Connect with us

ರಾಜಕೀಯ

ಹೂಗಳ ಮೂಲಕ ಮತದಾನ ಜಾಗೃತಿ ; ವಿಶಿಷ್ಟ ಪ್ರಯೋಗ

Published

on

ಸುದ್ದಿದಿನ,ಹುಬ್ಬಳ್ಳಿ : ಭಾರತದ ನಾಗರಿಕರಾಗಿರದ್ದು, ಹದಿನೆಂಟು ವರ್ಷ ತುಂಬಿದ ಎಲ್ಲಾ ಯುವಕ ಯುವತಿಯರು ತಪ್ಪದೇ ತಮ್ಮ ಮತದಾನದ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಹೇಳಿದರು.

ನಗರದ ಇಂದಿರಾ ಗಾಜಿನ ಮನೆಯಲ್ಲಿ ಚುನಾವಣಾ ಆಯೋಗ, ಜಿಲ್ಲಾ ಆಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತೋಟಗಾರಿಕೆ ಇಲಾಖೆ ಸಹೋಗದಲ್ಲಿ ಮೂರು ದಿನಗಳ ಕಾಲ ಮತದಾನದ ಜಾಗೃತಿಗಾಗಿ ಆಯೋಜಿಸಲಾಗಿರುವ ಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಏಪ್ರಿಲ್ 23ರ ಮಂಗಳವಾರದಂದು ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮತದಾನ ಜರುಗಲಿದೆ. ಅಂದು ಸರ್ಕಾರಿ ರಜಾ ದಿನವಾದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಪಾಲ್ಗೋಳ್ಳಬೇಕು. 18 ವರ್ಷ ತುಂಬಿದ ಯುವಕರಿಂದ ಈಗಾಗಲೇ ಫಾರಂ ನಂ 6 ನಲ್ಲಿ ಮತದಾರರ ಪಟ್ಟಿಯ ನೋಂದಣಿ ಅರ್ಜಿಗಳನ್ನು ಸ್ವೀಕರಿಸಿ, ಅರ್ಹರಿಗೆ ಮತದಾರರ ಗುರುತಿನ ಚೀಟಿಯನ್ನು ನೀಡಲಾಗಿದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಾತ್ರಿ ಪಡಿಸಿಕೊಳ್ಳಲು ಚುನಾವಣಾ ಆಯೋಗದ ವೆಬ್ ಸೈಟ್ ಅಥವಾ ಆ್ಯಪ್, ಇಲ್ಲವೇ ಉಚಿತ ದೂರವಾಣಿ ಸಂಖ್ಯೆ 1950 ಕರೆ ಮಾಡಬಹುದು.

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಚುನಾವಣಾ ಅಕ್ರಮಗಳು ಜರುಗದಂತೆ ತಡೆಯುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಚುನಾವಣಾ ಅಕ್ರಮಗಳು ಕಂಡುಬಂದರೆ, ಅಂತಹ ಘಟನೆಯ ಫೋಟೊ ಹಾಗೂ ವಿಡಿಯೋಗಳನ್ನು ಚಿತ್ರಿಕರಿಸಿ ಸಿ ವಿಜನ್ ವೆಬ್ಸೈಟ್ ಮೂಲಕ ದೂರು ಸಲ್ಲಿಸಬಹುದು.

ಮತದಾನ ನಮ್ಮೆಲ್ಲರ ಹಕ್ಕು. ಮತ ಚಲಾಯಿಸುವುದರ ಮೂಲಕ ನಮ್ಮ ಕರ್ತವ್ಯ ನಿಭಾಯಿಸಿ ದೇಶ ಭಕ್ತಿ ಹಾಗೂ ಪ್ರೇಮವನ್ನು ಎಲ್ಲರೂ ತೊರಿಸಬೇಕು. ಈ ಬಾರಿ ಪ್ರಥಮ ಬಾರಿ ಮತ ಚಲಾಯಿಸುವ ಯುವಕ ಯುವತಿಯರಿಗೆ ಸೆಲ್ಫಿ ಕಾಂಟೆಸ್ಟ್ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಯುವಕ ಯುವತಿಯರು ಮತದಾನ ಮಾಡುವ ಮೂಲಕ ದೇಶಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.

ಹೂಗಳಲ್ಲಿ ಅರಳಲಿದ ಕರ್ನಾಟಕ ನಕ್ಷೆ, ಬ್ಯಾಲೆಟ್ ಹಾಗೂ ವಿವಿ ಪ್ಯಾಡ್

ಕಾರ್ನೇಶನ್, ರೋಜ್ ಸೇರಿದಂತೆ ವಿವಿಧ ಹೂಗಳಿಂದ ನಿರ್ಮಿಸಲಾದ ಕರ್ನಾಟಕದ ನಕ್ಷೆ, ಬ್ಯಾಲೆಟ್ ಹಾಗೂ ವಿವಿಪ್ಯಾಟ್ ಸುಂದರವಾಗಿ ಮೂಡಿ ಬಂದುದ್ದು, ಯುವಕ, ಯುವತಿಯರು ಹಾಗೂ ಸಾರ್ವಜನಿಕರನ್ನು ಆಕರ್ಷಿಸುತ್ತಿವೆ. ಯುವಕ, ಯುವತಿಯರು ಇವುಗಳ ಮುಂದೆ ಮತದಾನ ಜಾಗೃತಿಯ ಫಲಕಗಳನ್ನು ಹಿಡಿದು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ಮೂರು ದಿನಗಳ ಕಾಲ ಪ್ರದರ್ಶನಕ್ಕೆವನ್ನು ಏರ್ಪಡಿಸಲಾಗಿದೆ. ಹೂಗಳ ಬಾಡದೆ ಇದ್ದರೆ ನಾಲ್ಕನೆಯ ದಿನವೂ ಪ್ರದರ್ಶನ ಮುಂದುವರಿಸಲಾಗುವುದು. ಈ ಅವಧಿಯಲ್ಲಿ ಇಂದಿರಾ ಗಾಜಿನ ಮನೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಓ ಡಾ.ಬಿ.ಸಿ. ಸತೀಶ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಯುವಕರಿಗೆ ಮತದಾನದ ಕುರಿತು ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗಿತ್ತು. ಅಣಕು ಮತದಾನ ಮಾಡಿದ ಯುವಕರು, ಎಲೆಕ್ಟ್ರಾನಿಕ್ ಮತಯಂತ್ರದ ಮೂಲಕ‌ ಮತದಾನ ಮಾಡುವ ಕುರಿತಾಗಿರುವ ಇರುವ ಗೊಂದಲ ಹಾಗೂ ಸಂದೇಹಗಳು ಕೇಳಿ ಪರಿಹರಿಸಿಕೊಂಡರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಮಚಂದ್ರ ಮಡಿವಾಳ, ಹುಬ್ಬಳ್ಳಿ ತಹಶೀಲದಾರ ಶಶಿಧರ ಮಾಡ್ಯಳ, ತಾ.ಪಂ. ಇಓ ಎಂ.ಎಂ.ಸವದತ್ತಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಶಿಲ್ಪಶ್ರೀ, ಪ್ಯಾರಾ ಶೂಟರ್ ಜ್ಯೋತಿ ಸಣ್ಣಹಕ್ಕಿ, ಸೇರಿದಂತೆ ಇತರೆ ತಾಲೂಕು ಮಟ್ಟದ ಅಧಿಕಾರಿಗಳು, ಪದವಿ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

Published

on

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್‌ಟಿ ಮೊತ್ತ ಎಷ್ಟು ಗೊತ್ತಾ?!

Published

on

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ಸಂಗ್ರಹವಾಗಿದೆ.

35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್‌ಟಿ, 83ಸಾವಿರದ 251 ಕೋಟಿ ರೂಪಾಯಿ ಸಮಗ್ರ ಸರಕು ಮತ್ತು ಸೇವಾ ತೆರಿಗೆ ಇದು ಒಳಗೊಂಡಿದೆ. 37 ಸಾವಿರದ 581 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆಗೆ ಹಾಗೂ 31 ಸಾವಿರದ 408ಕೋಟಿ ರೂಪಾಯಿಗಳನ್ನು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಯಿಂದ ರಾಜ್ಯ ಸರಕು ಮತ್ತು ಸೇವಾ ತೆರಿಗೆಗೆ ಸರ್ಕಾರ ಇತ್ಯರ್ಥ ಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ3 days ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ3 days ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ4 days ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ2 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ3 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ3 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ3 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ3 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending