ರಾಜಕೀಯ

ವಾರಣಾಸಿ ಲೋಕಸಭಾ : ಮಾಜಿ ಯೋಧ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ

Published

on

ಸುದ್ದಿದಿನ, ವಾರಣಾಸಿ : ವಾರಣಾಸಿಯ ಲೋಕಸಭಾ ಚುನಾವಣಾ ಕಣದಲ್ಲಿ ನರೇಂದ್ರ ಮೋದಿಯ ವಿರುದ್ಧ ಎಸ್ಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಂತಹ ಮಾಜಿ ಸೈನಿಕ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ಜಿಲ್ಲಾ ಚುನಾವಣಾ ಆಯೋಗವು ಇಂದು ತಿರಸ್ಕರಿಸಿದೆ.

ತೇಜ್ ಬಹದ್ದೂರ್ ಅವರು ಭ್ರಷ್ಟಾಚಾರ, ವಿಶ್ವಾಸ ದ್ರೋಹದಡಿ ಬಿಎಸ್ಎಫ್ ಸೇವೆಯಿಂದ ವಜಾಗೊಂಡಿದ್ದರು. ಸೇವೆಯಿಂದ ವಜಾಗೊಂಡ ವ್ಯಕ್ತಿ ಐದು ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹನಲ್ಲ. ಹಾಗಾಗಿ ಸೇವೆಯಿಂದ ವಜಾಗೊಂಡಿರುವಂತಹ ತೇಜ್ ಬಹದ್ದೂರ್ ಅವರು ಬಿಎಸ್ಎಫ್ ನಿಂದ ನಿರಪೇಕ್ಷಣಾ ಪತ್ರವನ್ನು ತರುವಂತೆ ಆಯೋಗವು ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷವು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಾಲಿನಿಯಾದವ್ ಅವರನ್ನು ತಮ್ಮ ಪಕ್ಷದಿಂದ ಚುನಾವಣಾ ಕಣಕ್ಕಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version