Connect with us

ದಿನದ ಸುದ್ದಿ

ಹೆಣ್ಣಿಲ್ಲದೆ ಜಗ ಬದುಕುವುದುಂಟೆ..?

Published

on

  • ವಿನಯಕುಮಾರ್ ಎಚ್ ಸಿ, ಕನ್ನಡ ಉಪನ್ಯಾಸಕ,ಎಸ್ ಪಿ ಎಸ್ ಎಸ್ ಸೈನ್ಸ್ ಪಿಯು ಕಾಲೇಜು,ದಾವಣಗೆರೆ

ತ್ಮೀಯರೆ ನಮಸ್ತೆ. ಹಾಗೆ ಅಂತರಾಷ್ರ್ಟೀಯ ಮಹಿಳಾದಿನದ ಶುಭಕಾಮನೆ. ಗೌರವಾನ್ವಿತರೆ ನಾವು ನೀವೆಲ್ಲಾ ಈ ಭೂಮಿ ಇರೋದಕ್ಕೆ ಜೀವಂತವಾಗಿ ಖುಷಿಯಾಗಿ ಆನಂದವಾಗಿ ಬಾಳ್ವೆ ಮಾಡ್ತಿರೋದು. ಭೂಮಿ ಇಲ್ಲದೆ ಜೀವಸಂಕುಲಗಳ ಇರುವಿಕೆಯ ಊಹಿಸಲು ಸಾಧ್ಯವೆ ಯೋಚಿಸಿ.ಅದರ ಉದರದಲ್ಲೇ ಜಗದ ಎಲ್ಲಾ ದೇವರು ಅವರ ವಾಸಸ್ಥಾನ ಇರೋದು.ಅದಲ್ಲದೆ ಮತ್ತೆಲ್ಲೂ ಇಲ್ಲ.

ಎಲ್ಲಾ ಧರ್ಮದ ದೇವರುಗಳು ನೆಲೆಯಾಗಿರೋದು ಈ ಭೂಮಿ ಮೇಲೆ ಅಲ್ವೇ?ಆದರೆ ಅಜ್ಞಾನದ ಅಂಧತ್ವ ಮನುಜರಲ್ಲಿ ತುಂಬಿ ತುಳುಕುತ್ತಿರುವುದರಿಂದ ಶೀತಲ ಸಮರ ಶುರುವಾಗಿ ಇಂದು ಬೀದಿಗೆ ಬಂದು ಬಿದ್ದಿದೆ.ವಿವೇಕಿಗಳು ಪ್ರಜ್ಞಾವಂತರು ಯೋಗಿಗಳು ಮೌನವಾಗಿಯೇ ಭೂಮಿಯನ್ನು ಪೂಜ್ಯ ಭಾವನೆಯಿಂದ ನೋಡುತ್ತಿದ್ದಾರೆ.ಅವರು ಅಂದಿನಿಂದ ಇಂದಿನವರೆಗು ಶ್ರೇಷ್ಟರೆನಿಸಿಕೊಂಡೇ ಇದ್ದಾರೆ.

ಇಷ್ಟೆಲ್ಲಾ ಪೀಠಿಕೆ ಏಕೆ ಅಂದ್ರೆ 8/3/22 “ಅಂತರಾಷ್ರ್ಟೀಯ ಮಹಿಳಾದಿನ” ಆದ ಕಾರಣ ಮನುಷ್ಯನಿಗೆ ಅಷ್ಟೇ ಅಲ್ಲದೆ ಜಗದ ಜೀವಗಳಿಗೆ ಭೂಮಿಯೇ ಆಧಾರ.ಈ ಭೂಮಿಯನ್ನು ನಮ್ಮ ಪೂರ್ವಜರು ಅದರಲ್ಲೂ ಬುದ್ಧಿವಂತರು ಮನುಷ್ಯತ್ವ ಉಳ್ಳವರು ಮಾತ್ರ ಹೆಣ್ಣು ದೇವತೆ ಅಂತ ನೋಡ್ತಿದ್ದಾರೆ.ಆದರೆ ಹಲವು ಅವಿವೇಕಿಗಳು ಅದ್ಯಾರೊ ಮನು ಎಂಬುವವನು ಬರೆದ ಬರಹವೇ ಅತೀ ಶ್ರೇಷ್ಟ ಎಂಬಂತೆ ಅದರಂತೆ ಅವಿವೇಕಿಗಳಾಗಿ ಜೀವಿಸುತ್ತಿದ್ದಾರೆ.ಹೆಣ್ಣನ್ನ ತುಂಬಾ ಕೀಳಾಗಿ ನಡೆಸಿಕೊಳ್ಳುತ್ತಿದ್ದಾರೆ.

ಆ ರೀತಿ ನಡೆಸಿಕೊಳ್ಳುವವರ ಬದುಕು ಅಕ್ಷರ ಸಹ ಪಾತಾಳ ಹಿಡಿದಿದೆ.ಇದರೆ ಅದನ್ನ ಹೊರಗೆ ಹೇಳುತ್ತಿಲ್ಲ.ಯಾಕೆಂದರೆ ಗಂಡೆಂಬ ದರ್ಪ.ಈ ಮೂರ್ಖ ಮಂದಿಗಳು ಈಶ್ವರನನ್ನ ಬಹಳ ಭಕ್ತಿಯಿಂದ ಪೂಜಿಸುತ್ತಾರೆ ಅನ್ನೋಣ. ಆದರೆ ಆತ ಅರ್ಧನಾರೀಶ್ವರ ಆಗಿರೋದು ತಿಳಿಯದಷ್ಟು ಅಧಮರಾಗಿದ್ದಾರೆ ಅಲ್ಲವೆ? ಹೆಣ್ಣೆಂದರೆ ಏನು ಅವಳ ಶಕ್ತಿ ಏನು ಯೋಗ್ಯತೆ ಏನು ಹೇಗೆ ಗೌರವಿಸಬೇಕು ಎಂಬುದನ್ನು ಇಡೀ ಜಗತ್ತನ್ನೇ ಕಾಯುತ್ತಿರುವ ಈಶ್ವರನನ್ನು ನೋಡಿದರೆ ತಿಳಿಯುತ್ತೆ.ಇವರು ಕೇವಲ ತೋರಿಕೆಯ ಜನ.

ನಿಜವಾದ ಭಕ್ತರಂತೆ ನಟಿಸುತ್ತಿದ್ದಾರೆ.ಅಂಥವರೆ ಮನೆಯಲ್ಲಿ ಹೆಣ್ಣನ್ನ ಬಹಳ ಶೋಷಣೆ ಮಾಡ್ತಿರೋದು.ಆ ಅಜ್ಞಾನಿಗಳಿಗೆ ಮದುವೆ ಆಗುವಾಗ ಮಾತ್ರ ಹೆಣ್ಣೇ ಬೇಕು.ಆದರೆ ಅವರಿಗೆ ಹುಟ್ಟುವ ಮಗು ಮಾತ್ರ ಗಂಡೇ ಆಗಿರ್ಬೇಕು.ಇವರ ಅಮ್ಮನು ಗಂಡೇ ಆಗಿದ್ರೆ ಇವನು ಎಲ್ಲಿ ಬರ್ತಿದ್ದ? ಪೈಶಾಚಿಕ ಮನಸ್ಸುಳ್ಳವರಿಗೆ ಹೆಣ್ಣಿನ ಮಹಿಮೆ ಒಂದೇ ಒಂದು ಭಾಗವು ತಿಳಿದಿಲ್ಲ.ಇಡೀ ಜಗತ್ತು ಇಂದು ಜೀವಂತವಾಗಿರಲು ಒಂದು ಹೆಣ್ಣೇ ಹೊರತು ಗಂಡಲ್ಲ.ಈ ಭೂಮಿ ಜಗತ್ತಿನ ಸಕಲ ಜೀವ ರಾಶಿಗಳಿಗೆ ಹೆಣ್ಣಾಗಿ ಪ್ರೀತಿಯಿಂದ ಆಶ್ರಯ ಕೊಟ್ಟು ಸಲಹುತ್ತಿರೋದು.

ಇಷ್ಟೆಲ್ಲಾ ಹಾರಾಡುತ್ತಿರುವ ಗಂಡು ಎರಡೇ ಎರಡು ದಿನ ಮನೆ ಮಕ್ಕಳ ನೋಡ್ಕೊಂಡು ನಿಭಾಯಿಸಲಿ ಗೊತ್ತಾಗುತ್ತೆ.ಹೆಣ್ಣಿನ ಮಹತ್ವ ಏನು ಹೆಣ್ಣಿಲ್ಲದ ಮನೆ ಹೇಗಿರುತ್ತೆ ಎನ್ನುವುದು ತಿಳಿಯುತ್ತೆ.ಒಂದು ಸಣ್ಣ ಉದಾಹರಣೆ ಎಂದರೆ ಒಂದು ಕುಟುಂಬ.ಅದರಲ್ಲಿ ಆ ದಂಪತಿಗಳಿಗೆ ಮೂರು ಅಥವಾ ಐದು ಗಂಡು ಒಂದೇ ಒಂದು ಹೆಣ್ಣುಮಗಳು.ಅವಳ ಮದುವೆ ಮಾಡಿ ಗಂಡನ ಮನೆಗೆ ಕಳಿಸಿರ್ತಾರೆ. ಗಂಡು ಮಕ್ಕಳೆಲ್ಲರೂ.ಯಾವುದೊ ಒಂದು ಸಣ್ಣ ಮಾತಿಗೆ ಈ ನಾಲ್ವರು ಅಣ್ಣ ತಮ್ಮರು ಮಾತು ಬಿಟ್ಟಿರ್ತರೆ.

ಹೀಗಿರುವಾಗ ಒಮ್ಮೆ ಈ ಅವರ ತಾಯಿಗೆ ಖಾಯಿಲೆ ಬಂದಿರುತ್ತೆ .ಆಗ ಮಕ್ಕಳು ಅವರ ತಾಯಿಗೆ ಆಸ್ಪತ್ರೆಗೆ ಕರೆದ್ಹೋಗಿ ಬರ್ತರೆ.ವೈದ್ಯರು ಹೇಳಿದಂತೆ ಹೊತ್ತು ಹೊತ್ತಿಗೆ ಗಂಜಿ ಹಾಲು ಅನ್ನ ತಿಳಿಸಾರು ಕೊಡ್ಬೇಕು ಅಂತ ತಿಳಿಸಿರ್ತಾರೆ.ಆಸ್ಪತ್ರೆಯಿಂದ ಮನೆಗೆ ಬರ್ತಾರೆ.ಅನ್ನ ಮಾಡಿ ತಿಳಿ ಸಾಂಬಾರ್ ಮಾಡ್ಬೇಕು ಅನ್ನುವಾಗ ಇವರಿಗೆ ಅಡುಗೆ ಕೆಲಸವೇ ಗೊತ್ತಿಲ್ಲ.ಮತ್ತೆ ತಂದೆ ವಯಸ್ಸಾದವರು. ಮನೆಯಲ್ಲಿ ಬೇರೆ ಹೆಣ್ಣಿಲ್ಲ.ಜೊತೆಗೆ ಹಿರಿಯವಳೆ ಹೆಣ್ಣು ಮಗಳು.ಎಲ್ಲರೂ ವಿದ್ಯಾವಂತರೆ.ಇನ್ನೂ ಮದುವೆ ಆಗಿರ್ಲಿಲ್ಲ.ಆದರೆ ಅಡುಗೆ ವಿದ್ಯೆ ಕಲಿತ್ತಿಲ್ಲ.ಅವರ ತಾಯಿಯೇ ಅಡುಗೆ ಮಾಡಿ ಬಡಿಸುತ್ತಿದ್ದದ್ದು.

ಅಡುಗೆ ಹೇಗ್ಮಾಡ್ತರೆ ಹೇಳಿ?ಅಕ್ಕ ನಿಗೆ ಕರೆಯಲು ಮಾತು ಬಿಟ್ಟಿದ್ದಾರೆ.ಹೇಗೆ ಕರಿತಾರೆ ಹೇಳಿ?ಅಕ್ಕ ಪಕ್ಕದವರು ಎಷ್ಟು ದಿನ ಇವರಿಗೆ ಸಹಾಯ ಮಾಡ್ತರೆ?ಅವರು ಹೇಳಿದ್ರು “ಮೊಗ ನಮಗು ನೂರಾರು ಕೆಲ್ಸ ಇವೆ ನಿಮ್ಮ ಅಕ್ಕನ ಕರಿಸ್ಕಳ್ಳಿ”ಅಂತೇಳಿ ಬರದಾದರು.ಇವರಿಗೆ ಮದುವೆ ಆಗಿ ಆಗಿ ಅಂತೇಳಿ ಅವರ ತಾಯಿ ಸಾಕಾಗಿದ್ದಳು.ಅವರೆಲ್ಲ ಹೆಣ್ಣಿನ ವಿರೋಧಿಯಾಗಿದ್ದರು.

ಯಾರೂ ಅನ್ನ ಮಾಡಲು ಬಾರದಿದ್ದಾಗ ಪಾಪ ಇವರ ತಾಯಾಯೆ ತೂರಾಡಿಕೊಂಡು ಅಡುಗೆ ಮಾಡಲು ಹೋಗುವಾಗ ಮಕ್ಕಳಿಗೆ ಹೇಳಿದಳು.”ಹೇ ಮಕ್ಳ ನಿಮಗೆ ಕಾಯಿಲೆ ಕಸಾಲೆ ಬಂದಾಗ ನಾನು ಓಡಾಡಿ ನಿಮಗಾಗಿ ನಿಮ್ಮನ್ನು ನನ್ನ ಕಂಕಳಲ್ಲಿ ಎತ್ಕೊಂಡು ಆಸ್ಪತ್ರೆಗೆ ಓಡಾಡಿ ಟೈಂ ಟೈಂಗೆ ಸರಿಯಾಗಿ ಊಟ ತಿಂಡಿ ಮಾಡಿ ಜೋಪಾನ ಮಾಡಿದೆ.ಯಾವುದೊ ಸಣ್ಣ ಮಾತಿಗೆ ನನ್ನ ಮಗಳ ಮನೆಗೆ ಬರುಕ್ಕಿಲ್ಲದಂಗೆ ಮಾಡಿದ್ರಿ.

ಈಗ ನನಗೆ ಒಂದು ತುತ್ತು ಅನ್ನ ಬೇಯಿಸಿಕೊಡೋಕೆ ಆಗದೆ ನಿಂತಿದ್ದೀರಲ್ಲ.ನಿಮ್ಮಂತವರು ನೂರು ಜನ ಇದ್ರು ಏನ್ಬಂತ್ರೋ ಭಾಗ್ಯ?ಹೆಣ್ಣನ್ನ ಆಗಿನಿಂದಲೂ ಕೀಳಾಗೆ ನೋಡ್ತಾ ಬಂದ್ರಿ.ಈಗ ನಿಮಗೆ ಯಾರೂ ಹೆಣ್ಣು ಕೊಡ್ತಿಲ್ಲ.ಈಗ ನನಗೆ ಮಕ್ಳಿದ್ದೂ ಇಲ್ಲದಂತಾಗಿದೆ.ಮೊದಲು ಹೆಣ್ಣು ಅಂದ್ರೆ ಏನು ಅಂತ ಮೊದಲು ತಿಳಿರಿ.ನಿಮ್ಮ ಓದಿಗೆ ಬೆಂಕಿ ಹಾಕ್ತು.ಅದ ತಿಪ್ಪೆಗೆ ಬಿಸಾಕಿ.ಹೆತ್ತೋರಿಗೆ ಅನ್ನ ಕೊಡದ ನೀವು ಯಾವ ಹೆಣ್ಣನ್ನ ಪ್ರೀತಿಯಿಂದ ನೋಡ್ಕೊತಿರಿ?ಏನೇ ಆಗಲಿ ಒಂದು ಮನೆಗೆ ಗಂಡಿನ ಸುಳಿ ಇಲ್ಲದೇ ಇದ್ರು ಪರ್ವಾಗಿಲ್ಲ ಹೆಣ್ಣಿರ್ಬೇಕು.

ಅವಳಿಗೆ ಮಾತ್ರ ಗೊತ್ತು ಹೆಣ್ಣಿನ ನೋವು.ನನ್ನ ಕಣ್ಮುಂದೆ ನೀವ್ಯಾರು ಇರ್ಬೇಡಿ ಹೋಗಿ ಎಂದು ಸ್ವಲ್ಪ ಸಿಟ್ಟಾದಳು.ನಂತರ ಓಡೋಗಿ ತಮ್ಮ ಅಕ್ಕನ ಕಾಲ್ಹಿಡಿದು ಕ್ಷಮೆ ಕೇಳಿ ತೌರಿಗೆ ಕರೆ ತಂದು ತಾಯಿಯ ಸೇವೆ ಮಾಡಿಸಿ ಪ್ರೀತಿಯಿಂದ ಬೀಳ್ಕೊಟ್ಟರು.ನೋಡಿ ಹೆಣ್ಣಿಲ್ಲದ ಮನೆ ಅಂದ್ರೆ ದೇವರಿಲ್ಲದ ಗುಡಿಯೆ ಸರಿ.ಆಕೆ ಕೇವಲ ಭೋಗದ ವಸ್ತುವಾಗಲಿ ಮಕ್ಕಳ ಹಡೆವ ಯಂತ್ರವಾಗಲಿ ಅಲ್ಲ.ಅಷ್ಟೇ ಅಲ್ಲ ಅವಳು ಎಂದಿಗೂ ಗಂಡಿನ ಗುಲಾಮಳಲ್ಲ.ಅವಳು ಬದುಕಿನ ಹಾದಿ ಮನೆಯ ಬೆಳಕು ಮತ್ತೊಂದು ಜೀವಕ್ಕೆ ಜೀವ ಕೊಡೊ ಜೀವದಾತೆ.ಹೆತ್ತ ತಾಯಿಯ ನಂತರದ ಎರಡನೇ ತಾಯಿˌ ಗುರುˌ ಗೆಳತಿˌ ಪ್ರೇಮಮಯಿ ಸಕಲವೂ ಕೂಡ.

ಇಂದು ವಿದ್ಯಾವಂತರು ಹೆಚ್ಚು ಓದಿರೋರು ಹೆಣ್ಣು ಮಕ್ಕಳೆ.ಹಾಗೆ ಉನ್ನತ ಉದ್ಯೋಗದಲ್ಲಿರೋರು ಹೆಣ್ಣುಗಳೆ.ದೇಶದ ಯಾವುದೇ ನದಿಗಳ ಹೆಸರು ಕೇಳಿ ನೋಡಿ.ಅವುಗಳಿಗೆಲ್ಲಾ ಹೆಣ್ಣಿನ ಹೆಸರನ್ನೇ ಇಟ್ಟಿರೋದು.ಇಂದಿನ ಹಲವು ಮಾನವ ರೂಪದ ಮನುಷ್ಯರು ಹೆಣ್ಣನ್ನು ಬಹಳ ನಿಕೃಷ್ಟವಾಗಿ ನೋಡುತ್ತಿದ್ದಾರೆ. ಅದಕ್ಕೆ ತಕ್ಕ ಹಾಗೆ ಹಲವಾರು ರೋಗಗಳಿಂದ ನರಳುತ್ತಿದ್ದಾರೆ.ಹೆಣ್ಣಿಲ್ಲದ ಬದುಕು ಮರುಭೂಮಿಯಿದ್ದಂತೆ. ಹೆಣ್ಣನ್ನ ದೈವ ಸ್ವರೂಪಿಯಾಗಿ ಕಂಡು ದೇವರ ಗುಡಿಯಲ್ಲಿ ಕೂರಿಸಿ ದೇವಿ ˌತಾಯಿˌ ಮಾತೆ ಅಂತ ಪೂಜಿಸಿದ ಶ್ರೇಷ್ಟರೆಂದರೆ ಶ್ರೀರಾಮಕೃಷ್ಣ ಪರಮಹಂಸರು ಮಾತ್ರ.

ಅದಕ್ಕಾಗೆ ಅವರು ಅಂದಿನಿಂದ ಇಂದಿಗು ಮುಂದೆಂದೂ ಅತೀ ಶ್ರೇಷ್ಟದಂಪತಿಯಾಗಿದ್ರೂ ಸಂತರಾಗೆ ಉಳಿದು ದೈವ ಸಂಭೂತರಾದರು. ಗಂಡಸರೇ ಇಂದು ಯಾರು ಹೆಚ್ಚಲ್ಲ ಕಡಿಮೆ ಇಲ್ಲ.ಸರ್ವರೂ ಸಮಾನರೆ.ಮೊದಲು ನಿಮ್ಮ ಮನದಲ್ಲಿರುವ ಹೆಣ್ಣು ಅನ್ನೋ ಕೀಳಾದ ಕೊಳೆ ತೊಳೆದು ನೋಡಿ.

ಅಲ್ಲೇ ಹೆಣ್ಣು ದೇವತೆಯಾಗಿ ಕಾಣ್ತಳೆ ಅಲ್ವೇ? ನೋಡಿ ನೀವು ಹೆಣ್ಣನ್ನ ಕೀಳಾಗಿ ನೋಡುವವರು ಹೆಣ್ಣು ದೇವತೆಗಳಾದ ಪಾರ್ವತಿ ಸರಸ್ವತಿ ಆದಿಶಕ್ತಿ ಮಾರಿ ಚಾಮುಂಡಿ ಉಚ್ಚಮ್ಮ ಬೋರಮ್ಮ ಕಾಳಮ್ಮ ಚೌಡೇಶ್ಪರಿ ಹೀಗೆ ಹಲವಾರು ಹೆಸರಿನಿಂದ ಪೂಜಿಸಲ್ಪಡುವ ದೇವತೆಗಳನ್ಯಾಕೆ ಪೂಜಿಸುತ್ತೀರಿ ಹೇಳಿ?ಆದಿಶಕ್ತಿಗೆ ತ್ರಿಮೂರ್ತಿಗಳೆ ವಂದಿಸಿದ್ದಾರೆ ಅಂದಮೇಲೆ ಕೇವಲ ಮಾನವರಾದ ನಾವು ಹೆಣ್ಣನ್ನ ಪೂಜ್ಯ ಭಾವನೆ ಬೇಡ ಪ್ರೀತಿ ಸ್ನೇಹದಿಂದ ನೋಡಿಕೊಳ್ಳಲು ಏನು ರೋಗ ಹೇಳಿ? ಮೊದಲು ನಿಮ್ಮ ಒಳ ಮನಸ್ಸನ್ನ ಕೇಳಿ.

ನೀವು ಹೇಗಿದ್ದೀರಿ ಹೇಗೆ ನಡ್ಕೊತಾ ಇದ್ದೀರಿ.ಒಳಮನಸ್ಸೇನು? ಹೊರ ಮನಸ್ಸೇನು ಎಂಬುದನ್ನ.ಆಗ ನಿಮಗೆ ಸತ್ಯದ ಅರಿವಾಗುತ್ತದೆ.ಇಲ್ಲದಿರೆ ಜೀವನ ಬರಡಾಗಿ ಎಲ್ಲಾ ಇದ್ದೂ ಏನು ಇಲ್ಲದಂತಾಗುತ್ತದೆ.ಹೆಣ್ಣೇ ಪ್ರೀತಿ ಹೆಣ್ಣೇ ಜಗತ್ತು.ಹಾಗಾಗಿ ಹೆಣ್ಣನ್ನು ಯಾರೂ ಎಂದಿಗೂ ಕೀಳಾಗಿ ನೋಡಬೇಡಿ ಎಂದು ಹೇಳುತ್ತಾ ಅವರ ಸುದಿನದ ಸುಸಂದರ್ಭದಲ್ಲಿ ಅವರಿಗೆ ಮತ್ತೊಮ್ಮೆ ಶುಭ ಕೋರುತ್ತೇನೆ.ಮನ ಅರಳಲಿ ಮನದ ಮಲೀನ ಅಳಿಯಲಿ.ಎಲ್ಲರಿಗು ಶುಭವಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಇಂದು ಕರೆಂಟ್ ಇರಲ್ಲ

Published

on

ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್‌ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್‌ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.

ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.

‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.

ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

Published

on

ಗಿರೀಶ್ ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.

ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.

ಸಾಧಿಕ್ ಪೊಲೀಸರಿಗೆ ಸಾಥ್

ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.

“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending