ದಿನದ ಸುದ್ದಿ
ಪಠ್ಯ ಪುಸ್ತಕ ಪರಿಷ್ಕರಣೆ ಸಲಹೆಗಳಿಗೆ ಮುಕ್ತವಾಗಿದ್ದೇವೆ : ಸಿಎಂ ಬಸವರಾಜ ಬೊಮ್ಮಾಯಿ
![](https://suddidina.com/wp-content/uploads/2022/06/cm_suddidina_dvg_today.jpg)
ಸುದ್ದಿದಿನ,ದಾವಣಗೆರೆ : ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ತಪ್ಪುಗಳಾಗಿದ್ದರೆ ಸರಿಪಡಿಸಲು ಸಲಹೆಗಳಿಗೆ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದಾವಣಗೆರೆ ನಗರದಲ್ಲಿ ಗುರುವಾರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಜಿ.ಎಂ.ಐ.ಟಿ ಹೆಲಿಪ್ಯಾಡ್ಗೆ ಆಗಮಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಸಲಹೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಇಲಾಖೆಯ ವೆಬ್ಸೈಟ್ನಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತಂತೆ ಪ್ರಸ್ತುತ ಹಾಗೂ ಹಿಂದಿನ ವಿವರವನ್ನು ಮುಕ್ತವಾಗಿ ಪ್ರಕಟಿಸಲಾಗಿದೆ.
ಪರಿಷ್ಕರಣೆ ಸಂದರ್ಭದಲ್ಲಿ ತಪ್ಪುಗಳಾಗಿದ್ದರೆ ಸರಿಪಡಿಸಲಾಗುವುದು. ಈ ಹಿಂದಿನ ಪಠ್ಯ ಪರಿಷ್ಕರಣೆ ಸಂದರ್ಭದಲ್ಲಿಯೂ ಹಲವಾರು ತಪ್ಪುಗಳಾಗಿವೆ, ಅವುಗಳನ್ನೂ ಸೇರಿ ಸರಿಪಡಿಸಬೇಕಾಗಿರುವ ಎಲ್ಲಾ ಅಂಶಗಳನ್ನೂ ಸರಿಪಡಿಸಲಾಗುವುದೆಂದರು. ಹಾಗೂ ವಿದ್ಯಾರ್ಥಿಗಳ ಪ್ರವಾಸಕ್ಕೆ ಹಿಂದಿ ಭಾಷೆ ಕಡ್ಡಾಯ ಎಂಬ ಯಾವುದೇ ಸುತ್ತೋಲೆ ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಂದ ಬಂದಿರುವುದಿಲ್ಲ. ಈ ರೀತಿ ಸುತ್ತೋಲೆ ಹೊರಡಿಸಿದ ಅಧಿಕಾರಿ ವಿರುದ್ದ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ತಾ.ಪಂ. ಹಾಗೂ ಜಿ.ಪಂ. ಚುನಾವಣೆಗಳಿಗೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಹಿಂದುಳಿದ ವರ್ಗಗಳ ಆಯೋಗದೊಂದಿಗೆ ಮೀಸಲಾತಿ ಸಂಬಂಧ ಚರ್ಚೆ ನಡೆದಿದೆ, ಮೊದಲ ಹಂತದಲ್ಲಿ ಬಿಬಿಎಂಪಿ ಚುನಾವಣೆಗಳನ್ನ ನಡೆಸಲಾಗುವುದು, ನಂತರ ಹಿಂದುಳಿದ ವರ್ಗಗಳ ಆಯೋಗದ ವರದಿಯಂತೆ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಮೇಕೆದಾಟು ಯೋಜನೆ ಕುರಿತು ಸುಪ್ರೀಂಕೋರ್ಟ್ ನಲ್ಲಿ ಯಾವುದೇ ತಡೆಯಾಜ್ಞೆ ಇಲ್ಲ, ಸಿಡ್ಲೂಎಮ್ಎ ಸಮಿತಿಗೆ ಸಂಪೂರ್ಣ ಪರಮಾಧಿಕಾರ ಇದೆ. ಮುಂದಿನ ವಾರ ಸಿಡ್ಲೂಎಮ್ಎ ಸಮಿತಿ ಸಭೆ ನಡೆಯುವ ಸಾಧ್ಯತೆ ಇದ್ದು ಈಗಾಗಲೇ ನಮ್ಮ ವಾದವನ್ನು ಮಂಡಿಸಿದ್ದೇವೆ. ತಮಿಳುನಾಡು ಏನೇ ಆಕ್ಷೇಪಣೆ ಎತ್ತಿದರೂ ಡಿ.ಪಿ.ಆರ್ ಅನುಮೋದನೆಯಾಗುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ನಗರಾಭಿವದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ಸಂಸದರಾದ ಡಾ.ಜಿ.ಎಂ. ಸಿದ್ದೇಶ್ವರ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ. ರವೀಂದ್ರನಾಥ್, ಮಾಯಕೊಂಡ ಕ್ಷೇತ್ರದ ಶಾಸಕರಾದ ಪ್ರೊ.ಲಿಂಗಣ್ಣ, ಮಹಾನಗರಪಾಲಿಕೆಯ ಮೇಯರ್ ಜಯಮ್ಮ ಗೋಪಿನಾಯ್ಕ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಸಿಇಓ ಡಾ.ಚನ್ನಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ4 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!