ದಿನದ ಸುದ್ದಿ
ದಾವಣಗೆರೆ | ವಯೋಶ್ರೇಷ್ಟ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರು 2021-22ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ ವಯೋಶ್ರೇಷ್ಠ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಸಂಬಂಧ ಈ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಹಿರಿಯ ನಾಗರಿಕರು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಆಂಗ್ಲ ಭಾಷೆಯ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಗಳಲ್ಲಿ ಅರ್ಜಿಯನ್ನು ಮಾ.03 ರೊಳಗಾಗಿ ಕಚೇರಿಗೆ ಸಲ್ಲಿಸಬಹುದು.
ಇದನ್ನೂ ಓದಿ | ಪರವಾನಗಿ ಹೊಂದಿದ ಮಾರಾಟಗಾರರಿಂದ ಮಾತ್ರ ತಂಬಾಕು ಮಾರಾಟವಾಗಬೇಕು : ಎನ್ಎಲ್ಎಸ್ಐಯು ವರದಿ
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ http://socialjustice.nic.in ಪರಿಶೀಲಿಸಲು ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, 14ನೇ ಮುಖ್ಯರಸ್ತೆ, ಕುವೆಂಪು ನಗರ, ಶಂಕರ್ ಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ. ದೂ.ಸಂ: 08192-263939ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಜಿ.ಎಸ್ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243