ದಿನದ ಸುದ್ದಿ
ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಶೇಕಡಾ 88% ಭಾರತೀಯರ ಒಲವು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2021/02/ban-tobacco_suddidina.jpg&description=ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಶೇಕಡಾ 88% ಭಾರತೀಯರ ಒಲವು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2021/02/ban-tobacco_suddidina.jpg&description=ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಶೇಕಡಾ 88% ಭಾರತೀಯರ ಒಲವು', 'pinterestShare', 'width=750,height=350'); return false;" title="Pin This Post">
ಕೋಟ್ಪಾ ತಿದ್ದುಪಡಿ ಮಸೂದೆ 2020ರ ಪ್ರಸ್ತಾವಿತ ಸುಧಾರಣೆಗಳಿಗೆ ರಾಷ್ಟ್ರ ಯ ಸಮೀಕ್ಷೆಯಲ್ಲಿ ಭಾರೀ ಸಾರ್ವಜನಿಕ ಬೆಂಬಲ ವ್ಯಕ್ತವಾಗಿದೆ.
ಸುದ್ದಿದಿನ,ಬೆಂಗಳೂರು: ದೇಶದ 10 ರಾಜ್ಯಗಳ ವಯಸ್ಕರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಶೇ. 80ಕ್ಕೂ
ಹೆಚ್ಚು ಭಾರತೀಯರು ಸಿಗರೇಟ್, ಬೀಡಿ ಮತ್ತು ಹೊಗೆರಹಿತ ತಂಬಾಕು ಬಳಕೆ ಬಹಳ ಗಂಭೀರ ಸಮಸ್ಯೆ ಎಂದು
ನಂಬಿದ್ದಾರೆ ಹಾಗೂ ಈ ಸಮಸ್ಯೆಯನ್ನು ನಿವಾರಿಸಲು ಪ್ರ ಪ್ರಸ್ತುತ ಚಾಲ್ತಿಯಲ್ಲಿರುವ ತಂಬಾಕು ನಿಯಂತ್ರಣ ಕಾನೂನನ್ನು
ಬಲಪಡಿಸಲು ಶೇ. 88% ಮಂದಿ ಪ್ರಬಲವಾಗಿ ಬೆಂಬಲಿಸುತ್ತಾರೆ.
ಧೂಮಪಾನದ ಹೊಗೆಗೆ ಒಡ್ಡಿಕೊಳ್ಳುವುದು
ಆರೋಗ್ಯಕ್ಕೆ ಅತೀ ಹಾನಿಕಾರಕ ಎಂದು ಶೇ. 72 ಜನರು ನಂಬಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ,
ವಿಮಾನ” ನಿಲ್ದಾಣ, ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ವಿಶೇಷ ಧೂಮಪಾನ ಪ್ರದೇಶಗಳ ತೆರವು ಹಾಗೂ
ಮಾರಾಟ ಕೇಂದ್ರ ಗಳಲ್ಲಿ ಸಿಗರೇಟ್ ಮತ್ತು ದೀಡಿಗಳ ಬಿಡಿ ಮಾರಾಟ ಮತ್ತು ತಂಬಾಕು ಉತ್ಪನ್ನಗಳ ಜಾಹೀರಾತಿನ
ಮೇಲೆ ನಿಷೇಧಕ್ಕೆ ಸಿಕ್ಕ ಬೆಂಬಲ ಅಭೂತಪೂರ್ವ.
ಕನ್ಸ್ಯುಮರ್ ವಾಯ್ಸ್ 10 ರಾಜ್ಯಗಳಲ್ಲಿ ದೂರವಾಣಿ ಮುಖಾಂತರ ನಡೆಸಿದ 18 ವರ್ಷ ಮೇಲ್ಪಟ್ಟ 1,476
ವಯಸ್ಕರನ್ನೊಳಗೊಂಡ ವಿವರವಾದ ಸಮೀಕ್ಷೆಯ ಅಂಶಗಳಿವು. ಹತ್ತು ಭಾಷೆಗಳಲ್ಲಿ (ಕನ್ನಡ, ಹಿಂದಿ, ಗುಜರಾತಿ,
ಪಂಜಾಬಿ, ಒರಿಯಾ, ಮರಾಠಿ, ತಮಿಳು, ಬೆಂಗಾಲಿ, ತೆಲುಗು ಮತ್ತು ಮಲಯಾಳಂ) ನಡೆಸಲಾದ ಈ ಆಳವಾದ
ಸಂದರ್ಶನಗಳಿಗೆ ಕಂಪ್ಯೂಟರ್ ಅಸಿಸ್ಲೆಡ್ ಟೆಲಿಫೋನ್ ಇಂಟರ್ವ್ಯೂಯಿಂಗ್ (ಸಿಎಟಿಐ) ಮತ್ತು ರಾಂಡಮ್ ಡಿಜಿಟ್
ಡಯಲ್ (ಆರ್ ಡಿಡಿ) ಕ್ರಮಶಾಸ್ತ್ರವನ್ನು ಬಳಸಲಾಯಿತು.
ಸಮೀಕ್ಷೆಯ ಪ್ರಮುಖಾಂಶಗಳು
1. ತಂಬಾಕುಬಳಕೆಯನ್ನುಬಹುತೇಕ ಭಾರತೀಯರು ಗಂಭೀರ ಸಮಸ್ಯೆಯಾಗಿ ನೋಡುತ್ತಾರೆ
ಸಮೀಕ್ಷೆಯಲ್ಲಿ ಪಾಲ್ಗೊಂಡ ಬಹುತೇಕರು ತಂಬಾಕು ಬಳಕೆಯ ವಿವಿಧ ಬಗೆಗಳನ್ನು ಬಹಳ ಗಂಭೀರ ಸಮಸ್ಯೆಗಳಿಂದ ಪರಿಗಣಿಸುತ್ತಾರೆ. ಶೇಕಡ 82ರಷ್ಟು ಮಂದಿ
ಹೊಗೆರಹಿತ ತಂಬಾಕು ಬಳಕೆ ತೀವ್ರ ಗಂಭೀರ ಸಮಸ್ಯೆ ಎಂದು ನಂಬುತ್ತಾರೆ; “ಶೇಕಡಾ 80ರಷ್ಟು ಮಂದಿ ಸಿಗರೇಟ್ ಸೇವಸೆ ಬಗ್ಗೆ ಇದೇ ಅಭಿಪ್ರಾಯ ವ್ಯಕ್ತಪಡಿಸಿದರೆ, ಶೇಕಡ
77ರಷ್ಟು ಮಂದಿ ಬೀಡಿ ಬಳಕೆ ಬಹಳ ಗಂಭೀರ ಸಮಸ್ಯೆ ಎಂದು ಹೇಳುತ್ತಾರೆ.
2. ಧೂಮಪಾನದ ಹೊಗೆಗೆ ಒಡ್ಡಿಕೊಳ್ಳುವುದು ಆರೋಗ್ಯಕ್ಕೆ ಬಹಳ ಅಪಾಯಕಾರಿ
ಧೂಮಪಾನದ ಹೊಗೆಗೆ ತಮ್ಮನ್ನು ಒಡ್ಡಿಕೊಳ್ಳುವುದು ಕಳವಳಕಾರಿ ಎಂದು ಶೇಕಡ 72 ರಷ್ಟು ಮಂದಿ, ಅಂದರೆ ಪ್ರತಿ ಹತ್ತು ಭಾರತೀಯರಲ್ಲಿ ಏಳು ಮಂದಿ ಎಂದು ಹೇಳುತ್ತಾರೆ.
3. ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಭಾರತೀಯರ ತೀವ್ರ ಒಲವು
ಪ್ರಸಕ್ತ ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಶೇಕಡ 88ರಷ್ಟು ಮಂದಿ ಇದಕ್ಕೆ ಬೆಂಬಲ ನೀಡುವ ಮೂಲಕ ಹತ್ತು
ಭಾರತೀಯರಲ್ಲಿ 9 ಮಂದಿ ಕಾನೂನನ್ನು ಬಲಪಡಿಸುವ ಪರವಾಗಿದ್ದಾರೆ. ವಯಸ್ಸು ಮತ್ತು ಲಿಂಗ ಸೇರಿದಂತೆ ಎಲ್ಲ ಸಾಮಾಜಿಕ ‘ಮತ್ತು ಭೌಗೋಳಿಕ ಸ್ತರಗಳನ್ನೂ ಮೀರಿ’ ಇದಕ್ಕೆ ಬೆಂಬಲ ವ್ಯಕ್ತವಾಗಿದೆ. ತಂಬಾಕು ಬಳಕೆದಾರರು ಸಹ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.
‘”ಪ್ರಸಕ್ತ ಜಾರಿಯಲ್ಲಿರುವ ತಂಬಾಕು ನಿಯಂತಣ ಕಾನೂನನ್ನು ಬಲಪಡಿಸಲು ಜನರಿಂದ ವ್ಹಕ್ತವಾಗಿರುವ ಬೆಂಬಲ ಆಶಾದಾಯಕವಾಗಿದೆ. ಭಾರತ ಸರ್ಕಾರವು ಈಗಾಗಲೇ ತಂಬಾಕು ನಿಯಂತಣ ಕಾನೂನು
ಕೋಟಾ-2003ಕ್ಕೆ ತಿದ್ದುಪಡಿ ತರುವ ಪ್ರಕ್ರಿಯೆಯನ್ನು ಆರಂಭಿಸಿದ್ದು ಇದು ಸಾರ್ವಜನಿಕ ಆರೋಗ್ಯವನ್ನು
ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ, ಮಾರಾಟ
ಕೇಂದ್ರಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶನ ಹಾಗೂ ಸಿಗರೇಟ್ ಮತ್ತು ಬಿಡಿಗಳ ಬಿಡಿ ಮಾರಾಟ ಪ್ರಸಕ್ತ ಜಾರಿಯಲ್ಲಿರುವ ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಜನರಿಂದ ವ್ಯಕ್ತವಾಗಿರುವ
ಅಭೂತಪೂರ್ವ ಬೆಂಬಲ ಆಶಾದಾಯಕವಾಗಿದೆ.
ಭಾರತ ಸರ್ಕಾರವು ಈಗಾಗಲೇ ತಂಬಾಕು ನಿಯಂತ್ರಣ ಕಾನೂನು ಕೋಟಾ-2003ಕ್ಕೆ ತಿದುಪಡಿ ತರುವ ಪ್ರಕ್ರಿಯೆಯನ್ನು ಆರಂಭಿಸಿದ್ದು ಇದು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಮಹತ್ತದ ಹೆಜ್ಜೆಯಾಗಿದೆ. ಸಾರ್ವಜನಿಕ ಸಳಗಳಲ್ಲಿ ಧೂಮಪಾನ ನಿಷೇಧ, ಮಾರಾಟ ಕೇಂದ್ರಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶನ ಹಾಗೂ ಸಿಗರೇಟ್ ಮತ್ತು ಬಿಡಿಗಳ ಬಿಡಿ ಮಾರಾಟ ನಿಷೇಧಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಬಲಪಡಿಸುವುದರ ಜೊತೆಗೆ ಹೆಚ್ಚಿನ ದಂಡವನ್ನೂ ವಿಧಿಸಲು ಸರ್ಕಾರ ‘ಯೋಜಿಸಿದೆ.’ ಎಂದು ಶ್ರೀ ಆಶಿಮ್ ಸನ್ಯಾಲ್, ಮುಖ್ಯ ನಿರ್ವಹಣಾಧಿಕಾರಿ, ಕನ್ಸ್ಯುಮರ್ ವಾಯ್ಟ್ ತಿಳಿಸಿದ್ದಾರೆ.
“ಕನ್ಸ್ಯುಮರ್ ವಾಯ್ಸ್ ನಡೆಸಿರುವ ಸಮೀಕ್ಷೆಯಲ್ಲಿ ಶೇಕಡ 80ಕ್ಕೂ ಹೆಚ್ಚು ಮಂದಿ ತಂಬಾಕು ನಿಯಂತ್ರಣ
ಕಾನೂನುಗಳನ್ನು ಬಲಪಡಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಭಾರಿ ಜನಬೆಂಬಲವನ್ನು ಗಣನೆಗೆ
ತೆಗೆದುಕೊಂಡರೆ, ಧೂಮಪಾನವನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸುವುದಿಲ್ಲದೆ ರೆಸ್ಟೋರೆಂಟ್ ಪಬ್
ಹೋಟೆಲ್ ಮತ್ತು ವಿಮಾನ ನಿಲ್ದಾಣಗಳಲ್ಲಿ ಧೂಮಪಾನ ಪ್ರದೇಶವನ್ನು ಸರ್ಕಾರ ಕೂಡಲೇ ನಿಷೇಧಿಸುವ
ಸಮಯ ಬಂದಿದೆ ಎಂದೇ ಅರ್ಥ.
ಅಲ್ಲದೆ, ತಂಬಾಕು ನಿಯಂತ್ರಣ ಕಾಸೂಸುಗಳ ಉಲ್ಲಂಘನೆಗೆ ಹೆಚ್ಚಿನ ದಂಡ ವಿಧಿಸುವುದು ಹಾಗೂ ಸಿಗರೇಟ್ ಮತ್ತು ಬೀಡಿಗಳ ಬಿಡಿ ಮಾರಾಟದ ಮೇಲಿನ ನಿಷೇಧದ
ಕಟ್ಟುನಿಟ್ಟಿನ ಜಾರಿ ಈ ಕ್ಷಣದ ತುರ್ತಾಗಿದೆ” ಎಂದು ಡಾ. ತ್ರಿವೇಣಿ ಸಾರ್ವಜನಿಕ ಆರೋಗ್ಯ ತಜ್ಞೆ ಮತ್ತು
ಪ್ರಾಜೆಕ್ಟ್ ಲೀಡರ್ ಸ್ಮೋಕ್ ಪ್ರೀ ಬೆಂಗಳೂರು ಹೇಳಿದ್ದಾರೆ.
ಜಾಗತಿಕವಾಗಿ ರೋಗ ಮತ್ತು ಅಕಾಲಿಕ ಮರಣಗಳಿಗೆ ತಂಬಾಕು ಬಳಕೆ ಪ್ರಮುಖ ಮತ್ತು ತಡೆಯಬಹುದಾದ
ಕಾರಣವಾಗಿದ್ದು, ಭಾರತದಲ್ಲಿ ತಂಬಾಕು ಸಂಬಂಧಿತ ಕಾಯಿಲೆಗಳಿಂದ ಪ್ರತಿವರ್ಷ 10 ಲಕ್ಷಕ್ಕೂ ಹೆಚ್ಚು ಜನ ಮರಣ
ಹೊಂದುತ್ತಿದ್ದಾರೆ. ಭಾರತದಲ್ಲಿ ಸಾಮಾಜಿಕ, ಆರ್ಥಿಕ, ಲಿಂಗ ಮುಂತಾದ ಎಲ್ಲ ಸ್ತರಗಳನ್ನೂ ಮೀರಿ 26 ಕೋಟಿಗೂ
ಹೆಚ್ಚು ತಂಬಾಕು ಬಳಕೆದಾರರಿದ್ದಾರೆ. 2017-18ರಲ್ಲಿ ಎಲ್ಲ ತಂಬಾಕು ಉತ್ಪನ್ನಗಳ ವಾರ್ಷಿಕ ಆರ್ಥಿಕ ವೆಚ್ಚ ರೂ.
177,341 ಕೋಟಿ ಎಂದು ಅಂದಾಜಿಸಲಾಗಿತ್ತು ಮತ್ತು ಇದು ಭಾರತದ ಜಿಡಿಪಿಯ ಶೇಕಡ ಒಂದರಷ್ಟಿತ್ತು.
ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನೀಡಿರುವ ಮಾಹಿತಿಯ ಪ್ರಕಾರ, ತಂಬಾಕಿನ ಎಲ್ಲ ರೀತಿಯ ಬಳಕೆಗೂ, ಅದು ಧೂಮಪಾನವಾಗಲಿ ಅಥವ ಜಗಿಯುವುದಾಗಲಿ, ಕೋವಿಡ್ ಸಂಬಂಧಿ ಸಾವು-ನೋವುಗಳಿಗೂ ಗಮನಾರ್ಹ ನಂಟಿದೆ.
ವಾಲೆಂಟರಿ ಆರ್ಗನೈಸೇಷನ್ ಇನ್ ಇಂಟ್ರೆಸ್ಟ್ ಆಫ್ ಕನ್ಸ್ಹುಮರ್ ಎಜುಕೇಶನ್ (voluntary organisation in interest of consumer education )-(voice) ನವದೆಹಲಿ ಮೂಲದ ಸರ್ಕಾರೇತರ ಸಂಸ್ಥೆಯಾಗಿದ್ದು,
ಭಾರತದಾದ್ಯಂತ ತಂಬಾಕು ನಿಯಂತ್ರಣ ಸೇರಿದಂತೆ ವಿವಿಧ ಸಾಮಾಜಿಕ ಮತ್ತು ಆರೋಗ್ಯ ವಿಷಯಗಳ ಕುರಿತು
ಕಾರ್ಯನಿರ್ವಹಿಸುತ್ತಿದೆ.
ಇದೊಂದು ರಾಷ್ಟ್ರೀಯ ಮಟ್ಟದ ಗ್ರಾಹಕ ಸಂಘಟನೆಯಾಗಿದ್ದು, 1983ರಿಂದ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ನೀತಿ ರಚನೆ ಮತ್ತು ನಿಯಂತ್ರಕ ಸಂಸ್ಥೆಗಳಲ್ಲಿ ಗ್ರಾಹಕರ ಹಿತಾಸಕ್ತಿಗಳನ್ನು ಪ್ರತಿನಿಧಿಸುತ್ತೇವೆ ಎಂದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.
ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.
ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ7 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ6 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ3 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ20 hours agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ3 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

