಗಿದ್ದು, ಸಮಯಕ್ಕೆ ಚಿಕಿತ್ಸೆ ಪಡೆಯದೇ ಇದ್ದರೆ ದೈನಂದಿನ ಚಟುವಟಿಕೆಗಳ ಮೇಲೆಯೇ ಪರಿಣಾಮ ಬೀರುತ್ತವೆ. ಈಗ ಮಿನಿಮಲ್ಲಿ ಇನ್ನೇಸಿವ್ ಸರ್ಜರಿಸ್ ಅಂದರೆ ಅತಿ ಸಣ್ಣ ಕಟ್ ಮೂಲಕ ಮಾಡುವ ಈ ಶಸ್ತ್ರಚಿಕಿತ್ಸೆಗಳು ರೋಗಿಗಳಿಗೆ ಕಡಿಮೆ ನೋವು ಹಾಗೂ ವೇಗವಾದ ಚೇತರಿಕೆಯನ್ನು ನೀಡುತ್ತಿವೆ, ಎಂದು ತಿಳಿಸಿದರು.

ಇದೇ ವೇಳೆ, ಸಂಕೀರ್ಣ ಪೆಲ್ವಿಕ್ ಟ್ರಾಮಾ ಶಸ್ತ್ರಚಿಕಿತ್ಸೆಗಳು, ‘ಕಪ್ ಅಂಡ್ ಬಾಲ್’ ಜಾಯಿಂಟ್ ಸಂಬಂಧಿತ ಪ್ರೊಸೀಜರ್‌ಗಳು, ಹಾಗು ಮೊಣಕಾಲು, ಅಂಕಲ್ ಮತ್ತು ಮೊಣಕೈಗೆ ಸಂಬಂಧಿಸಿದ ಮಿನಿಮಲಿ ಇನ್ನೇಸಿವ್ ಕೀಹೋಲ್ ಶಸ್ತ್ರಚಿಕಿತ್ಸೆಗಳ ಕುರಿತು ಕೂಡ ಅವರು ಮಾಹಿತಿ ಹಂಚಿಕೊಂಡರು.

ಇವುಗಳ ಪ್ರಮುಖ ಉದ್ದೇಶ ರೋಗಿಗಳ ಚಲನವಲನವನ್ನು ಪುನಃಸ್ಥಾಪಿಸಿ, ಅವರನ್ನು ಆತ್ಮವಿಶ್ವಾಸದಿಂದ ದಿನನಿತ್ಯದ ಬದುಕಿಗೆ ಮರಳಿಸುವುದಾಗಿದೆ ಎಂದು ಹೇಳಿದರು.

ಸಂವಾದದ ವೇಳೆ ವೈದ್ಯರು, ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಅನೇಕ ರೋಗಿಗಳು ಸಂಕೀರ್ಣ ಅಸ್ಥಿ ಚಿಕಿತ್ಸೆಗಳು ಹಾಗೂ ಅತ್ಯಾಧುನಿಕ ಜಾಯಿಂಟ್ ಕೇರ್‌ಗಾಗಿ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ನಿರಂತರವಾಗಿ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.

ಈ ದೀರ್ಘಕಾಲದ ವಿಶ್ವಾಸವನ್ನು ಗುರುತಿಸಿಕೊಂಡಿರುವ ಆಸ್ಪತ್ರೆ, ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ವಿಶೇಷ ಅಸ್ಥಿ ತಜ್ಞರ ಸೇವೆಗಳು ಮತ್ತು ಪುನಶ್ವೇತನ ಚಿಕಿತ್ಸೆಯನ್ನು ಮಧ್ಯ ಕರ್ನಾಟಕದ ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪುನರುಚ್ಛರಿಸಿತು. “ನಮ್ಮ ಉದ್ದೇಶ ಕೇವಲ ಶಸ್ತ್ರಚಿಕಿತ್ಸೆ ನಡೆಸುವುದಲ್ಲ; ಜನರು ಮತ್ತೆ ಸ್ವತಂತ್ರವಾಗಿ ನಡೆಯಲು, ತಮ್ಮ ಜೀವನಶೈಲಿಗೆ ಮರಳಲು ಮತ್ತು ಸುಖಕರ ವಯೋವೃದ್ಧತೆಯನ್ನು ಅನುಭವಿಸಲು ಸಹಾಯ ಮಾಡುವುದಾಗಿದೆ,” ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ “ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026″ ಎಂಬ ವಿಶಿಷ್ಟ ಮತ್ತು ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಕೊಟ್ರೇಶ್ ಅವರು ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಮತ್ತು ಕಾನೂನುಬದ್ದ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಕಡ್ಡಾಯ ಭೂ-ಪರಿವರ್ತನೆ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, RTE ಸಂಬಂಧಿತ ವಿಷಯಗಳು, ಶಾಲಾ ಕಟ್ಟಡಗಳಿಗೆ ಆಸ್ತಿ ತೆರಿಗೆ, ESI, PF, GRATUITY, LWF ಹಾಗೂ ಕಾರ್ಮಿಕ ಕಾನೂನುಗಳನ್ನು ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ ಎಂದರು.

ಇದಲ್ಲದೆ, ರಾಜ್ಯದಲ್ಲಿ ಯಶಸ್ವಿಯಾಗಿ 10 ವರ್ಷ ಹಾಗೂ 25 ವರ್ಷ ಪೂರೈಸಿರುವ ಖಾಸಗಿ ಶಾಲೆಗಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದ ಹೊಸ ತಂತ್ರಜ್ಞಾನಗಳು, ಆಡಳಿತಾತ್ಮಕ ಪರಿಹಾರಗಳು, ಕಾನೂನು ಸಲಹೆಗಳು ಹಾಗೂ ಶಿಕ್ಷಣ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ತಿಳಿದುಕೊಳ್ಳಲು ಇದು ಅತ್ಯುತ್ತಮ ವೇದಿಕೆಯಾಗಿದ್ದು, ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಟಿಯಲ್ಲಿ Ours ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending