Connect with us

ಲೈಫ್ ಸ್ಟೈಲ್

ಮೂಳೆ, ಚರ್ಮ, ನರರೋಗಗಳಿಗೆ ಮದ್ದು ‘ವಿಟಮಿನ್ – ಡಿ’ ಬಗ್ಗೆ ನೀವಿಷ್ಟು ತಿಳಿಯಲೇ ಬೇಕು..!

Published

on

ಸುದ್ದಿದಿನ ಡೆಸ್ಕ್ : ಕೆಲ ಅಧ್ಯಯನಗಳ ಪ್ರಕಾರ ಶೇ. 32 ಕ್ಕಿಂತ ಹೆಚ್ಚು ಭಾರತೀಯರು ವಿಟಮಿನ್ ಡಿ ಕೊರತೆಯಿಂದ ಬಳಲುತ್ತಿದ್ದಾರೆ. ಚಪ್ಪೆ ಮೂಳೆ ಮುರಿತಕ್ಕೊಳಗಾಗುವ, ಶೇ. 75ರಷ್ಟು ಜನರಲ್ಲಿ ವಿಟಮಿನ್ ಡಿ ಕೊರತೆ ಇರುವುದು ಕಂಡು ಬಂದಿದೆ.

ವಿಟಮಿನ್ ಡಿ ಉತ್ಪಾದನೆಯಾಗುವ ಪ್ರಮುಖ ಅಂಗವೆಂದರೆ ದೇಹದ ಚರ್ಮ. ಸೂರ್ಯನ ರಶ್ಮಿ ಚರ್ಮದ ಮೇಲೆ ಬಿದ್ದಾಗ ವಿಟಮಿನ್ ಡಿ ಉತ್ಪತ್ತಿಯಾಗುವುದು. ಆದರೆ ಭಾರತ `ಟ್ರಾಪಿಕಲ್ ರಾಷ್ಟ್ರವಾಗಿದ್ದು, ಬಿಸಿಲಿನ ಕೊರತೆಯಿಲ್ಲ. ಆದರೂ ಈ ಕೊರತೆ ಏಕೆ ಎಂಬುದು ಚಿಂತನಾರ್ಹ.

ಭಾರತೀಯರ ಮೈ ಚರ್ಮದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮೆಲಾನಿನ್ ಎಂಬ ಬಣ್ಣಕಾರಕ ವಸ್ತುವಿದ್ದು, ಇದು ಸೂರ್ಯನಿಂದ ಹೊರಹೊಮ್ಮುವ ಅಲ್ಟ್ರವಯೊಲೆಟ್ ಕಿರಣಗಳಿಂದ ಚರ್ಮವನ್ನು ರಕ್ಷಿಸುತ್ತದೆ.

ವಿಟಮಿನ್ ಡಿ ಕೊರತೆಯಿಂದ ಮೂಳೆಯ ಶಕ್ತಿ ಕುಂದುತ್ತದೆ. ಮೂಳೆ ಮೆತ್ತಗಾಗುತ್ತದೆ. ಮಕ್ಕಳಲ್ಲಿ ರಿಕೆಟ್ಸ್ ಹಾಗೂ ದೊಡ್ಡವರಲ್ಲಿ ಆಸ್ಟಿಯೋಮಲೇಸಿಯಾ ತೊಂದರೆ, ಅಲ್ಲದೆ, ಶ್ವಾಸಕೋಶದ ತೊಂದರೆ, ಸ್ತನ ಹಾಗೂ ಅಂಡಾಶಯ ಕ್ಯಾನ್ಸರ್ ಹಾಗೂ ಅನೇಕ ನರರೋಗಗಳೂ ಉಂಟಾಗುವುವು.

ಕೊರತೆಗೆ ಕಾರಣವೇನು?

  1. ಜೀವನ ಶೈಲಿಯ ಬದಲಾವಣೆ. ಹಿಂದಿನ ಕಾಲದಲ್ಲಿ ಮಕ್ಕಳೆಲ್ಲಾ, ಬೀದಿಯಲ್ಲಿ ಗಂಟೆಗಟ್ಟಲೆ ಆಟ ಆಡುತ್ತಿದ್ದರು. ರಜಾ ದಿನಗಳಲ್ಲಂತೂ ಅವರು ಮನೆ ಸೇರುವುದೇ ಕಷ್ಟವಾಗುತ್ತಿತ್ತು. ಈಗಿನ ಕಾಲದ ಮಕ್ಕಳು ಇದಕ್ಕೆ ತದ್ವಿರುದ್ಧ! ರಜೆ ಬಂತೆಂದರೆ ಟಿ.ವಿ. ಹಾಗೂ ಕಂಪ್ಯೂಟರ್ ಆಟಗಳಿಗೆ ಶರಣಾಗುವರು. ಜನನಿಬಿಡ ಪ್ರದೇಶಗಳು, ವಾಹನ ಸಂಚಾರ ದಟ್ಟವಾಗಿರುವ ರಸ್ತೆಗಳಲ್ಲಿ ಮಕ್ಕಳನ್ನು ಆಡಲು ಬಿಡಲು ಪಾಲಕರಿಗೆ ಅಂಜಿಕೆ!
  2. ಹಿಂದಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ನೀಳ ಕೂದಲು. ಹರಳೆಣ್ಣೆ ಹಚ್ಚಿ, ಅಭ್ಯಂಜನ ಮಾಡಿಸುತ್ತಿದ್ದರು. ಆದರೆ ಕೂದಲು ಒಣಗಿಸಲು ಹೇರ್ ಡ್ರೈಯರ್ ಲಭ್ಯವಿರುತ್ತಿರಲಿಲ್ಲ. ಮನೆಯಂಗಳದಲ್ಲಿ ಸೂರ್ಯನ ಬಿಸಿಲಿನಿಂದ ಚೆನ್ನಾಗಿ ಕೂದಲನ್ನು ಒಣಗಿಸಿಕೊಳ್ಳುತ್ತಿದ್ದರು. ಆದರೆ ಈಗ ಸ್ನಾನ ಮಾಡಿ, ಡ್ರೈಯರ್‌ನ ಸಹಾಯದಿಂದ ಕೂದಲನ್ನು ಒಣಗಿಸಿಕೊಳ್ಳುತ್ತಾರೆ. ಆದರೆ ಸೂರ್ಯನ ಕಿರಣಗಳು ನಮಗೆ ಎಷ್ಟು ಪೂರಕವಾಗಿ ಕೆಲಸ ಮಾಡುತ್ತವೆ ಎಂಬುದನ್ನು ತಿಳಿಯಬೇಕು.
  3. ದೇಹಾರೋಗ್ಯಕ್ಕೆ ಬೇಕಾದ ವಿಟಮಿನ್ ಡಿ ಉತ್ಪತ್ತಿಗಾಗಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯ ಅಂತರದ ಸಮಯದಲ್ಲಿ 30 ನಿಮಿಷದಿಂದ 40 ನಿಮಿಷದವರೆಗೆ ಸೂರ್ಯನ ಕಿರಣಗಳು ದೇಹದ ಮೇಲೆ ಬೀಳುವಂತಾಗಬೇಕು.
  4. ಉತ್ತರ ಭಾರತದಲ್ಲಿಯೂ ಸಹ ಆರೋಗ್ಯವಂತ ಜನ ಸಮುದಾಯದಲ್ಲಿ ಶೇ. 50 ರಷ್ಟು ಜನರಿಗೆ ವಿಟಮಿನ್ ಡಿ ಕೊರತೆಯಿರುವುದು ಕಂಡು ಬಂದಿದೆ.
  5. ಗರ್ಭಿಣಿ ಸ್ತ್ರೀಯರಲ್ಲಿ ಕೊರತೆಯ ತೀವ್ರತೆ ಹೆಚ್ಚು. ಗರ್ಭದಲ್ಲಿ ಬೆಳೆಯುತ್ತಿರುವ ಭ್ರೂಣಕ್ಕೆ ತಾಯಿಯು ಸಾಕಷ್ಟು ವಿಟಮಿನ್ ಡಿ ಯನ್ನು ಒದಗಿಸಬೇಕಾಗುವುದು.
  6. ಪ್ರಸವದ ನಂತರ, ಮಗುವಿಗೆ ಹಾಲುಣಿಸುವ ಅನೇಕ ತಾಯಂದಿರು, ಬೆನ್ನುನೋವಿಗಾಗಿ ವೈದ್ಯರನ್ನು ಸಂಪರ್ಕಿಸುವುದು ಹೆಚ್ಚಾಗುತ್ತಿದೆ. ಇಂಥಹ ಸಮಯದಲ್ಲಿ ಅನೇಕರಿಗೆ ಬೆನ್ನು ಮೂಳೆಯ ಕ್ಷಯವಿರಬಹುದೆಂಬ ಶಂಕೆಯಿಂದ, ಕ್ಷಯರೋಗ ಚಿಕಿತ್ಸೆಯನ್ನು ಕೊಟ್ಟಲ್ಲಿ, ಮೂಳೆಗಳು ಮತ್ತಷ್ಟು ಶಕ್ತಿ ಹೀನವಾಗಿ, ಅನೇಕ ಕಡೆ ಫ್ರಾಕ್ಚರ್‌ಗಳಾಗಬಹುದು.
    ಬಿಸಿಲಿಗೆ ಮೈಯೊಡ್ಡಿದ್ದಲ್ಲಿ, ಚರ್ಮವು ಕಪ್ಪಾಗುವುದೆಂಬ ಭಯ ಅನೇಕ ಹೆಣ್ಣುಮಕ್ಕಳಿಗೆ. ಚರ್ಮವನ್ನು ಸೂರ್ಯನ ಯು.ವಿ.ಕಿರಣಗಳಿಂದ ರಕ್ಷಿಸಲು, ಲಭ್ಯವಿರುವ ಯಾವುದೇ ಕ್ರೀಂ ಅಥವಾ ಲೋಶನ್ ಬಳಸಿ ಬಿಸಿಲಲ್ಲಿ ನಿಲ್ಲಬಹುದು. ಚರ್ಮಕ್ಕೆ ಇಂಥಹ ಸನ್ ಸ್ಕ್ರೀನ್ ಲೋಶನ್ ಹಚ್ಚಿದಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್ ಡಿ ಉತ್ಪತ್ತಿಗೆ ಇನ್ನೂ ಸ್ವಲ್ಪ ಹೆಚ್ಚಿನ ಸಮಯ ಬಿಸಿಲಲ್ಲಿ ನಿಲ್ಲಬೇಕಾಗುವುದು.

ಭಾರತೀಯರಲ್ಲಿ ವಿಟಮಿನ್ ಡಿ ಕೊರತೆಗೆ ಮತ್ತೊಂದು ಕಾರಣ, ಆಹಾರ ಕೊರತೆ, ಬಡತನ !

ಸುಮಾರು ಒಂದು ದಶಕದಿಂದಲೂ, ಭಾರತೀಯರ ದೇಹದಲ್ಲಿನ ವಿಟಮಿನ್ ಡಿ ಕೊರತೆಯ ಬಗ್ಗೆ ಅಧ್ಯಯನಗಳಿಂದ ತಿಳಿದಿದ್ದರೂ ಸಹ ಬಡತನ, ಸಿರಿತನ ಎಂಬ ಬೇಧ ಭಾವವಿಲ್ಲದೆ, ಯಾವುದೇ ವಯಸ್ಸಿನವರಲ್ಲೂ ವಿಟಮಿನ್ ಡಿ ಕೊರತೆ ಮುಂದುವರಿಯುತ್ತಿದೆ.

ವಿಟಮಿನ್ ಡಿ ಕೊರತೆಯ ಪ್ರಾರಂಭಿಕ ಹಂತದಲ್ಲಿ ದೇಹದಲ್ಲಿ ಫ್ಯಾರಾಥೈರಾಯಿಡ್ ಹಾರ್ಮೋನ್‌ನ ಪ್ರಮಾಣ ಹೆಚ್ಚಾಗುವುದು. ಇದರ ಸದುದ್ದೇಶವೆಂದರೆ, ರಕ್ತದಲ್ಲಿನ ಕ್ಯಾಲ್ಸಿಯಂ ಅಂಶವನ್ನು ಸರಿಪ್ರಮಾಣದಲ್ಲಿಡುವುದು. ರಕ್ತದಲ್ಲಿನ ಕ್ಯಾಲ್ಸಿಯಂ ಅಂಶವನ್ನು ಸರಿಯಾದ ಪ್ರಮಾಣದಲ್ಲಿರಿಸಲು ವಿಟಮಿನ್ ಡಿ ಅತ್ಯಗತ್ಯ.

ದಿನನಿತ್ಯ ನಮ್ಮ ದೇಹಕ್ಕೆ ಬೇಕಾಗುವ ಕ್ಯಾಲ್ಸಿಯಂ ಪ್ರಮಾಣ, ಒಂದು ಗ್ರಾಂ ನಷ್ಟು. ನಗರ ಪ್ರದೇಶದ ಜನರ ಆಹಾರದಲ್ಲಿ ಸುಮಾರು 340 ಮಿ.ಗ್ರಾಂ. ನಷ್ಟು ಕ್ಯಾಲ್ಸಿಯಂ ಲಭ್ಯವಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಇದರ ಪ್ರಮಾಣ ಸುಮಾರು 280 ಮಿ.ಗ್ರಾಂ.ನಷ್ಟು. ಅಂದರೆ, ಆಹಾರದ ಮೂಲಕ ನಾವು ದೇಹಕ್ಕೆ ಒದಗಿಸುತ್ತಿರುವ ಕ್ಯಾಲ್ಸಿಯಂ ಅಂಶವು ನಿಗದಿತ ಪ್ರಮಾಣದಲ್ಲಿ ಒಂದನೇ ಮೂರು ಭಾಗದಷ್ಟು ಮಾತ್ರ!

ವಿಟಮಿನ್ ಡಿ ಕೊರತೆಯಿಂದಾಗುವ ದುಷ್ಪರಿಣಾಮಗಳಾವುವು?

ರಿಕೆಟ್ಸ್, ಆಸ್ಟಿಯೋಮಲೇಸಿಯಾ (ಮೆದುಮೂಳೆ), ಮೂಳೆಸವೆತದ ಜೊತೆಗೆ, ಎದೆಗೂಡಿನ ಮೂಳೆಗಳ ವಿಕೃತಿಯಿಂದ ಶ್ವಾಸಕೋಶದ ರೋಗಗಳು, ಉಸಿರಾಟದ ಸಮಸ್ಯೆ, ನರರೋಗಗಳು, ಹೃದಯರೋಗಗಳು, ಅನೇಕ ಕ್ಯಾನ್ಸರ್‌ಗಳು, ಥೈರಾಯಿಡ್ ಸಮಸ್ಯೆ, ಸುಲಭವಾಗಿ ಮೂಳೆಮುರಿಯುವುದು. ಇವೆಲ್ಲಕ್ಕೂ ವಿಟಮಿನ್ ಡಿ ಕೊರತೆಯೇ ಕಾರಣ.

ರಾಷ್ಟ್ರೀಯ ಕಾರ್ಯಕ್ರಮ

  1. ಹಾಗಾದರೆ ವಿಟಮಿನ್ ಡಿ ಕೊರತೆಯನ್ನು ನೀಗಿಸುವುದು ಸರ್ಕಾರ ತೆಗೆದುಕೊಳ್ಳಬೇಕಾದ ರಾಷ್ಟ್ರೀಯ ಕಾರ್ಯಕ್ರಮ. ಡೈರಿ ಹಾಲನ್ನು ಸಾಕಷ್ಟು ವಿಟಮಿನ್ ಡಿ ಯೊಂದಿಗೆ ಬಲಪಡಿಸುವಿಕೆ.
  2. ಕ್ಯಾಲ್ಸಿಯಂಯುಕ್ತ ಆಹಾರಗಳು: ಹಾಲು, ಹಾಲಿನ ಉತ್ಪನ್ನಗಳು, ಸೋಯಾಬಿನ್ಸ್, ಕಾಳುಗಳು, ರಾಗಿ, ಬಾದಾಮಿ, ಸೊಪ್ಪು, ಹಸಿರು ತರಕಾರಿ, ಬೀನ್ಸ್, ಮುಂತಾದವು.
  3. ವಿಟಮಿನ್ ಡಿ ಯುಕ್ತ ಆಹಾರ: ಮೊಟ್ಟೆ, ಮೀನು, ಮಾಂಸ, ಕಾಡ್‌ಲಿವರ್ ಎಣ್ಣೆ, ಹಾಲು ಹಾಗೂ ಹಾಲಿನ ಉತ್ಪನ್ನಗಳು. ದಿನನಿತ್ಯದ ವಿಟಮಿನ್ ಡಿ ಅವಶ್ಯಕತೆ – 200 ಯುನಿಟ್‌ಗಳು ವಯಸ್ಕರಿಗೆ, ವಯಸ್ಸಾದ ನಂತರ 400 ರಿಂದ 600 ಯುನಿಟ್.
  4. ವಿಟಮಿನ್ ಡಿ ಪಡೆಯಲು ಅತೀ ಸುಲಭ ಹಾಗೂ ಅತ್ಯುತ್ತಮವಾದ ಮಾರ್ಗವೆಂದರೆ ದಿನಕ್ಕರ್ಧ ಗಂಟೆ ಸೂರ್ಯನ ಕಿರಣಗಳು ಬೆನ್ನು ಹಾಗೂ ಮೈಮೇಲೆ ಬೀಳುವಂತೆ ಮಾಡುವುದು.
  5. ಸೂಕ್ಷ್ಮ ಚರ್ಮವಿರುವವರು, ಜಾಗ್ರತೆಯಾಗಿರಿ. ಸ್ವಲ್ಪ ಸಮಯ ಬಿಸಿಲು ಚರ್ಮದ ಮೇಲೆ ಬಿದ್ದ ನಂತರ, ಸನ್ ಸ್ಕ್ರೀನ್ ಲೋಶನ್ ಬಳಸಿರಿ. ಸನ್ ಸ್ಕ್ರೀನ್ ಲೋಶನ್‌ನಲ್ಲಿ ಎಸ್.ಪಿ.ಎಫ್. 15 ಕ್ಕಿಂತ ಹೆಚ್ಚಿದ್ದಲ್ಲಿ ಅದು ಚರ್ಮವನ್ನು ಹಾನಿಕಾರಕ ಯು.ವಿ.ಕಿರಣಗಳಿಂದ ರಕ್ಷಿಸುವುದೆನ್ನಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.

54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

Published

on

ಸುದ್ದಿದಿನ,ಬೆಂಗಳೂರು:ಆರ್‌ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್‌ ರೆಸ್ಟೋರೆಂಟ್‌ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.

ಬೆಂಗಳೂರಿನ #NativeCooks ಫುಡ್‌ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್‌ಸಿಬಿ ಅಭಿಮಾನಿಗಳ ಮನ ಗೆದ್ದಿದೆ.

ಹೌದು, ಹೆಬ್ಬಾಳ, ಆರ್‌ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್‌ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್‌ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್‌ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್‌ಬಾಕ್ಸ್‌ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.

ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್‌ ಕುಕ್ಸ್‌ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್‌ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್.‌ ವೆಜ್‌ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್‌ವೆಜ್‌ ಊಟವನ್ನು 135 ರೂಪಾಯಿಗೆ ಹಾಗೂ ಎಕ್‌ ಮೀಲ್‌ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.

ಸದ್ಯಕ್ಕೆ ಹೆಬ್ಬಾಳ, ಆರ್‌ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ12 hours ago

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗಾಗಿ ಜನರಲ್ ಕೆ.ಎಸ್.ತಿಮ್ಮಯ್ಯ ನಗದು...

ಅಂಕಣ3 days ago

ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)

~ ರುದ್ರಪ್ಪ ಹನಗವಾಡಿ ಭದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್‌ಎಸ್ ಹಲವು ಗುಂಪುಗಳಾಗಿ...

ದಿನದ ಸುದ್ದಿ4 days ago

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ...

ದಿನದ ಸುದ್ದಿ4 days ago

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು,...

ದಿನದ ಸುದ್ದಿ5 days ago

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ...

ದಿನದ ಸುದ್ದಿ5 days ago

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ...

ದಿನದ ಸುದ್ದಿ5 days ago

ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ...

ದಿನದ ಸುದ್ದಿ5 days ago

ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯ ಅರ್ಜಿಯನ್ನು...

ದಿನದ ಸುದ್ದಿ5 days ago

ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ವಾಕ್-ಇನ್-ಇಂಟರ್‍ವೀವ್ ಆಯೋಜಿಸಲಾಗಿದೆ. ವಾಕ್-ಇನ್-ಇಂಟರ್‍ವೀವ್...

ದಿನದ ಸುದ್ದಿ6 days ago

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ...

Trending