ದಿನದ ಸುದ್ದಿ
ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ
ಸುದ್ದಿದಿನಡೆಸ್ಕ್:ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ವಿವಿಧೆಡೆ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ.
ಮಹರ್ಷಿ ವಾಲ್ಮೀಕಿಯನ್ನು ’ಆದಿ ಕವಿ’ ಅಥವಾ ಸಂಸ್ಕೃತ ಭಾಷೆಯ ಮೊದಲ ಕವಿ ಎಂದು ಹೇಳಲಾಗುತ್ತದೆ. ಹಲವೆಡೆ ಜಯಂತಿಯ ಅಂಗವಾಗಿ ಶೋಭಾ ಯಾತ್ರೆ ಮೆರವಣಿಗೆಗಳನ್ನು ಹಮ್ಮಿಕೊಳ್ಳಲಾಗಿದೆ.
ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕರ್ನಾಟಕ ಸರ್ಕಾರ 2024 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಿಸಿದೆ.
ಜಾನುವಾರುಗಳ ಸಂತತಿಯ ಸಂರಕ್ಷಣೆಯಲ್ಲಿ ತೊಡಗಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಿಲಾರಿ ಜೋಗಯ್ಯ, ಬುಡಕಟ್ಟು ಮಕ್ಕಳ ಶಿಕ್ಷಣದ ಹೋರಾಟಗಾರ್ತಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಡಾ.ರತ್ನಮ್ಮ.ಎಸ್, ಗುಡ್ಡಗಾಡು ಪ್ರದೇಶದಲ್ಲಿರುವ ಬುಡಕಟ್ಟು ಸಮುದಾಯದ ಜನರಿಗೆ ಶಿಕ್ಷಣ, ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುತ್ತಿರುವ ಬೆಳಗಾವಿಯ ಗಾಂಧಿನಗರದ ರಾಜಶೇಖರ ತಳವಾರ, ಪರಿಶಿಷ್ಟ ಪಂಗಡ ಸಮುದಾಯದ ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿ ಕುರಿತು ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಬೆಂಗಳೂರು ನಿವಾಸಿಯಾದ ಕೆ.ಎಸ್.ಮೃತ್ಯುಂಜಯ, ರಂಗಭೂಮಿ ಕಲಾವಿದೆಯಾದ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿಯವರಾದ ರತ್ನಮ್ಮ ಬಿ ಸೋಗಿ ಅವರಿಗೆ ಈ ಸಾಲಿನ ಪ್ರಶಸ್ತಿಗಳನ್ನು ಇಂದು ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243