Connect with us

ದಿನದ ಸುದ್ದಿ

ಮಹರ್ಷಿ ವಾಲ್ಮೀಕಿ ಜಾತ್ರೆ-2021 | ವಾಲ್ಮೀಕಿ ಬಗ್ಗೆ ಅವೈಜ್ಞಾನಿಕ ಬೋಧನೆ ಸಲ್ಲದು : ಡಾ.ಮಲ್ಲಿಕಾ ಎಸ್. ಘಂಟಿ

Published

on

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕು

ಸುದ್ದಿದಿನ,ದಾವಣಗೆರೆ : ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕು. ಮಹಿಳೆಯರು ಮಹಿಳೆಯರಿಗಾಗಿ ಶಾಸನ ಮಾಡುವಂತಿರಬೇಕು. ಇಲ್ಲದಿದ್ದರೆ ಮತ್ತದೇ ಅತಂತ್ರ ಬದುಕು ಮಹಿಳೆಗೆ ಅನಿವಾರ್ಯ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ.ಮಲ್ಲಿಕಾ ಎಸ್.ಘಂಟಿ ಅಭಿಪ್ರಾಯ ಪಟ್ಟರು.

ಮಹರ್ಷಿ ವಾಲ್ಮೀಕಿ ಜಾತ್ರೆ 2021 ದ ಅಂಗವಾಗಿ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಯಾವುದೇ ಸ್ಥಾನದಲ್ಲಿದ್ದರೂ ತನ್ನದೇ ಸಮುದಾಯದ ಗಂಡಿನ ಅಹಂಕಾರ, ದಬ್ಬಾಳಿಕೆಗೆ ಒಳಗಾಗುತ್ತಿದ್ದಾಳೆ. ಆ ಪುರುಷ ವೈದಿಕದಿಂದ ಕಲಿತ ದಬ್ಬಾಳಿಕೆಯನ್ನು ಮಹಿಳೆ ಮೇಲೆ ತೋರುತ್ತಿದ್ದು, ಮಹಿಳೆ ಈ ಎರಡೂ ಬೀಗಗಳನ್ನು ಒಡೆಯಬೇಕಿದೆ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ಹೆಚ್ಚು ವಿದ್ಯಾವಂತರಾಗಬೇಕು. ಸಾವಿತ್ರಿಬಾ ಫುಲೆಯವರು ಅಂದೇ ವೈದಿಕ ಶಾಲೆಯು ಮಹಿಳೆರ ಮೇಲೆ ಶೋಷಣೆ ಮಾಡುತ್ತಿದೆ, ಇದರಿಂದ ತಪ್ಪಿಸಿಕೊಳ್ಳಲು ಶಿಕ್ಷಣ ಅತ್ಯಗತ್ಯ ಎಂದು ತಿಳಿದು ತಾವೂ ಕಲಿಯುತ್ತಾ ಮಹಿಳೆಯರಿಗೆ ಶಾಲೆ ತೆರೆದರು ಎಂದರು.

ಮಹಿಳೆಗೆ ಶಿಕ್ಷಣ ಮತ್ತು ಶಾಸನ ಸಭೆಗಳಲ್ಲಿ ಮೀಸಲಾತಿ ನೀಡುವ ಮೂಲಕ ಅವರನ್ನು ಅತಂತ್ರ ಸ್ಥಿತಿಯಿಂದ ಹೊರತರಬಹುದಾಗಿದ್ದು, ಶಾಸನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವಂತೆ ಮನವಿ ಮಾಡಿದರು.

ಜಾತ್ರೆಯಲ್ಲಿ ಅಕ್ಷರ ಹಂಚಿಕೆ

ಮೊದಲೆಲ್ಲ ಜಾತ್ರೆಗಳಲ್ಲಿ ಮೂಢನಂಬಿಕೆಯ ಹಂಚಲಾಗುತ್ತಿದ್ದರೆ, ಇಂದು ಜ್ಞಾನದ ಹಂಚಿಕೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಉತ್ತಮ ಪುಸ್ತಕಗಳು ಮಾರಾಟವಾಗುತ್ತಿವೆ. ಜ್ಞಾನಿಗಳ ಮಾತುಗಳನ್ನು ಕೇಳಿಸಲಾಗುತ್ತಿದೆ.

ಜ್ಯೋತಿ ಬಾಫುಲೆಯವರು ಆ ಕಾಲದಲ್ಲಿಯೇ ತಳ ಸಮುದಾಯವನ್ನು ಮೇಲೆ ತರುವ ವಸ್ತುವನ್ನು ಇಟ್ಟುಕೊಂಡು ನಾಟಕ ರಚಿಸುವ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದರು. ಮೂರ್ತಿ ಪೂಜೆಗಿಂತ ಜ್ಞಾನ ಪೂಜೆ ದೊಡ್ಡದು, ದೇವಾಲಯಗಳಿಂತ ಶಾಲೆ ನಿರ್ಮಿಸುವುದು ಶ್ರೇಷ್ಟ ಎಂದು ತಿಳಿಸಿದ್ದರು.

1990 ರ ದಶಕವನ್ನು ತಳ ಸಮುದಾಯದ ಜಾಗೃತ ಕಾಲಘಟ್ಟವೆನ್ನಬಹುದು. ಅಲ್ಲಿಯವರೆಗೆ ತಳ ಸಮುದಾಯಗಳು ತಮ್ಮ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಚಿಂತನೆಗಳನ್ನು ಚರ್ಚಿಸಲು ಒಂದು ವೇದಿಕೆ ಬೇಕು. ತಮ್ಮದೇ ಗುರು ಬೇಕು ಎಂಬ ಜ್ಞಾನ ಇರಲಿಲ್ಲ.

90 ರ ದಶಕದ ನಂತರ ಅನೇಕ ತಳ ಸಮುದಾಯಗಳು ತಮ್ಮ ಧಾರ್ಮಿಕ ಪೀಠ ಸ್ಥಾಪಿಸುವ ಮೂಲಕ ಅಸ್ತಿತ್ವ ಕಂಡುಕೊಂಡವು. ಜಾತಿ ಮತ್ತು ವೃತ್ತಿಯಲ್ಲಿ ಬಲಿಷ್ಟರಾದರೂ ಸಾಂಸ್ಕøತಿಕವಾಗಿ, ಧಾರ್ಮಿಕರಾಗಿ ದುರ್ಬಲರಾದೆವು, ಕಾರಣ ವಾಲ್ಮೀಕಿ, ಬಸವಣ್ಣ ಮತ್ತು ಡಾ.ಅಂಬೇಡ್ಕರ್‍ರಂತಹ ಚೈತನ್ಯಗಳ ವಿಚಾರಧಾರೆ ಮೂಲಕ ಮುಂದೆ ಬರಲು ಸಾಧ್ಯವಾಗದಿದ್ದುದು.

ಇಂದು ಧಾರ್ಮಿಕ ಗುರುಗಳನ್ನು ಹೊಂದಿ, ಇಂತಹ ಜಾತ್ರೆ ಮೂಲಕ ತಳ ಸಮುದಾಯದ ವಿಚಾರಧಾರೆಗಳನ್ನು ಚರ್ಚೆ ಮಾಡುತ್ತಾ, ವೇದಿಕೆ ಸೃಷ್ಟಿಸಿಕೊಂಡಿದ್ದೇವೆ. ನಮ್ಮ ಬುದ್ದಿ ನಮ್ಮ ತಲೆಯಲ್ಲಿದೆ ಎಂಬುದನ್ನು ಸಂವಿಧಾನ ಪೂರ್ವದಲ್ಲೇ ಅಕ್ಷರ ಬಾಗಿಲು ತೆರೆದು ಸಾವಿತ್ರಿ ಬಾಫುಲೆ, ಜ್ಯೋತಿ ಬಾಫುಲೆ ತೋರಿಸಿಕೊಟ್ಟಿದ್ದಾರೆ.

ಶತಮಾನಗಳ ಕಾಲ ಅಕ್ಷರ ಗುತ್ತಿಗೆ ಹಿಡಿದ ಹುನ್ನಾರವನ್ನು ಚರಿತ್ರೆ ಮೂಲಕ ಸ್ಪಷ್ಟವಾಗಿದ್ದು ಇಂದು ನಾವು ನಮ್ಮತನ, ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಅಕ್ಷರದ ಮೂಲಕ ಅರಿತು, ನಡೆಯುತ್ತಿದ್ದೇವೆ. ಇಡೀ ಚರಿತ್ರೆಯಲ್ಲಿ ಮುಂದೆ ಬರಬೇಕೆಂಬ ಹೆಣ್ಣಿನ ಹಂಬಲವನ್ನು ತಡೆಗೋಡೆ ನಿರ್ಮಿಸುವ ಮೂಲಕ ಅಡ್ಡಿಪಡಿಸುತ್ತಿದ್ದು ಅದನ್ನು ದೂಡುವ ಶಕ್ತಿ ಬೆಳೆಸಿಕೊಂಡು ಗೋಡೆಯನ್ನು ಒಡೆಯಬೇಕಿದೆ.

ಇಂದಿಗೂ ನಮ್ಮ ಪಾಡು ಸೀತೆಗಿಂತ ಭಿನ್ನವಾಗಿಲ್ಲ. ಇಂದಿಗೂ ಮಹಿಳೆಯನ್ನು ಎರಡನೇ ದರ್ಜೆಯ ಪ್ರಜೆಯಾಗಿ ನೋಡುವ ಸಂಸ್ಕøತಿ ನಮ್ಮಲ್ಲಿದ್ದು ಕಳೆದು ಹೋಗುವ ಅಪಾಯವಿದೆ. ಆದ ಕಾರಣ ಅವಕಾಶ ಸಿಕ್ಕಾಗೆಲ್ಲ ನಾವು ಮನದಾಳದ ಮಾತನ್ನು ಆಡಬೇಕು. ಅಕ್ಷರಸ್ಥರ ಸಂಖ್ಯೆ ಹೆಚ್ಚಬೇಕು ಎಂದರು.

ವಾಲ್ಮೀಕಿ ಬಗ್ಗೆ ಅವೈಜ್ಞಾನಿಕ ಬೋಧನೆ ಸಲ್ಲದು

ವಾಲ್ಮೀಕಿ ಹೇಗಾದ ಎಂಬ ಬಗ್ಗೆ ಪಠ್ಯದ ಮೂಲಕ ಅವೈಜ್ಞಾನಿಕವಾಗಿ ಬೋಧನೆ ಮಾಡುತ್ತಿದೇವೆ. ಅದನ್ನು ನಿಲ್ಲಿಸಬೇಕಿದೆ. ಅವರಲ್ಲಿ ಅಗಾಧವಾದ ಪಾಂಡಿತ್ಯ ಮತ್ತು ಸೂಕ್ಷ್ಮತೆಗಳಿದ್ದವು. ವೈದಿಕ ರಾಮಾಯಣದ ಬದಲಿಗೆ ವಾಲ್ಮೀಕಿ ರಾಮಾಯಣ ಹೇಳಬೇಕಿದೆ. ಸಕುಟುಂಬದಿಂದ ಕೂಡಿದ ರಾಮಾಯಣ ಇದಾಗಿದೆ. ವಾಲ್ಮೀಕಿ ಕಳ್ಳ, ಕುಡುಕ ಆಗಿದ್ದ ಎಂದೆಲ್ಲ ಅಪಮಾನ ಮಾಡುವದನ್ನು ವಿರೋಧಿಸುತ್ತೇನೆ. ವಾಲ್ಮೀಕಿ ಶ್ರೇಷ್ರು ಹಾಗೆಯೇ, ವಾಲ್ಮೀಕಿ, ವ್ಯಾಸರು, ಕನಕದಾಸರು ನಾಯಕರಾಗಿದ್ದರು.

12 ನೇ ಶತಮಾನದಲ್ಲಿ ಎಲ್ಲ ಜಾತಿ ಕುಲದವರನ್ನು ಸಮಾನರನ್ನಾಗಿ ಕಾಣುವ, ಹೆಣ್ಣು ಮಕ್ಕಳಿಗೆ ಸಮಾನತೆ ನೀಡುವ ಅವಕಾಶವನ್ನು ಬಸವಾದಿ ಶರಣರು ಕಲ್ಪಿಸಿಕೊಟ್ಟಿದ್ದು, ಇಂದು ನಮ್ಮ ಗುರುಗಳು ಸಹ ನಮಗೆ ಈ ವೇದಿಕೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟಿರುವುದು ಅನುಭವ ಮಂಟಪವನ್ನು ನೆನಪಿಸುತ್ತಿದೆ.

ಇದೂ ಕೂಡ ಬಸವ ಪರಂಪರೆಯಿಂದ ಬಂದಿದ್ದಾಗಿದ್ದು, ಅಂದೂ ಕೂಡ ಸಾಮಾಜಿಕ ಚಳವಳಿಯಲ್ಲಿ ಮಹಿಳೆಯರ ಪಾಲು ಅರ್ಧ ಇದ್ದರೆ, ಇಲ್ಲಿಯೂ ಅರ್ಧ ಮಹಿಳೆಯರಿದ್ದಾರೆ. ಆದ ಕಾರಣ ಶಾಸನ ಸಭೆಯಲ್ಲಿಯೂ ಮಹಿಳೆಯರಿಗೆ ಅವಕಾಶ ನೀಡಬೇಕೆಂದರು.

ಕರ್ನಾಟಕ ಸರ್ಕಾರದ ಗೃಹ ಕಾರ್ಯದರ್ಶಿಗಳಾದ ಮಾಲಿನಿ ಕೃಷ್ಣಮೂರ್ತಿ ಮಾತನಾಡಿ, ಮಹಿಳೆಯರಿಗೆ ಬೇಕಿರುವುದು ವಿದ್ಯೆ. ವಿದ್ಯಾಭ್ಯಾಸದಿಂದ ಮಹಿಳೆ ಆರ್ಥಿಕವಾಗಿ ಸ್ವಾವಲಂಬನೆಯೊಂದಿಗೆ ಸಾಮಾಜಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ.

ತ್ರಿಮೂರ್ತಿ ಬ್ರಹ್ಮ ವಿಷ್ಣು ಮಹೇಶ್ವರನಿಗೆ ಸರಿಸಮನಾಗಿ ಲಕ್ಷ್ಮಿ, ಸರಸ್ವತಿ ಮತ್ತು ಪಾರ್ವತಿ ತತ್ವಗಳಿದ್ದದ್ದರಿಂದಲೇ ಸಮತೋಲನ ಸಾಧ್ಯವಾಯಿತು. ಹೆಣ್ಣು ಶಿಕ್ಷಿತಳಾಗುವುದು ಸರಸ್ವತಿ ತತ್ವವಾದರೆ ಆರ್ಥಿಕವಾಗಿ ಸ್ವಾವಲಂಬನೆ ಹೊಂದುವುದು ಲಕ್ಷ್ಮಿ ತತ್ವ. ಅವೆರಡನ್ನೂ ಸರಿದೂಗಿಸಿಕೊಂಡು ಕೌಟುಂಬಿಕವಾಗಿ, ಸಾಮಾಜಿಕವಾಗಿ ಅಭಿವೃದ್ದಿ ಕಾಣುವುದು ಪಾರ್ವತಿ ತತ್ವವಾಗಿದ್ದು, ಇವೆಲ್ಲ ನಮ್ಮಲ್ಲಿ ಮೈಗೂಡಿಸಿಕೊಳ್ಳಬೇಕು. ಒಂದು ಹೆಣ್ಣು ಕಲಿತರೆ ಇಡೀ ಕುಟುಂಬ ಕಲಿಯುತ್ತದೆ. ಅದೇ ರೀತಿ ನಾವು ನಮ್ಮ ಮನೆ ಗಂಡು ಮಕ್ಕಳಿಗೆ ಹೆಣ್ಣನ್ನು ಗೌರವಿಸುವಂತಹ ಸಂಸ್ಕಾರ, ಶಿಕ್ಷಣ ನೀಡಬೇಕೆಂದರು.

ಖ್ಯಾತ ಚಲನಚಿತ್ರ ನಟಿ ಹಾಗೂ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶೃತಿ ಮಾತನಾಡಿ, ಮುಂದೆ ಗುರಿ ಮತ್ತು ಹಿಂದೆ ಗುರು ಇದ್ದರೆ ಆತನನ್ನು ಯಾರೂ ಸೋಲಿಸಲು ಸಾಧ್ಯವಿಲ್ಲ. ಮಹಿಳಾ ಸಮಾವೇಶಕ್ಕೆ ಗುರುಗಳು ಅನುವು ಮಾಡಿಕೊಟ್ಟಿರುವುದು ಅಂಬೇಡ್ಕರ್ ಹೇಳಿದ ಸಮಾನತೆಯ ಸಮತೋಲನದಂತಿದೆ.

ಕಿತ್ತೂರು ರಾಣಿ ಚೆನ್ನಮ್ಮ, ಅಬ್ಬಕ್ಕನಂತಹ ದಿಟ್ಟ ಮಹಿಳೆಯರಿಗೆ ಬೇರೆ ರೀತಿಯ ವೈರಿಗಳಿದ್ದು ಅವರು ಖಡ್ಗ ಹಿಡಿದು ಹೋರಾಡಿದರೆ ಇಂದಿನ ಪರಿಸ್ಥಿತಿಯಲ್ಲಿ ವೈರಿಗಳ ಸ್ವರೂಪ ಬೇರೆ ಇದ್ದು ಇದರ ವಿರುದ್ದ ಹೋರಾಟಡಲು ಶಿಕ್ಷಣ ಎಂಬ ಪರಿಣಾಮಕಾರಿ ಅಸ್ತ್ರ ಬೇಕಿದೆ. ಭಾರತೀಯರಾದ ನಾವು ಪುಣ್ಯವಂತರು. ಹೆಣ್ಣನ್ನು ದೇವಿ ರೂಪದಲ್ಲಿ ನೋಡಲಾಗುತ್ತದೆ ಎಂದ ಅವರು ಶಿಕ್ಷಣ ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢಗೊಳಿಸುತ್ತದೆ. ಈ ನಿಟ್ಟಿನಲ್ಲಿ ಮಹಿಳಾ ಜಾಗೃತಿ ಸಮಾವೇಶ ಏರ್ಪಡಿಸಿರುವುದು ಶ್ಲಾಘನೀಯ ಎಂದರು.

ಕೆ.ಪಿ.ಟಿ.ಸಿ.ಎಲ್. ವ್ಯವಸ್ಥಾಪಕ ನಿರ್ದೇಶಕರಾದ ಡಾ.ಮಂಜುಳ ಅವರು ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಹೆಣ್ಣಿಗೆ ದಕ್ಕಬೇಕಾದ ಎಲ್ಲವೂ ಸಂವಿಧಾನದಲ್ಲಿದೆ. ವ್ಯವಸ್ಥೆಯಲ್ಲಿ ಎಲ್ಲಾ ಅನುಕೂಲವೂ ಇದೆ. ಸಾಧನೆ ಮಾಡುವಂತಹ ಅವಕಾಶ ಪ್ರತಿಯೊಬ್ಬರಿಗೂ ಇದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕಾದ ಹೊಣೆ ನಮ್ಮ ಮೇಲಿದೆ. ಪರಿಶ್ರಮ ಪಡದೇ ಯಾವ ಕೆಲಸವು ಪರಿಪೂರ್ಣವಾಗುವುದಿಲ್ಲ. ಯಶಸ್ಸು ಪಡೆಯಬೇಕಾದರೆ ಶ್ರಮ ಪಡಬೇಕು ಎಂದರು.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಗೋಮತಿದೇವಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ನಾವು ಸೀತೆಯನ್ನು ಸೂಕ್ಷ್ಮವಾಗಿ ಅವಲೋಕಿಸಬೇಕೆಂದು ರಾಮಾಯಣದ ಕಥೆಗಳನ್ನು ಉಲ್ಲೇಖಿಸಿದ ಅವರು ಭಾರತೀಯ ಸಮಾಜ ಲಿಂಗಬೇಧದ ಅಸಮಾನತೆಯಲ್ಲಿದ್ದಾಗ, ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಿ, ಸತಿಸಹಗಮನ ಪದ್ಧತಿ ಅತೀ ಹೆಚ್ಚಾಗಿ ಇದ್ದಂತಹ ಕಾಲಘಟ್ಟದಲ್ಲಿ ಸಾವಿತ್ರಿಬಾಫುಲೆ ತನ್ನ ಪತಿ ಹಾಗೂ ತಂದೆಯಿಂದ ಪ್ರೇರಣೆ ಪಡೆದು ಅಕ್ಷರ ಕಲಿತು ಶಿಕ್ಷಕ ತರಬೇತಿ ಮುಗಿಸಿ, ಶೋಷಿತ ವರ್ಗದ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವಂತಹ ಸ್ಥೈರ್ಯ, ಮನೋಬಲ ಮೂಡಿಸಿದ್ದು ನಮಗೆಲ್ಲ ಮಾದರಿ ಎಂದರು.

ಗೋಕಾಕಿನ ಪ್ರಿಯಾಂಕ ಎಸ್ ಜಾರಕಿಹೊಳಿ ಮಾತನಾಡಿ, ಇಂದು ಹೆಣ್ಣು ಮುಖ್ಯವಾಹಿನಿಗೆ ಬಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನವೇ ಕಾರಣ. ಅವರ ಸಿದ್ದಾಂತಗಳನ್ನು ನಾವಿಂದು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಕಲೆ ಇರುತ್ತದೆ. ಅದನ್ನು ಗುರುತಿಸಿ ಪೋಷಿಸಬೇಕಾದ ಹೊಣೆ ಪೋಷಕರು ಹಾಗೂ ಶಿಕ್ಷಕರಾಗಿರುತ್ತದೆ. ಹಾಗೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಮುನ್ನೆಲೆಗೆ ತರುವಲ್ಲಿ ಪ್ರಯತ್ನಿಸಿ ಎಂದು ತಿಳಿಸಿದರು.

ಸೋಮವಾರ ಬೆಳಿಗ್ಗೆ ನಡೆದ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಮಾಜಿ ಸಭಾಪತಿಗಳಾದ ಕೆ.ಬಿ. ಕೋಳಿವಾಡ ಇವರು ಉದ್ಘಾಟಿಸಿದರು. ಹರಿಹರ ಶಾಸಕರಾದ ಎಸ್.ರಾಮಪ್ಪ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪುಷ್ಪ ಅರ್ಪಿಸಿದರು.

ಮಹರ್ಷಿ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಶಾಂತಲಾ ರಾಜಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಕೇಂದ್ರ ಸರ್ಕಾರ ನೀಡಿರುವಂತೆ ರಾಜ್ಯ ಸರ್ಕಾರ ಕೂಡ ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿದರು.

ವೇದಿಕೆಯಲ್ಲಿ ಬೆಂಗಳೂರಿನ ಅಬಕಾರಿ ಅಧೀಕ್ಷಕ ಲಕ್ಷ್ಮೀ ಎಂ ನಾಯಕ, ಶಿವಮೊಗ್ಗದ ಮಹಿಳಾ ವೇದಿಕೆಯ ಜಿಲ್ಲಾಧ್ಯಕ್ಷೆ ತಾರಾ, ಜವಳಿ ಅಭಿವೃದ್ದಿ ನಿಗಮದ ಉಪಾಧ್ಯಕ್ಷೆ ಕಮಲಾ ಮರಿಸ್ವಾಮಿ, ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷೆ ಪುಷ್ಪಾ ಲಕ್ಷ್ಮಣಸ್ವಾಮಿ ಇತರೆ ಮಹಿಳಾ ಅಧಿಕಾರಿಗಳು, ಸಾಧಕಿಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending