ದಿನದ ಸುದ್ದಿ
ಪರಿಸರ ಸ್ನೇಹಿ ಪವನ ವಿದ್ಯುತ್ ಶಕ್ತಿ ಸ್ಥಾವರದ ಬಗ್ಗೆ ನಿಮಗಿಷ್ಟು ತಿಳಿದಿರಲಿ..!
- ಆಶಾ ಸಿದ್ದಲಿಂಗಯ್ಯ
ವಿಶ್ವದಾದ್ಯಂತ ಸ್ಥಾಪಿತವಾಗಿರುವ ಪವನ ವಿದ್ಯುತ್ ಶಕ್ತಿಯ ಉತ್ಪಾದನಾ ಸಾಮರ್ಥ್ಯ ಸದ್ಯ 2009 ರ ಕೊನೆಯಲ್ಲಿ 157,899 MW ಗೆ ತಲುಪಿದೆ. USA (35,159 MW), ಜರ್ಮನಿ (25,777 MW), ಸ್ಪೇನ್ (19,149 MW) ಮತ್ತು ಚೀನಾ (25,104 MW) ಇವೆಲ್ಲ ಭಾರತಗಿಂತ ಮುಂದಿವೆ, ಸದ್ಯಕ್ಕೆ ಭಾರತ ಐದನೆಯ ಸ್ಥಾನದಲ್ಲಿದೆ. ಸದ್ಯ ಸಣ್ಣ ಪ್ರಮಾಣದಲ್ಲಿರುವ ಈ ಗಾಳಿ ವಿದ್ಯುತ್ ಯೋಜನೆಯು ಗಾಳಿ ಟರ್ಬೈನ್ ಗಳ ಸ್ಥಾಪನೆ ಮಟ್ಟದಲ್ಲಿದೆ. ಭಾರತದಲ್ಲಿನ ವಿದ್ಯುತ್ ಶಕ್ತಿ ಉತ್ಪಾದನೆಯ ಸಾಮರ್ಥ್ಯ ಹೆಚ್ಚಳಕ್ಕೆ ಇದು ಉತ್ತಮ ಆಯ್ಕೆ ಎನಿಸಿದೆ.
ಸುಜ್ಲೊನ್ ಎಂಬ ಭಾರತೀಯ ಒಡೆತನದ ಕಂಪನಿಯು ವಿಶ್ವಾದಾದ್ಯಂತ ಕಳೆದ ದಶಕದಲ್ಲಿ ಗಾಳಿ ಟರ್ಬೈನ್ ಗಳ ಮಾರಾಟದಲ್ಲಿ ವಿಶ್ವ ಮಾರುಕಟ್ಟೆಯಲ್ಲಿ 7.7 ರಷ್ಟು ತನ್ನ ಪಾಲು ಪಡೆದಿದೆ. ಸುಜ್ಲೊನ್ ಸದ್ಯ ಭಾರತೀಯ ಟರ್ಬೈನ್ ಮಾರುಕಟ್ಟೆಯಲ್ಲಿ ಶೇಕಡಾ 52 ರಷ್ಟು ಪಾಲು ಪಡೆದಿದೆ. ಸುಜ್ಲೊನ್ ಈ ತಂತ್ರಜ್ಞಾನದ ಯಶಸ್ಸು ಭಾರತವನ್ನು ವಿಶ್ವದ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿಸಿದೆ.
ಭಾರತದಲ್ಲಿ ಪವನ ವಿದ್ಯುತ್ ಶಕ್ತಿ
ಸುಮಾರು 1990 ರ ವೇಳೆಗೆ ಭಾರತದಲ್ಲಿ ಪವನ ವಿದ್ಯುತ್ ಅಭಿವೃದ್ಧಿ ಕಂಡಿತು.ಅದಲ್ಲದೇ ಕಳೆದ ಕೆಲವು ವರ್ಷಗಳಿಂದ ಅದರ ಪ್ರಮಾಣವೂ ಏರಿಕೆ ಕಂಡಿದೆ. ಈ ಗಾಳಿ ವಿದ್ಯುತ್ ಉದ್ಯಮಕ್ಕೆ ಡೆನ್ಮಾರ್ಕ್ ಅಥವಾ US ಹೊಸ ಪ್ರವೇಶ ಮಾಡಿದ್ದರೂ ಭಾರತವು ಇಡೀ ವಿಶ್ವದಲ್ಲಿ ಐದನೆಯ ಅತಿ ದೊಡ್ಡ ದೇಶವಾಗಿ, ಈ ಗಾಳಿ ವಿದ್ಯುತ್ ಸ್ಥಾಪನೆಯಲ್ಲಿ ತನ್ನ ಸ್ಥಾನ ಪಡೆದಿದೆ. ಇತ್ತೀಚಿನ ಅಂದರೆ 31 ಅಕ್ಟೋಬರ್ 2009 ರವರೆಗೆ ಒಟ್ಟು ಸ್ಥಾಪಿತ ಭಾರತದಲ್ಲಿನ ಪವನ ವಿದ್ಯುತ್ ಉತ್ಪಾದನಾ ಸಾಮರ್ಥ್ಯವೆಂದರೆ 11806.69 MW, ಆಗಿದೆ.
ಪ್ರಮುಖವಾಗಿ ಇದರ ಉತ್ಪಾದನಾ ಚಟುವಟಿಕೆಯು ಎಲ್ಲೆಡೆಗೂ ತಮಿಳುನಾಡು (4900.765 MW), ಮಹಾರಾಷ್ಟ್ರಾ (1945.25 MW), ಗುಜರಾತ (1580.61 MW), ಕರ್ನಾಟಕ (1350.23 MW), ರಾಜಸ್ಥಾನ (745.5 MW), ಮಧ್ಯಪ್ರದೇಶ (212.8 MW), ಆಂಧ್ರ ಪ್ರದೇಶ (132.45 MW), ಕೇರಳ (46.5 MW), ಒಡಿಶಾ (2MW), ಪಶ್ಚಿಮ ಬಂಗಾಲBengal (1.1 MW) ಅದಲ್ಲದೇ ಇನ್ನುಳಿದ ರಾಜ್ಯಗಳಿಂದ (3.20 MW) ಮುಂಬರುವ 2012 ರ ಹೊತ್ತಿಗೆ ಭಾರತದಲ್ಲಿ ಸುಮಾರು 6,000 ಮೆಗಾವ್ಯಾಟ್ ಪವನಶಕ್ತಿ ವಿದ್ಯುತ್ ಉತ್ಪಾದನೆಗೆ ಅಂದಾಜಿಸಲಾಗಿದೆ. ಈ ಪವನಶಕ್ತಿ ವಿದ್ಯುತ್ ಒಟ್ಟು 6% ರಷ್ಟು ಉತ್ಪಾದನಾ ಸಾಮರ್ಥ್ಯ ಹೊಂದಿದೆ. ಭಾರತದ ವಿದ್ಯುತ್ ಶಕ್ತಿಗೆ 1.6% ರಷ್ಟು ತನ್ನ ಕೊಡುಗೆ ನೀಡುತ್ತದೆ. ಭಾರತವು ಗಾಳಿ ಕುರಿತಾದ ನಕ್ಷೆಯೊಂದನ್ನು ಸಿದ್ದಪಡಿಸುತ್ತಿದೆ.
ಕರ್ನಾಟಕ(1340.23 MW)
ಕರ್ನಾಟಕದಲ್ಲಿ ಸಣ್ಣ ಪ್ರಮಾಣದ ಪವನ ವಿದ್ಯುತ್ ಶಕ್ತಿ ಉತ್ಪಾದನೆಯ ಕೇಂದ್ರಗಳಿದ್ದು ದೇಶದಲ್ಲಿಯೇ ಅದು ಅತಿ ಹೆಚ್ಚು ಸಂಖ್ಯೆಯ ವಿಂಡ್ ಮಿಲ್ ಫಾರ್ಮ್ ಗಳನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರದುರ್ಗ,ಗದಗ ಮೊದಲಾದೆಡೆ ಜಿಲ್ಲಾ ಪ್ರದೇಶಗಳಲ್ಲಿ ಅಸಂಖ್ಯಾತ ವಿಂಡ್ ಮಿಲ್ ಗಳಿವೆ. ಚಿತ್ರದುರ್ಗ ಒಂದರಲ್ಲಿಯೇ ಒಟ್ಟು 20000 ಕ್ಕಿಂತ ಅಧಿಕ ಗಾಳಿ ಟರ್ಬೈನ್ ಗಳಿವೆ.
ಒಟ್ಟು 13.2 MW ನ ಅರಷಿನಗುಡಿ (ARA) ಮತ್ತು 16.5 MW ನ ಅಣಬೂರ್ ನ(ANA) ವಿಂಡ್ ಫಾರ್ಮ್ ಗಳು ACCIONA ಕಂಪನಿಯ ಮೊದಲ ಪ್ರಯೋಗಗಳಾಗಿವೆ. ಇದು ದಾವಣಗೆರೆ ಜಿಲ್ಲೆಯಲ್ಲಿದೆ.(ಕರ್ನಾಟಕ ರಾಜ್ಯ),ಅವುಗಳು ಒಟ್ಟು ಸ್ಥಾಪಿತ 29.7 MW ಮತ್ತು ಒಟ್ಟು18 ವೆಸ್ತಾಸ್ ಗಳ 1.65MW ಸಾಮರ್ಥ್ಯದ ವಿಂಡ್ ಟರ್ಬೈನ್ಸ್ ಗಳನ್ನು ವೆಸ್ತಾಸ್ ವಿಂಡ್ ಟೆಕ್ನಾಲಜಿ ಇಂಡಿಯಾ ಕಂಪನಿಯು ಪೂರೈಕೆ ಮಾಡಿದೆ.
ಈ ARA ವಿಂಡ್ ಫಾರ್ಮ್ ಜೂನ್ 2008ರಲ್ಲಿ ಸ್ಥಾಪಿತವಾಗಿ ಕಾರ್ಯ ಆರಂಭಿಸಿತು. ಅದೇ ರೀತಿ ANA ವಿಂಡ್ ಫಾರ್ಮ್ 2008ರ ಸೆಪ್ಟೆಂಬರ್ ನಲ್ಲಿ ಆರಂಭಿಸಿತು. ಪ್ರತಿಯೊಂದು ಕಂಪನಿಯು 20-ವರ್ಷಗಳ ಪಾವರ್ ಪರ್ಚೇಜ್ ಅಗ್ರೀಮೆಂಟ್ (PPA)ಗೆ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ (BESCOM)ನೊಂದಿಗೆ 100% ಇದರ ಉತ್ಪಾದನೆಯನ್ನು ಪಡೆಯಲು ಈ ಒಪ್ಪಂದಕ್ಕೆ ಸಹಿ ಮಾಡಲಾಯಿತು. ARA ಮತ್ತು ANA ಗಳು Acciona (ಆಕ್ಸಿಯೊನಾ) ಕಂಪನಿಯ ಮೊದಲ ವಿಂಡ್ ಫಾರ್ಮ್ಸ್ ಆಗಿವೆ. ಇವುಗಳು CER ಕ್ರೆಡಿಟ್ಸ್ ಗಳಿಗೆ ಪಾತ್ರವಾಗುತ್ತವೆ.ಇದನ್ನು ಕ್ಲೀನ್ ಡೆವಲಪ್ಮೆಂಟ್ ಮೆಕಾನಿಸಮ್(CDM)ನ ಮೂಲಕ ಇದಕ್ಕೆ ನೆರವು ದೊರಕಿಸಿಕೊಳ್ಳಬಹುದು.
ACCIONA ಕಂಪನಿಯು ವಿಶ್ವ ಬ್ಯಾಂಕಿನಿಂದ ದಿ ಸ್ಪ್ಯಾನಿಶ್ ಕಾರ್ಬನ್ ಫಂಡ್ ಮೂಲಕ ಈ ಯೋಜನೆಯ ಉತ್ಪಾದನೆಯ CER ನ ಖರೀದಿದಾರನಾಗಿ ಕೆಲಸ ಮಾಡುತ್ತದೆ.ಇದರ CERಗಳು 2010 ದಿಂದ 2012 ವರೆಗೆ ಹೊರಬೀಳಲಿವೆ.ಇದಕ್ಕಾಗಿ ಮಾತುಕತೆಗಳು ಜಾರಿಯಲ್ಲಿವೆ. ಇದಕ್ಕಾಗಿ ಅವಶ್ಯವಿರುವ ಪರಿಸರೀಯ ಮತ್ತು ಸಾಮಾಜಿಕ ವಿಷಯಗಳ ಕುರಿತು ಎಲ್ಲಾ ವಿಧಿ-ವಿಧಾನಗಳನ್ನು ಪೂರೈಸಿ ಸಂಬಂಧಿಸಿದ ಕಾಗದಪತ್ರಗಳನ್ನು ಒದಗಿಸಲಾಗಿದೆ. ಇವೆಲ್ಲವೂ ಕೆಳಗಿರುವಂತೆ ವಿಶ್ವ ಬ್ಯಾಂಕಿನ ಬಹಿರಂಗ ನೀತಿ-ಸೂತ್ರಕ್ಕನುಗುಣವಾಗಿರಬೇಕಾಗುತ್ತದೆ.
ಭಾರತದಲ್ಲಿ ಉನ್ನತ ದಕ್ಷತೆಯ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿದ್ದರೂ ಸರಕಾರಿ ನೀತಿ ಮತ್ತು ಸೂಕ್ತ ಕಾರ್ಯಾಚಾರಣೆಯ ಕೊರತೆಯಿಂದ ಅವು ಮಂದಗತಿಯಲ್ಲಿ ಸಾಗಿವೆ.ಅವುಗಳ ಸ್ಥಾಪನೆಗೆ ನೀಡಿದಷ್ಟು ಗಮನವನ್ನು ಅವುಗಳ ಅನುಷ್ಠಾನದ ಬಗ್ಗೆಯೂ ಸರ್ಕಾರ ವಹಿಸಬೇಕಾಗುತ್ತದೆ. ಭಾರತದಲ್ಲಿ ಕೇವಲ 1.6% ರಷ್ಟು ಮಾತ್ರ ಉತ್ಪಾದನೆಯಾಗುತ್ತಿದ್ದು ಆದರೆ ನಿಜವಾಗಿ ಉತ್ಪಾದನಾ ಸಾಮರ್ಥ್ಯವು 6% ಇರಬೇಕಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

