ದಿನದ ಸುದ್ದಿ
‘ವಿನ್ಸೆಂಟ್ ಜಾಬ್ ಕೇರ್ ‘ನಲ್ಲಿ ಉದ್ಯೋಗ ಮಾಹಿತಿಗೆ ಸಂಪರ್ಕಿಸಿ | ನಿರುದ್ಯೋಗದಿಂದ ಮುಕ್ತರಾಗಿ
ಸುದ್ದಿದಿನ ಡೆಸ್ಕ್ : ಸಾಮಾಜಿಕ ಕಾರ್ಯಕರ್ತ ರಾಘು ದೊಡ್ಡಮನಿ ಅವರು ತಮ್ಮ ಸಮಾಜ ಸೇವೆಯನ್ನು ವಿಸ್ತರಿಸಿಕೊಳ್ಳುವ ಹಂಬಲದಿಂದ ‘ಸದೃಢ ಭಾರತಕ್ಕಾಗಿ- ಯುವಜನರು’ ಎಂಬ ಆಶಾದಾಯಕ ಟ್ಯಾಗ್ ಲೈನ್ ನೊಂದಿ ‘ವಿನ್ಸೆಂಟ್ ಜಾಬ್ ಕೇರ್’ ಎಂಬ ಸಂಸ್ಥೆ ಯನ್ನು ದಾವಣಗೆರೆಯಲ್ಲಿ ಆರಂಭಿಸಿದ್ದಾರೆ.
ಇಂದು ಉದ್ಯೋಗವಿಲ್ಲದೆ ಬದುಕಿನ ಅಭದ್ರತೆಯ ಗಾಳಕ್ಕೆ ಸಿಲುಕಿ ಅದೆಷ್ಟೋ ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ಈ ದೇಶದ ದೊಡ್ಡ ದುರಂತವೇ ಎಂದು ಹೇಳುವ ರಾಘು ದೊಡ್ಡಮನಿ ಅವರು, ಆ ಕಾರಣಕ್ಕಾಗಿಯೇ ಸೇವೆಯ ರೂಪದಲ್ಲಿ ಈ ಮಹೋನ್ನತ ಕಾರ್ಯಕ್ಕೆ ಮುಂದಾಗಿದ್ದಾರೆ.
ಜುಲೈ 5 ನೇ ತಾರೀಕಿನಿಂದ ಆರಂಭಗೊಂಡಿರುವ ಈ ಸಂಸ್ಥೆಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಮಹತ್ವದ ಸಂಗತಿಯಾಗಿದೆ.
ಉದ್ಯೋಗ ಹರಸಿ ಬರುವವರು ಈ ಕೆಳಗಿನ ಅಂಶಗಳನ್ನು ಗಮನಿಸಿ ಬೇಕು
ಶೈಕ್ಷಣಿಕ ಅರ್ಹತೆ ಆಧರಿಸಿ ಉದ್ಯೋಗ
7ನೇ, 10ನೇ, ಪಿಯುಸಿ, ಡಿಪ್ಲೋಮೊ, ಯಾವುದೇ ಪದವಿ, ಇಂಜಿನಿಯರಿಂಗ್ ಪದವಿಯಲ್ಲಿ ಪಾಸ್ ಅಥವಾ ಫೇಲ್ ಆದ ನಿರುದ್ಯೂಗ ಯುವತಿ – ಯುವಕರು ದಾವಣಗೆರೆ ಜಿಲ್ಲೆ ಸೇರಿದಂತೆ ಬೆಂಗಳೂರಿನಲ್ಲಿ ಖಾಲಿಯಿರುವ ಉದ್ಯೋಗಗಳ ಬಗೆಗೆ ಮಾಹಿತಿ ನೀಡಿ, ಹಾಗೂ ಆ ಉದ್ಯೊಗಕ್ಕೆ ಬೇಕಾದ ಸಂದರ್ಶನದ ತಯಾರಿಯನ್ನೂ ಸಹ ಈ ಸಂಸ್ಥೆಯಲ್ಲಿ ನೀಡಲಾಗುತ್ತದೆ.
ಸಂಪರ್ಕಿಸ ಬೇಕಾದ ವಿಳಾಸ
ವಿನ್ಸೆಂಟ್ ಜಾಬ್ ಕೇರ್
ಶಾಪ್ ನಂ.9, ಮುಸ್ಲಿಂ ಹಾಸ್ಟೆಲ್ ಕಾಂಪ್ಲೆಕ್ಸ್
ಗುಪ್ತಾಸ್ ಮೊಬೈಲ್ ಎದುರು, ಜನತಾ ಬಜಾರ್ ರೋಡ್, ಕೆ.ಇ.ಬಿ ಸರ್ಕಲ್ ಹತ್ತಿರ
ದಾವಣಗೆರೆ – 577002
ಮೊಬೈಲ್ ಸಂಖ್ಯೆ : 9731315421 – 9108555463

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.



