ದಿನದ ಸುದ್ದಿ
ಶಿಮ್ಲಾದಿಂದ ಕನ್ನಡತಿ ಕರೆತಂದ ವಿಕ ವರದಿಗಾರ ನಿಮಗೆ ಗೊತ್ತಾ?

ಸುದ್ದಿದಿನ ಡೆಸ್ಕ್: ಪತ್ರಕರ್ತರು ಚೌಕಟ್ಟಿನ ಹೊರಗೂ ಕೆಲಸ ಮಾಡಿ ಹೇಗೆ ಸತ್ಕಾರ್ಯ ಮಾಡಬಹುದು ಎನ್ನುವುದಕ್ಕೆ ಶಿಮ್ಲಾದ ಮಾನಸಿಕ ರೋಗಿಗಳ ಆಸ್ಪತ್ರೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರಿನ ಪಿರಿಯಾಪಟ್ಟಣ ಮೂಲದ ಕನ್ನಡತಿ ಪದ್ಮಾರನ್ನು ಕರೆತರಲು ಅವಿರತವಾಗಿ ಶ್ರಮಿಸಿದ ವಿಜಯ ಕರ್ನಾಟಕ ದಿನಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕ ಚಾಣಕ್ಯ ನೀಲಕಂಠನಹಳ್ಳಿ ಅವರು ಮಾದರಿಯಾಗಿ ನಿಂತಿದ್ದಾರೆ.
ಚಾಣಕ್ಯ ಅವರ ಸೇವೆಯ ಬಗ್ಗೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಕೂಡ ಪದ್ಮಾ ಅವರನ್ನು ಭೇಟಿಯಾಗಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ವಿಜಯ ಕರ್ನಾಟಕ ಹೆಸರನ್ನು ಪ್ರಸ್ತಾಪಿಸಿ ವರದಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುದ್ದಿಗಳು ಸುಳ್ಳೋ ನಿಜವೋ ಎಂದು ಯೋಚಿಸದೆ ಯಥಾವತ್ತಾಗಿ ಭಟ್ಟಿ ಇಳಿಸುವ ಮಾಧ್ಯಮಗಳಿಗೆ ಹೀಗೂ ಕೆಲಸ ಮಾಡಬಹುದು ಎಂಬುದನ್ನು ಒಂದು ನಿದರ್ಶನ ಸಮೇತ ಚಾಣಕ್ಯ ಅವರು ಸಾಬೀತುಮಾಡಿ ತೋರಿಸಿದ್ದಾರೆ.
ಚನ್ನಪಟ್ಟಣ ತಾಲೂಕಿನ ನೀಲಕಂಠನಹಳ್ಳಿ ಎಂಬ ಪುಟ್ಟ ಗ್ರಾಮ ಮೂಲದವರಾದ ಅವರು, ಸದ್ಯ ಮೈಸೂರಿನ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಹಿರಿಯ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಅಮೋಘ್ ಸ್ಥಳೀಯ ವಾಹಿನಿಯಲ್ಲಿ ವರದಿಗಾರರಾಗಿ, ಪ್ರಜಾವಾಣಿ ಬೆಂಗಳೂರು ವಿಭಾಗದಲ್ಲಿ ಟ್ರೇನಿಯಾಗಿ, ವಿಜಯವಾಣಿ ದಿನಪತ್ರಿಕೆಯ ಚಿತ್ರದುರ್ಗ ಹಾಗೂ ದಾವಣಗೆರೆಯ ವರದಿಗಾರನಾಗಿ ಕೆಲಸ ಮಾಡಿದ್ದ ಅವರು ಕಳೆದ ಐದು ವರ್ಷಗಳಿಂದ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಕರಣ ಭೇದಿಸಿದ್ದು ಹೀಗೆ…
ಪದ್ಮಾ ಪ್ರಕರಣ ಕುರಿತು ಟ್ವಿಟರ್ ಹಾಗೂ ಫೇಸ್ಬುಕ್ನಲ್ಲಿ ಕಾಣಿಸಿಕೊಂಡ ಒಂದು ಮಾಹಿತಿಯ ಬೆನ್ನು ಹತ್ತಿದ ಚಾಣಕ್ಯ ಅವರು ಶಿಮ್ಲಾ ಆಸ್ಪತ್ರೆಯ ದೂರವಾಣಿ ಸಂಖ್ಯೆಯನ್ನು ಗೂಗಲ್ನಲ್ಲಿ ಪತ್ತೆಮಾಡಿದರು. ತಮಗೆ ಗೊತ್ತಿದ್ದಷ್ಟು ಹಿಂದಿಯಲ್ಲಿ ಅಲ್ಲಿನ ಸ್ವಾಗತಕಾರನ ಹತ್ತಿರ ಮಾತನಾಡಿ ಹೇಗೋ ಅಲ್ಲಿನ ವೈದ್ಯ ಸಂಜಯ್ ಪಾಠಕ್ ಸಂಪರ್ಕ ಸಾಧಿಸಿ ಪದ್ಮಾ ಅವರೊಂದಿಗೆ ಮಾತನಾಡಲು ಯಶಸ್ವಿಯಾದರು. ಶಿಮ್ಲಾದಲ್ಲಿದ್ದ ಪದ್ಮಾರನ್ನು ಮೊದಲು ಗುರುತಿಸಿದ ಹಿಮಾಚಲಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸುನೀಲ ಶರ್ಮಾ ಅವರಿಗೆ ಫೇಸ್ ಬುಕ್ನಲ್ಲಿ ಸಂದೇಶ ಕಳಿಸಿ ಅವರ ಸಂಪರ್ಕವನ್ನೂ ಗಳಿಸಲು ಯಶಸ್ವಿಯಾದರು.
ವರದಿ ಮಾಡಿ ಸುಮ್ಮನಾಗಲಿಲ್ಲ
ಮೇಲಿನವರ ಗಮನಕ್ಕೆ ತಂದು ವರದಿಮಾಡಿ ತಣ್ಣಗಾಗಿದ್ದರೆ ಅವರು ಹತ್ತರಲ್ಲಿ ಹನ್ನೊಂದನೆಯವರಾಗಿರಬೇಕಾಗಿತ್ತು. ವಿಕ ಮೈಸೂರು ಸ್ಥಾನಿಕ ಸಂಪಾದಕ ಲೋಕೇಶ್ ಕಾಯರ್ಗ ಅವರು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ಅವರಿಗೆ ವಿಷಯ ಮುಟ್ಟಿಸಿದರು. ಚಾಣಕ್ಯ ಮೈಸೂರು ಜಿಲ್ಲಾ ಮಾನಸಿಕ ಆರೋಗ್ಯ ಯೋಜನಾಧಿಕಾರಿ ಮಂಜುಪ್ರಸಾದ್ ಅವರಿಗೆ ವಿಷಯ ಮುಟ್ಟಿಸಿದರು. ಜಿಲ್ಲಾಧಿಕಾರಿ, ಆರೋಗ್ಯಾಧಿಕಾರಿಗೆ ಸುನೀಲ ಶರ್ಮಾ, ಸಂಜಯ್ ಪಾಠಕ್ ಅವರ ಮೊಬೈಲ್ ನಂಬರ್ ನೀಡಿ. ಈ ಪ್ರಕರಣದಲ್ಲಿ ವಿಜಯ ಕರ್ನಾಟಕ ಪತ್ರಿಕೆಯು ಮುಖ್ಯ ಸೂತ್ರಧಾರಿಯಾಗಿರುವಂತೆ ನೋಡಿಕೊಂಡರು.
ವರದಿ ಪರಕಟವಾದ ಮರುದಿನವೇ ವಿಜಯ ಕರ್ನಾಟಕದ ಪಿರಿಯಾಪಟ್ಟಣ ವರದಿಗಾರ ನವೀನ್ ಅವರು ಕಂಪಲಾಪುರದ ಮಾಕನಹಳ್ಳಿ ಪಾಳ್ಯದಲ್ಲಿರುವ ಪದ್ಮಾ ಅವರ ಮನೆಯನ್ನು ಪತ್ತೆ ಮಾಡಿದರು. ಮಾನಸಿಕ ಆರೋಗ್ಯಾಧಿಕಾರಿಗೆ ವಿಳಾಸ ತೋರಿಸಿ ಅವರನ್ನು ಕರೆದೊಯ್ದವರು ನವೀನ್.
ಮನೆ ಪರಿಸ್ಥಿತಿ ಸರಿ ಇರಲಿಲ್ಲ
ಪದ್ಮಾ ಅವರ ಕುಟುಂಬ ವರ್ಗವನ್ನು ಮಾನಸಿಕ ಆರೋಗ್ಯ ಇಲಾಖೆ ತಂಡ ಭೇಟಿಯಾದಾಗ ಅವರ ಮನೆ ಪರಿಸ್ಥಿತಿ ಕರಳು ಚುರುಕ್ ಎನ್ನುವಂತಿತ್ತು. ದುಡ್ಡಿಲ್ಲದೆ ಅರ್ಧಕ್ಕೆ ಮನೆ ನಿಂತಿದ್ದರಿಂದ ಪದ್ಮಾರ ತಾಯಿ ಪಾರ್ವತಮ್ಮನವರು ಅವರ ಮಗಳ ಮನೆಯಲ್ಲಿ ವಾಸಿಸುತ್ತಿದ್ದರು. ಕೂಲಿ ಮಾಡಿ ಬದುಕುವ ಕುಟುಂಬಕ್ಕೆ ಪದ್ಮಾ ಇನ್ನಷ್ಟು ಹೊರೆಯಾಗಬಹುದೆಂದು ಮೇಲ್ನೋಟದಲ್ಲೇ ಕಾಣುತ್ತಿತ್ತು. ಕೂಡಲೇ ಪಿರಿಯಾಪಟ್ಟಣ ಶಾಸಕ ಮಹದೇವು ಅವರನ್ನು ಸಂಪರ್ಕಿಸಿದ ಚಾಣಕ್ಯ ಅವರು ಪದ್ಮಾರ ಮನೆ ಪರಿಸ್ಥಿತಿಯನ್ನು ವಿವರಿಸಿ ಹೇಳಿದರು. ಇದರಿಂದ ಕರಗಿದ ಶಾಸಕರು ಪದ್ಮಾ ಕುಟುಂಬಕ್ಕೆ ನೆರವು ನೀಡುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಅಭಿರಾಂ ಅವರೂ ಕೂಡ ಇದೇ ರೀತಿ ಭರವಸೆ ನೀಡಿದರು.
ಪ್ರೇರಣೆಯಾಗಿದ್ದು ಸಂಸ್ಥೆ ಹಾಗೂ ಗುರುಗಳು
ವರದಿಗಳು ಸಮಾಜದ ಮೂರನೇ ವ್ಯಕ್ತಿಗೆ ಲಾಭ ತಂದುಕೊಟ್ಟಾಗಲೇ ಸಾರ್ಥಕವಾಗುವುದು ಎಂದು ಚಾಣಕ್ಯ ಅವರು ತಮ್ಮ ಫೇಸ್ಬುಕ್ ಪೋಸ್ಟ್ವೊಂದರಲ್ಲಿ ಹೇಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ನನ್ನ ಸಂಸ್ಥೆ ಹಾಗೂ ಸ್ಥಾನಿಕ ಸಂಪಾದಕರು ನೀಡಿದ ಪ್ರೋತ್ಸಾಹ ಎಂದು ಫೇಸ್ ಬುಕ್ ಮೆಸೆಂಜರ್ನಲ್ಲಿ ಸುದ್ದಿದಿನ ಕ್ಕೆ ತಿಳಿಸಿದ್ದಾರೆ.
ನಾನು ವಿಕ ಬಳಗಕ್ಕೆ ಸೇರಿದಾಗ ನನ್ನ ಆದ್ಯಗುರುಗಳು ನೀವು ಏನು ಬರೆಯುತ್ತೀರಾ ಎಂದು ಕೇಳಿದರು. ಕೃಷಿ, ವಿಜ್ಞಾನ, ಭಾಷಾಂತರ, ಲೈಫ್ ಸ್ಟೈಲ್ ವರದಿಗಾರಿಕೆ ಬಗ್ಗೆ ವಿವರಿಸಿದೆ. ಶ್ರೀಸಾಮಾನ್ಯನಿಗೆ ನೆರವಾಗುವಂತಹ ಯಾವುದಾದರೂ ಲೇಖನ ಬರೆದಿದ್ದೀರಾ ಎಂದು ಕೇಳಿದರು. ನನ್ನ ಬಳಿ ಉತ್ತರ ಇರಲಿಲ್ಲ. ಸಮಾಜದ ಮೂರನೇ ವ್ಯಕ್ತಿಗೆ ಲಾಭ ತಂದು ಕೊಟ್ಟಾಗ ಮಾತ್ರ ವರದಿ ಸಾರ್ಥಕವಾಗತ್ತದೆ ಎಂದು ಅವರು ಹೇಳಿದ್ದರು. ಇದು ಅರ್ಥವಾಗಲು ಐದು ವರ್ಷ ಹಿಡಿಯಿತು ಎಂದು ಚಾಣಕ್ಯ ಅವರು ತಮ್ಮ ಫೇಸ್ಬುಕ್ ಪೋಸ್ಟ್ ವೊಂದರಲ್ಲಿ ಬರೆದಿದ್ದಾರೆ.
ದಿನದ ಸುದ್ದಿ
ದಾವಣಗೆರೆ | ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ

ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ರ ಚುನಾವಣೆಯ ನಂತರ ಮೊದಲನೇ 30 ತಿಂಗಳ ಅವಧಿಗೆ ಜಿಲ್ಲೆಯ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕುಗಳ ಗ್ರಾ.ಪಂಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯು ಬುಧವಾರ ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ವೇಳೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಚುನಾವಣಾ ತಹಶೀಲ್ದಾರ್ ಪ್ರಸಾದ್ ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರೈತ ಪರೇಡ್ ವೇಳೆ ಅಹಿತಕರ ಘಟನೆ ; ಹೋರಾಟದಿಂದ ಹಿಂದೆ ಸರಿದ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ

ಸುದ್ದಿದಿನ,ನವದೆಹಲಿ : ಗಣರಾಜ್ಯೊತ್ಸವ ದಿನದಂದು ದೆಹಲಿಯಲ್ಲಿ ರೈತ ಪರೇಡ್ ವೇಳೆ ನಡೆದ ಅಹಿತಕರ ಬೆಳವಣಿಗೆಯಿಂದ ಬೇಸರಗೊಂಡಿರುವ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಹೋರಾಟದಿಂದ ಹಿಂದೆ ಸರಿದಿದೆ.
ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಹಾಗೂ
ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರೂ ಆಗಿರುವ ವಿ ಎಂ ಸಿಂಗ್ ಇಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿ ಈ ವಿಷಯ ಪ್ರಕಟಿಸಿದ್ದಾರೆ.
ಭಿನ್ನ ಉದ್ದೇಶವಿರುವವರೊಂದಿಗೆ ನಾವು ಹೋರಾಟ ಮುಂದುವರೆಸಲು ಸಾಧ್ಯವಿಲ್ಲವೆಂದು ವಿ ಎಂ ಸಿಂಗ್ ಹೇಳಿದ್ದಾರೆ.
ಮಂಗಳವಾರ ನಡೆದ ಬೆಳವಣಿಗೆಗಳು, ರೈತ ಮುಖಂಡರ ವಿರುದ್ಧ ಎಫ್ಐಆರ್ ದಾಖಲೆಯಾಗಿರುವ ಹಿನ್ನೆಲೆಯಲ್ಲಿ ಬುಧವಾರ ಸಂಜೆ 7 ಗಂಟೆಗೆ ಕಿಸಾನ್ ಏಕ್ತಾ ಮೋರ್ಚಾ ಪತ್ರಿಕಾಗೋಷ್ಠಿ ಕರೆದಿದೆ.
Delhi: Farmers protest against Rashtriya Kisan Mazdoor Sangathan leader VM Singh following his announcement to withdraw from the agitation.
Visuals from Ghazipur border. https://t.co/CYKZoH9y4y pic.twitter.com/MEhgOIOxkl
— ANI (@ANI) January 27, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಮ ಪಂಚಾಯತಿ ಸದಸ್ಯರಿಗೆ ಹೂವಿನಹೊಳೆ ಪ್ರತಿಷ್ಠಾನ ಗೌರವ ಸದಸ್ಯತ್ವ ಪ್ರದಾನ : ಹಂಚಗುಳಿ ಗ್ರಾಮ ರಾಜ್ಯಕ್ಕೆ ಮಾದರಿ

ಸುದ್ದಿದಿನ, ರಾಮನಗರ : ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಅರಕೆರೆ ಗ್ರಾಮ ಪಂಚಾಯಿತಿಗೆ ಹಂಚಗುಳಿ ಗ್ರಾಮದಿಂದ ಆಯ್ಕೆಯಾದ ಸದಸ್ಯರಾದ ಮಲ್ಲೇಶ್ ಹಾಗೂ ಶಾಂತಮ್ಮ ಅವರಿಗೆ ”ಹೂವಿನಹೊಳೆ ಪ್ರತಿಷ್ಠಾನದ ಐದು ವರ್ಷಗಳ ಗೌರವ ಸದಸ್ಯತ್ವ” ಪ್ರದಾನ ಮಾಡಲಾಯಿತು ಇದೇ ಸಂದರ್ಭದಲ್ಲಿ ನಮ್ನೂರಿಗೆ ನಮ್ಮ ಉಸಿರು ಬಳಗದಿಂದ ಹಂಚಗುಳಿ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಮುನುಚ್ಚೆಗೌಡರು ಉದ್ಘಾಟನೆ ಮಾಡಿ ಮಾತನಾಡುತ್ತಾ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಶಾಲೆಗಳನ್ನು ಕರ್ನಾಟಕ ಸರ್ಕಾರಿ ಪಬ್ಲಿಕ್ ಶಾಲೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹೂವಿನಹೊಳೆ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ನಂದಿ ಜೆ ಹೂವಿನಹೊಳೆ ಗ್ರಾ.ಪ. ಸದಸ್ಯರಿಗೆ ಗೌರವ ಸದಸ್ಯತ್ವ ಪ್ರದಾನ ಮಾಡಿ ಮುಂದಿನ ಐದು ವರ್ಷಗಳಲ್ಲಿ ಹಂಚಗುಳಿ ಗ್ರಾಮದಲ್ಲಿ ನಾವು ಕೆಲಸ ಮಾಡಲು ಹಾಗೂ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಶ್ರಮಿಸುತ್ತೆವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ ಡಿ ಟಿ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ದಿಲೀಪ್ ಕುಮಾರ್ ಮಾತನಾಡಿ ಶಿಕ್ಷಣ ಎಲ್ಲರ ಹಕ್ಕು ಪ್ರತಿ ಗ್ರಾಮದ ಯುವಕರಿಗೂ ಉನ್ನತ ಕೆಲಸ ಸಿಗುವಂತೆ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಹೂವಿನಹೊಳೆ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯದರ್ಶಿ ನಾಯ್ಕಲ್ ದೊಡ್ಡಿ ಚಂದ್ರಶೇಖರ್, ಪ್ರಧಾನ ಸಂಚಾಲಕರಾದ ಹಂಚಗುಳಿ ಗಿರೀಶ್ ,ಸುನೀಲ್ ಕುಮಾರ್,ರಾಜಣ್ಣ ಹಾಗೂ ಗ್ರಾಮದ ಮುಖಂಡರಾದ,ಚೆಲುವರಾಜು, ಚಿಕೈದೆಗೌಡ, ಸುಂದ್ರೆಶ್, ಮಣಿಕಂಠ, ಮುತ್ತುರಾಜು,ಭಾಸ್ಕರ್, ಶಿವಕುಮಾರ್ ಅರ್ಚಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ
-
ದಿನದ ಸುದ್ದಿ2 days ago
ದಾವಣಗೆರೆ | ಅತ್ಯಾಚಾರ ಅಪರಾಧಿಗೆ 15 ವರ್ಷ ಸಜೆ, 26 ಸಾವಿರ ದಂಡ
-
ಬಹಿರಂಗ2 days ago
ಸಂವಿಧಾನ ದಿನಾಚರಣೆ ಹೇಗೆ ಗಣರಾಜ್ಯೋತ್ಸವವಾಯಿತು..?
-
ಬಹಿರಂಗ3 days ago
ನುಡಿದ ಸತ್ಯವನ್ನು ಬಂಧಿಸಲಾಗದು
-
ದಿನದ ಸುದ್ದಿ3 days ago
ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ
-
ದಿನದ ಸುದ್ದಿ2 days ago
ಹೊಲಿಗೆ ಯಂತ್ರ ಸೌಲಭ್ಯ ನೀಡುವ ಅರ್ಜಿ ಅವಧಿ ವಿಸ್ತರಣೆ
-
ಅಂತರಂಗ2 days ago
ಭಾರತದ ಸಂವಿಧಾನ : ಪ್ರಜೆಗಳ ಓದು
-
ದಿನದ ಸುದ್ದಿ3 days ago
ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಆತ್ಮಹತ್ಯೆ ; ಕಾರಣ ಏನು ಗೊತ್ತಾ..!?