Connect with us

ದಿನದ ಸುದ್ದಿ

ವಿಶ್ವ ವೀರಶೈವ ಲಿಂಗಾಯಿತ ಏಕೀಕರಣ ಪರೀಷತ್ ನಿಂದ ನಾಳೆ ಬಸವ ಜಯಂತಿ – ಪ್ರತಿಭಾ ಪುರಸ್ಕಾರ

Published

on

ಸುದ್ದಿದಿನ,ದಾವಣಗೆರೆ: ವಿಶ್ವ ವೀರಶೈವ ಲಿಂಗಾಯಿತ ಏಕೀಕರಣ ಪರೀಷತ್(ರಿ) ಹಾಗು ವಿಶ್ವ ಕಲ್ಯಾಣ ಪರಿಸರ ಗ್ರಾಹಕ ಸಾಂಸ್ಕೃತಿಕ ಪರಿಷತ್ತು ಜಂಟಿಯಾಗಿ ಮೇ 25 ರಂದುಬೆಳಿಗ್ಗೆ 10.30 ಕ್ಕೆ ಬಸವಜಯಂತಿ ಉತ್ಸವ ಮತ್ತು ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 90 ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕಾಯಕಯೋಗಿ ಬಸವಶ್ರೀ ಪ್ರಶಸ್ತಿ, ಕಾಯಕಯೋಗಿ ಶರಣೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಡಾ. ರೇವಣ್ಣ ಬಳ್ಳಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಸಾನಿಧ್ಯವನ್ನು ಪಾಂಡೋಮಟ್ಟಿ ಶ್ರೀ ಡಾ.ಗುರುಬಸವ ಮಹಾ ಸ್ವಾಮಿಗಳು, ಅಧ್ಯಕ್ಷ ಡಾ. ರೇವಣ್ಣ ಬಳ್ಳಾರಿ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಉಚ್ಛ ನ್ಯಾಯಾಲಯ ಕನ್ನಡದಲ್ಲಿ ಮೊದಲ ತೀರ್ಪು ನೀಡಿದ ನ್ಯಾಯಮೂರ್ತಿ ಅರಳಿ ನಾಗರಾಜ್ ಉದ್ಘಾಟನೆ ನೆರವೇರಿಸುವರು.

ಕುಸುಮಾ ಲೋಕೇಶ್, ಜಿ.ಕೆ. ಶಕುಂತಲಾ
ಅವರು ಬಸವಾದಿಶರಣರ ವಚನಗಳ ಕುರಿತಾಗಿ ಉಪನ್ಯಾಸ ನೀಡುವರು ಎಂದರು.

ಜ್ಯೋತಿ ಬಸವಶ್ರೀ ಪ್ರಶಸ್ತಿಯನ್ನು ನ್ಯಾಯಮೂರ್ತಿ ಅರಳಿ ನಾಗರಾಜ್‍ರವರಿಗೆ, ಕಾಯಕಯೋಗಿ ಬಸವಶ್ರೀ ಪ್ರಶಸ್ತಿಗಳನ್ನು ಹೊನ್ನಾಳಿ ಹಿರಿಯ ಖ್ಯಾತ ಸಾಹಿತಿಗಳಾದ ಯು.ಎನ್.ಸಂಗನಾಳ ಮಠ್, ಮೈಸೂರು ಆಕಾಶವಾಣಿ ಕೇಂದ್ರದ ವಿಶ್ರಾಂತ ನಿರ್ದೇಶಕ ಎಮ್.ವಿ.ರಮೇಶ್, ಮೈಸೂರು ಕನ್ನಡ ಜಾಗೃತಿ ಸಮಿತಿ ಸದಸ್ಯರಾದಭೇರ್ಯ ರಾಮ್ ಕುಮಾರ್, ನಗರದ ಜನರಲ್ ಸರ್ಜನ್ ಡಾ. ರವಿಕುಮಾರ್.ಟಿ.ಎಮ್., ಶಿವಕುಮಾರ್ ಹೆಚ್.ಎಸ್.,
ಪೌರಕಾರ್ಮಿಕ ಎನ್.ರಾಜು ರವರಿಗೆ ಮತ್ತು ಕಾಯಕಯೋಗಿ ಶರಣೆ ಪ್ರಶಸ್ತಿಗಳನ್ನು ನಗರದ ಸಿದ್ದಗಂಗಾ
ಶಾಲೆ ರುವಾರಿ ಜಸ್ಟಿನ್ ಡಿಸೋಜ, ಕವಿ, ಸಾಹಿತಿ, ಸಂಧ್ಯಾಸುರೇಶ್, ಶಿಕ್ಷಕಿ ಮಾಯಿನೂರು ಖಾನಂ, ಶುಶ್ರೂಷಕಿ
ರೂಪಾ ಬಸವರಾಜ್ ಮಾತೂರ್ ಅವರಿಗೆ ಪ್ರದಾನ ಮಾಡಲಾಗುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪತ್ರಕರ್ತ ಮಂಜುನಾಥ್ ಏಕಬೋಟೆ, ಹರ್ಷಿತ್ ಇಂಡಸ್ಟ್ರೀ ಮಾಲೀಕ ಶ್ರೀಹರಿ ಎನ್.ಗೌರಿಪುರ, ಇಂದೂಧರ್ ಇಶಾನಿಮಠ್, ಬಸವರಾಜ್ ಸಿರಿಗೆರೆ
ಭಾಗವಹಿಸಲಿದ್ದಾರೆ. ಇದಲ್ಲದೇ ಸುಮಾರು 120 ಕ್ಕೂ ಹೆಚ್ಚು
ಪಿಯುಸಿ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಪಡೆದ ಪ್ರತಿಭಾವಂತರಿಗೆ
ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ, ಇಂ-ದುಧರ್ ನಿಶಾನಿಮಠ್, ಜಿ.ಕೆ.ಶಕುಂತಲಾ, ಬಸವರಾಜ್ ಸಿರಿಗೆರೆ, ಶಿವಕುಮಾರ್ ಡಿ. ಶೆಟ್ಟರ್, ಎ.ಬಿ. ರುದ್ರಮ್ಮ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

Published

on

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ದೊರೆಯುವಂತಾಗಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

Published

on

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ ಸಾಧನವಾಗಿದೆ. ಇದರ ಜಾರಿಯ ಬಳಿಕ ಬಡವರು ಮತ್ತು ಜನಸಾಮಾನ್ಯರಿಗೆ ಗಮನಾರ್ಹ ಉಳಿತಾಯವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹೇಳಿದ್ದಾರೆ.

ಜಿಎಸ್‌ಟಿ ಜಾರಿಯಾದ ನಂತರ ಗೃಹಬಳಕೆಯ ವಸ್ತುಗಳು ಹೆಚ್ಚು ಅಗ್ಗವಾಗಿವೆ ಎಂದಿರುವ ಅವರು, ಜನರ ಜೀವನವನ್ನು ಪರಿವರ್ತಿಸುವ ಈ ಸುಧಾರಣೆಗಳ ಪ್ರಯಾಣವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹರಿಹರ | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಕೋರ್ಸ್‍ಗಳಾದ ಡಿಪ್ಲೊಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್, ಡಿಪ್ಲೊಮಾ ಇನ್ ಆಟೋಮೇಷನ್ ಮತ್ತು ರೊಬೊಟಿಕ್ಸ್. ಡಿಪ್ಲೊಮಾ ಇನ್ ಎಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಇನ್ ಪ್ರಿಸಿಷನ್ ಮ್ಯಾನ್ಯುಪ್ಯಾಕ್ಟರಿಂಗ್, ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಮತ್ತು ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ವಿದ್ಯಾರ್ಥಿಗಳು ಜಿಟಿಟಿಸಿ ಹರಿಹರ ಕೇಂದ್ರಕ್ಕೆ ನೇರವಾಗಿ ಸಂಪರ್ಕಿಸಿ ಆಪ್‍ಲೈನ್‍ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ:22 ಸಿ & ಡಿ ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ,ಕೆ ಎಸ್‍ ಆರ್ ಟಿ ಸಿ ಡಿಪೋ ಹತ್ತಿರ ಹರಿಹರ ದೂ.ಸಂ. 9845941245 / 8711913947

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending