ದಿನದ ಸುದ್ದಿ

ಹನಿ ನೀರಾವರಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ

Published

on

ಸುದ್ದಿದಿನ,ಬಳ್ಳಾರಿ/ಹೊಸಪೇಟೆ: ಹೂವಿನಹಡಗಲಿ ತೋಟಗಾರಿಕೆ ಇಲಾಖೆಯ ವತಿಯಿಂದ 2020-21ನೆ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಅಡಿಯಲ್ಲಿ ಹನಿ ನೀರಾವರಿ ಯೋಜನೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ.)ಹೂವಿನಹಡಗಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಜನೆಯಡಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಜ.28ವರೆಗೆ ಅವಕಾಶ ಇರುತ್ತದೆ. 2020-21ನೆ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ರೈತರು ಸ್ವಂತ ಜಮೀನು ನೀರಾವರಿವುಳ್ಳವರಾಗಿರಬೇಕು ಹಾಗೂ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಹಾಗೂ ಮುಂದೆ ಬೆಳೆಯಲು ಆಸಕ್ತಿ ಹೊಂದಿರುವ ರೈತರು ಈ ಯೋಜನೆಯಡಿಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಉಪಕರಣಗಳನ್ನು ಅಳವಡಿಸಿಕೊಳ್ಳಲು ಅವಕಾಶವಿರುತ್ತದೆ.

ಪ್ರತಿಯೊಬ್ಬ ರೈತರಿಗೆ ಬಹುವಾರ್ಷಿಕ ಹೆಚ್ಚಿನ ಅಂತರದ ಬೆಳೆಗಳಿಗೆ ಕನಿಷ್ಟ 1 ಎಕರೆಯಿಂದ 12.5 ಎಕರೆ ಮತ್ತು 0.04 ಹೇಕ್ಟರದಿಂದ ಗರಿಷ್ಟ 5 ಹೇಕ್ಟರವರೆಗೂ ಹನಿ ನೀರಾವರಿ ಯೋಜನೆಯಡಿ ಸಹಾಯಧನವನ್ನು ಪಡೆಯಬಹುದಾಗಿದೆ. ಪ್ರಥಮ ಆದ್ಯತೆಯಾಗಿ ಕನಿಷ್ಟ 2 ಹೇಕ್ಟರವರೆಗೂ ಶೇ.90 ರಷ್ಟು ಸಹಾಯಧನ ಹಾಗೂ ಬಾಕಿ ಉಳಿದ 3 ಹೇಕ್ಟರಗೆ ಶೇ.45 ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ.

ಕಡಿಮೆ ಅಂತರದ ಬೆಳೆಗಳಾದ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೇಕ್ಟರವರೆಗೆ ಶೇ.90 ಸಹಾಯಧನ ನೀಡಲಾಗುವುದು. ತಾಲೂಕಿನಲ್ಲಿಯ ಎಲ್ಲ ವರ್ಗದ ಅಂದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರೆ ವರ್ಗದ ರೈತರಿಗೂ ಸಹ ಸಹಾಯಧನದ ನಿಯಮವು ಅನ್ವಯಿಸುತ್ತದೆ. ತಾಲೂಕಿನಲ್ಲಿರುವ ತೋಟಗಾರಿಗೆ ಬೆಳೆ ಬೆಳೆಯುವ ಬೆಳೆಗಾರ ರೈತರು ಹನಿ ನೀರಾವರಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಒಉಓಖಇಉಂ ಅಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ, ಕೊಳವೆ ಬಾವಿ ಮರುಪೂರ್ಣ ಘಟಕ, ಈರುಳ್ಳಿ ಶೇಖರಣಾ ಘಟಕ, ವೈಯಕ್ತಿಕ ಪೌಷ್ಠಿಕ ತೋಟಗಳ ನಿರ್ಮಾಣಕ್ಕಾಗಿ ಸಹಾಯಧನ ಸೌಲಭ್ಯವಿರುತ್ತದೆ.
ರೈತರು ತಮ್ಮ ಹೆಸರನ್ನು ನೊಂದಾಯಿಸಲು ಜ.28ರಂದು ಕೊನೆಯ ದಿನವಾಗಿರುತ್ತದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ.) ಹೂವಿನಹಡಗಲಿ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಟಿ.ಸುಧಾಕರ ಸಹಾಯಕ ತೋಟಗಾರಿಕೆ ಅಧಿಕಾರಿ(ರೈತ ಸಂಪರ್ಕ ಕೇಂದ್ರ ಹಡಗಲಿ) ದೂ.ಸಂ.8105166176, ಹ್ಯಾಟಿ ಮಾರುತಿ ತೋಟಗಾರಿಕೆ ಸಹಾಯಕರು ಹಡಗಲಿ ದೂ.ಸಂ.9886123077, ಹರೀಶ ಎಂ.ಆರ್,ಸಹಾಯಕ ತೋಟಗಾರಿಕೆ ಅಧಿಕಾರಿ (ರೈತ ಸಂಪರ್ಕ ಕೇಂದ್ರ ಇಟ್ಟಗಿ) ದೂ.ಸಂ.9743674669, ಡಿ.ರೇವಣ್ಣ ತೋಟಗಾರಿಕೆ ಸಹಾಯಕರು ದೂ.ಸಂ.7353051175, ವ್ಹಿ.ಎ.ಹುಬ್ಬಳ್ಳಿ ಸಹಾಯಕ ತೋಟಗಾರಿಕೆ ಅಧಿಕಾರಿ (ರೈತ ಸಂಪರ್ಕ ಕೇಂದ್ರ ಹಿರೇಹಡಗಲಿ) ದೂ.ಸಂ.9945936730, ಮಹಮ್ಮದರಫಿ ತೋಟಗಾರಿಕೆ ಸಹಾಯಕರು ದೂ.ಸಂ.9986722054 ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version