ದಿನದ ಸುದ್ದಿ
ಮತದಾರರ ಪಟ್ಟಿ ಪರಿಷ್ಕರಣೆ ; ಪ್ರತಿಪಕ್ಷಗಳಿಗೆ ಯಾಕೆ ಸಮಸ್ಯೆ..?
ಸುದ್ದಿದಿನಡೆಸ್ಕ್:ದೇಶವಾಸಿಗಳಿಗೆ ಮಾತ್ರ ಮತದಾನದ ಹಕ್ಕು ಇದ್ದು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದರೆ ಪ್ರತಿಪಕ್ಷಗಳಿಗೆ ಯಾಕೆ ಸಮಸ್ಯೆಯಾಗುತ್ತದೆ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಸಂಸದ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.
ದೆಹಲಿಯಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಹಾರದ ಅರಾರಿಯಾ, ಊರ್ನಿಯಾ ಮತ್ತು ಕಿಶನ್ ಗಂಜ್ ನಲ್ಲಿ ಜನಸಂಖ್ಯೆಗಿಂತ ಶೇಕಡ 25ರಷ್ಟು ಹೆಚ್ಚು ಆಧಾರ್ ಕಾರ್ಡ್ ಗಳನ್ನು ವಿತರಿಸಲಾಗಿದೆ. ಇವರಲ್ಲಿ ಬಹುತೇಕರು ಹೊರಗಿನವರಾಗಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243