Connect with us

ದಿನದ ಸುದ್ದಿ

ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಸಬಲೀಕರಣ, ಸಾಮಾಜಿಕ. ನ್ಯಾಯಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆ ಪೂರಕ ಮತ್ತು ಅವರ ಸಾಧನೆಯ ಮಹತ್ವವನ್ನು ಬೆಳಕಿಗೆ ತರುವ ಉದ್ದೇಶವೇ ಮಹಿಳಾ ದಿನಾಚರಣೆಯ ಉದ್ದೇಶ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ ವೆಂಕಟೇಶ್ ಬಾಬು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳಾ ಶಕ್ತಿ, ಸಬಲೀಕರಣ ಮತ್ತು ಸಮಾನ ಅವಕಾಶಗಳ ಅಗತ್ಯತೆಯ ಮಹತ್ವವನ್ನು ವಿವರಿಸಿದರು. ಮಹಿಳೆಯರು ಸಮಾಜದ ನಾಂದಿ ಕಲ್ಲು. ಅವರ ಶಿಕ್ಷಣ, ಆರ್ಥಿಕ ಸ್ವಾವಲಂಬನೆ ಮತ್ತು ನಾಯಕತ್ವಕ್ಕೆ ಪ್ರೋತ್ಸಾಹ ನೀಡಿದರೆ, ಸಮಗ್ರ ಅಭಿವೃದ್ಧಿ ಸಾಧ್ಯ. ಮಹಿಳಾ ಶಕ್ತಿಯನ್ನು ಗುರುತಿಸಿ, ಅವರಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ನಿಜವಾದ ಸಬಲೀಕರಣ”, ಎಂದು ಅಭಿಪ್ರಾಯಪಟ್ಟರು.

“ಮಹಿಳೆಯರು ಕೇವಲ ಗೃಹ ಜೀವನಕ್ಕೆ ಸೀಮಿತವಾಗದೇ, ವೈಜ್ಞಾನಿಕ, ಆರ್ಥಿಕ, ರಾಜಕೀಯ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಆದರೆ ಇನ್ನೂ ಅವರು ಎದುರಿಸುತ್ತಿರುವ ಸಾಮಾಜಿಕ ಹಾಗೂ ವೃತ್ತಿಪರ ಸವಾಲುಗಳಿಗೆ ಪರಿಹಾರ ಕಾಣುವುದು ಅವಶ್ಯಕ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮಹಿಳಾ ಸಬಲೀಕರಣದ ಮಹತ್ವದ ಕುರಿತು ತಮ್ಮ ಚಿಂತನೆಗಳನ್ನು ಹಂಚಿಕೊಂಡರು.

ಸಮಾಜ ಶಾಸ್ತ್ರ ಪ್ರಾಧ್ಯಾಪಕ ಪ್ರೊ ಸುರೇಶ್ ಅವರು ಮಾತನಾಡಿ, “ಮಹಿಳೆಯರು ಸ್ವತಂತ್ರ ನಿರ್ಧಾರ ಮಾಡಿಕೊಳ್ಳುವಂತಾಗಬೇಕು. ಸಮಾನತೆ ಮಾತ್ರ ಸಬಲೀಕರಣವಲ್ಲ, ಮಹಿಳೆಯರು ಅವರ ಹಕ್ಕುಗಳನ್ನು ಅರಿತು, ಅವುಗಳನ್ನು ಅನುಷ್ಠಾನಗೊಳಿಸಬೇಕು” ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ವಿಭಾಗದ ಮಹಿಳಾ ಶಿಕ್ಷಕರಿಗೆ ಹಾಗೂ ಕಚೇರಿ ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಯಿತು.

ಪ್ರೊ ಬಿ ಸಿ ತಹಸಿಲ್ದಾರ್ ಅವರು ತಮ್ಮ ಅಧ್ಯಕ್ಷರ ಭಾಷಣದಲ್ಲಿ “ಈ ರೀತಿಯ ಕಾರ್ಯಕ್ರಮಗಳು ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ, ವಿದ್ಯಾರ್ಥಿಗಳು ಮಹಿಳಾ ಸಬಲೀಕರಣದ ಬಗ್ಗೆ ಅರಿವು ಹೊಂದಲು ಸಹಾಯ ಮಾಡುತ್ತದೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ನಿರ್ವಹಣಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತೀವ್ರ ಶ್ರಮ ವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending