ದಿನದ ಸುದ್ದಿ
ಶಿಮ್ಲಾದಿಂದ ಕನ್ನಡತಿ ಕರೆತಂದ ವಿಕ ವರದಿಗಾರ ನಿಮಗೆ ಗೊತ್ತಾ?
ಸುದ್ದಿದಿನ ಡೆಸ್ಕ್: ಪತ್ರಕರ್ತರು ಚೌಕಟ್ಟಿನ ಹೊರಗೂ ಕೆಲಸ ಮಾಡಿ ಹೇಗೆ ಸತ್ಕಾರ್ಯ ಮಾಡಬಹುದು ಎನ್ನುವುದಕ್ಕೆ ಶಿಮ್ಲಾದ ಮಾನಸಿಕ ರೋಗಿಗಳ ಆಸ್ಪತ್ರೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರಿನ ಪಿರಿಯಾಪಟ್ಟಣ ಮೂಲದ ಕನ್ನಡತಿ ಪದ್ಮಾರನ್ನು ಕರೆತರಲು ಅವಿರತವಾಗಿ ಶ್ರಮಿಸಿದ ವಿಜಯ ಕರ್ನಾಟಕ ದಿನಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕ ಚಾಣಕ್ಯ ನೀಲಕಂಠನಹಳ್ಳಿ ಅವರು ಮಾದರಿಯಾಗಿ ನಿಂತಿದ್ದಾರೆ.
ಚಾಣಕ್ಯ ಅವರ ಸೇವೆಯ ಬಗ್ಗೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಕೂಡ ಪದ್ಮಾ ಅವರನ್ನು ಭೇಟಿಯಾಗಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ವಿಜಯ ಕರ್ನಾಟಕ ಹೆಸರನ್ನು ಪ್ರಸ್ತಾಪಿಸಿ ವರದಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುದ್ದಿಗಳು ಸುಳ್ಳೋ ನಿಜವೋ ಎಂದು ಯೋಚಿಸದೆ ಯಥಾವತ್ತಾಗಿ ಭಟ್ಟಿ ಇಳಿಸುವ ಮಾಧ್ಯಮಗಳಿಗೆ ಹೀಗೂ ಕೆಲಸ ಮಾಡಬಹುದು ಎಂಬುದನ್ನು ಒಂದು ನಿದರ್ಶನ ಸಮೇತ ಚಾಣಕ್ಯ ಅವರು ಸಾಬೀತುಮಾಡಿ ತೋರಿಸಿದ್ದಾರೆ.
ಚನ್ನಪಟ್ಟಣ ತಾಲೂಕಿನ ನೀಲಕಂಠನಹಳ್ಳಿ ಎಂಬ ಪುಟ್ಟ ಗ್ರಾಮ ಮೂಲದವರಾದ ಅವರು, ಸದ್ಯ ಮೈಸೂರಿನ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಹಿರಿಯ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಅಮೋಘ್ ಸ್ಥಳೀಯ ವಾಹಿನಿಯಲ್ಲಿ ವರದಿಗಾರರಾಗಿ, ಪ್ರಜಾವಾಣಿ ಬೆಂಗಳೂರು ವಿಭಾಗದಲ್ಲಿ ಟ್ರೇನಿಯಾಗಿ, ವಿಜಯವಾಣಿ ದಿನಪತ್ರಿಕೆಯ ಚಿತ್ರದುರ್ಗ ಹಾಗೂ ದಾವಣಗೆರೆಯ ವರದಿಗಾರನಾಗಿ ಕೆಲಸ ಮಾಡಿದ್ದ ಅವರು ಕಳೆದ ಐದು ವರ್ಷಗಳಿಂದ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಕರಣ ಭೇದಿಸಿದ್ದು ಹೀಗೆ…
ಪದ್ಮಾ ಪ್ರಕರಣ ಕುರಿತು ಟ್ವಿಟರ್ ಹಾಗೂ ಫೇಸ್ಬುಕ್ನಲ್ಲಿ ಕಾಣಿಸಿಕೊಂಡ ಒಂದು ಮಾಹಿತಿಯ ಬೆನ್ನು ಹತ್ತಿದ ಚಾಣಕ್ಯ ಅವರು ಶಿಮ್ಲಾ ಆಸ್ಪತ್ರೆಯ ದೂರವಾಣಿ ಸಂಖ್ಯೆಯನ್ನು ಗೂಗಲ್ನಲ್ಲಿ ಪತ್ತೆಮಾಡಿದರು. ತಮಗೆ ಗೊತ್ತಿದ್ದಷ್ಟು ಹಿಂದಿಯಲ್ಲಿ ಅಲ್ಲಿನ ಸ್ವಾಗತಕಾರನ ಹತ್ತಿರ ಮಾತನಾಡಿ ಹೇಗೋ ಅಲ್ಲಿನ ವೈದ್ಯ ಸಂಜಯ್ ಪಾಠಕ್ ಸಂಪರ್ಕ ಸಾಧಿಸಿ ಪದ್ಮಾ ಅವರೊಂದಿಗೆ ಮಾತನಾಡಲು ಯಶಸ್ವಿಯಾದರು. ಶಿಮ್ಲಾದಲ್ಲಿದ್ದ ಪದ್ಮಾರನ್ನು ಮೊದಲು ಗುರುತಿಸಿದ ಹಿಮಾಚಲಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸುನೀಲ ಶರ್ಮಾ ಅವರಿಗೆ ಫೇಸ್ ಬುಕ್ನಲ್ಲಿ ಸಂದೇಶ ಕಳಿಸಿ ಅವರ ಸಂಪರ್ಕವನ್ನೂ ಗಳಿಸಲು ಯಶಸ್ವಿಯಾದರು.
ವರದಿ ಮಾಡಿ ಸುಮ್ಮನಾಗಲಿಲ್ಲ
ಮೇಲಿನವರ ಗಮನಕ್ಕೆ ತಂದು ವರದಿಮಾಡಿ ತಣ್ಣಗಾಗಿದ್ದರೆ ಅವರು ಹತ್ತರಲ್ಲಿ ಹನ್ನೊಂದನೆಯವರಾಗಿರಬೇಕಾಗಿತ್ತು. ವಿಕ ಮೈಸೂರು ಸ್ಥಾನಿಕ ಸಂಪಾದಕ ಲೋಕೇಶ್ ಕಾಯರ್ಗ ಅವರು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ಅವರಿಗೆ ವಿಷಯ ಮುಟ್ಟಿಸಿದರು. ಚಾಣಕ್ಯ ಮೈಸೂರು ಜಿಲ್ಲಾ ಮಾನಸಿಕ ಆರೋಗ್ಯ ಯೋಜನಾಧಿಕಾರಿ ಮಂಜುಪ್ರಸಾದ್ ಅವರಿಗೆ ವಿಷಯ ಮುಟ್ಟಿಸಿದರು. ಜಿಲ್ಲಾಧಿಕಾರಿ, ಆರೋಗ್ಯಾಧಿಕಾರಿಗೆ ಸುನೀಲ ಶರ್ಮಾ, ಸಂಜಯ್ ಪಾಠಕ್ ಅವರ ಮೊಬೈಲ್ ನಂಬರ್ ನೀಡಿ. ಈ ಪ್ರಕರಣದಲ್ಲಿ ವಿಜಯ ಕರ್ನಾಟಕ ಪತ್ರಿಕೆಯು ಮುಖ್ಯ ಸೂತ್ರಧಾರಿಯಾಗಿರುವಂತೆ ನೋಡಿಕೊಂಡರು.
ವರದಿ ಪರಕಟವಾದ ಮರುದಿನವೇ ವಿಜಯ ಕರ್ನಾಟಕದ ಪಿರಿಯಾಪಟ್ಟಣ ವರದಿಗಾರ ನವೀನ್ ಅವರು ಕಂಪಲಾಪುರದ ಮಾಕನಹಳ್ಳಿ ಪಾಳ್ಯದಲ್ಲಿರುವ ಪದ್ಮಾ ಅವರ ಮನೆಯನ್ನು ಪತ್ತೆ ಮಾಡಿದರು. ಮಾನಸಿಕ ಆರೋಗ್ಯಾಧಿಕಾರಿಗೆ ವಿಳಾಸ ತೋರಿಸಿ ಅವರನ್ನು ಕರೆದೊಯ್ದವರು ನವೀನ್.
ಮನೆ ಪರಿಸ್ಥಿತಿ ಸರಿ ಇರಲಿಲ್ಲ
ಪದ್ಮಾ ಅವರ ಕುಟುಂಬ ವರ್ಗವನ್ನು ಮಾನಸಿಕ ಆರೋಗ್ಯ ಇಲಾಖೆ ತಂಡ ಭೇಟಿಯಾದಾಗ ಅವರ ಮನೆ ಪರಿಸ್ಥಿತಿ ಕರಳು ಚುರುಕ್ ಎನ್ನುವಂತಿತ್ತು. ದುಡ್ಡಿಲ್ಲದೆ ಅರ್ಧಕ್ಕೆ ಮನೆ ನಿಂತಿದ್ದರಿಂದ ಪದ್ಮಾರ ತಾಯಿ ಪಾರ್ವತಮ್ಮನವರು ಅವರ ಮಗಳ ಮನೆಯಲ್ಲಿ ವಾಸಿಸುತ್ತಿದ್ದರು. ಕೂಲಿ ಮಾಡಿ ಬದುಕುವ ಕುಟುಂಬಕ್ಕೆ ಪದ್ಮಾ ಇನ್ನಷ್ಟು ಹೊರೆಯಾಗಬಹುದೆಂದು ಮೇಲ್ನೋಟದಲ್ಲೇ ಕಾಣುತ್ತಿತ್ತು. ಕೂಡಲೇ ಪಿರಿಯಾಪಟ್ಟಣ ಶಾಸಕ ಮಹದೇವು ಅವರನ್ನು ಸಂಪರ್ಕಿಸಿದ ಚಾಣಕ್ಯ ಅವರು ಪದ್ಮಾರ ಮನೆ ಪರಿಸ್ಥಿತಿಯನ್ನು ವಿವರಿಸಿ ಹೇಳಿದರು. ಇದರಿಂದ ಕರಗಿದ ಶಾಸಕರು ಪದ್ಮಾ ಕುಟುಂಬಕ್ಕೆ ನೆರವು ನೀಡುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಅಭಿರಾಂ ಅವರೂ ಕೂಡ ಇದೇ ರೀತಿ ಭರವಸೆ ನೀಡಿದರು.
ಪ್ರೇರಣೆಯಾಗಿದ್ದು ಸಂಸ್ಥೆ ಹಾಗೂ ಗುರುಗಳು
ವರದಿಗಳು ಸಮಾಜದ ಮೂರನೇ ವ್ಯಕ್ತಿಗೆ ಲಾಭ ತಂದುಕೊಟ್ಟಾಗಲೇ ಸಾರ್ಥಕವಾಗುವುದು ಎಂದು ಚಾಣಕ್ಯ ಅವರು ತಮ್ಮ ಫೇಸ್ಬುಕ್ ಪೋಸ್ಟ್ವೊಂದರಲ್ಲಿ ಹೇಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ನನ್ನ ಸಂಸ್ಥೆ ಹಾಗೂ ಸ್ಥಾನಿಕ ಸಂಪಾದಕರು ನೀಡಿದ ಪ್ರೋತ್ಸಾಹ ಎಂದು ಫೇಸ್ ಬುಕ್ ಮೆಸೆಂಜರ್ನಲ್ಲಿ ಸುದ್ದಿದಿನ ಕ್ಕೆ ತಿಳಿಸಿದ್ದಾರೆ.
ನಾನು ವಿಕ ಬಳಗಕ್ಕೆ ಸೇರಿದಾಗ ನನ್ನ ಆದ್ಯಗುರುಗಳು ನೀವು ಏನು ಬರೆಯುತ್ತೀರಾ ಎಂದು ಕೇಳಿದರು. ಕೃಷಿ, ವಿಜ್ಞಾನ, ಭಾಷಾಂತರ, ಲೈಫ್ ಸ್ಟೈಲ್ ವರದಿಗಾರಿಕೆ ಬಗ್ಗೆ ವಿವರಿಸಿದೆ. ಶ್ರೀಸಾಮಾನ್ಯನಿಗೆ ನೆರವಾಗುವಂತಹ ಯಾವುದಾದರೂ ಲೇಖನ ಬರೆದಿದ್ದೀರಾ ಎಂದು ಕೇಳಿದರು. ನನ್ನ ಬಳಿ ಉತ್ತರ ಇರಲಿಲ್ಲ. ಸಮಾಜದ ಮೂರನೇ ವ್ಯಕ್ತಿಗೆ ಲಾಭ ತಂದು ಕೊಟ್ಟಾಗ ಮಾತ್ರ ವರದಿ ಸಾರ್ಥಕವಾಗತ್ತದೆ ಎಂದು ಅವರು ಹೇಳಿದ್ದರು. ಇದು ಅರ್ಥವಾಗಲು ಐದು ವರ್ಷ ಹಿಡಿಯಿತು ಎಂದು ಚಾಣಕ್ಯ ಅವರು ತಮ್ಮ ಫೇಸ್ಬುಕ್ ಪೋಸ್ಟ್ ವೊಂದರಲ್ಲಿ ಬರೆದಿದ್ದಾರೆ.

ದಿನದ ಸುದ್ದಿ
ದಾವಣಗೆರೆ | ಇಂದು ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.
ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.
ಸಾಧಿಕ್ ಪೊಲೀಸರಿಗೆ ಸಾಥ್
ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.
“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ7 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ5 hours agoದಾವಣಗೆರೆ | ಇಂದು ಕರೆಂಟ್ ಇರಲ್ಲ


