ದಿನದ ಸುದ್ದಿ
ಮತದಾನ ಮೂಲಕ ಭಾರತಾಂಭೆ ಋಣ ತೀರಿಸಿ : ವೀರೇಂದ್ರ ಹೆಗ್ಗಡೆ

ಸುದ್ದಿದಿನ,ಮೈಸೂರು: ದೇಶವನ್ನು ತಾಯಿಯ ರೀತಿ ನೋಡಬೇಕು, ತಾಯಿ ನಮ್ಮನ್ನು ಸಾಕಿ ಸಲಿದು ಪೋಷಣೆ ಮಾಡಿ ಶಿಕ್ಷಣ ನೀಡುತ್ತಾಳೆ ಹಾಗಾಗಿ ತಾಯಿ ಋಣ ತೀರಿಸಲು ತಾಯಿ ಸೇವೆ ಮಾಡಬೇಕು. ಭಾರತಾಂಭೆಯ ಋಣ ನಮ್ಮ ಮೇಲಿದೆ ಅದನ್ನು ತೀರಿಸಲು ಮತ ಚಲಾಯಿಸಬೇಕು. ಉದಾಸಿನ ಅಲಸ್ಯದಿಂದ ಮತದಾನದ ಹಕ್ಕಿನಿಂದ ವಂಚಿತರಾದರೆ ತಾಯಿ ಸೇವೆಯಿಂದ ವಂಚಿತರಾದ ಹಾಗೇ ಉತ್ತಮ ಸರ್ಕಾರ ರಚನೆಯಾಗಲು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ವೀರೇಂದ್ರ ಹೆಗ್ಗಡೆ ಅವರು ತಿಳಿಸಿದರು.
ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಎಂ.ಎಂ.ಕೆ.ಮತ್ತು ಎಸ್.ಡಿ.ಎಂ. ಮಹಿಳಾ ಮಹಾವಿದ್ಯಾಲಯದ ಎನ್.ಎಸ್.ಎಸ್, ವೈ.ಆರ್.ಸಿ ರೇಂಜರ್ಸ್ ಘಟಕಗಳು ಹಾಗೂ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
ಮೊದಲ ಬಾರಿಗೆ ಚುನಾವಣೆಯಲ್ಲಿ ಮತದಾನ ಮಾಡುವ ವಿದ್ಯಾರ್ಥಿನಿಯರಿಗೆ ಅಭಿನಂದನೆ ತಿಳಿದರು. ನಿಮ್ಮ ನೆರೆಹೊರೆಯವರಿಗೂ ಮತದಾನ ಮಾಡುವಂತೆ ತಿಳಿಸಿ ಹಾಗೂ ದೇಶ,ಸಮಾಜ ಹಾಗೂ ಹಳ್ಳಿಗಳ ಸುಧಾರಣೆಗೆ ಒಳ್ಳೆಯ ವ್ಯಕ್ತಿಗಳನ್ನು ಹಾರಿಸಿ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜ್ಯೋತಿ. ಕೆ ಅವರು ಮಾತನಾಡಿ ಚುನಾವಣೆ ಆಯೋಗದ ನಿರ್ದೇಶನದಂತೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ನಮಗೆ ಸಂಘ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಹಾಸ್ಟಲ್ ವಿದ್ಯಾರ್ಥಿಗಳು ಜಾಗೃತಿಗೆ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಕಡ್ಡಾಯವಾಗಿ ನಿರ್ಭೀತಿಯಿಂದ ನೈತಿಕವಾದ ಮತದಾನ ಮಾಡಿ ನಿಮ್ಮ ಮನೆಯ ಅಕ್ಕ ಪಕ್ಕದವರನ್ನು ಮತದಾನ ಮಾಡುವಂತೆ ಪ್ರೆರೇಪಿಸಿ ಎಂದು ಅವರು ತಿಳಿಸಿದರು. ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ವಿದ್ಯಾರ್ಥಿಗಳಿಗೆ ಚುನಾವಣಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಜಾಥಾವು ಎಸ್.ಡಿ.ಎಂ ಕಾಲೇಜಿನಿಂದ ಹೋರಟು ಆರ್.ಟಿ.ಒ ವೃತ್ತ, ನ್ಯಾಯಾಲಯ, ಅಶೋಕ ವೃತ್ತದ ಮೂಲಕ ಸಾಗಿತು ಈ ವೇಳೆ ವಿದ್ಯಾರ್ಥಿನಿಯರು ಮತದಾನದ ಪೋಸ್ಟರ್ಗಳನ್ನು ಹಿಡಿದು ವೋಟ್ ಪಾರ್ ಇಂಡಿಯಾ ಹಾಗೂ ತಪ್ಪದೇ ಮತದಾನ ಮಾಡಿ, ನೈತಿಕ ಚುನಾವಣೆ ಬೆಂಬಲಿಸಿ ಎಂಬ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಶಿವನಂದಾ ಮೂರ್ತಿ, ಎಂ.ಎಂ.ಕೆ. ಮತ್ತು ಎಸ್.ಡಿ.ಎಂ. ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಸಾಯಿನಾಥ್ ಮಲ್ಲಿಗೆಮಾಡು, ಪ್ರಾಂಶುಪಾಲರಾದ ಎಂ.ವಿ. ಆಶಾ ಹಾಗೂ ಇನ್ನಿತರರು ಅಧಿಕಾರಿಗಳು ಕಾಲೇಜು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10 ಸಾವಿರ ನಿವೇಶನ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 2 ಸಾವಿರದ 500 ಮನೆಗಳು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಕೂಡ ಅರ್ಹ ಫಲಾನುಭವಿಗಳಿಗೆ ಹಂಚಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ ಶಟ್ಟಿ ಬಣ) ಮನವಿ ಸಲ್ಲಿಸಿತು.
ಜಲ್ಲಾಧ್ಯಕ್ಷ ಜಮ್ನಳ್ಳಿ ನಾಗರಾಜ್ ಮಾತನಾಡಿ, ದಾವಣಗೆರೆ ಜಿಲ್ಲೆಯ ಮೊರಾರ್ಜಿ ವಸತಿ ಶಾಲೆಗಳಲ್ಲಿ ಬಡ ಕುಟುಂಬಗಳ ಮಕ್ಕಳೇ ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತ್ತಿದ್ದು, ಸದರಿ ಮಕ್ಕಳಿಗೆ ವಸತಿ ಶಾಲೆಯಲ್ಲಿ ಸರಿಯಾದ ಮೂಲಭೂತ ಸೌಲಭ್ಯ ಕಲ್ಪಿಸದೇ ಇರುವುದರಿಂದ ಮಕ್ಕಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.
ಮಕ್ಕಳಿಗೆ ಸ್ನಾನಕ್ಕೆ ಬಿಸಿ ನೀರು ಇರುವುದಿಲ್ಲ. ಅಲ್ಲದೇ ಮಕ್ಕಳಿಗೆ ಸರಿಯಾಗಿ ಊಟದ ವ್ಯವಸ್ಥೆ ಸಮರ್ಪಕವಾಗಿರುವುದಿಲ್ಲ, ಶೌಚಾಲಯ ಸೌಕರ್ಯಗಳಿರುವುದಿಲ್ಲ, ಮಕ್ಕಳ ಮೇಲ್ವಿಚಾರಣೆಗೆ ವಾರ್ಡನ್ಗಳು ರಾತ್ರಿ ಸಮಯದಲ್ಲಿ ಸ್ಥಳದಲ್ಲಿರುವುದಿಲ್ಲ, ಅಲ್ಲದೇ ವಿದ್ಯುತ್ ತೊಂದರೆಯಾದರೆ ಮಕ್ಕಳಿಗೆ ಯು.ಪಿ.ಎಸ್. ಸೌಲಭ್ಯವಿಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಮನವಿ ಸ್ವೀಕರಿಸಿದ ಸಿ.ಇ.ಒ ಮಾತನಾಡಿ, ಸಧ್ಯದಲ್ಲೇ ಅಧಿಕಾರಿಗಳ ಸಭೆ ಕರೆಯಲಾಗಿದ್ದು ಈ ವಿಷಯದ ಬಗ್ಗೆ ಚರ್ಚೆ ನಡಿಸಿ ಸೂಕ್ತ ತೀರ್ಮಾನ ಕೈಗೂಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಜಮ್ನಳ್ಳಿ ನಾಗರಾಜ್, ಜಿಲ್ಲಾ ಕಾರ್ಯಧ್ಯಕ್ಷ ಸೈಯದ್ ನಜೀರ್, ನಾಗರಾಜ್ ಆದಾಪುರ್, ಸಂಘಟನಾ ಕಾರ್ಯದರ್ಶಿ ಸಂತೋಷ್ ಕುಮಾರ್, ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಎಂ, ನಗರ ಘಟಕ ಅಧ್ಯಕ್ಷ ಅನೂಪ್ ಇಜಾರಿ, ಮಹಿಳಾ ಗೌರವಾಧ್ಯಕ್ಷೆ ವನಜ ಕರಿಯಪ್ಪ, ಉತ್ತರ ವಲಯದ ಯುವ ಘಟಕದ ಅಧ್ಯಕ್ಷ ಶಿವಕುಮಾರ ಬಿ ಬಿ, ನಾಗರಾಜ ಆಥಪುರ್, ಶಬ್ರಿನ್ ತಾಜ್, ಬಸವರಾಜ ಎಸ್, ಬಸವರಾಜ್ ಪಿ, ಮಂಜುಳಾ ಆರ್, ನಾಗರಾಜ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವೆಬೆಸೈಟ್ https://ssc.nic.in ಅಥವಾ https://ssckkr.kar.nic.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 18 ಕೊನೆಯದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-2527342, 25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ2 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ15 hours ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ2 days ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್
-
ದಿನದ ಸುದ್ದಿ16 hours ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ23 hours ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ23 hours ago
ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ