ದಿನದ ಸುದ್ದಿ
ತಮಿಳು ನಟ ವಿಜಯ್ ಸೈಕಲ್ ನಲ್ಲಿ ಬಂದು ಓಟ್ ಮಾಡಿದ್ದೇಕೆ..? ನಟನ ಆಪ್ತರು ಹೇಳಿದ್ದೇನು ಗೊತ್ತಾ..?
ಸುದ್ದಿದಿನ,ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮಂಗಳವಾರ ನಡೆಯಿತು. ನಟ, ಸೂಪರ್ ಸ್ಟಾರ್ ಇಳಯ ದಳಪತಿ ವಿಜಯ್ ಸೈಕಲ್ನಲ್ಲಿ ಮತಗಟ್ಟೆಗೆ ಬಂದು ವೋಟ್ ಹಾಕಿದ್ದು, ನಟ ವಿಜಯ್ ಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಟ ಇಳಯದಳಪತಿ ವಿಜಯ್ ಅವರು ಸೈಕಲ್ನಲ್ಲಿ ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ ನ್ಯಾಷನಲ್ ಪ್ರೀ ಸ್ಕೂಲ್ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳು ನಟ ವಿಜಯ್ ಅವರ ಜೊತೆಯಲ್ಲಿ ಸೆಲ್ಫೀ, ಫೋಟೋ ಮತ್ತು ವೀಡಿಯೋವನ್ನು ಕ್ಲಿಕ್ಕಿಸಿಕೊಂಡರು. ಈ ಫೋಟೋಗಳು ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಮಂಗಳವಾರ ಸಖತ್ ವೈರಲ್ ಆಗಿದ್ದಾವೆ.
ನಟ ವಿಜಯ್ ಅಭಿಮಾನಿಗಳು ರಸ್ತೆ ಮಧ್ಯದಲ್ಲಿ ಅವರನ್ನು ಸುತ್ತವರಿದ ಕಾರಣ ಅವರು ಮತಗಟ್ಟೆಗೆ ಸೈಕಲ್ ನಲ್ಲಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ನಂತರ ನಟ ವಿಜಯ್ ತಮ್ಮ ಸಿಬ್ಬಂದಿಯವರ ದ್ವಿಚಕ್ರವಾಹನದಲ್ಲಿ ಹಿಂದೆ ಕುಳಿತು ಮತಗಟ್ಟೆಗೆ ಹೋದರು. ಮತಗಟ್ಟೆಯ ಬಳಿ ಹಲವಾರು ಅಭಿಮಾನಿಗಳು ನಟ ವಿಜಯ್ ನೋಡಲು ನೆರೆದಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಚ್ ಕೂಡ ಮಾಡಬೇಕಾಯಿತು.
ಇಳಯ ದಳಪತಿ ವಿಜಯ್ ಅವರು ಮಾಸ್ಕ್ ಧರಿಸಿಕೊಂಡು ಸೈಕಲ್ನಲ್ಲಿ ಮತಗಟ್ಟೆಗೆ ಬಂದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದರು. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಲು ವಿಜಯ್ ಸೈಕಲ್ನಲ್ಲಿ ಬಂದಿದ್ದಾರೆ ಎಂದು ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಬಾರೀ ಚರ್ಚೆ ನಡೆಯಿತು.
ಸೈಕಲ್ ನಟ ವಿಜಯ್ ಬಂದಿದ್ದೇಕೆ..?
ಕಾರ್ ಪಾರ್ಕಿಂಗ್ ಸಮಸ್ಯೆಯನ್ನು ತಪ್ಪಿಸಲು ನಟ ವಿಜಯ್ ಅವರು ಸೈಕಲ್ ನಲ್ಲಿ ಬಂದು ಮತ ಚಲಾಯಿಸಿದರು. ಆದರೆ ಮತಗಟ್ಟೆ ಇರುವ ಕಿರಿದಾದ ಬೀದಿಯಲ್ಲಿ ಪಾರ್ಕಿಂಗ್ ತೊಂದರೆ ತಪ್ಪಿಸಲು ವಿಜಯ್ ಸೈಕಲ್ ನಲ್ಲಿ ಬಂದರು ಎಂದು ಅವರ ಪಿ ಆರ್ ಓ ಸ್ಪಷ್ಟಪಡಿಸಿದ್ದಾರೆ.
“ತಲಪತಿ ವಿಜಯ್ ಅವರು ಕಾರನ್ನು ಬಳಸುವ ಬದಲು ಸೈಕಲ್ನಲ್ಲಿ ಹೋಗಲು ನಿರ್ಧರಿಸಿದರು ಏಕೆಂದರೆ ಮತದಾನ ಕೇಂದ್ರವು ಅವರ ನಿವಾಸದ ಪಕ್ಕದಲ್ಲಿಯೇ ಇತ್ತು ಮತ್ತು ಕಾರಿನಲ್ಲಿ ಹೋಗುವುದರಿಂದ ರಸ್ತೆಯಲ್ಲಿ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಬಹುದು. ಇದರ ಹಿಂದೆ ಬೇರೆ ಯಾವುದೇ ಉದ್ದೇಶವಿರಲಿಲ್ಲ!” – ರಿಯಾಜ್ ಕೆ ಅಹ್ಮದ್ ಟ್ವೀಟ್ ಮಾಡಿದ್ದಾರೆ.
#TNElection #TNElections2021 #TNElection2021 #TNAssemblyElections2021 #tnelectionday #Election2021 #Elections2021 #Thalapathy #Vijay #thalapathyfansteam #Thalapathy @actorvijay @Jagadishbliss @BussyAnand @V4umedia_ pic.twitter.com/H6XVkAkKJm
— RIAZ K AHMED (@RIAZtheboss) April 6, 2021
#ThalapathyVijay arrives in cycle to cast his vote in #TamilNaduElections 👍#Thalapathy #Vijay @actorvijay pic.twitter.com/Y0MfcbNUSn
— Suresh Kondi (@V6_Suresh) April 6, 2021
It's not easy to breath wearing mask, driving cycle under the extreme summer heat. But he did it in style ❤️😊
Its not just a ride. Its a Statement. 🔥🔥💥.
Always proud of you @actorvijay sir.🙏🙏#TamilNaduElections2021#Govote#Thalapathy pic.twitter.com/irMBw789qc
— Rathna kumar (@MrRathna) April 6, 2021
No one wudve expected this!#ThalapathyVijay cycling his way to the booth to cast his vote#TNElection #TNElection2021 #Thalapathy pic.twitter.com/hEgwhSBRqR
— Kaushik LM (@LMKMovieManiac) April 6, 2021
Exclusive Video of #Thalapathy @actorvijay a Polling Booth ! #Master #TamilNaduElections2021
pic.twitter.com/CYmpvvzFSW— THALAPATHY FANS KERALA (@TFK_OfficiaI) April 6, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಡಿಯೋ | ಕೆಡಿ ಸೆಟ್ಟಲ್ಲಿ ಜೋಗಿ ಪ್ರೇಮ್ ಗೆ ಶಿಲ್ಪಾ ಶೆಟ್ಟಿ ಮಾಡಿದ್ದೇನು..?
ಸುದ್ದಿದಿನ ಡೆಸ್ಕ್ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶೋ ಮ್ಯಾನ್ ಪ್ರೇಮ್ ಕತ್ತು ಹಿಸುಕಿ ಕೇಕೆ ಹೊಡೆದಿರೋ ಘಟನೆ ನಡೆದಿದೆ. ಕೆಡಿ ಸಿನಿಮಾದ ಮೂಲಕ ಕನ್ನಡಕ್ಕೆ ಕಂಬ್ಯಾಕ್ ಮಾಡಿರೋ ಬಾಲಿವುಡ್ ಚೆಲುವೆ ಶಿಲ್ಪಾ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು.
ಕೊನೆಯ ದಿನ ಕಾವೇರಿ ನದಿ ತೀರದಲ್ಲಿ ಕೆಡಿ ಚಿತ್ರೀಕರಣ ನಡೆದಿದ್ದು,ಸತ್ಯವತಿ ಉರುಫ್ ಶಿಲ್ಪಾ ಶೆಟ್ಟಿ ಪೋರ್ಷನ್ ಶೂಟಿಂಗ್ ಕಂಪ್ಲೀಟ್ ಆಗಿದೆ. ತಮ್ಮ ಭಾಗದ ಚಿತ್ರೀಕರಣ ಮುಗಿದಿದ್ದೇ ತಡ ಪ್ಯಾಕಪ್ ಪ್ಯಾಕಪ್ ಅಂತ ಶಿಲ್ಪಾ ಕುಣಿದಾಡಿದ್ದಾರೆ. ಇದೇ ವೇಳೆ ತಮಾಷೆ ಮಾಡುತ್ತಾ ಶೋ ಮ್ಯಾನ್ ಪ್ರೇಮ್ ಕತ್ತು ಹಿಸುಕಿ ಇವರಿಗೆ ಹಸಿವೇ ಆಗಲ್ಲ ಅನ್ಸುತ್ತೆ. ವಿತೌಟ್ ಬ್ರೇಕ್ ಕೆಲಸ ಮಾಡ್ತಾರೆ ಅದಕ್ಕೆ ಪ್ರತಿಫಲವಾಗಿ ಸಿನಿಮಾ ಅದ್ಭುತವಾಗಿ ಬಂದಿದೆ ಎಂದಿದ್ದಾರೆ.
ಜೋಗಿ ಪ್ರೇಮ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದಿರೋ ಶಿಲ್ಪಾ ಶೆಟ್ಟಿ, ಪ್ರೇಮ್ ಕಲ್ಪನೆಯಲ್ಲಿ ಅರಳಿರೋ ಸತ್ಯವತಿ ಪಾತ್ರ ನಂಗೆ ಬಹಳ ಹಿಡಿಸಿದೆ, ಕೆಡಿ ಮೇಲೆ ನಿರೀಕ್ಷೆ ಹೆಚ್ಚಿದೆ ಎಂತಲೂ ತಿಳಿಸಿದ್ದಾರೆ. ಇಡೀ ಕೆಡಿ ಟೀಮ್ ಜೊತೆ ಸಂತೋಷವಾಗಿ ಕಾಲ ಕಳೆದು ಮುಂಬೈಗೆ ವಾಪಾಸ್ ಆಗಿದ್ದಾರೆ. ಅಂದ್ಹಾಗೇ, ಕೊನೆಯ ದಿನ ಶೂಟಿಂಗ್ ಸೆಟ್ನಲ್ಲಿ ನಡೆದ ತರ್ಲೆ ತಮಾಷೆಯನ್ನ ವಿಡಿಯೋ ಮೂಲಕ ನಟಿ ಶಿಲ್ಪಾ ಶೆಟ್ಟಿ ತಮ್ಮ ಸೋಷಿಯಲ್ ಸೈಟ್ನಲ್ಲಿ ಹಂಚಿಕೊಂಡಿದ್ದಾರೆ.
ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ; ವಿಡಿಯೋ ನೋಡಿ
https://www.instagram.com/reel/C7l1UEfNIvA/?igsh=bDQ5NDVhMHpxYWc3
ಶಿಲ್ಪಾ ಶೆಟ್ಟಿ ಇತ್ತೀಚೆಗೆ ‘ಕೆಡಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ನಂಜನಗೂಡಿನ ನಂಜುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ, ದೇವಾಲಯದ ಆವರಣದಲ್ಲಿ ಕುಳಿತು ಅವರು ಧ್ಯಾನ ಮಾಡಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದವು.
ಇದೀಗ ಕೆಡಿ ಕೊನೆಯ ದಿನದ ಶೂಟಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ‘ಪ್ರೀತ್ಸೋದ್ ತಪ್ಪಾ’, ‘ಆಟೋ ಶಂಕರ್’, ‘ಒಂದಾಗೋಣ ಬಾ’ ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದ ಮಂಗಳೂರು ಚೆಲುವೆ ಇದೀಗ ಕೆಡಿ ಮೂಲಕ ಮತ್ತೊಮ್ಮೆ ಸ್ಯಾಂಡಲ್ವುಡ್ಗೆ ರೀಎಂಟ್ರಿ ಕೊಟ್ಟಿದ್ದಾರೆ.
19 ವರ್ಷಗಳ ನಂತರ ಮತ್ತೊಮ್ಮೆ ಕರುನಾಡಲ್ಲಿ ದಿಬ್ಬಣ ಹೊರಡಲಿದ್ದಾರೆ. ಕೆಜಿಎಫ್ ನಂತರ ಅಧೀರ ಸಂಜಯ್ ದತ್ತ್ ಮತ್ತೆ ಕನ್ನಡಕ್ಕೆ ಮರಳಿದ್ದಾರೆ.ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಜೂನ್. 1 ರಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕೆರಿಯರ್ ಗೈಡ್ನೆಸ್, ಹೈಯರ್ ಎಜುಕೇಶನ್ ಮತ್ತು ಕೆರಿಯರ್ ಅಪಾರ್ಚುನಿಟಿಸ್ಗಾಗಿ ಜೂನ್ 1 ಮತ್ತು 3 ರಂದು ಎರಡು ದಿನಗಳ ಕಾರ್ಯಗಾರವನ್ನು ಆನ್ಲೈನ್ ವೆಮಿನಾರ್ ಮೂಲಕ ಆಯೋಜಿಸಲಾಗಿದೆ.
ಜೂನ್.1 ರಂದು ವೆಮಿನಾರ್ ನಂ. 25208106583 ಅಂಡ್ ಪಾಸ್ ವಾರ್ಡ್ qsSKG4Dsh84 ಮತ್ತು ಜೂನ್ 3 ರಂದು ವೆಮಿನಾರ್ ನಂ.25259292738 ಅಂಡ್ ಪಾಸ್ ವಾರ್ಡ್ upW2Vtrxh22 ಇದರೊಂದಿಗೆ ಪದವಿ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಿ ಉನ್ನತ ವ್ಯಾಸಂಗ ಮತ್ತು ಉತ್ತಮ ಉದ್ಯೋಗಕ್ಕೆ ವಿವರವಾದ ಮಾಹಿತಿಯನ್ನು ಪಡೆಯಬಹುದು.
ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ನಾಲ್ಕು ವಿಜ್ಞಾನಿಗಳು ಮೂಲ ವಿಜ್ಞಾನ, ಕೃಷಿ, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವ್ಯಾಸಂಗದ ಬಗ್ಗೆ ಸಲಹೆಗಳನ್ನು ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಉಮೇಶ ಘಾಟಗೆ – 9743084194 & ಚಂದ್ರಶೇಖರಮೂರ್ತಿ – 9686449019 ಅಥವಾ ವೆಬ್ ಸೈಟ್; www.kstacademy.in ವೀಕ್ಷಿಸಬಹುದಾಗಿದೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ
ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿರುತ್ತದೆ.
ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಚಲಾಯಿಸಲಿರುವ ಮತದಾರರಿಗೆ ಮತದಾನದ ದಿನವಾದ ಜೂನ್ 3 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.
ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.
ಪೂರಕ ದಾಖಲಾತಿ
ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು, ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೋಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್(UDID) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
-
ದಿನದ ಸುದ್ದಿ6 days ago
ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!
-
ದಿನದ ಸುದ್ದಿ7 days ago
ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ
-
ದಿನದ ಸುದ್ದಿ6 days ago
ಆತ್ಮಕತೆ | ವಿಶ್ವವಿದ್ಯಾಲಯದ ವಿರುದ್ಧ ನಡೆಸಿದ ಎರಡು ಧರಣಿಗಳು
-
ದಿನದ ಸುದ್ದಿ6 days ago
ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ
-
ದಿನದ ಸುದ್ದಿ6 days ago
ಕವಿತೆ | ಒಂದು ಕಪ್ ಕಾಫಿ
-
ದಿನದ ಸುದ್ದಿ6 days ago
ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ
-
ಕ್ರೀಡೆ5 days ago
ಬೆಳಗಿನ ಪ್ರಮುಖ ಸುದ್ದಿಗಳು