Connect with us

ನಿತ್ಯ ಭವಿಷ್ಯ

ವರ ಮಹಾಲಕ್ಷ್ಮೀ ಹಬ್ಬದ ವ್ರತ ಕಥೆ 

Published

on

ವರ ಮಹಾಲಕ್ಷ್ಮೀ ಹಬ್ಬದ ವ್ರತ ಕಥೆ

ಪೂರ್ವಕಾಲದಲ್ಲಿ ಸತ್ಯಲೋಕವಾಸಿಗಳಾದ ಋಷಿಶ್ರೇಷ್ಠರೆಲ್ಲರೂ ಸೇರಿ ಪುರಾಣಿಕ ಶಿಖಾಮಣಿಯಾದ ಸೂತಮಹರ್ಷಿಯನ್ನು ಕುರಿತು

ಪುರಾಣ ಪುರುಷೋತ್ತಮರಾದ ತಾವು ತ್ರಿಕಾಲ ಜ್ಞಾನಿ. ನೀವು ನಮ್ಮಲ್ಲಿ ಅನುಗ್ರಹ ಮಾಡುವುದಾದರೆ, ಲೋಕದಲ್ಲಿ ಸರ್ವ ಸೌಭಾಗ್ಯಗಳನ್ನೂ ಕೊಡುವ ಉತ್ತಮವಾದ ವ್ರತವನ್ನು ಹೇಳಿ ಎಂದು ಕೇಳಿಕೊಂಡರು.

ಋಷಿ ಶ್ರೇಷ್ಠರ ಮಾತನ್ನು ಮೆಚ್ಚಿದ ಸೂತಮಹಾಮುನಿಗಳು ಕಥೆಯೊಂದನ್ನು ಹೇಳಿದರು…

ಋಷಿ ಶ್ರೇಷ್ಠರೇ ಲೋಕದಲ್ಲಿ ಭಕ್ತಿಯಿಂದ ಪೂಜಿಸುವವರಿಗೆ ಸಕಲ ಇಷ್ಟಾರ್ಥಗಳನ್ನು ಕೊಡುವ ಅತ್ಯುತ್ತಮವಾದ ವ್ರತವೊಂದಿದೆ. ನಿಮಗಾಗಿ ಆ ವ್ರತದ ಕಥೆ ಹೇಳುವೆ ಕೇಳಿ ಎಂದರು.

ಕೈಲಾಸಪರ್ವತವು ದೇವನದಿಗಳಿಂದ ಪೂರ್ಣವಾಗಿ ಫಲಭರಿತವಾದ ನಾನಾಬಗೆಯ ವೃಕ್ಷಸಮೂಹದಿಂದ ಕೂಡಿ ಕಾಮಧೇನು ಕಲ್ಪವೃಕ್ಷ ಸೇರಿದಂತೆ ಸಕಲ ಸುಖಗಳಿಗೂ ಆವಾಸಸ್ಥಾನವಾಗಿರುವುದು.

ಆದ ಕಾರಣ ಯಕ್ಷರಾಕ್ಷಸ ಗರುಡ ಗಂಧರ್ವ ದೇವಮಾನುಷಾದಿಗಳು ತಮ್ಮ ಪೂರ್ವ ಪುಣ್ಯಾನುಸಾರ ಸೇರಿ ಅಲ್ಲಿಗೆ ಒಡೆಯನಾದ ಪಾರ್ವತೀಶ್ವರನಿಗೆ ಸೇವೆ ಸಲ್ಲಿಸುತ್ತಿರುವರು.

ಒಂದಾನೊಂದು ಕಾಲದಲ್ಲಿ ಪರಮೇಶ್ವರನು ಪಾರ್ವತಿಯಾಡನೆ ಸಂತೋಷದಿಂದ ಕುಳಿತಿರುವಾಗ ಜಗನ್ಮಾತೆಯಾದ ಪಾರ್ವತಿಯು ಪರಮೇಶ್ವರನನ್ನು ಕುರಿತು, ಮಹಾದೇವಾ ಪ್ರಪಂಚದಲ್ಲಿ ಸಕಲ ಸುಖಗಳನ್ನು ಕೊಟ್ಟು ಭಕ್ತರ ಕಷ್ಟವನ್ನು ಪರಿಹರಿಸಿ ಸೌಭಾಗ್ಯ ಸಂತೋಷಗಳನ್ನು ಉಂಟುಮಾಡುವ ವ್ರತ ಯಾವುದು? ಅದನ್ನು ನನಗೆ ಹೇಳು ಎಂದು ಕೇಳಿಕೊಂಡಳು.

ಆಗ ಪರಮೇಶ್ವರನು ಪಾರ್ವತಿಯೇ ಕೇಳು, ಸರ್ವ ಸಂಪತ್ಪ್ರದವಾದ ಪುತ್ರಪೌತ್ರದಾಯಕವಾದ ಸನ್ಮಂಗಳ ಸಂತಾನಕರವಾದ ವರಲಕ್ಷ್ಮೀವ್ರತ ಎಂಬುದುಂಟು. ಈ ವ್ರತವನ್ನು ಭಕ್ತಿ ಸಂಪನ್ನರಾದ ಹೆಂಗಸರಾಗಲಿ, ಗಂಡಸರಾಗಲಿ, ಮಕ್ಕಳಾಗಲಿ ಮಾಡಬಹುದು. ಈ ವ್ರತವನ್ನು ಶ್ರಾವಣಮಾಸದ ಶುಕ್ಲಪಕ್ಷದಲ್ಲಿ ಹುಣ್ಣಿಮೆಗೆ ಹತ್ತಿರವಾದ ಶುಕ್ರವಾರದ ದಿನ ಮಾಡಬೇಕು” ಎಂದು ಹೇಳಿದನು.

ಸಂತೋಷಗೊಂಡ ಪಾರ್ವತಿ, ಸ್ವಾಮಿ ವರಲಕ್ಷ್ಮೀ ವ್ರತದ ನಿಯಮವೇನು? ಅದನ್ನು ಹೇಗೆ ಮಾಡಬೇಕು? ಆ ವ್ರತಕ್ಕೆ ಅಧಿದೇವತೆ ಯಾರು?” ಎಂದು ಕೇಳಿದಳು.

ಆಗ ಪರಮೇಶ್ವರನು, ‘ಆ ವ್ರತಕ್ಕೆ ಅಧಿದೇವತೆ ಮಹಾಲಕ್ಷ್ಮಿ.
ಇದನ್ನು ಶ್ರಾವಣಮಾಸದಲ್ಲಿ ಪೌರ್ಣಿಮೆ ಸಮೀಪಸ್ಥವಾದ ಭೃಗುವಾರದಲ್ಲಿ ಮಾಡಬೇಕು.

ಆ ರೀತಿ ವ್ರತ ಮಾಡಿದ ಭಕ್ತರ ಕೋರಿಕೆಗಳೆಲ್ಲ ಕೈಗೂಡಿ ಕಷ್ಟ ಕಾಯಕಗಳು ನಾಶವಾಗುವುದು. ಈ ವಿಷಯದಲ್ಲಿ ಪ್ರಸಿದ್ಧವಾದ ಒಂದು ಕಥೆಯುಂಟು. ಅದನ್ನು ಹೇಳುತ್ತೇನೆ ಕೇಳು ಎಂದು ಪಾರ್ವತಿಗೆ ಕಥೆಯನ್ನು ಹೇಳಲು ಮುಂದಾದನು ಪರಮೇಶ್ವರನು.

ವಿದರ್ಭದೇಶಕ್ಕೆ ರಾಜಧಾನಿಯಾದ ಕುಂಡಿನನಗರದಲ್ಲಿ ಚಾರುಮತಿ ಎಂಬ ಸ್ತೀ ಇದ್ದಳು.
ಈ ಚಾರುಮತಿ ದರಿದ್ರಳಾದರೂ ಸದಾಚಾರ ಸಂಪನ್ನಳು, ಪತಿ ಶುಶ್ರೂಷೆಯೆ ಮುಖ್ಯವೆಂದು ತಿಳಿದು ಸದಾ ಸಂತೋಷ ಚಿತ್ತಳಾಗಿ ಪತಿಯ ಮನಸ್ಸನ್ನು ನೋಯಿಸದೆ ಸದ್ವರ್ತನೆ ಉಳ್ಳವಳಾಗಿದ್ದಳು.

ಇವಳ ಸದಾಚಾರ ಸಂಪನ್ನತೆಗೆ ಮೆಚ್ಚಿದ ಮಹಾಲಕ್ಷ್ಮಿಯು, ಒಂದು ದಿನ ಚಾರುಮತಿಯು ಮಲಗಿ ನಿದ್ರಿಸುತ್ತಿರುವಾಗ ಸ್ವಪ್ನದಲ್ಲಿ ಪ್ರತ್ಯಕ್ಷಳಾಗಿ ಬಂದು ಹೇಳಿದಳು- ‘ ಪತಿವ್ರತೆಯಾದ ಚಾರುಮತಿ, ನಿನ್ನ ಗುಣಶೀಲಗಳಿಗೆ ಮೆಚ್ಚಿ ನಿನ್ನ ಪೂರ್ವ ಪುಣ್ಯಾನುಸಾರವಾಗಿ ನಿನ್ನಲ್ಲಿ ಅನುಗ್ರಹ ಮಾಡಲು ಬಂದಿರುವ ಮಹಾಲಕ್ಷ್ಮಿ ನಾನು.

ಈಗ ನಾನು ಹೇಳುವ ವಿಷಯವನ್ನು ಗಮನವಿಟ್ಟು ಕೇಳಿ ಆಚರಿಸು. ಅದರಿಂದ ನಿನಗೆ ನಿನ್ನ ದಾರಿದ್ರ್ಯವು ನಾಶವಾಗಿ, ಅಷ್ಟೈಶ್ವರ್ಯವು ಪ್ರಾಪ್ತಿಯಾಗುತ್ತದೆ.

ಯಾರು ನನ್ನನ್ನು ಶ್ರಾವಣ ಮಾಸದಲ್ಲಿ ಬರುವ ಎರಡನೆಯ ಶುಕ್ರವಾರದ ದಿನ ಪ್ರದೋಷ ಸಮಯಕ್ಕೆ ಸರಿಯಾಗಿ ವಿಧಿವತ್ತಾಗಿ ನನ್ನ ಪೂಜೆಯನ್ನು ಮಾಡಿದರೆ ನಾನು ಅವರಿಗೆ ಸಕಲ ಭೋಗಭಾಗ್ಯಗಳನ್ನು ಕೊಡುವೆನು.

ಯಾರಿಗೆ ಪುಣ್ಯ ಸಂಪರ್ಕವಿರುವುದೊ, ಅಂಥವರಿಗೆ ಈ ವ್ರತದಲ್ಲಿ ಭಕ್ತಿ ಹುಟ್ಟುತ್ತದೆ.

ಭೂಲೋಕದಲ್ಲಿ ಯಾರು ನನ್ನನ್ನು ಭಕ್ತಿಯಿಂದ ಪೂಜಿಸುತ್ತಾರೋ ಅವರೇ ಧನ್ಯರು ! ಅವರೇ ಶೂರರು ! ಅವರೇ ಪುಣ್ಯಶಾಲಿಗಳು, ಅವರೇ ಮಹಾತ್ಮರು, ಸಾಹಸಿಗಳು. ಅವರೇ ಪಂಡಿತರು, ಅಂಥವರೇ ಸ್ತೋತ್ರಾರ್ಹರು, ಬಹಳವಾಗಿ ಹೇಳುವುದೇನು? ಅವರೇ ಸರ್ವೋತ್ತಮರು. ಯಾರು ನನ್ನ ಕಟಾಕ್ಷಕ್ಕೆ ಬಾಹಿರರಾಗಿರುವರೊ! ಅವರ ಬಾಳು ಅಜಗಳಸ್ತನದಂತೆ ವ್ಯರ್ಥವೇ ಸರಿ. ಆದ ಕಾರಣ ನೀನು ಈ ವ್ರತವನ್ನು ಮಾಡಿ ಧನ್ಯಳಾಗು” ಎಂದು ನಿದ್ರೆಯಲ್ಲಿ ಉಪದೇಶಿಸಿದ ಮಹಾಲಕ್ಷ್ಮಿಯು ಕಣ್ಮರೆಯಾದಳು.

ಆಗ ಚಾರುಮತಿಯು ನಿದ್ರೆಯಿಂದೆದ್ದು ನಡೆದ ಸಂಗತಿಯನ್ನೆಲ್ಲ ತನ್ನವರಿಗೆ ಹೇಳಿದಳು.

ಕೆಲವು ದಿವಸಗಳನ್ನು ಕಳೆಯಲು ಶ್ರಾವಣಮಾಸದ ಎರಡನೆಯ ಶುಕ್ರವಾರ ಬಂದಿತು. ಆ ದಿನ ಬಹು ಜನ ಭಕ್ತರು ವರಮಹಾಲಕ್ಷ್ಮಿಯನ್ನು ಪೂಜಿಸಿ ಸಂತೋಷದಿಂದ ಕೋರಿಕೆಗಳನ್ನು ಕೈಗೂಡಿಸಿಕೊಂಡು ಸುಖದಿಂದ ಬಾಳುತ್ತಿದ್ದರು.

ಆದರೆ, ದರಿದ್ರಳಾದ ಚಾರುಮತಿಯು ನಿಯಮದಿಂದ ಈ ವ್ರತವನ್ನು ಮಾಡಿ ವರಲಕ್ಷ್ಮಿಯ ಕಟಾಕ್ಷದಿಂದ ಅಷ್ಟೈಶ್ವರ್ಯವನ್ನೂ ಪಡೆದಳು.

ಸುಖವನ್ನು ಅನುಭವಿಸುತ್ತ ಬಡವರಿಗೆ ಅನ್ನದಾನ ಮಾಡಿ, ಬಂಧುವರ್ಗದವರನ್ನು ಪ್ರೀತಿಯಿಂದ ಕಾಪಾಡುತ್ತ ಭೂಲೋಕದಲ್ಲಿ ಅನಂತವಾದ ಅಪಾರಸೌಖ್ಯ ಅನುಭವಿಸಿ, ಪರಲೋಕದಲ್ಲಿ ಶ್ರೇಷ್ಠವಾದ ಪತಿಸಾಯುಜ್ಯವನ್ನು ಪಡೆದಳು.

ಆದ ಕಾರಣ ಈ ಲೋಕದಲ್ಲಿ ಯಾರು ಭಕ್ತಿಭಾವದಿಂದ ಈ ವ್ರತವನ್ನು ಆಚರಿಸುವರೋ ಅಂಥವರು ಅಖಂಡವಾದ ಐಶ್ವರ್ಯ ಪಡೆದು, ವರಲಕ್ಷ್ಮಿಯ ಪ್ರಸಾದದಿಂದ ಭೋಗಭಾಗ್ಯಗಳನ್ನು ಅನುಭವಿಸುವರು ಎಂದು ಹೇಳಿ ಪರಮೇಶ್ವರನು ಕಥೆ ಮುಗಿಸಿದನು.

ಕಥೆ ಕೇಳಿದ ಪಾರ್ವತಿಯು, ಮಹಾದೇವ ನನ್ನಲ್ಲಿ ನಿನಗೆ ದಯೆಯುಂಟಾದರೆ ಈ ವಿಧಾನವನ್ನು ವಿವರವಾಗಿ ಹೇಳಬೇಕು” ಎಂದು ಕೇಳಿಕೊಂಡಳು.

ಆಗ ಪರಮೇಶ್ವರನು ಪೂಜಾ ವಿಧಾನಗಳನ್ನು ಹೀಗೆ ವಿವರಿಸಿದನು-

ಕೇವಲ ಪುಣ್ಯಪ್ರದವಾದ ಶ್ರಾವಣಮಾಸದ ಎರಡನೆಯ ಶುಕ್ರವಾರದ ದಿನ ಭಕ್ತಿಯುಳ್ಳ ಸ್ತ್ರೀಯರಾಗಲಿ, ಪುರುಷರಾಗಲಿ ಅಭ್ಯಂಜನವನ್ನು ಮಾಡಿಕೊಂಡು ಮಂಗಳ ಸ್ನಾನದ ನಂತರ ಶುಭವಸ್ತ್ರಗಳನ್ನು ಧರಿಸಬೇಕು.

ಮನೆಯಲ್ಲಿ ರಂಗೋಲಿಯಿಂದ ಅಲಂಕೃತವಾದ ಶುದ್ಧ ಪ್ರದೇಶದಲ್ಲಿ ಮನೋಹರವಾದ ಮಂಟಪವನ್ನು ನಿರ್ಮಿಸಬೇಕು.

ಅದರ ಮಧ್ಯದಲ್ಲಿ ಪಂಚವರ್ಣದಿಂದ ಕೂಡಿದ ಅಷ್ಟದಳ ಪದ್ಮವನ್ನು ರಚಿಸಿ, ಅದರ ಮೇಲೆ ಮಾವಿನ ಚಿಗುರುಗಳಿಂದ ಕೂಡಿದ ಕಲಶವನ್ನು ಇಟ್ಟು ಪ್ರಾಣಪ್ರತಿಷ್ಠಾಪನ ಮಾಡಿ, ವರಮಹಾಲಕ್ಷ್ಮಿಯನ್ನು ಪೂಜಿಸಬೇಕು.
ಷೋಡಶೋಪಚಾರ ಮಾಡಿ ಸತ್ಕರಿಸಿ
ಪದ್ಮಾಸನೆ, ಪದ್ಮಊರು, ಪದ್ಮಾಕ್ಷಿ, ಪದ್ಮ ಸಂಭವೆ ಎಂಬ ಮಂತ್ರದೊಂದಿಗೆ ಶಾಸ್ತ್ರೋಸ್ತ್ರ ಪೂಜೆಯಿಂದ ದೇವಿಯನ್ನು ತೃಪ್ತಿಪಡಿಸಿ, ಯೋಗ್ಯನಾದ ಬ್ರಾಹ್ಮಣನಿಗೆ ಉಪಾಯನ ದಾನವನ್ನು ಕೊಡಬೇಕು.

ಸುವಾಸಿನಿಯರನ್ನು ಸಮಾರಾಧನೆ ಸುಗಂಧ ತಾಂಬೂಲಗಳಿಂದ ತೃಪ್ತಿಪಡಿಸಬೇಕು.

ಅನಂತರ ಭಕ್ತಿಯುಕ್ತರಾದ ಬ್ರಾಹ್ಮಣ ಸುವಾಸಿನಿಯರಿಗೆ ಭೋಜನ ಮಾಡಿಸಿ, ಭೂರಿದಕ್ಷಿಣೆಗಳನ್ನು ಕೊಟ್ಟು ಈ ಕಥೆಯನ್ನು ಕೇಳಬೇಕು” ಎಂದು ಪರಮೇಶ್ವರನು ವಿವರಿಸಿದನು.

ಸೂತಪುರಾಣಿಕರು ಈ ಕಥೆಯನ್ನು ಋಷಿಗಳಿಗೆ ಹೇಳಿದರು. ಈ ಕಥೆಯನ್ನು ಕೇಳಿದ ಋಷಿಗಳು ಸಂತೋಷ ಭರಿತರಾದರು.

ಈ ವರಮಹಾಲಕ್ಷ್ಮೀ ವ್ರತವನ್ನು ಯಾರು ಮಾಡುವರೋ ಹಾಗೂ ಈ ಕಥೆಯನ್ನು ಯಾರು ಕೇಳುವರೋ ಅವರಿಗೆ ದಾರಿದ್ರ್ಯ ದುಃಖ ನಾಶವಾಗಿ ಸಂಪತಿನಿಂದ ಸಕಲ ಭಾಗ್ಯಗಳೂ ಕೂಡಿ ಬರುತ್ತವೆ ಎಂದು ಪುರಾಣ ಹೇಳುತ್ತದೆ.
▬▬▬ஜ۩۞۩ஜ▬▬▬*▬▬▬ஜ۩۞۩ஜ▬▬
ಧಮೋ೯ ರಕ್ಷತಿ ರಕ್ಷಿತ:* ಕೃಷ್ಣಾರ್ಪಣಮಸ್ತು
ಸರ್ವಜನಾಃ ಸುಖಿನೋಭವಂತು
▬▬▬ஜ۩۞۩ஜ▬▬▬▬▬▬ஜ۩۞۩ஜ▬▬▬

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending