ದಿನದ ಸುದ್ದಿ
ರಾಷ್ಟ್ರಪ್ರಶಸ್ತಿ ವಿಜೇತ ʻಬಾಬಿ ಸಿಂಹʻ ಅಭಿನಯದ ʻವಸಂತ ಕೋಕಿಲʻ ಕನ್ನಡ ಸಿನಿಮಾದ ಫಸ್ಟ್ ಲುಕ್ ರಿಲೀಸ್.

ಸುದ್ದಿದಿನ ಡೆಸ್ಕ್ : ಬಾಬಿ ಸಿಂಹ ರ ಜನ್ಮದಿನದ ಸಂದರ್ಭದಲ್ಲಿ ವಸಂತ ಕೋಕಿಲ ಫಸ್ಟ್ ಲುಕ್ ರಿಲೀಸ್ ಮಾಡಿದರು ನಟ ರಕ್ಷಿತ್ ಶೆಟ್ಟಿ.
ಎಸ್ ಆರ್ ಟಿ ಎಂಟರ್ಟೈನ್ಮೆಂಟ್ಸ್, ಮುದ್ರ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಜಂಟಿಯಾಗಿ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಬಾಬಿ ಸಿಂಹ ನಾಯಕನಟರಾಗಿ ನಿರ್ಮಾಣವಾಗುತ್ತಿರುವ ತ್ರಿಭಾಷಾ ಚಿತ್ರ ವಸಂತ ಕೋಕಿಲ. ರಾಮ್ ತಳ್ಲೂರಿ ಚಿತ್ರದ ನಿರ್ಮಾಪಕರಾಗಿದ್ದು, ರಮಣನ್ ಪುರುಷೋತ್ತಮ ನಿರ್ದೇಶನ ಮಾಡುತ್ತಿದ್ದಾರೆ.
ಈ ಚಿತ್ರದಲ್ಲಿ ಬಾಬಿ ಸಿಂಹಗೆ ಜೋಡಿಯಾಗಿ ನಟಿ ಕಾಶ್ಮೀರ ಪರ್ದೇಶಿ ಅಭಿನಯಿಸುತ್ತಿದ್ದಾರೆ. ನವೆಂಬರ್ 6 ರಂದು ಬಾಬಿ ಸಿಂಹ ಜನ್ಮದಿನದ ಪ್ರಯುಕ್ತ ಖ್ಯಾತ ನಟ ರಕ್ಷಿತ್ ಶೆಟ್ಟಿ ಈ ಚಿತ್ರದ ಟೈಟಲ್ ವಸಂತ ಕೋಕಿಲ ಅನೌನ್ಸ್ ಮಾಡೋದ್ರ ಜೊತೆಗೆ ತಮ್ಮ ಟ್ವಿಟರ್ ಅಕೌಂಟ್ ಮೂಲಕ ಫಸ್ಟ್ ಲುಕ್ ರಿಲೀಸ್ ಮಾಡಿದ್ರು. ಇದೇ ವೇಳೆ ತೆಲುಗು ಭಾಷೆಯ ಫಸ್ಟ್ಲುಕ್ನ್ನ ಬಾಹುಬಲಿ ಖ್ಯಾತಿಯ ರಾಣಾ ಹಾಗೂ ತಮಿಳು ಭಾಷೆಯ ಫಸ್ಟ್ಲುಕ್ ಪೋಸ್ಟರ್ನ್ನ ಖ್ಯಾತ ನಟ ಧನುಷ್ ಆನ್ಲೈನ್ ಮೂಲಕವೇ ರಿಲೀಸ್ ಮಾಡಿದ್ರು. ರೋಮ್ಯಾಂಟಿಕ್ ಥ್ರಿಲಕ್ ಜಾನರ್ನಲ್ಲಿ ಈ ಚಿತ್ರ ನಿರ್ಮಾಣಗೊಳ್ಳುತ್ತಿದೆ.
ಇದೀಗ ಬಿಡುಗಡೆಗೊಂಡಿರೋ ಫಸ್ಟ್ಲುಕ್ ನಲ್ಲಿ ಬಾಬಿ ಸಿಂಹ ವಿಭಿನ್ನ ರೀತಿಯಲ್ಲಿ ಕಾಣುವಂತೆ ಕೈಯಲ್ಲಿ ಕ್ರಾಸ್ ಬೌ, ಫಾರೆಸ್ಟ್ ಬ್ಯಾಕ್ಡ್ರಾಪ್, ಡಾರ್ಕ್ ಗ್ರೀನ್ ಕಲರ್ ಟೆಂಟ್ ಹೀಗೆ ಬಹಳಷ್ಟು ಕುತೂಹಲಕಾರಿ ಅಂಶಗಳಿವೆ. ಬಾಬಿ ಸಿಂಹ ಹಾಗೂ ನಿರ್ದೇಶಕ ರಮಣನ್ ಕಾಂಬಿನೇಶನ್ನಲ್ಲಿ ಈ ಚಿತ್ರ ಅದ್ಭುತವಾಗಿ ಮೂಡಿಬರುತ್ತಿದೆ ಎಂದು ಚಿತ್ರತಂಡ ವಿಶ್ವಾಸ ವ್ಯಕ್ತಪಡಿಸಿದೆ. ಥಿಂಕ್ ಮ್ಯೂಸಿಕ್ ಈ ಚಿತ್ರದ ಆಡಿಯೋ ಹಕ್ಕುಗಳನ್ನ ಹೊಂದಿದೆ. ಈ ಚಿತ್ರಕ್ಕೆ ಸಂಬಂಧಿಸಿದ ಮತ್ತಷ್ಟು ವಿಷಯಗಳನ್ನ ಶೀಘ್ರದಲ್ಲೇ ಅಧಿಕೃತವಾಗಿ ಬಿಡುಗಡೆಗೊಳಿಸುವುದಾಗಿ ನಿರ್ಮಾಪಕ ರಾಮ್ ತಳ್ಲೂರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ| ವಾಟ್ಸಪ್| 8083105526

ದಿನದ ಸುದ್ದಿ
ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ಧಾರವಾಡ : ಕಾನೂನು ಇಲಾಖೆ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಹಾಗೂ ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಹೊಸದಾಗಿ ನೇಮಕ ಮಾಡಿಕೊಳ್ಳಲು ಬಾರ್ ಅಸೊಸಿಯೇಷನ್ದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಸ್ಥಳೀಯ ಬಾರ್ ಅಸೋಸಿಯೇಷನ್ ಸದಸ್ಯರಾಗಿರಬೇಕು ಹಾಗೂ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 10 ವರ್ಷ ಮತ್ತು ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 7 ವರ್ಷ ವಕೀಲ ವೃತ್ತಿಯ ಅನುಭವ ಹೊಂದಿರಬೇಕು. ಮತ್ತು ಇವರ ನೇಮಕಾತಿಯು ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಸೇವಾ ಷರತ್ತುಗಳ ನಿಯಮಗಳು, 1977 ರಲ್ಲಿ ಹೇಳಲಾದ ಷರತ್ತುಗಳಿಗೆ ಒಳಪಟ್ಟಿರುತ್ತದೆ.
ಇದನ್ನೂ ಓದಿ | ಹಲವು ನಾಯಕರ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ..!
ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ದಾಖಲಾತಿಗಳೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮಾರ್ಚ್ 15, 2021 ರೊಳಗಾಗಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಬಿ.ಶ್ರೀರಾಮುಲು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಉದ್ಘಾಟನೆ ನೆರವೇರಿತು

ಸುದ್ದಿದಿನ,ಧಾರವಾಡ : ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಕವಿವಿ ಆವರಣದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯರ್ಥಿ ನಿಲಯ ಹಾಗೂ ಸಪ್ತಾಪೂರದಲ್ಲಿ ನಿರ್ಮಿಸಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಇಂದು ಮಧ್ಯಾಹ್ನ ಕವಿವಿ ಆವರಣದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹಾಗೂ ಬೃಹತ್, ಮಧ್ಯಮ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಕವಿವಿ ಕುಲಪತಿ ಡಾ.ಕೆ.ಬಿ.ಗುಡಸಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ಸೇರಿದಂತೆ ಇತರ ಅಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ | ಟಿಎಂಸಿ ಮಣ್ಣಿನ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಲಿದೆ: ಪಿಎಂ ಮೋದಿ ಅಭಿಮತ
ಕವಿವಿ ಆವರಣದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯವನ್ನು 412.83 ಲಕ್ಷ ರೂ.ಗಳ ವೆಚ್ಚದಲ್ಲಿ ಹಾಗೂ ಸಪ್ತಾಪೂರದಲ್ಲಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯರ್ಥಿ ನಿಲಯವನ್ನು 387 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ.
ಇದೆ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆಯಡಿ ಆಯ್ಕೆಯಾಗಿದ್ದ ವಿವಿಧ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ | ದೂರು ವಾಪಾಸ್ ಪಡೆದ ದಿನೇಶ್ ಕಲ್ಲಳ್ಳಿ

ಸುದ್ದಿದಿನ,ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇದೀಗ ದೂರು ವಾಪಸ್ ಪಡೆದುಕೊಂಡಿದ್ದಾರೆ.
ದಿನೇಶ್ ಕಲ್ಲಹಳ್ಳಿ ತಮ್ಮ ವಕೀಲರನ್ನು ದೂರು ವಾಪಸ್ ಪಡೆಯಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕಳುಹಿಸಿದ್ದು, ನಿಯಮಾನುಸಾರ ದೂರು ವಾಪಸ್ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಅವರೇ ಠಾಣೆಗೆ ಆಗಮಿಸಿ ದೂರು ಪಡೆಯಲು ನಿರ್ಧರಿಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು 5 ಕೋಟಿ ಡೀಲ್ ಬಗ್ಗೆ ಮಾತಾಡಿದ್ದರಿಂದ ನನ್ನ ಮನಸ್ಸಿಗೆ ನೋವಾಗಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ಬಗ್ಗೆ ಚರ್ಚೆಯಾಗ ಬೇಕಿತ್ತು ಆದರೆ, ಜನ ನನ್ನ ನೈತಿಕತೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಇದು ನನಗೆ ತಿರುಗುಬಾಣವಾಗಿದೆ ಎಂದು ದೂರುದಾರ ದಿನೇಶ್ ಹೇಳಿದ್ದು, ಈ ಹಿನ್ನೆಲೆಯಲ್ಲಿ ತಾನು ದೂರು ವಾಪಸ್ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ದಿನದ ಸುದ್ದಿ6 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
-
ನಿತ್ಯ ಭವಿಷ್ಯ7 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ5 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ಬಹಿರಂಗ3 days ago
ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!
-
ನಿತ್ಯ ಭವಿಷ್ಯ5 days ago
ಬುಧವಾರ ರಾಶಿ ಭವಿಷ್ಯ : ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆತಂಕ ದೂರವಾಗಲಿದೆ
-
ದಿನದ ಸುದ್ದಿ5 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
-
ನಿತ್ಯ ಭವಿಷ್ಯ6 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ