ದಿನದ ಸುದ್ದಿ
ಸ್ತ್ರೀ ಅನ್ನುವುದೇ ಒಂದು ವಿಶಿಷ್ಟವಾದ ಶಕ್ತಿ..!
- ವಿದ್ಯಾಶ್ರೀ ಎಸ್ ಮಂಜುನಾಥ್
ಇಂದು ಮಾರ್ಚ 8 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಮಹಿಳಾ ಸಮೂಹ ತನ್ನ ಅಸ್ತಿತ್ವ ಹಾಗೂ ಎಲ್ಲಾ ರೀತಿಯ ಸಮಾನತೆಯ ಹಕ್ಕೊತ್ತಾಯಗಳೂಂದಿಗೆ ಆಚರಿಸುವ ದಿನ. 1975 ರಲ್ಲಿ ಮಾರ್ಚ್ 08 ಅನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಎಂದು ಘೋಷೀಸಲಾಯಿತು, ಈ ಕಾರಣದಿಂದ ಬಹುತೇಕ ರಾಷ್ಟçಗಳು ಮಾರ್ಚ್ 08ರಂದು ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಹಾಗೇಯೇ ಬರುಬರುತ್ತಾ ಮಹಿಳಾ ದಿನಾಚರಣೆ ಸ್ವರೂಪಗಳಲ್ಲಿ ಬದಲಾವಣೆಗಳು ಅಗುತ್ತಾ ಬಂದಿದೆ .
ಪ್ರಾರಂಭದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಹಿಂದೆ ಉಳಿದಿದ್ದಾರು ಕಾಲಕ್ರಮೇಣ ಎಲ್ಲಾ ಕ್ಷೇತ್ರದಲ್ಲೂ ಮೇಲುಗೈ ಸಾದಿಸುತ್ತ ಮಹಿಳೆ ಸ್ವಾವಲಂಬಿಯಾಗಿ ದಿಟ್ಟತನದಿಂದ ಪ್ರಗತಿಶೀಲ ದಾಪುಗಾಲು ಹಿಡುತ್ತಾ. ಈ ಅಧುನಿಕ ಯುಗದಲ್ಲಿ ಮಹಿಳೆಯರ ಪಾತ್ರ ಬದಲಾಗಿದೆ. ಮಹಿಳೆಯರು ವೃತ್ತಿ ಮತ್ತು ಸಂಸಾರ ಎರಡನ್ನು ಅಚ್ಚುಕಟ್ಟುತನದಿಂದ ನಿಭಾಯಿಸಬಲ್ಲೆ ಎಂದು ದಿಟ್ಟತನದಿಂದ ಹೇಳುತ್ತಾ ಮಾದರಿಯಾಗಿದ್ದಾರೆ.
ಜೀವನದ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಶಕ್ತಿ ಇರುತ್ತದೆ ಅಡು ಮುಟ್ಟದ ಸೂಪ್ಪಿಲ್ಲ ಹೆಣ್ಣು ಇರದ ಕ್ಷೇತ್ರವಿಲ್ಲಾ ಎಂಬ ಅದುನಿಕ ಗಾದೆ ಪ್ರಸುತ್ತವಾಗಿದೆ, ಇಂದು ಮಹಿಳೆಯರು ಗಡಿ ಕಾಯುವುದರಿಂದ ಹಿಡಿದು ಕ್ಷಿಪಾಣಿ ಉಡಾಯಿಸುವ ತನಕ ಎಲ್ಲಾ ಕ್ಷೇತ್ರಗಳಲ್ಲಿ ಸಾದಿಸಿ ತೋರಿಸಿದ್ದಾರೆ. ಹೆಣ್ಣು ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ದೇಶದ ಅತ್ತುನ್ಯತ ಸ್ಥಾನಪಡೆಯುವ ಮಟ್ಟಗೆ ಮಹಿಳೆ ಬದಲಾಗಿದ್ದಾಳೆ, ಎಲ್ಲಾ ಕ್ಷೇತ್ರದಲ್ಲೂ ಪುರಷ ಸಮನಾವಾಗಿ ನಿಂತು ತನ್ನ ಸಾಮರ್ಥ್ಯದ ಅರಿವು ಮೂಡಿಸಿದ್ದಾಳೆ.
ಮುಖ್ಯವಾಗಿ ಮಹಿಳೆ ಸಮಾಜದ ಕಟ್ಟುಪಾಡುಗಳಿಂದ ತನ್ನಿಂದ ತಾನೇ ಬಿಡಿಸಿಕೊಳ್ಳುವ ಪ್ರಯತ್ನ ಮಾಡಬೇಕು ಹೆಣ್ಣು ತನ್ನನ್ನು ತಾನು ಅರಿತುಕೊಳ್ಳಬೇಕು ತನ್ನಲ್ಲಿರುವ ಅಗಾದವಾದ ಶಕ್ತಿಯ ಮೇಲೆ ಅತ್ಮವಿಶ್ವಾಸಗೊಂಡಾಗ ಮಾತ್ರ ಅಕಾಶದತ್ತಾರಕ್ಕೆ ಬೆಳೆಯಲು ಸಾದ್ಯವಾಗುತ್ತದೆ. ಶಿಕ್ಷಣ, ರಾಜಕೀಯ ,ಸಮಾಜಿಕ ಇತ್ಯಾದಿ ಕ್ಷೇತ್ರದಲ್ಲೂ ಮುಂದುವರೆದು ಸಾಧನೆ ಮಾಡಲು ತನ್ನ ಆತ್ಮ ಸ್ಥೈರ್ಯ ಪ್ರಮುಖವಾಗಿರುತ್ತದೆ.
ಮಹಿಳಾ ವಿಚಾರಧಾರೆಗಳಲ್ಲಿ ಸಮಾಜದಲ್ಲಿ ಸಾಕಾಷ್ಟು ಪರವರ್ತನೆಯಾಗಬೇಕು. ಮುಖ್ಯವಾಗಿ ಶೈಕ್ಷಣೀಕವಾಗಿ ಸದೃಡ ಮಾಡಬೇಕು ಹೆಣ್ಣೂಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಅಯಾಮದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಸಮಾಜದಲ್ಲಿ ಯಾವುದೇ ಕಟ್ಟುಪಾಡುಗಳಿಗೆ ಬಲಿಯಾಗದೆ ದೈರ್ಯದಿಂದ ಸಮಾಜವನ್ನು ಎದುರಿಸಬೇಕು ಸ್ತ್ರೀ ಎನ್ನುವ ಶಕ್ತಿ ಅರಿತು ಛಲದಿಂದ ಮುಂದೆ ಸಾಗಬೇಕು.
ಪ್ರತಿ ಗಂಡಿನ ಯಶಸ್ಸಿನ ಹಿಂದೆ ಸ್ತ್ರೀ ಇರುತ್ತಾಳೆ, ತಾಯಿ ಅಕ್ಕ –ತಂಗಿ ಸ್ನೇಹಿತೆ ಹೆಂಡತಿಯಾಗಿ ಪುರಷನ ಬೆನ್ನುಲೆಬುಯಾಗಿರುತ್ತಾರೆ ಪ್ರತಿಯೊಂದು ಹೆಣ್ಣು ಒಲಿದಾರೆ ನಾರಿ ಮುನಿದಾರೆ ಮಾರಿಯಾಗಿರುತ್ತಾಳೆ. ಈ ಕಾರಣದಿಂದ ಪ್ರತಿಯೊಂದು ಹೆಣ್ಣು ತನ್ನ ಶಕ್ತಿ ಸಾಮರ್ಥ್ಯನುಸಾರ ದಿವ್ಯ ಚೇತನವಾಗಿ ಛಲ ದಿಂದ ಜೀವನ ತಮ್ಮದಾಗಿಸಿಕೊಂಡು ಪ್ರಗತಿಯತ್ತಾ ಸಾಗಬೇಕು. ಮುಖ್ಯವಾಗಿ ಮಹಿಳೆಯ ನೈಜ ಸಶಕ್ತಿಕರಣ ವೆಂದರೆ ಅವಳ ಪ್ರಗತಿಯನ್ನು ಒಪ್ಪಕೊಂಡು ಸಹಕರಿಸುವಂಥ ಪ್ರಸುತ್ತ ಸಮಾಜಕ್ಕೆ ಅವಶ್ಯಕತೆ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ | ರೈತರ ಖಾತೆಗೆ ನಾಳೆ ಪ್ರಧಾನಿ ಹಣ ವರ್ಗಾವಣೆ ; ಎಷ್ಟು ಕೋಟಿ..?
ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಿದ್ದಾರೆ.
ವಾರಾಣಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು, ಮೂರನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಹಣ ವರ್ಗಾವಣೆ ಮಾಡಲಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ, ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಹಿ ಹಾಕಿದ್ದರು.
2019ರಲ್ಲಿ ದೇಶದ ರೈತರ ಹಿತದೃಷ್ಟಿಯಿಂದ ಈ ಯೋಜನೆ ಜಾರಿಗೆ ಬಂದಿತ್ತು. ವರ್ಷಕ್ಕೆ ಆರು ಸಾವಿರ ರೂಪಾಯಿಯನ್ನು ತಲಾ 2 ಸಾವಿರದಂತೆ ಮೂರು ಕಂತುಗಳ ಮೂಲಕ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಧ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಅಂಕಿ ಅಂಶಗಳ ಸಮೇತ ವಿವರಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಹಾಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ ಎಂದು ಹೇಳಿದರು.
ಬರಗಾಲದ ಬಗ್ಗೆ ಪರಿಹಾರ ತೆಗೆದುಕೊಳ್ಳಲು ಕೋರ್ಟಿಗೆ ಹೋಗಬೇಕಾಗಿ ಬಂತು. ಕೋರ್ಟು ಸೂಚನೆ ನೀಡಿದ ನಂತರ 18 ಸಾವಿರ ಕೋಟಿ ಕೇಳಿದರೆ 3,454 ಕೋಟಿ ರೂ. ಪರಿಹಾರ ನೀಡಿದ್ದಾರೆ.
ಬಿಜೆಪಿಯವರು ಬಡವರು, ದಲಿತರು, ಜನಸಾಮಾನ್ಯರ ಕಾರ್ಯಕ್ರಮಗಳ ಕಲ್ಯಾಣ ಕಾರ್ಯಕ್ರಮಗಳಿಗೆ ವಿರುದ್ಧವಿದ್ದಾರೆ. ಬಸ್ನಲ್ಲಿ ಉಚಿತ ಪ್ರಯಾಣ, ತಿಂಗಳಿಗೆ ಎರಡು ಸಾವಿರ ನೀಡಿದರೆ…— Siddaramaiah (@siddaramaiah) June 17, 2024
GST ಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ ಎಂದು ದೂರಿದರು. ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ ಎಂದು ಸಮರ್ಥಿಸಿಕೊಂಡರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ
- ಸಂಜಯ್ ಹೊಯ್ಸಳ
ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..
ಉಪ್ಪು ನೀರಿನ ಮೊಸಳೆ (Saltwater crocodile)
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)
ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ.
ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.
ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು ಹೆಂಡತಿ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ… ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.
ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.
ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.
ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ
-
ದಿನದ ಸುದ್ದಿ5 days ago
ನಕಲಿ ವೈದ್ಯರ ಹಾವಳಿಗೆ ಬ್ರೇಕ್ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮ
-
ದಿನದ ಸುದ್ದಿ7 days ago
SC – ST | ಕುರಿ,ಮೇಕೆ ಹಾಗೂ ಕೋಳಿ ಸಾಕಾಣಿಕೆ ತರಬೇತಿ