ದಿನದ ಸುದ್ದಿ
ಮಹರ್ಷಿ ವಾಲ್ಮೀಕಿ ಜಾತ್ರೆ-2021 | ವಾಲ್ಮೀಕಿ ಬಗ್ಗೆ ಅವೈಜ್ಞಾನಿಕ ಬೋಧನೆ ಸಲ್ಲದು : ಡಾ.ಮಲ್ಲಿಕಾ ಎಸ್. ಘಂಟಿ

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕು
ಸುದ್ದಿದಿನ,ದಾವಣಗೆರೆ : ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕು. ಮಹಿಳೆಯರು ಮಹಿಳೆಯರಿಗಾಗಿ ಶಾಸನ ಮಾಡುವಂತಿರಬೇಕು. ಇಲ್ಲದಿದ್ದರೆ ಮತ್ತದೇ ಅತಂತ್ರ ಬದುಕು ಮಹಿಳೆಗೆ ಅನಿವಾರ್ಯ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ.ಮಲ್ಲಿಕಾ ಎಸ್.ಘಂಟಿ ಅಭಿಪ್ರಾಯ ಪಟ್ಟರು.
ಮಹರ್ಷಿ ವಾಲ್ಮೀಕಿ ಜಾತ್ರೆ 2021 ದ ಅಂಗವಾಗಿ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಯಾವುದೇ ಸ್ಥಾನದಲ್ಲಿದ್ದರೂ ತನ್ನದೇ ಸಮುದಾಯದ ಗಂಡಿನ ಅಹಂಕಾರ, ದಬ್ಬಾಳಿಕೆಗೆ ಒಳಗಾಗುತ್ತಿದ್ದಾಳೆ. ಆ ಪುರುಷ ವೈದಿಕದಿಂದ ಕಲಿತ ದಬ್ಬಾಳಿಕೆಯನ್ನು ಮಹಿಳೆ ಮೇಲೆ ತೋರುತ್ತಿದ್ದು, ಮಹಿಳೆ ಈ ಎರಡೂ ಬೀಗಗಳನ್ನು ಒಡೆಯಬೇಕಿದೆ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ಹೆಚ್ಚು ವಿದ್ಯಾವಂತರಾಗಬೇಕು. ಸಾವಿತ್ರಿಬಾ ಫುಲೆಯವರು ಅಂದೇ ವೈದಿಕ ಶಾಲೆಯು ಮಹಿಳೆರ ಮೇಲೆ ಶೋಷಣೆ ಮಾಡುತ್ತಿದೆ, ಇದರಿಂದ ತಪ್ಪಿಸಿಕೊಳ್ಳಲು ಶಿಕ್ಷಣ ಅತ್ಯಗತ್ಯ ಎಂದು ತಿಳಿದು ತಾವೂ ಕಲಿಯುತ್ತಾ ಮಹಿಳೆಯರಿಗೆ ಶಾಲೆ ತೆರೆದರು ಎಂದರು.
ಮಹಿಳೆಗೆ ಶಿಕ್ಷಣ ಮತ್ತು ಶಾಸನ ಸಭೆಗಳಲ್ಲಿ ಮೀಸಲಾತಿ ನೀಡುವ ಮೂಲಕ ಅವರನ್ನು ಅತಂತ್ರ ಸ್ಥಿತಿಯಿಂದ ಹೊರತರಬಹುದಾಗಿದ್ದು, ಶಾಸನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವಂತೆ ಮನವಿ ಮಾಡಿದರು.
ಜಾತ್ರೆಯಲ್ಲಿ ಅಕ್ಷರ ಹಂಚಿಕೆ
ಮೊದಲೆಲ್ಲ ಜಾತ್ರೆಗಳಲ್ಲಿ ಮೂಢನಂಬಿಕೆಯ ಹಂಚಲಾಗುತ್ತಿದ್ದರೆ, ಇಂದು ಜ್ಞಾನದ ಹಂಚಿಕೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಉತ್ತಮ ಪುಸ್ತಕಗಳು ಮಾರಾಟವಾಗುತ್ತಿವೆ. ಜ್ಞಾನಿಗಳ ಮಾತುಗಳನ್ನು ಕೇಳಿಸಲಾಗುತ್ತಿದೆ.
ಜ್ಯೋತಿ ಬಾಫುಲೆಯವರು ಆ ಕಾಲದಲ್ಲಿಯೇ ತಳ ಸಮುದಾಯವನ್ನು ಮೇಲೆ ತರುವ ವಸ್ತುವನ್ನು ಇಟ್ಟುಕೊಂಡು ನಾಟಕ ರಚಿಸುವ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದರು. ಮೂರ್ತಿ ಪೂಜೆಗಿಂತ ಜ್ಞಾನ ಪೂಜೆ ದೊಡ್ಡದು, ದೇವಾಲಯಗಳಿಂತ ಶಾಲೆ ನಿರ್ಮಿಸುವುದು ಶ್ರೇಷ್ಟ ಎಂದು ತಿಳಿಸಿದ್ದರು.
1990 ರ ದಶಕವನ್ನು ತಳ ಸಮುದಾಯದ ಜಾಗೃತ ಕಾಲಘಟ್ಟವೆನ್ನಬಹುದು. ಅಲ್ಲಿಯವರೆಗೆ ತಳ ಸಮುದಾಯಗಳು ತಮ್ಮ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಚಿಂತನೆಗಳನ್ನು ಚರ್ಚಿಸಲು ಒಂದು ವೇದಿಕೆ ಬೇಕು. ತಮ್ಮದೇ ಗುರು ಬೇಕು ಎಂಬ ಜ್ಞಾನ ಇರಲಿಲ್ಲ.
90 ರ ದಶಕದ ನಂತರ ಅನೇಕ ತಳ ಸಮುದಾಯಗಳು ತಮ್ಮ ಧಾರ್ಮಿಕ ಪೀಠ ಸ್ಥಾಪಿಸುವ ಮೂಲಕ ಅಸ್ತಿತ್ವ ಕಂಡುಕೊಂಡವು. ಜಾತಿ ಮತ್ತು ವೃತ್ತಿಯಲ್ಲಿ ಬಲಿಷ್ಟರಾದರೂ ಸಾಂಸ್ಕøತಿಕವಾಗಿ, ಧಾರ್ಮಿಕರಾಗಿ ದುರ್ಬಲರಾದೆವು, ಕಾರಣ ವಾಲ್ಮೀಕಿ, ಬಸವಣ್ಣ ಮತ್ತು ಡಾ.ಅಂಬೇಡ್ಕರ್ರಂತಹ ಚೈತನ್ಯಗಳ ವಿಚಾರಧಾರೆ ಮೂಲಕ ಮುಂದೆ ಬರಲು ಸಾಧ್ಯವಾಗದಿದ್ದುದು.
ಇಂದು ಧಾರ್ಮಿಕ ಗುರುಗಳನ್ನು ಹೊಂದಿ, ಇಂತಹ ಜಾತ್ರೆ ಮೂಲಕ ತಳ ಸಮುದಾಯದ ವಿಚಾರಧಾರೆಗಳನ್ನು ಚರ್ಚೆ ಮಾಡುತ್ತಾ, ವೇದಿಕೆ ಸೃಷ್ಟಿಸಿಕೊಂಡಿದ್ದೇವೆ. ನಮ್ಮ ಬುದ್ದಿ ನಮ್ಮ ತಲೆಯಲ್ಲಿದೆ ಎಂಬುದನ್ನು ಸಂವಿಧಾನ ಪೂರ್ವದಲ್ಲೇ ಅಕ್ಷರ ಬಾಗಿಲು ತೆರೆದು ಸಾವಿತ್ರಿ ಬಾಫುಲೆ, ಜ್ಯೋತಿ ಬಾಫುಲೆ ತೋರಿಸಿಕೊಟ್ಟಿದ್ದಾರೆ.
ಶತಮಾನಗಳ ಕಾಲ ಅಕ್ಷರ ಗುತ್ತಿಗೆ ಹಿಡಿದ ಹುನ್ನಾರವನ್ನು ಚರಿತ್ರೆ ಮೂಲಕ ಸ್ಪಷ್ಟವಾಗಿದ್ದು ಇಂದು ನಾವು ನಮ್ಮತನ, ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಅಕ್ಷರದ ಮೂಲಕ ಅರಿತು, ನಡೆಯುತ್ತಿದ್ದೇವೆ. ಇಡೀ ಚರಿತ್ರೆಯಲ್ಲಿ ಮುಂದೆ ಬರಬೇಕೆಂಬ ಹೆಣ್ಣಿನ ಹಂಬಲವನ್ನು ತಡೆಗೋಡೆ ನಿರ್ಮಿಸುವ ಮೂಲಕ ಅಡ್ಡಿಪಡಿಸುತ್ತಿದ್ದು ಅದನ್ನು ದೂಡುವ ಶಕ್ತಿ ಬೆಳೆಸಿಕೊಂಡು ಗೋಡೆಯನ್ನು ಒಡೆಯಬೇಕಿದೆ.
ಇಂದಿಗೂ ನಮ್ಮ ಪಾಡು ಸೀತೆಗಿಂತ ಭಿನ್ನವಾಗಿಲ್ಲ. ಇಂದಿಗೂ ಮಹಿಳೆಯನ್ನು ಎರಡನೇ ದರ್ಜೆಯ ಪ್ರಜೆಯಾಗಿ ನೋಡುವ ಸಂಸ್ಕøತಿ ನಮ್ಮಲ್ಲಿದ್ದು ಕಳೆದು ಹೋಗುವ ಅಪಾಯವಿದೆ. ಆದ ಕಾರಣ ಅವಕಾಶ ಸಿಕ್ಕಾಗೆಲ್ಲ ನಾವು ಮನದಾಳದ ಮಾತನ್ನು ಆಡಬೇಕು. ಅಕ್ಷರಸ್ಥರ ಸಂಖ್ಯೆ ಹೆಚ್ಚಬೇಕು ಎಂದರು.
ವಾಲ್ಮೀಕಿ ಬಗ್ಗೆ ಅವೈಜ್ಞಾನಿಕ ಬೋಧನೆ ಸಲ್ಲದು
ವಾಲ್ಮೀಕಿ ಹೇಗಾದ ಎಂಬ ಬಗ್ಗೆ ಪಠ್ಯದ ಮೂಲಕ ಅವೈಜ್ಞಾನಿಕವಾಗಿ ಬೋಧನೆ ಮಾಡುತ್ತಿದೇವೆ. ಅದನ್ನು ನಿಲ್ಲಿಸಬೇಕಿದೆ. ಅವರಲ್ಲಿ ಅಗಾಧವಾದ ಪಾಂಡಿತ್ಯ ಮತ್ತು ಸೂಕ್ಷ್ಮತೆಗಳಿದ್ದವು. ವೈದಿಕ ರಾಮಾಯಣದ ಬದಲಿಗೆ ವಾಲ್ಮೀಕಿ ರಾಮಾಯಣ ಹೇಳಬೇಕಿದೆ. ಸಕುಟುಂಬದಿಂದ ಕೂಡಿದ ರಾಮಾಯಣ ಇದಾಗಿದೆ. ವಾಲ್ಮೀಕಿ ಕಳ್ಳ, ಕುಡುಕ ಆಗಿದ್ದ ಎಂದೆಲ್ಲ ಅಪಮಾನ ಮಾಡುವದನ್ನು ವಿರೋಧಿಸುತ್ತೇನೆ. ವಾಲ್ಮೀಕಿ ಶ್ರೇಷ್ರು ಹಾಗೆಯೇ, ವಾಲ್ಮೀಕಿ, ವ್ಯಾಸರು, ಕನಕದಾಸರು ನಾಯಕರಾಗಿದ್ದರು.
12 ನೇ ಶತಮಾನದಲ್ಲಿ ಎಲ್ಲ ಜಾತಿ ಕುಲದವರನ್ನು ಸಮಾನರನ್ನಾಗಿ ಕಾಣುವ, ಹೆಣ್ಣು ಮಕ್ಕಳಿಗೆ ಸಮಾನತೆ ನೀಡುವ ಅವಕಾಶವನ್ನು ಬಸವಾದಿ ಶರಣರು ಕಲ್ಪಿಸಿಕೊಟ್ಟಿದ್ದು, ಇಂದು ನಮ್ಮ ಗುರುಗಳು ಸಹ ನಮಗೆ ಈ ವೇದಿಕೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟಿರುವುದು ಅನುಭವ ಮಂಟಪವನ್ನು ನೆನಪಿಸುತ್ತಿದೆ.
ಇದೂ ಕೂಡ ಬಸವ ಪರಂಪರೆಯಿಂದ ಬಂದಿದ್ದಾಗಿದ್ದು, ಅಂದೂ ಕೂಡ ಸಾಮಾಜಿಕ ಚಳವಳಿಯಲ್ಲಿ ಮಹಿಳೆಯರ ಪಾಲು ಅರ್ಧ ಇದ್ದರೆ, ಇಲ್ಲಿಯೂ ಅರ್ಧ ಮಹಿಳೆಯರಿದ್ದಾರೆ. ಆದ ಕಾರಣ ಶಾಸನ ಸಭೆಯಲ್ಲಿಯೂ ಮಹಿಳೆಯರಿಗೆ ಅವಕಾಶ ನೀಡಬೇಕೆಂದರು.
ಕರ್ನಾಟಕ ಸರ್ಕಾರದ ಗೃಹ ಕಾರ್ಯದರ್ಶಿಗಳಾದ ಮಾಲಿನಿ ಕೃಷ್ಣಮೂರ್ತಿ ಮಾತನಾಡಿ, ಮಹಿಳೆಯರಿಗೆ ಬೇಕಿರುವುದು ವಿದ್ಯೆ. ವಿದ್ಯಾಭ್ಯಾಸದಿಂದ ಮಹಿಳೆ ಆರ್ಥಿಕವಾಗಿ ಸ್ವಾವಲಂಬನೆಯೊಂದಿಗೆ ಸಾಮಾಜಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ.
ತ್ರಿಮೂರ್ತಿ ಬ್ರಹ್ಮ ವಿಷ್ಣು ಮಹೇಶ್ವರನಿಗೆ ಸರಿಸಮನಾಗಿ ಲಕ್ಷ್ಮಿ, ಸರಸ್ವತಿ ಮತ್ತು ಪಾರ್ವತಿ ತತ್ವಗಳಿದ್ದದ್ದರಿಂದಲೇ ಸಮತೋಲನ ಸಾಧ್ಯವಾಯಿತು. ಹೆಣ್ಣು ಶಿಕ್ಷಿತಳಾಗುವುದು ಸರಸ್ವತಿ ತತ್ವವಾದರೆ ಆರ್ಥಿಕವಾಗಿ ಸ್ವಾವಲಂಬನೆ ಹೊಂದುವುದು ಲಕ್ಷ್ಮಿ ತತ್ವ. ಅವೆರಡನ್ನೂ ಸರಿದೂಗಿಸಿಕೊಂಡು ಕೌಟುಂಬಿಕವಾಗಿ, ಸಾಮಾಜಿಕವಾಗಿ ಅಭಿವೃದ್ದಿ ಕಾಣುವುದು ಪಾರ್ವತಿ ತತ್ವವಾಗಿದ್ದು, ಇವೆಲ್ಲ ನಮ್ಮಲ್ಲಿ ಮೈಗೂಡಿಸಿಕೊಳ್ಳಬೇಕು. ಒಂದು ಹೆಣ್ಣು ಕಲಿತರೆ ಇಡೀ ಕುಟುಂಬ ಕಲಿಯುತ್ತದೆ. ಅದೇ ರೀತಿ ನಾವು ನಮ್ಮ ಮನೆ ಗಂಡು ಮಕ್ಕಳಿಗೆ ಹೆಣ್ಣನ್ನು ಗೌರವಿಸುವಂತಹ ಸಂಸ್ಕಾರ, ಶಿಕ್ಷಣ ನೀಡಬೇಕೆಂದರು.
ಖ್ಯಾತ ಚಲನಚಿತ್ರ ನಟಿ ಹಾಗೂ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶೃತಿ ಮಾತನಾಡಿ, ಮುಂದೆ ಗುರಿ ಮತ್ತು ಹಿಂದೆ ಗುರು ಇದ್ದರೆ ಆತನನ್ನು ಯಾರೂ ಸೋಲಿಸಲು ಸಾಧ್ಯವಿಲ್ಲ. ಮಹಿಳಾ ಸಮಾವೇಶಕ್ಕೆ ಗುರುಗಳು ಅನುವು ಮಾಡಿಕೊಟ್ಟಿರುವುದು ಅಂಬೇಡ್ಕರ್ ಹೇಳಿದ ಸಮಾನತೆಯ ಸಮತೋಲನದಂತಿದೆ.
ಕಿತ್ತೂರು ರಾಣಿ ಚೆನ್ನಮ್ಮ, ಅಬ್ಬಕ್ಕನಂತಹ ದಿಟ್ಟ ಮಹಿಳೆಯರಿಗೆ ಬೇರೆ ರೀತಿಯ ವೈರಿಗಳಿದ್ದು ಅವರು ಖಡ್ಗ ಹಿಡಿದು ಹೋರಾಡಿದರೆ ಇಂದಿನ ಪರಿಸ್ಥಿತಿಯಲ್ಲಿ ವೈರಿಗಳ ಸ್ವರೂಪ ಬೇರೆ ಇದ್ದು ಇದರ ವಿರುದ್ದ ಹೋರಾಟಡಲು ಶಿಕ್ಷಣ ಎಂಬ ಪರಿಣಾಮಕಾರಿ ಅಸ್ತ್ರ ಬೇಕಿದೆ. ಭಾರತೀಯರಾದ ನಾವು ಪುಣ್ಯವಂತರು. ಹೆಣ್ಣನ್ನು ದೇವಿ ರೂಪದಲ್ಲಿ ನೋಡಲಾಗುತ್ತದೆ ಎಂದ ಅವರು ಶಿಕ್ಷಣ ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢಗೊಳಿಸುತ್ತದೆ. ಈ ನಿಟ್ಟಿನಲ್ಲಿ ಮಹಿಳಾ ಜಾಗೃತಿ ಸಮಾವೇಶ ಏರ್ಪಡಿಸಿರುವುದು ಶ್ಲಾಘನೀಯ ಎಂದರು.
ಕೆ.ಪಿ.ಟಿ.ಸಿ.ಎಲ್. ವ್ಯವಸ್ಥಾಪಕ ನಿರ್ದೇಶಕರಾದ ಡಾ.ಮಂಜುಳ ಅವರು ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಹೆಣ್ಣಿಗೆ ದಕ್ಕಬೇಕಾದ ಎಲ್ಲವೂ ಸಂವಿಧಾನದಲ್ಲಿದೆ. ವ್ಯವಸ್ಥೆಯಲ್ಲಿ ಎಲ್ಲಾ ಅನುಕೂಲವೂ ಇದೆ. ಸಾಧನೆ ಮಾಡುವಂತಹ ಅವಕಾಶ ಪ್ರತಿಯೊಬ್ಬರಿಗೂ ಇದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕಾದ ಹೊಣೆ ನಮ್ಮ ಮೇಲಿದೆ. ಪರಿಶ್ರಮ ಪಡದೇ ಯಾವ ಕೆಲಸವು ಪರಿಪೂರ್ಣವಾಗುವುದಿಲ್ಲ. ಯಶಸ್ಸು ಪಡೆಯಬೇಕಾದರೆ ಶ್ರಮ ಪಡಬೇಕು ಎಂದರು.
ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಗೋಮತಿದೇವಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ನಾವು ಸೀತೆಯನ್ನು ಸೂಕ್ಷ್ಮವಾಗಿ ಅವಲೋಕಿಸಬೇಕೆಂದು ರಾಮಾಯಣದ ಕಥೆಗಳನ್ನು ಉಲ್ಲೇಖಿಸಿದ ಅವರು ಭಾರತೀಯ ಸಮಾಜ ಲಿಂಗಬೇಧದ ಅಸಮಾನತೆಯಲ್ಲಿದ್ದಾಗ, ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಿ, ಸತಿಸಹಗಮನ ಪದ್ಧತಿ ಅತೀ ಹೆಚ್ಚಾಗಿ ಇದ್ದಂತಹ ಕಾಲಘಟ್ಟದಲ್ಲಿ ಸಾವಿತ್ರಿಬಾಫುಲೆ ತನ್ನ ಪತಿ ಹಾಗೂ ತಂದೆಯಿಂದ ಪ್ರೇರಣೆ ಪಡೆದು ಅಕ್ಷರ ಕಲಿತು ಶಿಕ್ಷಕ ತರಬೇತಿ ಮುಗಿಸಿ, ಶೋಷಿತ ವರ್ಗದ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವಂತಹ ಸ್ಥೈರ್ಯ, ಮನೋಬಲ ಮೂಡಿಸಿದ್ದು ನಮಗೆಲ್ಲ ಮಾದರಿ ಎಂದರು.
ಗೋಕಾಕಿನ ಪ್ರಿಯಾಂಕ ಎಸ್ ಜಾರಕಿಹೊಳಿ ಮಾತನಾಡಿ, ಇಂದು ಹೆಣ್ಣು ಮುಖ್ಯವಾಹಿನಿಗೆ ಬಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನವೇ ಕಾರಣ. ಅವರ ಸಿದ್ದಾಂತಗಳನ್ನು ನಾವಿಂದು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಕಲೆ ಇರುತ್ತದೆ. ಅದನ್ನು ಗುರುತಿಸಿ ಪೋಷಿಸಬೇಕಾದ ಹೊಣೆ ಪೋಷಕರು ಹಾಗೂ ಶಿಕ್ಷಕರಾಗಿರುತ್ತದೆ. ಹಾಗೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಮುನ್ನೆಲೆಗೆ ತರುವಲ್ಲಿ ಪ್ರಯತ್ನಿಸಿ ಎಂದು ತಿಳಿಸಿದರು.
ಸೋಮವಾರ ಬೆಳಿಗ್ಗೆ ನಡೆದ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಮಾಜಿ ಸಭಾಪತಿಗಳಾದ ಕೆ.ಬಿ. ಕೋಳಿವಾಡ ಇವರು ಉದ್ಘಾಟಿಸಿದರು. ಹರಿಹರ ಶಾಸಕರಾದ ಎಸ್.ರಾಮಪ್ಪ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪುಷ್ಪ ಅರ್ಪಿಸಿದರು.
ಮಹರ್ಷಿ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಶಾಂತಲಾ ರಾಜಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಕೇಂದ್ರ ಸರ್ಕಾರ ನೀಡಿರುವಂತೆ ರಾಜ್ಯ ಸರ್ಕಾರ ಕೂಡ ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿದರು.
ವೇದಿಕೆಯಲ್ಲಿ ಬೆಂಗಳೂರಿನ ಅಬಕಾರಿ ಅಧೀಕ್ಷಕ ಲಕ್ಷ್ಮೀ ಎಂ ನಾಯಕ, ಶಿವಮೊಗ್ಗದ ಮಹಿಳಾ ವೇದಿಕೆಯ ಜಿಲ್ಲಾಧ್ಯಕ್ಷೆ ತಾರಾ, ಜವಳಿ ಅಭಿವೃದ್ದಿ ನಿಗಮದ ಉಪಾಧ್ಯಕ್ಷೆ ಕಮಲಾ ಮರಿಸ್ವಾಮಿ, ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷೆ ಪುಷ್ಪಾ ಲಕ್ಷ್ಮಣಸ್ವಾಮಿ ಇತರೆ ಮಹಿಳಾ ಅಧಿಕಾರಿಗಳು, ಸಾಧಕಿಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?

ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ ಭೂಮಿಯನ್ನು ಖರೀದಿ ಮಾಡಿದ್ದ ಅವರು ಅದನ್ನು ತಮ್ಮ ಸಹೋದರಿಯರ ಹೆಸರಿನಲ್ಲಿ ನೋಂದಾಯಿಸಿದ್ದರು. ಇದಕ್ಕೆ ಪತ್ನಿ ಪಲ್ಲವಿಯವರ ಆಕ್ಷೇಪ ಇತ್ತು ಎನ್ನಲಾಗುತ್ತಿದೆ.
ಆದರೆ ಆಸ್ತಿ ವಿವಾದವೇ ಎಲ್ಲದಕ್ಕೂ ಕಾರಣವಾಯ್ತಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಓಂ ಪ್ರಕಾಶ್ ಅವರು 2017 ರಲ್ಲಿ ನಿವೃತ್ತಿಗೊಂಡಿದ್ದರು. ನಿವೃತ್ತಿಗೂ ಮೊದಲು ಹಾಗೂ ನಂತರದಲ್ಲಿ ಅವರು ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಸ್ತಿ ಖರೀದಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!

- ಗಿರೀಶ್ ಕುಮಾರ್ ಗೌಡ,ಬಳ್ಳಾರಿ
ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ ಸಾಗಾಟ ಮಾಡುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ.
ಅದರಲ್ಲಿ 10 ಲಕ್ಷ ಮೌಲ್ಯದ ಅನುಮಾನ ಪಡಿತರ ಅಕ್ಕಿ ಲಾರಿ, ಮದ್ಯ ರಾತ್ರಿಯಿಂದ ಬೆಳಿಗ್ಗೆ 9ಗಂಟೆವರೆಗೆ ಇದ್ದ ಲಾರಿ ನಂತರ ಇಲ್ಲದೆ ಇರೋದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಬಳ್ಳಾರಿ ನಗರದಲ್ಲಿ ಕೆಲ ದಿನಗಳ ಹಿಂದೆ ( ರಾತ್ರಿ 2.30 ಗಂಟೆ) ಸಮಯದಲ್ಲಿ 10 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ವಾಹನವನ್ನು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಪೊಲೀಸ ಅಧಿಕಾರಿಗಳು ತಪಾಸಣೆ ಮಾಡಿ ಠಾಣೆಗೆ ತಂದು ನಿಲ್ಲಿಸಿಕೊಂಡಿದ್ದರು.
ರಾಯಚೂರುನಿಂದ ಛತ್ತೀಸ್ಗಢದ ವರೆಗೆ ಪಡಿತರ ಅಕ್ಕಿ ಸಾಗಾಟ
ರಾಯಚೂರದಿಂದ ಛತ್ತೀಸ್ಗಢಕ್ಕೆ ಸಾಗಣೆಯ ಮಾಡುತ್ತಿದ್ದ ವಾಹನವಾಗಿತ್ತು ವಾಹನಕ್ಕೆ ಆರ್.ಕೆ ಎಂಟರ್ಪ್ರೈಸಸ್ ರಾಯಚೂರು,ಬಳ್ಳಾರಿ ಎಂದು ಬಿಲ್ ಹಾಕಿ ರಾಯಚೂರುದಿಂದ ಛತ್ತೀಸ್ ಗಡಿಗೆ ಅಕ್ಕಿ ಸರಬರಾಜು ಮಾಡುತ್ತಿದ್ದ ಮತ್ತೊಂದು ಬಿಲ್ ಹಾಕಿ ಕಳಿಸಲಾಗಿತ್ತು. ಈ ವಾಹನಕ್ಕೆ ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಕಳಸಾಗಣಿಕೆ ಪಡಿತರ ಅಕ್ಕಿಯನ್ನು ತುಂಬಿದ್ದಾರೆ. ಇದಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಮಾತ್ರ ಇದೆ ಎನ್ನುವ ಆರೋಪ ಇದೆ.
ಮಧ್ಯರಾತ್ರಿದಿಂದ ಬೆಳಿಗ್ಗೆ 9 ಗಂಟೆಗೆ ಠಾಣೆಯಲ್ಲಿ ಲಾರಿ ವಾಹನವನ್ನು ಇಟ್ಟುಕೊಂಡು ಎಲ್ಲವೂ ಸರಿ ಇದ್ದಾವೆ ಎಂದು ಗಾಡಿಯನ್ನು ಬಿಟ್ಟು ಕಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಸಾರ್ವಜನಿಕ ಪ್ರಶ್ನೆ.
ಈ ಠಾಣೆಗೆ ನೂತನವಾಗಿ ಬಂದಿರುವ ಪೊಲೀಸ್ ಅಧಿಕಾರಿ ತೋರಣಗಲ್ಲು, ಸಂಡೂರು, ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿ ಬಳ್ಳಾರಿ ಎಪಿಎಂಸಿ ಠಾಣಿಗೆ ವರ್ಗಾವಣೆ ಆಗಿರುವ ರಫೀಕ್ ಅವರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಸಾರ್ವಜನಿಕರು.
ಈಗಾಗಲೇ ಪಡಿತರ ಕಳಸಾಗಾಣಿಕೆ ದಂದೆ ನಡೆಯುತ್ತಿದ್ದು ಕಣ್ಣಿಗೆ ಕಂಡು ಕಾಣದಂತೆ ನಡೆಯುತ್ತದೆ ಇಂತಹ ಸಂದರ್ಭದಲ್ಲಿ ರಾಯಚೂರಿನಿಂದ ಛತ್ತೀಸ್ಗಢ ಗೆ ಬಿಲ್, ಬಳ್ಳಾರಿಯಲ್ಲಿ ಅಕ್ಕಿ, ಪೊಲೀಸ್ ಠಾಣೆಯಲ್ಲಿ ಗಾಡಿ,ಯಾವುದೇ ಪ್ರಕರಣ ಇಲ್ಲದೆ ಬಿಟ್ಟು ಕಳಿಸಿರುವುದು ಆಶ್ಚರ್ಯವಾಗಿದೆ. ಇನ್ನು ಈ ವಿಚಾರವಾಗಿ ಅಧಿಕಾರಿಗಳಿಗೆ ಕೇಳಿದರೆ ಇಲ್ಲ ನಮಗೆ ಗೊತ್ತಿಲ್ಲ ಎನ್ನುವ ಬೇಜವಾಬ್ದಾರಿ ಮಾತನಾಡುತ್ತಾರೆ.
ಲಾರಿ ಬಿಲ್ ಚೆಕ್ ಮಾಡಿದ್ದು ಯಾರು ?
ಗಣಿನಾಡು ಬಳ್ಳಾರಿ ನಗರದಲ್ಲಿ ಪೊಲೀಸರು ಲಾರಿ ಬಿಲ್ ಗಳು ಮದ್ಯರಾತ್ರಿ ಚೆಕ್ ಮಾಡಿದ್ದು ಯಾರು, ಸಾಧಾರಣ ಟೈಮ್ ನಲ್ಲಿ ಬಂದು ನೋಡಲು ಬರದೇ ಇರುವ ಅಧಿಕಾರಿಗಳು ಮದ್ಯ ರಾತ್ರಿ ಬಂದು ನೋಡಿರಬಹುದಾ. ಈಗಲೇ ರಫೀಕ್ ಅವರ ಮೇಲೆ ಕೆಲ ಸಿಬ್ಬಂದಿ ಮೇಲೆ ಆರೋಪ ಇವೆ. ಅಕ್ರಮ ಚಟವಟೆಕೆಗಳಿಗೆ ನಿರ್ದೇಶಕ ಕೀರ್ತಿ ಇದೇ ಲೋಕಾಯುಕ್ತ ಸಮಯದಲ್ಲಿ ಬಹುತೇಕ ಬಹಳ ಸಮಸ್ಯೆಗಳನ್ನು ಮಾಡಿದ್ದನ್ನು ನೊಂದವರು ತಿಳಿಸಿದ್ದಾರೆ.
“ಸಚಿವ ಸಂತೋಷ ಲಾಡ್ ಹೆಸರು ಹೇಳುವ ರಫೀಕ್”
ಠಾಣೆಯ ಅಧಿಕಾರಿ ರಫೀಕ್ ಪದೇ ಪದೇ ಸಚಿವ ಸಂತೋಷ್ ಲಾಡ್ ಹೆಸರು ಹೇಳಿಕೊಂಡು ಬಂದಿದ್ದಾನೆ ಎನ್ನುವ ಆರೋಪ ಸಹ ಇದೆ. ಈ ಅಕ್ರಮ ಅಕ್ಕಿ ಪಡಿತರದಲ್ಲಿ ಪೊಲೀಸ್ ಠಾಣೆಗೆ ಮಾಮೂಲು ಸಹ ಇದೆ ಎನ್ನುವ ಮಾಹಿತಿ ಸಹ ಇದೆ.
ಎಸ್ಪಿ ಅವರ ಕ್ರಮ ಯಾವಾಗ ?
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಯಾವ ? ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಜಿಲ್ಲೆಗೆ ಬಳ್ಳಾರಿ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರ ಸ್ವೀಕರಿದ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆವೇ ಎನ್ನುವ ಅನುಮಾನ ಸಹ ಇದೆ ಎನ್ನುವ ಮಾತು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.
ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಬಡವರಿಗೆ ನೀಡುವ ಪಡಿತರ ಅಕ್ಕಿ ಕಳ್ಳರ ಪಾಲಾಗುತ್ತಿದೆ, ಇನ್ನು ಪಡಿತರ ಅಕ್ಕಿಯ ವಿತರಕರು 1 ಕಿಲೋಗ್ರಾಂ ಗೆ 10 ರಿಂದ 12 ರೂಪಾಯಿ ಕೊಂಡುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಹ ಇದೆ. ಇವರ ವಿರುದ್ಧ ಹಾಗೂ ಪಡಿತರ ಅಕ್ಕಿ ಮಾರಾಟ ಮಾಡುವ ಸಾರ್ವಜನಿಕರ ಮೇಲೆ ಕ್ರಮ ತೆಗೆದುಕೊಳ್ಳಬೇಕಿದೆ.
ಒಟ್ಟಾರೆಯಾಗಿ ಬಳ್ಳಾರಿ ಜಿಲ್ಲೆಯ ವಿವಿಧ ಠಾಣೆ ವ್ಯಾಪ್ತಿ ಅಧಿಕಾರಿಗಳಿಗೆ ಎಸ್ಪಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುವರು ಕಾದು ನೋಡೊಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯಾಗಿ 50 ವರ್ಷ; ನೆಹರು ತಾರಾಲಯದಲ್ಲಿ ವಿಶೇಷ ಕಾರ್ಯಕ್ರಮ

ಸುದ್ದಿದಿನಡೆಸ್ಕ್:ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆ ಮಾಡಿ ಇಂದಿಗೆ 50 ವರ್ಷಗಳು ಸಂದಿವೆ. 1975ರಲ್ಲಿ ಈ ದಿನದಂದು ಉಡಾವಣೆ ಮಾಡಲಾದ ಈ ಉಪಗ್ರಹಕ್ಕೆ ಪ್ರಾಚೀನ ಭಾರತೀಯ ಗಣಿತಜ್ಞ ಮತ್ತು ಖಗೋಳಶಾಸ್ತ್ರಜ್ಞ ಆರ್ಯಭಟ ಅವರ ಹೆಸರನ್ನು ಇಡಲಾಗಿತ್ತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿದ ಈ ಉಪಗ್ರಹವನ್ನು ರಷ್ಯಾ ಸಹಾಯದೊಂದಿಗೆ ಕಪುಸ್ಟಿನ್ಯಾರ್ನಿಂದ ಉಡಾವಣೆ ಮಾಡಲಾಯಿತು.
ಸೌರ ಭೌತಶಾಸ್ತ್ರ, ವಾಯುವಿಜ್ಞಾನ ಮತ್ತು ಎಕ್ಸ್-ರೇ ಖಗೋಳಶಾಸ್ತ್ರ ಸೇರಿದಂತೆ ಇತರೆ ಪ್ರದೇಶಗಳನ್ನು ಅನ್ವೇಷಿಸುವುದು ಈ ಉಪಗ್ರಹದ ಉದ್ದೇಶವಾಗಿತ್ತು. ಕಕ್ಷೆಯಲ್ಲಿ ಐದು ದಿನಗಳನ್ನು ಕಳೆದ ನಂತರ, ಆರ್ಯಭಟ ವಿದ್ಯುತ್ ವೈಫಲ್ಯವನ್ನು ಅನುಭವಿಸಿತು, ಇದರಿಂದಾಗಿ ಎಲ್ಲಾ ಪ್ರಯೋಗಗಳನ್ನು ನಿಲ್ಲಿಸಲಾಯಿತು. ಇದರ ಹೊರತಾಗಿಯೂ, ಅಮೂಲ್ಯವಾದ ದತ್ತಾಂಶವನ್ನು ಸಂಗ್ರಹಿಸಲಾಯಿತು ಮತ್ತು ವಿಜ್ಞಾನಿಗಳಿಗೆ ಉಪಗ್ರಹ ಅಭಿವೃದ್ಧಿಯಲ್ಲಿ ನಿರ್ಣಾಯಕ ಅನುಭವವನ್ನು ಇದು ನೀಡಿತು.
ವೈಫಲ್ಯದ ನಂತರ ಉಪಗ್ರಹವು ಇನ್ನೂ ಕೆಲವು ದಿನಗಳವರೆಗೆ ಮಾಹಿತಿಯನ್ನು ರವಾನಿಸುವುದನ್ನು ಮುಂದುವರೆಸಿತು. ಆರ್ಯಭಟವು ಭಾರತದ ಬಾಹ್ಯಾಕಾಶ ಪರಿಶೋಧನೆಗೆ ಅಡಿಪಾಯವಾಯಿತು ಮತ್ತು ದೇಶದ ಭವಿಷ್ಯದ ಬಾಹ್ಯಾಕಾಶ ಯಾನಗಳಿಗೆ ಪ್ರಮುಖ ಮೈಲಿಗಲ್ಲಾಯಿತು. ಅದರ ಯಶಸ್ವಿ ಉಡಾವಣೆಯೊಂದಿಗೆ, ಭಾರತವು ಕಕ್ಷೆಗೆ ಉಪಗ್ರಹವನ್ನು ಕಳುಹಿಸಿದ ವಿಶ್ವದ 11 ನೇ ರಾಷ್ಟ್ರವೆಂದು ಗುರುತಿಸಲ್ಪಟ್ಟಿತು.
ಇದನ್ನೂ ಓದಿ :
ಕಾರ್ಯಕ್ರಮ
ಬೆಂಗಳೂರಿನ ಜವಾಹರ ಲಾಲ್ ನೆಹರು ತಾರಾಲಯದಲ್ಲಿಂದು ಯು.ಆರ್. ರಾವ್ ಉಪಗ್ರಹ ಕೇಂದ್ರ ಮತ್ತು ಜವಾಹರ ಲಾಲ್ ನೆಹರು ತಾರಾಲಯ ಸಹಯೋಗದೊಂದಿಗೆ ಆರ್ಯಭಟ ಉಡಾವಣೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾರತೀಯ ಖಭೌತ ಸಂಸ್ಥೆ ನಿರ್ದೇಶಕರಾದ ಡಾ. ಅನ್ನಪೂರ್ಣಿ ಸುಬ್ರಮಣಿಯಂ, ಯು.ಆರ್. ರಾವ್ ಉಪಗ್ರಹ ಕೇಂದ್ರದ ನಿರ್ದೇಶಕರಾದ ಎಂ. ಶಂಕರನ್, ಅಂತರಿಕ್ಷ ಆಯೋಗದ ಸದಸ್ಯರು, ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್. ಕಿರಣ್ ಕುಮಾರ್, ತಾರಾಲಯದ ನಿರ್ದೇಶಕರಾದ ಡಾ. ವಿ.ಆರ್. ಗುರುಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.
ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾಜಿ ಇಸ್ರೋ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್, ಭಾರತದ ಶ್ರೇಷ್ಠ ಭೌತಶಾಸ್ತ್ರಜ್ಞ ಮತ್ತು ಖಗೋಳಶಾಸ್ತ್ರಜ್ಞ ವಿಕ್ರಮ್ ಸಾರಾಭಾಯ್, ಭೌತಶಾಸ್ತ್ರಜ್ಞ ಹೋಮಿ. ಜೆ ಭಾಭಾ ರಂತಹ ಭಾರತ ಕಂಡ ದಾರ್ಶನಿಕ ಮಹಾತ್ಮರು ತಮ್ಮ ಅನನ್ಯ ದೃಷ್ಟಿಕೋನದೊಂದಿಗೆ ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ರೂವಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಅವರಿಂದ ಸ್ಫೂರ್ತಿ ಪಡೆದು, ಇಂದಿನ ಯುವಜನರು ದೇಶ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದರ ಕುರಿತು ಚಿಂತಿಸಬೇಕು ಎಂದು ಹೇಳಿದರು.
ಉದ್ಘಾಟನಾ ಭಾಷಣದಲ್ಲಿ ಎಂ. ಶಂಕರನ್, ಭಾರತದ ಬಾಹ್ಯಾಕಾಶ ಪಯಣದಲ್ಲಿ ಆರ್ಯಭಟ ಉಪಗ್ರಹ ನಿರ್ವಹಿಸಿದ ಪಾತ್ರ ಕುರಿತು ಸಮಗ್ರ ಚಿತ್ರಣ ನೀಡಿದರು. ಇಲ್ಲಿಯವರೆಗೆ ಭಾರತ 130ಕ್ಕೂ ಅಧಿಕ ಉಪಗ್ರಹಗಳ ಉಡವಾಣೆ ಮಾಡಿದ್ದು, ಇದರಲ್ಲಿ ಶೇಕಡ 50ಕ್ಕಿಂತಲೂ ಹೆಚ್ಚು ಉಪಗ್ರಹಗಳು ಇನ್ನೂ ಕಾರ್ಯ ನಿರ್ವಹಿಸುತ್ತಿವೆ ಎಂದರು.
ಇದೇ ವೇಳೆ ಮಾತನಾಡಿದ ಡಾ. ಅನ್ನಪೂರ್ಣಿ ಸುಬ್ರಮಣಿಯಮ್, ನಮ್ಮ ಪೂರ್ವಜರು, ವಿಜ್ಞಾನಿಗಳು ಬಿಟ್ಟು ಹೋಗಿರುವ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಾಧಿಸುವ ಛಲದೊಂದಿಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ಯಾವುದೇ ಯೋಜನೆಯ ಯಶಸ್ಸಿಗೆ ಆಧಾರಸ್ತಂಭವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಆರ್ಯಭಟ ಉಪಗ್ರಹದ ಪಯಣದ ಕುರಿತ ಸಮಗ್ರ ಮಾಹಿತಿಯುಳ್ಳ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ತುಂಗಭದ್ರಾ ಬೋರ್ಡ್ ಅಧಿಕಾರಿಗಳ ಕಳ್ಳಾಟ : ಕಬ್ಬಿಣ ಕಳ್ಳತನ ಆರೋಪದಲ್ಲಿ ಕಣ್ಣಮುಚ್ಚಾಲೆ ಆಟ ; ಶಾಸಕರ ಹೆಸರು ಪ್ರಸ್ತಾಪ
-
ದಿನದ ಸುದ್ದಿ7 days ago
25 ವರ್ಷಗಳ ನಂತರ ಸಾಕಾರಗೊಂಡ ಡಾ. ಬಿ.ಆರ್.ಅಂಬೇಡ್ಕರ್ ಭವನ ; ಅನುದಾನದ ಕೊರತೆ ಇಲ್ಲ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
-
ದಿನದ ಸುದ್ದಿ5 days ago
ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ
-
ದಿನದ ಸುದ್ದಿ5 days ago
ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ
-
ರಾಜಕೀಯ3 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್
-
ದಿನದ ಸುದ್ದಿ3 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ5 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಆರು ಮಂದಿ ಬಂಧನ